Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾವೇರಿ ಸರ್ವಪಕ್ಷ ಸಭೆ – ನೀರು ಹಂಚಿಕೆಗೆ ಸಂಕಷ್ಟ ಸೂತ್ರಕ್ಕೆ ಸರ್ವರ ಒತ್ತಾಯ

Public TV
Last updated: August 23, 2023 3:54 pm
Public TV
Share
5 Min Read
sarvapaksha sabhe kaveri
SHARE

– ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ
– ಕೋರ್ಟ್‌ನಲ್ಲಿ ಸಮರ್ಥ ವಾದ ಮಂಡನೆ

ಬೆಂಗಳೂರು: ಮೇಕೆದಾಟು, ಕಾವೇರಿ, ಮಹಾದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿಗಳ ಬಳಿ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ತೆರಳೋಣ, ಇದಕ್ಕೆ ಎಲ್ಲರ ಸಹಕಾರ ಬಯಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಬುಧವಾರ ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದ ಹಿತ ಕಾಪಾಡಲು ನಾವು ಎಂದಿಗೂ ಬದ್ಧರಾಗಿರುತ್ತೇವೆ. 5-6 ವರ್ಷಗಳಿಗೊಮ್ಮೆ ಮಳೆಯ ಕೊರತೆಯಿಂದಾಗಿ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಂಕಷ್ಟ ಎದುರಾಗುತ್ತದೆ. ಈ ಕುರಿತು ಸಂಕಷ್ಟ ಹಂಚಿಕೆ ಸೂತ್ರ ನಿರ್ದಿಷ್ಟಪಡಿಸಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರು ಸಮರ್ಥವಾಗಿ ವಾದ ಮಂಡಿಸಬೇಕು. ಇದಕ್ಕೆ ಸರ್ಕಾರ ಎಲ್ಲ ಅಗತ್ಯ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

sarvapaksha sabhe kaveri 1

ಮೇಕೆದಾಟು ಯೋಜನೆ – ತಮಿಳುನಾಡಿಗೆ ಅನುಕೂಲ:
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಸಂಕಷ್ಟ ಹಂಚಿಕೆ ಸೂತ್ರದ ಕುರಿತು ತೀರ್ಮಾನ ಆಗಲೇ ಬೇಕು. ಇಂತಹ ಸಂಕಷ್ಟದ ಸಮಯದಲ್ಲಿ 67 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯದ ಮೇಕೆದಾಟು ಸಮತೋಲನಾ ಜಲಾಶಯ ನಿರ್ಮಿಸಿದರೆ, ಅವರಿಗೆ ನೀರು ಬಿಡಲು ಅನುಕೂಲವಾಗುತ್ತದೆ. ಈ ಯೋಜನೆಗೆ ತಮಿಳುನಾಡು ವಿನಾಕಾರಣ ವಿರೋಧಿಸುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಅಧಿಕಾರಿಗಳಿಂದ ಸಮರ್ಥ ವಾದ ಮಂಡನೆ:
ಕಾವೇರಿ ವಿವಾದ ಹಳೆಯದು. ಸರ್ವೋಚ್ಛ ನ್ಯಾಯಾಲಯ ನಮಗೆ ತೀರ್ಪು ಕೊಟ್ಟ ನಂತರ 2018 ರಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾಗಿದೆ. ಕಾವೇರಿ ನೀರು ನಿಯಂತ್ರಣಾ ಸಮಿತಿ ಸ್ಥಾಪನೆಯಾಗಿದೆ. ಅನೇಕ ಸಭೆಗಳನ್ನು ಮಾಡಿದ್ದಾರೆ. ಕಾವೇರಿ ಪ್ರಾಧಿಕಾರ 22 ಸಭೆ ಹಾಗೂ ನಿಯಂತ್ರಣ ಸಮಿತಿ 84 ಸಭೆ ನಡೆಸಿದೆ. ಈ ಸಮಿತಿಗಳಾದ ಮೇಲೆ, ರಾಜ್ಯದಲ್ಲಿ ಸಂಕಷ್ಟದ ದಿನಗಳು ಎದುರಾಗಿದೆ. ಆಗ ನಾವು ನಿಯಂತ್ರಣ ಸಮಿತಿ, ಪ್ರಾಧಿಕಾರದಲ್ಲಿ ಚರ್ಚಿಸಿ, ಅದರ ತೀರ್ಮಾನದಂತೆ ನಡೆದುಕೊಂಡ ಅನೇಕ ನಿದರ್ಶನಗಳಿವೆ.

ಕಾವೇರಿ ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅಧಿಕಾರಿಗಳು ಸಂಕಷ್ಟದ ಬಗ್ಗೆ ಪ್ರತಿಪಾದನೆ ಮಾಡಿದ್ದಾರೆ. ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ವರ್ಷ ಮಳೆ ಕಡಿಮೆ ಆಯಿತು. ಜೂನ್ ಹಾಗೂ ಆಗಸ್ಟ್‌ನಲ್ಲಿ ಮಳೆ ಕೊರತೆಯಾಗಿದೆ. ಇಲ್ಲಿಯವರೆಗೆ ನೀರು ಬಿಡಬೇಕಾಗಿದ್ದಿದ್ದು 86.38 ಟಿಎಂಸಿ. ಆದರೆ 20ನೇ ತಾರೀಖಿನವರೆಗೆ ನೀರು ಬಿಟ್ಟಿರುವುದು 24 ಟಿಎಂಸಿ. ಅಂದರೆ ನಾವು ವಿರೋಧ ಮಾಡಿದ್ದೇವೆ. ವಾಸ್ತವವನ್ನು ಪ್ರಾಧಿಕಾರದ ಮುಂದೆ ಬಿಡಿಸಿಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಮಳೆ ಕೊರತೆಯಿಂದಾಗಿ ಬೆಳೆಗಳಿಗೆ ನೀರು ಬಿಟ್ಟಿಲ್ಲ. ಕುಡಿಯುವ ನೀರಿಗೆ ನೀರು ಬೇಕಾಗುತ್ತದೆ ಎಂದು ವಿವರಿಸಲಾಗಿದೆ.

sarvapaksha sabhe kaveri 2

ನಾವು ವಾದ ಮಾಡಿದ್ದರಿಂದಲೇ 15,000 ಕ್ಯೂಸೆಕ್ ನೀರಿನಿಂದ 10,000 ಕ್ಯೂಸೆಕ್ ನೀರಿಗೆ ಇಳಿಕೆ ಮಾಡಲಾಯಿತು. ಅದನ್ನೂ ಮರು ಪರಿಶೀಲನೆ ಮಾಡುವಂತೆ ಅರ್ಜಿ ಸಲ್ಲಿಸಿದ್ದೆವು. 15,000 ಕ್ಯುಸೆಕ್ ನೀರು ಕೊಡಲಾಗದು ಎಂದು ರಾಜ್ಯದ ಅಧಿಕಾರಿಗಳು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ವಾದ ಮಂಡಿಸುತ್ತಿರುವಾಗಲೇ ತಮಿಳುನಾಡಿದ ಅಧಿಕಾರಿಗಳು ಸಭಾತ್ಯಾಗ ಮಾಡಿದರು. ನಂತರ ಸುಪ್ರೀಂ ಕೋರ್ಟ್ನಲ್ಲಿ ಮನವಿ ಸಲ್ಲಿಸಿದ್ದಾರೆ. 25ರಂದು ಈ ಪ್ರಕರಣ ವಿಚಾರಣೆಗೆ ಬರಲಿದ್ದು, ಈ ವಿಷಯದಲ್ಲಿ ವಕೀಲರು ಸಮರ್ಥವಾಗಿ ವಾದ ಮಾಡುತ್ತಾರೆ ಎಂದು ವಿಶ್ವಾಸದಿಂದ ನುಡಿದರು.

ರಾಜಕೀಯ ಇಲ್ಲ:
ಕರ್ನಾಟಕದ ನೆಲ, ಜಲ, ಗಡಿ, ಭಾಷೆಗಳ ಬಗ್ಗೆ ಮೊದಲಿನಿಂದಲೂ ಎಲ್ಲ ರಾಜಕೀಯ ಪಕ್ಷಗಳೂ ಒಕ್ಕೊರಲಿನಿಂದ ಮಾತನಾಡಿವೆ. ಈ ವಿಷಯಗಳಲ್ಲಿ ರಾಜಕೀಯ ಮಾಡುವ ಪ್ರಯತ್ನವನ್ನು ಯಾರೂ ಮಾಡಿಲ್ಲ, ಮಾಡಲೂ ಬಾರದು. ಯಾಕೆಂದರೆ ನಾವೆಲ್ಲರೂ ರಾಜ್ಯದ 7 ಕೋಟಿ ಜನರ ಹಿತ ಕಾಪಾಡಬೇಕಾಗಿದೆ. ನಾವು ಆಡಳಿತ ಪಪಕ್ಷದವರಾಗಲಿ, ರಾಜ್ಯದ ಹಿತ ಕಾಪಾಡುವುದು ಎಲ್ಲರ ಜವಾಬ್ದಾರಿ. ಹಾಗಾಗಿಯೇ ರಾಜಕೀಯ ಮಾಡಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಇದನ್ನೂ ಓದಿ: 146 ಪ್ರಯತ್ನಗಳ ಪೈಕಿ 69 ಚಂದ್ರಯಾನಗಳು ಯಶಸ್ವಿ – ಸಾವಿರಾರು ಕೋಟಿ ಖರ್ಚು ಮಾಡುವ ಯೋಜನೆಯ ಪ್ರಮುಖ ಉದ್ದೇಶವೇನು?

ಸಭೆಯ ಪ್ರಾರಂಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀರಾವರಿ ವಿಷಯದಲ್ಲಿ ರಾಜ್ಯದ ಹಿತರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿ, ಸರ್ಕಾರದ ಕಾನೂನು ಹೋರಾಟ ಮುಂದುವರೆಯಲಿದ್ದು, ಈ ನಿಟ್ಟಿನಲ್ಲಿ ಎಲ್ಲ ಪಕ್ಷಗಳ ಮುಖಂಡರ ಸಹಕಾರ ಕೋರಿದರು.

KRS 1

ಕರ್ನಾಟಕ ಮತ್ತು ಕೇರಳದ ಕಾವೇರಿ ಕಣಿವೆಯ ಪ್ರದೇಶದಲ್ಲಿ ನೈಋತ್ಯ ಮಾನ್ಸೂನ್ ವೈಫಲ್ಯದಿಂದಾಗಿ 2023-24ರ ಜಲ ವರ್ಷವು ಸಂಕಷ್ಟದ ವರ್ಷವಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯು ತನ್ನ ಸಭೆಯಲ್ಲಿ ಜೂನ್ ವರೆಗಿನ ಮಳೆಯ ಕೊರತೆಯನ್ನು ಗಮನಿಸಿದೆ. ಆಗಸ್ಟ್ 10 ರಂದು 15,000 ಕ್ಯೂಸೆಕ್ ನೀರು ಬಿಡಲು ಸೂಚಿಸಿತು. ಇದನ್ನು ರಾಜ್ಯ ಬಲವಾಗಿ ವಿರೋಧಿಸಿದ್ದು, ನೀರಿನ ಪ್ರಮಾಣ 10,000 ಕ್ಯೂಸೆಕ್‌ಗೆ ಇಳಿಕೆ ಮಾಡಿದೆ. ಇದರಿಂದ ಅಸಮಾಧಾನಗೊಂಡ ತಮಿಳುನಾಡು ಸುಪ್ರೀಂ ಕೋರ್ಟ್‌ನಲ್ಲಿ ನೀರು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದು, ಶುಕ್ರವಾರ ಮೂರು ನ್ಯಾಯಾಧೀಶರ ಪೀಠದ ಮುಂದೆ ವಿಚಾರಣೆಗೆ ಬರಲಿದೆ.

ಸಂಪೂರ್ಣ ಸಹಕಾರ – ಸರ್ವಪಕ್ಷಗಳ ಬೆಂಬಲ:
ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದ ಗೌಡ, ವೀರಪ್ಪ ಮೊಯಿಲಿ, ಜಗದೀಶ್ ಶೆಟ್ಟರ್, ಹೆಚ್‌ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಸಂಸದರಾದ ಸುಮಲತಾ, ಜಗ್ಗೇಶ್, ಡಾ. ಹನುಮಂತಯ್ಯ, ಮುನಿಸ್ವಾಮಿ, ಜಿಎಂ ಸಿದ್ದೇಶ್ವರ, ಜಿಸಿ ಚಂದ್ರಶೇಖರ್, ಶಾಸಕ ದರ್ಶನ್ ಪುಟ್ಟಣ್ಣಯ್ಯ ಮೊದಲಾದವರು ರಾಜ್ಯದ ಕಾನೂನು ಹೋರಾಟಕ್ಕೆ ಬೆಂಬಲ ಸೂಚಿಸಿದರು. ರೈತರ ಹಿತರಕ್ಷಣೆಗೆ ಸರ್ಕಾರದೊಂದಿಗೆ ಇರುವುದಾಗಿ ಬೆಂಬಲ ವ್ಯಕ್ತಪಡಿಸಿದರು. ಹಾಗೂ ಸಂಕಷ್ಟ ಹಂಚಿಕೆ ಸೂತ್ರವನ್ನು ಇನ್ನಷ್ಟು ನಿರ್ದಿಷ್ಟಪಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಮಹಾದಾಯಿ ವಿವಾದ:
ಮಹಾದಾಯಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕಳಸಾ ಮತ್ತು ಬಂಡೂರಾ ಯೋಜನೆಗೆ ಅರಣ್ಯ ಮತ್ತು ಪರಿಸರ ಇಲಾಖೆಗಳ ತೀರುವಳಿ ಹಾಗೂ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ತೀರುವಳಿ ಪಡೆಯಲೂ ಸಹ ಅರ್ಜಿ ಸಲ್ಲಿಸಲಾಗಿದೆ. ಆದರೆ ಗೋವಾ ಸರ್ಕಾರ ಈ ಕುರಿತು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು, ಈ ಕುರಿತು ಹೆಚ್ಚಿನ ಗಮನ ಹರಿಸುವಂತೆ ಸಲಹೆ ನೀಡಿದರು.

ವಕೀಲರ ತಂಡ ಹಿಂದಿನ ಅನುಭವಗಳನ್ನು ಬಳಸಿ ರಾಜ್ಯದ ಹಿತದೃಷ್ಟಿಯಿಂದ ಸಮರ್ಥವಾಗಿ ವಾದ ಮಂಡಿಸುವ ಕುರಿತು ಸಲಹೆ ನೀಡಿದರು. ಇದನ್ನೂ ಓದಿ: ಚಂದ್ರಯಾನ ಯಶಸ್ಸಿಗಾಗಿ ರುದ್ರಾಭಿಷೇಕ, ಮಹಾಮೃತ್ಯುಂಜಯ ಹೋಮ – ಶ್ರೀಶೈಲ ಜಗದ್ಗುರುಗಳಿಂದಲೂ ಶುಭಹಾರೈಕೆ

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಹೆಚ್‌ಡಿ ಕುಮಾರಸ್ವಾಮಿ, ಜಗದೀಶ್ ಶೆಟ್ಟರ್, ಡಿವಿ ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್‌ಕೆ ಪಾಟೀಲ, ಚಲುವರಾಯಸ್ವಾಮಿ, ಡಾ.ಜಿ ಪರಮೇಶ್ವರ್, ಕೆಜೆ ಜಾರ್ಜ್, ಕೃಷ್ಣ ಬೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ, ಎಲ್ಲ ಪಕ್ಷಗಳ ಶಾಸಕರು ಸಂಸದರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ವಕೀಲರಾದ ಮೋಹನ್ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:cauveryCauvery RiverkarnatakaKRS DAMsiddaramaiahtamil naduwaterಕರ್ನಾಟಕಕಾವೇರಿಕಾವೇರಿ ನದಿಕೆಆರ್‍ಎಸ್ ಡ್ಯಾಂತಮಿಳುನಾಡುನೀರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Israel Iran Conflict 1
Latest

ಇರಾನ್‌-ಇಸ್ರೇಲ್‌ ಸಂಘರ್ಷ ತೀವ್ರ – ಇಸ್ರೇಲ್‌ ಮಿಸೈಲ್‌ ದಾಳಿಗೆ ಇರಾನ್‌ನ 14 ಅಧಿಕಾರಿಗಳು ಬಲಿ

Public TV
By Public TV
41 minutes ago
amit shah meeting on census
Latest

16ನೇ ಜನಗಣತಿಗೆ ಇಂದು ಕೇಂದ್ರದಿಂದ ಅಧಿಕೃತ ಅಧಿಸೂಚನೆ ಸಾಧ್ಯತೆ

Public TV
By Public TV
43 minutes ago
Hassan Hemavati Dam
Districts

ಹಾಸನದಲ್ಲಿ ವರುಣನ ಅಬ್ಬರ – ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಳ

Public TV
By Public TV
50 minutes ago
Ahmedabad Air India Plane Crash 1
Latest

ಏರ್ ಇಂಡಿಯಾ ವಿಮಾನ ಪತನ – 80 ಜನರ ಡಿಎನ್‌ಎ ಮ್ಯಾಚ್, 33 ಮೃತದೇಹಗಳ ಹಸ್ತಾಂತರ

Public TV
By Public TV
1 hour ago
Bike Taxi
Bengaluru City

ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿಗೆ ಬ್ರೇಕ್ – ರಸ್ತೆಗಿಳಿದ್ರೆ ಬೈಕ್ ಸೀಜ್

Public TV
By Public TV
2 hours ago
weather
Bengaluru City

ಮುಂದುವರಿದ ಮಳೆ ಆರ್ಭಟ – ಇಂದು ರಾಜ್ಯದ ಹಲವು ಜಿಲ್ಲೆಗಳಿಗೆ ಅಲರ್ಟ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?