ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ (Siddaramaiah) ಅವರು ಕ್ಯಾಬಿನೆಟ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಕೇಸ್ ವಿಥ್ಡ್ರಾ ಮಾಡಿದ್ದನ್ನು ನೋಡಿದರೆ ಬಹಳ ಸ್ಪಷ್ಟವಾಗಿ ಗೊತ್ತಾಗುತ್ತದೆ ಸರ್ಕಾರ ನಡೆಸುತ್ತಿರೋರು ಸಿದ್ದರಾಮಯ್ಯ ಅಲ್ಲ ಡಿಕೆ ಶಿವಕುಮಾರ್ ಅಂತ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ (Murugesh Nirani) ಹೇಳಿಕೆ ನೀಡಿದ್ದಾರೆ.
ಡಿಸಿಎಂ ಡಿಕೆಶಿ ಮೇಲೆ ಸಿಬಿಐ ಕೇಸ್ (CBI Case) ಪ್ರಸ್ತಾವನೆ ವಾಪಸ್ ವಿಚಾರವಾಗಿ ಬಾಗಲಕೋಟೆಯಲ್ಲಿ ಮಾತನಾಡಿದ ನಿರಾಣಿ, ಡಿಕೆ ಶಿವಕುಮಾರ್ ಅವರು ರಾಜಕೀಯವಾಗಿ ಹಿರಿಯರು. ಸಾಕಷ್ಟು ಏಳು ಬೀಳು ನೋಡಿದಂತವರು. ಈಗಾಗಲೇ ಈ ಕೇಸ್ ಕೋರ್ಟ್ನಲ್ಲಿ ತನಿಖೆ ಹಂತದಲ್ಲಿರುವಾಗ ಅದನ್ನು ಏಕಾಏಕಿಯಾಗಿ ಹೆದರಿಕೆಯಿಂದ ಸೋಲಾಗುತ್ತದೆ ಎಂಬ ಭಾವನೆಯಿಂದ ಕ್ಯಾಬಿನೆಟ್ನಲ್ಲಿ ವಿಥ್ ಡ್ರಾ ಮಾಡಿದ್ದಾರೆ. ಇದು ಶೋಭೆ ತರುವಂತದ್ದಲ್ಲ ಎಂದು ಹೇಳಿದರು.
ಸಿದ್ದರಾಮಯ್ಯ ಅವರ ಬಗ್ಗೆ ಕರ್ನಾಟಕದಲ್ಲಿ ಅವರದ್ದೇ ಆದ ಘನತೆ ಗೌರವವಿತ್ತು. ಅವರು ಕಾನೂನಿಗೆ ತಲೆ ಬಾಗುತ್ತಾರೆ. ಕಾನೂನಿಗೆ ಹೆಚ್ಚು ಗೌರವ ಕೊಡುತ್ತಾರೆ ಎಂಬ ಭಾವನೆ ಎಲ್ಲರಲ್ಲಿತ್ತು. ಆದರೆ ಸಿದ್ದರಾಮಯ್ಯ ಅವರು ಕ್ಯಾಬಿನೆಟ್ನಲ್ಲಿ ಡಿಕೆ ಶಿವಕುಮಾರ್ ಕೇಸ್ ವಿಥ್ಡ್ರಾ ಮಾಡಿದ್ದನ್ನು ನೋಡಿದರೆ ಬಹಳ ಸ್ಪಷ್ಟವಾಗಿ ಗೊತ್ತಾಗುತ್ತದೆ ಸರ್ಕಾರ ನಡೆಸುತ್ತಿರೋರು ಸಿದ್ದರಾಮಯ್ಯ ಅಲ್ಲ ಡಿಕೆಶಿ ಎಂದು ಆರೋಪಿಸಿದರು. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರ ಕಾನೂನು ನೆರವಿಗೆ ಶೀಘ್ರವೇ ಕಾಲ್ ಸೆಂಟರ್ ಪ್ರಾರಂಭ: ವಿಜಯೇಂದ್ರ
ಈ ಕೇಸಲ್ಲಿ ನಿರಪರಾಧಿ ಎಂಬ ಆತ್ಮವಿಶ್ವಾಸ ಅವರಲ್ಲಿದ್ದರೆ ಅದನ್ನು ವಿಥ್ಡ್ರಾ ಮಾಡಲು ಹೋಗುವಂತಹ ಅವಶ್ಯಕತೆ ಇರಲಿಲ್ಲ. ಅವರು ಮಾಡಿರೋದು ತಪ್ಪಿದೆ. ಮುಂದೆ ನಾವು ಬಿಜೆಪಿಯಿಂದ ಬೇರೆ ಬೇರೆ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಮುಂದೆ ಕಾನೂನು ಪ್ರಕಾರ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.
ಡಿಕೆಶಿ ಮೇಲೆ ಸಿಬಿಐ ಕೇಸ್ ಪ್ರಸ್ತಾವನೆ ದುರುದ್ದೇಶಪೂರಿತವಾಗಿತ್ತು ಎಂಬ ಸಚಿವ ತಿಮ್ಮಾಪುರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಡಿಕೆಶಿ ಕ್ಲೀನ್ ಆಗಿದ್ದರೆ ತನಿಖೆ ಮಾಡೋಕೆ ಬಿಡಲಿ. ಅವರದ್ದೇ ಸರ್ಕಾರ ಇದೆ, ತನಿಖಾಧಿಕಾರಿಗಳು ಯಾವುದೇ ಸರ್ಕಾರಕ್ಕೆ ಸೀಮಿತವಾಗಿರುವುದಿಲ್ಲ. ರಾಜ್ಯದ ಅಧಿಕಾರಿಗಳು ಅವರು. ಅವರ ಮೇಲೆ ವಿಶ್ವಾಸವಿದ್ದರೆ, ತನಿಖೆ ಮಾಡೋಕೆ ಬಿಟ್ಟು, ಅಲ್ಲಿ ಕ್ಲೀನ್ ಚಿಟ್ ಆಗಿ ಬಂದಿದ್ದರೆ ಗೌರವ ಇರುತ್ತಿತ್ತು. ಆದರೆ ತನಿಖೆ ಮಾಡೋದಕ್ಕೇನೇ ಬಿಡ್ತಿಲ್ಲ ಎಂದು ನಿರಾಣಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನರೇಗಾ ಕಾಮಗಾರಿಯಲ್ಲಿ ಕೋಟ್ಯಂತರ ರೂ. ಗೋಲ್ಮಾಲ್- ಅಧಿಕಾರಿಗಳಿಬ್ಬರ ವಿರುದ್ಧ ಎಫ್ಐಆರ್