Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

BBMP ವ್ಯಾಪ್ತಿಯ 110 ಹಳ್ಳಿ ಜನರ ಕನಸು ಶೀಘ್ರ ನನಸು – ಮುಂದಿನ ವಾರದಲ್ಲೇ ಮನೆಗಳಿಗೆ ಬರಲಿದೆ ಕಾವೇರಿ!

Public TV
Last updated: September 22, 2024 7:33 am
Public TV
Share
2 Min Read
Water 3
SHARE

ಬೆಂಗಳೂರು: ಹತ್ತಾರು ವರ್ಷಗಳಿಂದ ಕಾವೇರಿ ನೀರಿಗಾಗಿ (, Bengaluru, DK )ಕಾದು ಕುಳಿತಿದ್ದ ಬೆಂಗಳೂರು ಹೊರವಲಯದ ಜನಕ್ಕೆ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದೆ. ಬಿಬಿಎಂಪಿ (BBMP) ವ್ಯಾಪ್ತಿಯ 110 ಹಳ್ಳಿಗಳಿಗೆ ಕೊನೆಗೂ ಕಾವೇರಿ ಹರಿಯಲು ಮೂಹೂರ್ತ ಫಿಕ್ಸ್ ಆಗಿದೆ.

ಕಳೆದ 17 ವರ್ಷಗಳ ಹಿಂದೆ ಬಿಬಿಎಂಪಿ ತೆಕ್ಕೆ ಸೇರಿದ್ದ 110 ಹಳ್ಳಿಗಳ ಜನರಿಗೆ ಕೊನೆಗೂ ಕಾವೇರಿ ನೀರು ಕುಡಿಯುವ ಭಾಗ್ಯ ಬಂದೊದಗಿದೆ. ಕಾವೇರಿ 5ನೇ ಹಂತದ ಯೋಜನೆಯಡಿ ನೀರು ಪೂರೈಸಲು ಜಲಮಂಡಳಿ ಸಜ್ಜಾಗಿದ್ದು, ಮುಂದಿನ ವಾರ ಕಾವೇರಿ 5 ಹಂತ ಯೋಜನೆಗೆ ಸರ್ಕಾರದಿಂದಲೇ ಹಸಿರು ನಿಶಾನೆ ಸಿಗಲಿದೆ.

Water 2

ನಗರದ ಹೊರವಲಯದ 110 ಹಳ್ಳಿಗಳಿಗೆ ಜೂನ್ ಅಂತ್ಯದೊಳಗೆ ಕಾವೇರಿ ನೀರು ಪೂರೈಸುವುದಾಗಿ ಜಲಮಂಡಳಿ ಭರವಸೆ ನೀಡಿತ್ತು. ಆದರೆ, ಕಾಮಗಾರಿ ವಿಳಂಬ, ತಾಂತ್ರಿಕ ಸಮಸ್ಯೆಗಳ ಕಾರಣಗಳಿಂದ ಯೋಜನೆ ಪೂರ್ಣ ಆಗಿರಲಿಲ್ಲ. ಈಗ ಇದ್ದ ಅಡೆತಡೆಗಳೆಲ್ಲ ಕಳೆದಿದ್ದು ಸಮಯ ಕೂಡಿ ಬಂದಿದೆ. ಆಗಸ್ಟ್ ತಿಂಗಳು ಪೂರ್ತಿ ಟ್ರಯಲ್ ರನ್ ಮಾಡಲಾಗಿದ್ದು, 110 ಹಳ್ಳಿಗಳಿಗೆ ಅಳವಡಿಸಿರುವ ನೂರಾರು ಕಿಮೀ ಉದ್ದದ ಕೊಳವೆಗಳನ್ನು ಹಂತ ಹಂತವಾಗಿ ಪರೀಕ್ಷಿಸಲಾಗುತ್ತಿದೆ.

ಬಹುತ್ತೇಕ ಕಡೆ ಕೊಳವೆಗಳಲ್ಲಿ ಯಾವುದೇ ಸಮಸ್ಯೆಗಳು ಕಂಡು ಬಂದಿಲ್ಲ. ನೀರು ಹರಿಸಲು ಯೋಗ್ಯವಾಗಿದೆ ಎಂದು ಎಂಜಿನಿಯರ್‌ಗಳು ತಿಳಿಸಿದ್ದಾರೆ. ಹೀಗಾಗಿ ಮುಂದಿನವಾರವೇ ಯೋಜನೆ ಜಾರಿಗೊಳಿಸಲು ಜಲಮಂಡಳಿ ತಯಾರಿ ಆರಂಭಿಸಿದೆ. ಇದನ್ನೂ ಓದಿ: ಲೆಬನಾನ್ ಪೇಜರ್ ಸ್ಫೋಟದ ಹಿಂದೆ ಟ್ಯಾಲೆಂಟೆಡ್ ಬ್ಯೂಟಿ!

Water

ಇನ್ನೂ ಜಲಮಂಡಳಿ ಯೋಜನೆ ಜಾರಿಗೆ ಸಿದ್ದವಾಗಿರೋ ಸುಳಿವು ನೀಡಿದ ಬೆನ್ನಲ್ಲೇ, ಸೋಮವಾರ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಕಾವೇರಿ 5ನೇ ಹಂತದ ಯೋಜನೆ ಪರಿಶೀಲನೆ ನಡೆಸಲಿದ್ದಾರೆ. ಬಳಿಕ 5ನೇ ಹಂತದ ಯೋಜನೆಗೆ ಚಾಲನೆ ಸಿಗಲಿದೆ. ಕಾವೇರಿ 5ನೇ ಹಂತದ ಯೋಜನೆಯಡಿ 110 ಹಳ್ಳಿಗಳಿಗೆ ನಿತ್ಯ 775 ಎಂಎಲ್‌ಡಿ ನೀರು ಪೂರೈಕೆಯಾಗಲಿದೆ. ಒಟ್ಟು 5 ಲಕ್ಷ ಸಂಪರ್ಕ ನೀಡಲು ಉದ್ದೇಶಿಸಲಾಗಿದೆ. ಈಗಾಗಲೇ ಮೊದಲ ಹಂತದಲ್ಲಿ 55 ಸಾವಿರ ಸಂಪರ್ಕ ನೀಡಲಾಗಿದೆ. ಮೊದಲ ಹಂತದಲ್ಲಿ 100-200 ಎಂಎಲ್ಡಿ ನೀರು ಹರಿಸುವ ಗುರಿ ಹೊಂದಿದೆ. ಹಂತ ಹಂತವಾಗಿ ನೀರು ಪೂರೈಸುವ ಯೋಜನೆ ರೂಪಿಸಿರುವುದನ್ನು ಹೆಚ್ಚು ಮಾಡುವುದಾಗಿ ಜಲಮಂಡಳಿ ತಿಳಿಸಿದೆ. ಇದನ್ನೂ ಓದಿ: ಅರ್ಕಾವತಿ ರೀಡೂ ಪ್ರಕರಣದತ್ತ ರಾಜ್ಯಪಾಲರ ಚಿತ್ತ – ಸಿಎಂಗೆ ಮತ್ತೊಂದು ಸಂಕಷ್ಟ?

ಒಟ್ಟಾರೆ 2019ರಲ್ಲಿ ಆರಂಭಗೊಂಡ ಕಾವೇರಿ 5ನೇ ಹಂತದ ಯೋಜನೆ ಕಾಮಗಾರಿ ಪೂರ್ಣಗೊಂಡಿದ್ದು, ಮುಂದಿನ ವಾರದಿಂದ 110 ಹಳ್ಳಿಗಳಿಗೆ ಕಾವೇರಿ ನೀರು ಹರಿಸಲು ಸಿದ್ಧವಾಗಿದ್ದು, ಈ ಮೂಲಕ ಈ ಭಾಗದ ಜನರ ಬಹುದಿನದ ಕನಸು ಹಾಗೂ ದಾಹಕ್ಕೆ ಎರಡು ಕೂಡ ತೀರಲಿದೆ. ಇದನ್ನೂ ಓದಿ: Chhattisgarh | ತಲೆಗೆ 11 ಲಕ್ಷ ಬಹುಮಾನ ಹೊಂದಿದ್ದ ಮೂವರು ಸೇರಿ 8 ನಕ್ಸಲರು ಶರಣು

TAGGED:bengalurucauvery waterDK ShivakumarWater Boardಕಾವೇರಿ ನೀರುಜಲ ಮಂಡಳಿಡಿ.ಕೆ.ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
7 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Mangaluru Student Suicide copy
Crime

ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

Public TV
By Public TV
7 minutes ago
Apache helicopters 2
Latest

ಬೋಯಿಂಗ್‌ ನಿರ್ಮಿತ ವಾಯುಸೇನೆಯ ಅಪಾಚೆ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

Public TV
By Public TV
19 minutes ago
Khandre
Kalaburagi

ವಿಮಾನ ದುರಂತ: ವಿಮಾನಯಾನ ಸಚಿವರ ರಾಜೀನಾಮೆಗೆ ಸಚಿವ ಈಶ್ವರ ಖಂಡ್ರೆ ಒತ್ತಾಯ

Public TV
By Public TV
21 minutes ago
MB Patil 2
Bengaluru City

ಜಾತಿಗಣತಿಗೆ 10 ವರ್ಷ ಆಗಿದ್ದಕ್ಕೆ ಹೊಸ ಜಾತಿಗಣತಿ: ಎಂ.ಬಿ ಪಾಟೀಲ್

Public TV
By Public TV
32 minutes ago
M.B Patil Tamannaah Bhatia
Bengaluru City

ಮೈಸೂರು ಸ್ಯಾಂಡಲ್ ಸೋಪ್ ಬ್ಯುಸಿನೆಸ್ ಹೆಚ್ಚಿಸಲು ತಮನ್ನಾ ಆಯ್ಕೆ: ಎಂ.ಬಿ ಪಾಟೀಲ್

Public TV
By Public TV
35 minutes ago
air india flight
Latest

ವಿಮಾನ ದುರಂತ ಬೆನ್ನಲ್ಲೇ ಥೈಲ್ಯಾಂಡಲ್ಲಿ ಏರ್‌ ಇಂಡಿಯಾ ತುರ್ತು ಭೂಸ್ಪರ್ಶ

Public TV
By Public TV
44 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?