ದನ ಕದಿಯಲು ಬಂದು ಪ್ರಾಣ ಬಿಟ್ಟ

Public TV
1 Min Read
cattle

ಗಾಂಧಿನಗರ: 50 ಕ್ಕೂ ಹೆಚ್ಚು ಕಳ್ಳತನ ಮತ್ತು ಲೂಟಿ ಪ್ರಕರಣಗಳಲ್ಲಿ ಬೇಕಾಗಿದ್ದ ವ್ಯಕ್ತಿ ದನ ಕಳ್ಳತನ ಮಾಡಲು ಬಂದು ಸಾವನ್ನಪ್ಪಿರುವ ಘಟನೆ ಸೆಪಹಿಜಾಲಾ ಜಿಲ್ಲೆಯ ಕಮಲ್ ನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಮೃತ ಯುವಕನ ಹೆಸರು ಪತ್ತೆಯಾಗಿಲ್ಲ. ಆದರೆ ಆತನ ಬಳಿ ಬಾಂಗ್ಲಾದೇಶದ ಕರೆನ್ಸಿ ಮತ್ತು ಮೊಬೈಲ್ ಫೋನ್ ದೊರೆತಿದೆ. ಹೀಗಾಗಿ ಆತ ಬಾಂಗ್ಲಾದೇಶದ ಪ್ರಜೆ ಎಂದು ಗುರುತಿಸಲಾಗಿದೆ. ಗುಜರಾತ್‍ನ ಸುರೇಂದ್ರನಗರ ಜಿಲ್ಲೆಯಲ್ಲಿ ಶನಿವಾರ ಸಂಜೆ ಪೊಲೀಸ್ ಫೈರಿಂಗ್‍ನಲ್ಲಿ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

Police Jeep 1 1

ಹಿನ್ನೆಲೆ: ತಡರಾತ್ರಿ ಜಾನುವಾರು ಕದಿಯಲು ಮೂರು ಜನರು ಗ್ರಾಮಕ್ಕೆ ಬಂದಿದ್ದಾರೆ. ಸಂಜೆ ಸ್ಥಳೀಯ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಮತ್ತು ಆರು ಸಿಬ್ಬಂದಿ ಸ್ಥಳಕ್ಕೆ ಬಂದಿದ್ದಾರೆ. ಆಗ ಪೊಲೀಸರು ಆತನನ್ನು ಹಿಡಿಯಲು ಯತ್ನಿಸಿದಾಗ ತಂಡದ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದು, ಪಿಎಸ್‍ಐ ಬೆನ್ನಿಗೆ ಗಾಯವಾಗಿದೆ. ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದಾಗ ಮುನ್ನಾ ಮತ್ತು ಅವರ ಮಗ ಸಾವನ್ನಪ್ಪಿದ್ದಾರೆ ಎಂದು ಡಿಐಜಿ ಮಾಹಿತಿ ನೀಡಿದರು. ಗ್ರಾಮಸ್ಥರು ಅವರನ್ನು ಹಿಡಿದಿದ್ದಾರೆ. ಈ ವೇಳೆ ಇಬ್ಬರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ

police web

ಸದ್ಯ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಂಗ್ಲಾದೇಶದೊಂದಿಗೆ ಗಡಿ ಹಂಚಿಕೊಂಡಿರುವ ತ್ರಿಪುರಾ ನಿಷಿದ್ಧ ವಸ್ತುಗಳು ಮತ್ತು ಜಾನುವಾರುಗಳ ಕಳ್ಳಸಾಗಣೆಗೆ ಸಾಕ್ಷಿಯಾಗಿದೆ. 856 ಕಿ.ಮೀ ಅಂತಾರಾಷ್ಟ್ರೀಯ ಗಡಿಯನ್ನು ಹಂಚಿಕೊಂಡಿರುವ ತ್ರಿಪುರಾದಲ್ಲಿ ಅದರಲ್ಲೂ ವಿಶೇಷವಾಗಿ ಗಡಿ ಗ್ರಾಮದ ಬಳಿ ಈ ಮೊದಲು ದನಗಳ ಕಳ್ಳಸಾಗಣೆ ಸಾಮಾನ್ಯ ಸಮಸ್ಯೆಯಾಗಿತ್ತು. ಇದನ್ನೂ ಓದಿ: ‘ಅಪ್ಪು ಜೊತೆ ರಾಜ್ ಸಮಾಧಿ ನೋಡಲು ಬರ್ತಿದ್ದ ನಾವು ಈಗ ಅವರದ್ದೇ ಸಮಾಧಿ ನೋಡೋಕೆ ಬರುವಂಗಾಯ್ತು

Share This Article
Leave a Comment

Leave a Reply

Your email address will not be published. Required fields are marked *