ಕೆಆರ್ಎಸ್ ನೀರಿನ ಮಟ್ಟ ಹೇಗಿದೆ?




ತಮಿಳುನಾಡಿಗೆ ನೀರು ಬಿಟ್ಟರೆ ಕರ್ನಾಟಕ ಬಂದ್ ಎಚ್ಚರಿಕೆ!
ನಮಗೆ ಕುಡಿಯೋಕೆ ನೀರಿಲ್ಲ – 3,500 ಕ್ಯೂಸೆಕ್ ನೀರು ಕೊಡಿ ಅಂದ್ರೆ ಹೇಗೆ?: ಪರಮೇಶ್ವರ್
ನಮಗೆ ಕುಡಿಯೋಕೆ ನೀರಿಲ್ಲ – 3,500 ಕ್ಯೂಸೆಕ್ ನೀರು ಕೊಡಿ ಅಂದ್ರೆ ಹೇಗೆ?
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯೆ
ನಮಗೇ ಕುಡಿಯಲು ನೀರಿಲ್ಲ, ಹೀಗಿರುವಾಗ 3,500 ಕ್ಯೂಸೆಕ್ ನೀರು ಕೊಡಿ ಅಂದ್ರೆ ಹೇಗೆ?
ಇದರ ಬಗ್ಗೆ ಚರ್ಚೆಗೆ ಸಿಎಂ ಸರ್ವ ಪಕ್ಷದ ಸಭೆ ಕರೆಯುತ್ತಾರೆ
ಸೋಮವಾರ ತಮಿಳುನಾಡು ಸಿಎಂ ವಿಜಯ್ ಜೋಸೆಫ್ ಬರ್ತಾರೆ, ಅವರ ಜೊತೆಗೂ ಸಿಎಂ ಚರ್ಚೆ ಮಾಡಬಹುದು
ಇವತ್ತು ರಾಮಲಿಂಗಾರೆಡ್ಡಿ ಸಭೆ ಕರೆದಿದ್ದಾರೆ, ಮುಂದೇನು ಮಾಡಬೇಕು ಅಂತ ಚರ್ಚಿಸ್ತಾರೆ
ಸಹಜವಾಗಿ ರೈತರು ಪ್ರತಿಭಟನೆ ಮಾಡ್ತಾರೆ, ನಿನ್ನೆಯಿಂದ ಹೋರಾಟ ಮಾಡ್ತಿದ್ದಾರೆ
ಸರ್ಕಾರ ಅಂತಿನವಾಗಿ ಏನು ತೀರ್ಮಾನ ತಗೊಳ್ಳುತ್ತೋ ನೊಡೋಣ ಅಂತ ಹೇಳಿಕೆ

CWRC ಶಿಫಾರಸ್ಸು ವಿರುದ್ಧ ಮೇಲ್ಮನವಿ ಸಲ್ಲಿಸುತ್ತೇವೆ: ರಾಮಲಿಂಗಾರೆಡ್ಡಿ
ತಮಿಳುನಾಡಿಗೆ ಕಾವೇರಿ ನೀರು ವಿವಾದ – ಜು.31 ರಂದು ಮಂಡ್ಯದಲ್ಲಿ ಬಿಜೆಪಿ ಬೃಹತ್ ಹೋರಾಟ: ವಿಜಯೇಂದ್ರ
ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಮಂಡ್ಯದಲ್ಲಿ ಜು.31 ರಂದು ಬೃಹತ್ ಹೋರಾಟ ನಡೆಯಲಿದೆ. ಆ ಭಾಗದ ರೈತರು, ರೈತ ಸಂಘಟನೆಗಳು ಬೆಂಬಲ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಮಾಡಿದರು.
ನಗರದ ಬೆಕ್ಕಿನಕಲ್ಮಠದಲ್ಲಿ ಗುರುಪೂರ್ಣಿಮೆಯ ಸಲುವಾಗಿ ಭೇಟಿ ನೀಡಿದ್ದರು. ಈ ವೇಳೆ ಕಾವೇರಿ ನೀರು ನಿರ್ವಾಹಣಾ ಸಮಿತಿ ತೀರ್ಪು ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಆ ತೀರ್ಪು ಕಾವೇರಿ ಕೊಳ್ಳದ ರೈತರಿಗೆ ಬರೆ ಎಳೆದಂತೆ ಆಗಿದೆ. ಬರ ಪರಿಸ್ಥಿತಿ ಇದೆ, ಯಾರು ಕೂಡ ಬೆಳೆ ಬೆಳೆಯಬೇಡಿ ಎಂದು ಸಿಎಂ ಕೆಲವು ದಿನದ ಹಿಂದೆ ಕರೆ ಕೊಟ್ಟಿದ್ದರು ಎಂದು ಮಾಹಿತಿ ನೀಡಿದರು.
ರಾಜ್ಯದ ರೈತರಿಗೆ ಸಿಎಂ ಧೈರ್ಯ ತುಂಬಬೇಕಿತ್ತು. ಅವರು ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಾರೆ. ಜೊತೆಗೆ ಕದ್ದುಮುಚ್ಚಿ ರಾತ್ರೋರಾತ್ರಿ ನೀರು ಬಿಡುವ ಕೆಲಸ ಆಗಿತ್ತು. ತಮಿಳುನಾಡಿನ ಮುಖ್ಯಮಂತ್ರಿಗಳನ್ನು ಖುಷಿ ಪಡಿಸಲು ರಾಜ್ಯದ ರೈತರಿಗೆ ಸಿಎಂ ಅನ್ಯಾಯ ಮಾಡಿದ್ದರು. ಯಾಕೇ ಇಂತಹ ಕಪಟ ನಾಟಕ ಮಾಡ್ತೀದ್ದೀರಿ ಎಂದು ಡಿ.ಕೆ ಶಿವಕುಮಾರ್ ಅವರ ವಿರುದ್ಧ ಅಸಮಾಧಾನ ಹೊಹಾಕಿದರು.
ಡ್ಯಾಂನಲ್ಲಿ 17.39 ಟಿಎಂಸಿ ನೀರು ಸಂಗ್ರಹವಿದೆ. ಅದರಲ್ಲಿ 5 ಟಿಎಂಸಿ ಡೆಡ್ ಸ್ಟೋರೇಜ್. ಉಳಿದಂತ 12-13 ಟಿಎಂಸಿ ನೀರಲ್ಲಿ ತಮಿಳುನಾಡಿಗೆ ಬಿಟ್ಟರೇ ರಾಜ್ಯದ ರೈತರ ಗತಿಯೇನು? ಸಿಎಂ ಯಾಕೇ ಆ ಭಾಗದ ರೈತರ ಜೊತೆ ಚೆಲ್ಲಾಟ ಆಡ್ತಿದ್ದಾರೆ. ಸಮಿತಿ ಮುಂದೆ ಸರಿಯಾದ ರೀತಿ ವಾದ ಮಾಡಬೇಕು ಎಂದು ಆಗ್ರಹಿಸಿದರು.

KRS ಡ್ಯಾಂನಲ್ಲಿ ಬಳಕೆಗೆ ಇರೋದೇ 17 ಟಿಎಂಸಿ ನೀರು
ತಮಿಳುನಾಡಿಗೆ ಕಾವೇರಿ ನೀರು ಬಿಡುವೆಂತೆ CWRC ಆದೇಶ ಗಾಯದ ಮೇಲೆ ಬರೆ ಎಳೆದಂತಾಗಿದೆ. KRS ಜಲಾಶಯದಲ್ಲಿ ಬಳಕೆಗೆ ಇರೋದು ಕೇವಲ 17 ಟಿಎಂಸಿ ನೀರು. ಆದೇಶದಂತೆ ತಮಿಳುನಾಡಿಗೆ 15 ದಿನದಲ್ಲಿ 4.5 ಟಿಎಂಸಿ ನೀರು ಹರಿಸಬೇಕಿದೆ. ನಿತ್ಯ 3,500 ಕ್ಯೂಸೆಕ್ ನೀರು ಹರಿಸಲು ಆದೇಶಿಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಈಗಾಗಲೇ 83% ಮಳೆ ಕೊರತೆ ಉಂಟಾಗಿದೆ. ಮಳೆ ಬಾರದಿದ್ದರೇ ಬೆಂಗಳೂರು ಸೇರಿದಂತೆ ಮಂಡ್ಯ, ಮೈಸೂರಲ್ಲೂ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಲಿದೆ. ಇದರ ನಡುವೆ ತಮಿಳುನಾಡಿಗೆ ನೀರು ಹರಿಸುವಂತೆ ಸೂಚಿಸಿರುವುದು ಕರುನಾಡಿಗೆ ಮರಣ ಶಾಸನವಾಗಿದೆ.

CWRC ತೀರ್ಮಾನ ನಮಗೆ ಸಮಾಧಾನ ತಂದಿಲ್ಲ – ʻಪಬ್ಲಿಕ್ ಟಿವಿʼಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ
CWRC ತೀರ್ಮಾನ ನಮಗೆ ಸಮಾಧಾನ ತಂದಿಲ್ಲ
ʻಪಬ್ಲಿಕ್ ಟಿವಿʼಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ
ಕಾವೇರಿ ನೀರು ನಿಯಂತ್ರಣ ಸಮಿತಿ ಅಂತಾ ಒಂದು ಇದೆ
ಎಷ್ಟು ನೀರು ಬಿಡಬೇಕು ಅಂತಾ ಅವರು ತೀರ್ಮಾನ ಮಾಡ್ತಾರೆ
15 ದಿನಗಳವರೆಗೆ ನಿತ್ಯ 3,500 ಕ್ಯೂಸೆಕ್ ನೀರು ಬಿಡೋದಕ್ಕೆ ಹೇಳಿದೆ
ನಮ್ಮಲ್ಲಿ ನೀರಿಲ್ಲ ಅಂತ ವಾದ ಮಾಡಿದ್ದೇವೆ, ಆದ್ರೂ ಬಿಡಿ ಅಂತಾ ಹೇಳಿದೆ
ಕಾವೇರಿ ನೀರು ನಿರ್ವಹಣಾ ಸಮಿತಿ ತೀರ್ಮಾನ ನಮಗೆ ಸಮಾಧಾನ ತಂದಿಲ್ಲ
ಡಿಕೆ ಶಿವಕುಮಾರ್ ಅವರು ಕೂಡ ಅಪೀಲ್ ಹೋಗಿ ಅಂತಾ ಹೇಳಿದ್ದಾರೆ
ಹಾಗಾಗಿ ನಾವು ಮೇಲ್ಮನವಿ ಹೋಗ್ತೇವೆ, ಈಗಿರುವ ನೀರಲ್ಲಿ ಡೆಡ್ ಸ್ಟೋರೆಜ್ ಲೆಕ್ಕ ತಗೊಳ್ಳೋಕೆ ಆಗಲ್ಲ
ಡೆಡ್ ಸ್ಟೋರೆಜ್ ಎಷ್ಟಿದೆ ಕುಡಿಯುವ ನೀರು ಎಷ್ಟು ಬೇಕಿದೆ ಅಂತಾ ನೋಡಬೇಕು
ಬೆಂಗಳೂರು, ಮಂಡ್ಯ, ರಾಮನಗರ, ಚನ್ನಪಟ್ಟಣ, ಎಲ್ಲಾ ಕಡೆಗು ಕುಡಿಯೋ ನೀರು ಬೇಕು
ಹಾಗಾಗಿ ತೀರ್ಮಾನ ಸಮಾಧಾನ ತಂದಿಲ್ಲ.

ತಮಿಳುನಾಡು ಸರ್ಕಾರದ ವಿರುದ್ಧ ಕನ್ನಡ ಸಂಘಟನೆಗಳು ನಿಗಿನಿಗಿ
ತಮಿಳುನಾಡು ಸರ್ಕಾರದ ವಿರುದ್ಧ ಕನ್ನಡ ಸಂಘಟನೆಗಳು ನಿಗಿನಿಗಿ
ಮೈಸೂರು ಬ್ಯಾಂಕ್ ಸರ್ಕಲ್ ಬಳಿ ವಾಟಾಳ್ ಪಕ್ಷ ಹಾಗೂ ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ
ಮಧ್ಯಾಹ್ನ 12 ವರೆ ಘಂಟೆಗೆ ಪ್ರತಿಭಟನೆ
ಪ್ರತಿಭಟನೆಯಲ್ಲಿ ಭಾಗಿಯಾಗಲಿರುವ ಕನ್ನಡ ಹೋರಾಟಗಾರರು
ಕಾವೇರಿ ಜಲ ವಿವಾದದ ಚರ್ಚೆಗೆ ತಮಿಳುನಾಡು ಪಟ್ಟು; ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ ಕಾಂಗ್ರೆಸ್ ಸಂಸದ
ಕಾವೇರಿ ಜಲ ವಿವಾದದ ಚರ್ಚೆಗೆ ತಮಿಳುನಾಡು ಪಟ್ಟು
ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ ಕಾಂಗ್ರೆಸ್ ರಾಜ್ಯಸಭಾ ಸಂಸದ ಪ್ರವೀಣ್ ಚಕ್ರವರ್ತಿ
ಜಲಶಕ್ತಿ ಸಚಿವಾಲಯವು ದಾರಿ ತಪ್ಪಿಸುವ ಉತ್ತರ ನೀಡಿದೆ
4 ಟಿಎಂಸಿ ನೀರು ಬರಿಸಲು CWRC ಶಿಫಾರಸು ಮಾಡಿದೆ
ಈ ಹಂಚಿಕೆ ಆದೇಶವನ್ನು ಕರ್ನಾಟಕ ಅನುಸರಿಸಬೇಕು
ಈ ಸೂಕ್ಷ್ಮ ವಿಚಾರದ ಬಗ್ಗೆ ಚರ್ಚೆ ನಡೆಸಲು ಒತ್ತಾಯ
ತಮಿಳುನಾಡಿಗೆ ಬಿಟ್ರೆ ಬೀದಿಗಿಳಿದು ಉಗ್ರ ಹೋರಾಟ – ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ
ಕಾವೇರಿ ಕೊಳ್ಳದ ರೈತರಿಗೆ ಮತ್ತೊಮ್ಮೆ ಆತಂಕ ಎದುರಾಗಿದೆ. ಮಳೆಯಿಲ್ಲದೆ ಈಗಾಗಲೇ ಹಳೇ ಮೈಸೂರು ಭಾಗದಲ್ಲಿ ಬರದ ಪರಿಸ್ಥಿತಿ ತಲೆದೋರಿದೆ. ಇದರ ನಡುವೆಯೂ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸೂಚನೆ ನೀಡಿರುವುದು ಮಂಡ್ಯ ಭಾಗದ ರೈತರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ಸರ್ಕಾರ ಕೂಡ ಸಿಡಬ್ಲ್ಯೂಆರ್ಸಿ ಆದೇಶಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಒಂದೆಡೆ ಮಳೆಯಿಲ್ಲದೇ ಬೆಳೆಗಳು ಒಣಗುತ್ತಿದ್ದರೆ, ಮತ್ತೊಂದೆಡೆ ತಮಿಳುನಾಡಿಗೆ ನೀರು ಹರಿಸುತ್ತಿರುವುದು ರೈತರ ಕೆಂಗಣ್ಣಿಗೆ ಗುರಿಯಾಗಿದೆ. ಸಿಡಿದೆದ್ದಿರುವ ಮಂಡ್ಯ ಜಿಲ್ಲೆಯ ರೈತರು ಸರ್ಕಾರದ ವಿರುದ್ಧ ಉಗ್ರ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ. ಜಿಲ್ಲೆಯ ವಿವಿಧೆಡೆ ರೈತ ಸಂಘಟನೆಗಳು ಹಾಗೂ ಹಿತರಕ್ಷಣಾ ಸಮಿತಿಗಳಿಂದ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆಯುವ ಸಾಧ್ಯತೆಯಿದೆ.
ರೈತರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಪೊಲೀಸ್ ಆಡಳಿತ ಸಂಪೂರ್ಣ ಎಚ್ಚೆತ್ತುಕೊಂಡಿದೆ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ನಡೆಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಕಟ್ಟುನಿಟ್ಟಿನ ಸೂಚನೆಗಳನ್ನು ಹೊರಡಿಸಲಾಗಿದೆ.
