Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕದನ ವಿರಾಮ ಉಲ್ಲಂಘನೆ: ಪಾಕ್‌ನ ಇಬ್ಬಗೆ ನೀತಿಗೆ ಭಾರತೀಯ ಸೇನೆ ಪ್ರತ್ಯುತ್ತರ – ಪ್ರಹ್ಲಾದ್ ಜೋಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಕದನ ವಿರಾಮ ಉಲ್ಲಂಘನೆ: ಪಾಕ್‌ನ ಇಬ್ಬಗೆ ನೀತಿಗೆ ಭಾರತೀಯ ಸೇನೆ ಪ್ರತ್ಯುತ್ತರ – ಪ್ರಹ್ಲಾದ್ ಜೋಶಿ

Dharwad

ಕದನ ವಿರಾಮ ಉಲ್ಲಂಘನೆ: ಪಾಕ್‌ನ ಇಬ್ಬಗೆ ನೀತಿಗೆ ಭಾರತೀಯ ಸೇನೆ ಪ್ರತ್ಯುತ್ತರ – ಪ್ರಹ್ಲಾದ್ ಜೋಶಿ

Public TV
Last updated: May 11, 2025 6:27 pm
Public TV
Share
2 Min Read
prahlad joshi
SHARE

ಹುಬ್ಬಳ್ಳಿ: ಕದನ ವಿರಾಮ ಘೋಷಣೆಯಾದ ಮೇಲೆಯೂ ಪಾಕಿಸ್ತಾನ ದಾಳಿ ಮುಂದುವರೆಸಿ ಇಬ್ಬಗೆ ನೀತಿ ಪ್ರದರ್ಶಿಸಿದ್ದು, ಭಾರತೀಯ ಸೇನೆ (Indian Army) ಇದಕ್ಕೆ ಪ್ರತ್ಯುತ್ತರ ಕೊಡುತ್ತದೆ. ಪಾಕ್ ವಿರುದ್ಧದ ದಾಳಿಗೆ ಕೇಂದ್ರ ಸರ್ಕಾರ ಸೇನೆಗೆ ಮುಕ್ತ ಅಧಿಕಾರ, ಸ್ವಾತಂತ್ರ‍್ಯ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ತಿಳಿಸಿದರು.

ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಯಾವತ್ತೂ ದ್ವಂದ್ವ ನಿಲುವು ಮತ್ತು ಇಬ್ಬಗೆ ನೀತಿ ಅನುಸರಿಸುವಲ್ಲಿ ಎತ್ತಿದ ಕೈ ಎಂಬುದು ಗೊತ್ತಿರುವ ವಿಷಯ. ಅಲ್ಲದೇ, ಅಲ್ಲಿನ ಮಿಲಿಟರಿ ಪಡೆ ಚುನಾಯಿತ ಸರ್ಕಾರದ ಮಾತು ಕೇಳುವುದಿಲ್ಲ ಎಂಬುದು ಈಗ ಮತ್ತೊಮ್ಮೆ ಸಾಬೀತಾಗಿದೆ ಎಂದು ಪ್ರತಿಕ್ರಿಯಿಸಿದರು.ಇದನ್ನೂ ಓದಿ:`ಆಪರೇಷನ್ ಸಿಂಧೂರ’ ಭಾರತದ ರಾಜಕೀಯ, ಸಾಮಾಜಿಕ, ಮಿಲಿಟರಿ ಶಕ್ತಿಯ ಬಲ – ರಾಜನಾಥ್ ಸಿಂಗ್

ಪಹಲ್ಗಾಮ್ (Pahalgam) ಭಯೋತ್ಪಾದಕ ದಾಳಿಯ ನಂತರ ಗುಳ್ಳೇನರಿ ಬುದ್ಧಿಯ ಪಾಕಿಸ್ತಾನಕ್ಕೆ ಪಾಠ ಕಲಿಸಲು ಭಾರತೀಯ ಸೇನೆಗೆ ನಮ್ಮ ಸರ್ಕಾರ ಮುಕ್ತ ಅವಕಾಶ ನೀಡಿದೆ. ಅದರಂತೆ ಭಾರತೀಯ ಸೇನೆ ಪಾಕಿಸ್ತಾನಕ್ಕೆ ತೀಕ್ಷ್ಣ ಪ್ರತಿಕ್ರಿಯೆ, ಪ್ರತೀಕಾರದಲ್ಲಿ ತೊಡಗಿದೆ. ಬಹುದೊಡ್ಡ ಸಂಖ್ಯೆಯಲ್ಲಿ ಭಯೋತ್ಪಾದಕರ ನೆಲೆಗಳನ್ನು ಧ್ವಂಸಗೊಳಿಸಿದೆ. ಭಾರತೀಯ ಸೇನೆ ಮೊದಲ ದಿನವೇ ಪಾಕಿಸ್ತಾನದ 9ಕ್ಕಿಂತ ಹೆಚ್ಚು ಭಯೋತ್ಪಾದಕರ ನೆಲೆಗಳನ್ನು ನಾಶಪಡಿಸಿದೆ. ಈ ದಾಳಿಯಿಂದಾಗಿ ದೊಡ್ಡ ಸಂಖ್ಯೆಯಲ್ಲಿ ಭಯೋತ್ಪಾದಕರು ಮತ್ತು ಭಯೋತ್ಪಾದಕ ಕುಟುಂಬಗಳು ಬಲಿಯಾಗಿವೆ. ಸಾಕಷ್ಟು ಭಯೋತ್ಪಾದಕ ಅಡಗುತಾಣಗಳು ಛಿದ್ರವಾಗಿವೆ. ಪ್ರಮುಖ ಉಗ್ರರು ಹತರಾಗಿದ್ದಾರೆ ಎಂದು ತಿಳಿಸಿದರು.

ಯುದ್ಧವಾಗಿ ಪರಿಗಣಿಸುವ ಕಠಿಣ ನಿಲುವು: ದೇಶದಲ್ಲಿ ಭಯೋತ್ಪಾದನೆ ಸಂಪೂರ್ಣ ನಿರ್ಮೂಲನೆಗೆ ಪಣ ತೊಟ್ಟ ಕೇಂದ್ರ ಸರ್ಕಾರ ಇದೇ ಮೊದಲ ಬಾರಿಗೆ ಅತ್ಯಂತ ಕಠೋರ ನಿಲುವು ತೆಗೆದುಕೊಂಡಿದೆ. ಪಾಕ್ ಕದನ ವಿರಾಮಕ್ಕೂ ಮೊದಲೇ ಭಯೋತ್ಪಾದನೆಯನ್ನು ಯುದ್ಧವಾಗಿ ಪರಿಗಣಿಸುವಂತಹ ಅಭೂತಪೂರ್ವ ನಿರ್ಣಯ ಕೈಗೊಂಡಿದೆ ಎಂದು ಹೇಳಿದರು.

ಕದನ ವಿರಾಮ ಪ್ರಸ್ತಾಪಿಸಿದ್ದ ಪಾಕ್: ಪಾಕಿಸ್ತಾನದ ಮಿಲಿಟರಿ ಪಡೆಗಳ ನಿರ್ದೇಶಕರು ಭಾರತದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಿಗೆ ಫೋನ್ ಮಾಡಿ ಕದನ ವಿರಾಮಕ್ಕೆ ವಿನಂತಿ ಮಾಡಿದ್ದರು. ಆದರೆ ಅದನ್ನು ಈಗ ಉಲ್ಲಂಘಿಸಿದ್ದಾರೆ. ಹೀಗಾಗಿ ಭಯೋತ್ಪಾದಕರು ಮತ್ತು ಭಯೋತ್ಪಾದಕ ಸಂಘಟನೆಗಳನ್ನು ಪೋಷಿಸಿಕೊಂಡು ಬಂದ ಪಾಕ್‌ಗೆ ಭಾರತೀಯ ಸೇನೆ ಪ್ರತ್ಯುತ್ತರ ಕೊಡುತ್ತದೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ ಭಯೋತ್ಪಾದನೆ ನಿಗ್ರಹಿಸಲಾಗಿದೆ. 1980ರ ನಂತರ ಪಹಲ್ಗಾಮ್‌ಗಿಂತ ದೊಡ್ಡ ಪ್ರಮಾಣದಲ್ಲಿ ಭಯೋತ್ಪಾದನಾ ಚಟುವಟಿಕೆ ನಡೆಯುತ್ತಿದ್ದವು. ಆದರೆ, ಈಗ ಅಂಥದ್ದಕ್ಕೆಲ್ಲ ಕಡಿವಾಣ ಹಾಕಲಾಗಿದೆ. ಹಿಂದೆಲ್ಲಾ ದೊಡ್ಡ ಪ್ರಮಾಣದ ಭಯೋತ್ಪಾದನೆ ನಡೆದಾಗಲೂ ಸೌಮ್ಯ ಪ್ರತಿಕ್ರಿಯೆ ನೀಡುತ್ತಿದ್ದ ಭಾರತ ಇದೇ ಮೊದಲ ಬಾರಿ ಪಾಕ್‌ಗೆ ನುಗ್ಗಿ ಹೊಡೆಯುತ್ತಿದ್ದೇವೆ ಎಂದರು.

ಇಡೀ ದೇಶ ಒಂದಾಗಿ ಹೋರಾಡುತ್ತಿದೆ: ಪಹಲ್ಗಾಮ್ ದಾಳಿಯ ನಂತರ ಇದೇ ಮೊದಲ ಬಾರಿ ಭಯೋತ್ಪಾದನೆ ವಿರುದ್ಧ ಇಡೀ ದೇಶವೇ ಒಂದಾಗಿ ಹೋರಾಡುತ್ತಿದೆ. ಭಾರತೀಯ ಸೇನೆ ಅತ್ಯಂತ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಪ್ರತೀಕಾರದ ದಾಳಿಯಲ್ಲಿ ಕಂದಹಾರ ಪ್ರಕರಣದಲ್ಲಿದ್ದವರು ಮತ್ತು ಪ್ರಮುಖ ಉಗ್ರರು ಸೇರಿದಂತೆ ಅವರ ಕುಟುಂಬದವರು ಹತರಾಗಿದ್ದಾರೆ.

ಭಾರತ ಶಾಂತಿಪ್ರಿಯ ರಾಷ್ಟ್ರ. ಭಾರತೀಯರು ಯಾವತ್ತೂ ಶಾಂತಿಪ್ರಿಯರೇ, ನಾವಾಗಿಯೇ ಯಾವತ್ತೂ ಯಾರ ಮೇಲೂ ದಂಡೆತ್ತಿ ಹೋಗುವುದಿಲ್ಲ. ಆದರೆ, ನಮ್ಮ ಮೇಲೆ ಯಾರಾದರೂ ಬಂದರೆ ಸುಮ್ಮನೆ ಬಿಡುವ ಮಾತೇ ಇಲ್ಲ. ಭಾರತ-ಭಾರತೀಯರಿಗೆ ಅಂತದ್ದೊAದು ಶಕ್ತಿಯಿದೆ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು.ಇದನ್ನೂ ಓದಿ: ಪಾಕ್‌ ಕದನ ವಿರಾಮ ಉಲ್ಲಂಘಿಸಿದ್ರೆ ಪ್ರತಿದಾಳಿ ನಡೆಸಿ – ಕಮಾಂಡರ್‌ಗಳಿಗೆ ಭಾರತೀಯ ಸೇನೆ ಪೂರ್ಣ ಅಧಿಕಾರ

TAGGED:hubballiOperation SindoorPahalgam Terrorist Attackಕದನ ವಿರಾಮಪ್ರಹ್ಲಾದ್ ಜೋಶಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

Donald Trump 2
Latest

ಮುಂದುವರಿದ ಟ್ರಂಪ್‌ ಹುಚ್ಚಾಟ – ಎಲ್ಲಾ ದೇಶಗಳ ಮೇಲಿನ ಹೆಚ್ಚುವರಿ ಸುಂಕ 15% ಗೆ ಹೆಚ್ಚಿಸಿದ ಟ್ರಂಪ್‌

Public TV
By Public TV
2 hours ago
Chikkamagaluru Manu
Chikkamagaluru

ಪತ್ನಿಗೆ ಯುವಕನಿಂದ ಮೆಸೇಜ್‌ – ಮನನೊಂದು ನೇಣಿಗೆ ಶರಣಾದ ಪತಿ?

Public TV
By Public TV
2 hours ago
pramod muthalik
Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
By Public TV
3 hours ago
Siddaramaiah 8
Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
By Public TV
3 hours ago
Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
3 hours ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?