ಬೆಂಗಳೂರು: ಪರೇಶ್ ಮೇಸ್ತಾ ಕೇಸ್ (Paresh Mesta Case) ರೀ ಓಪನ್ಗೆ ಒತ್ತಡ ಜೋರಾಗುತ್ತಿದೆ. ಸರ್ಕಾರದ ಮೇಲೆ ಮಲೆನಾಡು, ಕರಾವಳಿ ಶಾಸಕರು, ಕಾರ್ಯಕರ್ತರಿಂದ ಒತ್ತಡ ಹೆಚ್ಚಾಗಿದ್ದು ಸರ್ಕಾರ (Government) ಆತಂಕದಲ್ಲಿದೆ.
ಹೊನ್ನಾವರದ ಪರೇಶ್ ಮೇಸ್ತಾ ಕೊಲೆಯಾಗಿಲ್ಲ, ಆಕಸ್ಮಿಕ ಸಾವು ಎಂದು ಸಿಬಿಐ (CBI) ವರದಿ ಕೊಟ್ಟಾಗಿಂದ ಬಿಜೆಪಿಯಲ್ಲಿ (BJP) ಟೆನ್ಶನ್ ಶುರುವಾಗಿದೆ. ಸಿಬಿಐ ವರದಿಗೆ ಪರೇಶ್ ಮೆಸ್ತಾ ತಂದೆ ಕಮಲಾಕರ ಮೆಸ್ತಾ ಕೂಡಾ ಅಸಮಾಧಾನ ವ್ಯಕ್ತಪಡಿಸಿ, ಕೇಸ್ನ ಮರು ತನಿಖೆಗೆ ಸರ್ಕಾರ ಆದೇಶಿಸಬೇಕು ಎಂದು ಕಮಲಾಕರ ಮೇಸ್ತಾ ಆಗ್ರಹಿಸಿದ್ದಾರೆ. ಇದನ್ನೂ ಓದಿ: ರಿಷಿ ಸುನಾಕ್ಗೆ ಸಿಗುತ್ತಾ ಬ್ರಿಟನ್ ಪ್ರಧಾನಿ ಹುದ್ದೆ?
ಮರು ತನಿಖೆಗೆ ನೀಡುವುದಾಗಿ ಪರೇಶ್ ಮೆಸ್ತಾ ಕುಟುಂಬಕ್ಕೆ ಬಿಜೆಪಿ ನಾಯಕರು ಭರವಸೆ ನೀಡಿದ್ರು. ಆದ್ರೆ ಕೊಟ್ಟ ಭರವಸೆ ಇನ್ನು ಹಾಗೆಯೇ ಉಳಿದುಕೊಂಡಿದೆ. ಸಿಬಿಐ ವರದಿ ಬಂದು ಈಗಾಗಲೇ ಎರಡು ವಾರಕ್ಕೂ ಹೆಚ್ಚು ಕಾಲವಾಗಿದ್ದು, ಮರು ತನಿಖೆ ಆದೇಶ ನೀಡದೇ ಸರ್ಕಾರ ಸೈಲೆಂಟ್ ಆಗಿದೆ. ಹೀಗಾಗಿ ಮತ್ತೆ ಕೇಸ್ ರೀ ಓಪನ್ ಮಾಡಬೇಕೆಂದು ಒತ್ತಡ ಜೋರಾಗಿದೆ. ಇದನ್ನೂ ಓದಿ: ಪರೇಶ್ ಮೇಸ್ತಾ ಹತ್ಯೆಯಲ್ಲ, ಅದು ಆಕಸ್ಮಿಕ ಸಾವು – ಸಿಬಿಐ ವರದಿ ಸಲ್ಲಿಕೆ
2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಹೊನ್ನಾವರದ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಡಿಸೆಂಬರ್ 8 ರಂದು ಹೊನ್ನಾವರ ನಗರದ ಶನಿ ದೇವಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಪರೇಶ್ ಮೇಸ್ತಾ ಶವ ಪತ್ತೆಯಾಗಿತ್ತು. ಆತನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಆರೋಪಿಸಿದ್ದರು. ಅಷ್ಟೇ ಅಲ್ಲದೇ ಈತನನ್ನು ಹಿಂದೂ ಸಂಘಟನೆಗಳು ಹಿಂದೂ ಕಾರ್ಯಕರ್ತ ಎಂದು ಬಿಂಬಿಸಿದ್ದರಿಂದ ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು.
Live Tv
[brid partner=56869869 player=32851 video=960834 autoplay=true]