ಚಾಮರಾಜನಗರ: ಕಾವೇರಿ ಜಲಾನಯನ ಪ್ರದೇಶದಲ್ಲಿ ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ಕಾವೇರಿ ನದಿಯು (Cauvery River) ಮೈದುಂಬಿ ಹರಿಯುತ್ತಿದ್ದು, ಹೊಗೆನಕಲ್ ಜಲಪಾತ ನೋಡುಗರ ಕಣ್ಮನ ಸೆಳೆಯುತ್ತಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಕಾವೇರಿ ನದಿಯು (Cauvery River) ಮೈದುಂಬಿ ಹರಿಯುತ್ತಿದೆ. ಇದರ ಪರಿಣಾಮ ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿರುವ ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಹೊಗೆನಕಲ್ ಜಲಪಾತ (Hogenakal Falls) ನೋಡುಗರ ಕಣ್ಮನ ಸೆಳೆಯುತ್ತಿದೆ. ಇದನ್ನೂ ಓದಿ: ಕಳೆದ ವಾರ ನೀರಿಲ್ಲದೇ ಬಣಗುಡುತ್ತಿದ್ದ ಭರಚುಕ್ಕಿಗೆ ಈಗ ಜೀವಕಳೆ
ಚಾಮರಾಜನಗರದ ಹನೂರು ತಾಲೂಕಿನ ತಮಿಳುನಾಡು ಗಡಿಯಲ್ಲಿರುವ ಈ ಜಲಪಾತವು ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಗಿ ಮಾರ್ಪಟ್ಟಿದೆ.
