– ದೆಹಲಿಯಲ್ಲಿ ಚುನಾವಣಾ ಆಯುಕ್ತರನ್ನು ಭೇಟಿಯಾದ ಪ.ಬಂಗಾಳ ಸಿಎಂ
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ (West Bengal) ನಡೆದ ಎಸ್ಐಆರ್ನಿಂದಾಗಿ (SIR) ತೊಂದರೆಗೀಡಾದ ಕುಟುಂಬಗಳಿಗೆ ದೆಹಲಿಯ ಬಂಗ ಭವನದಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಆರೋಪಿಸಿದ್ದಾರೆ.
ಎಸ್ಐಆರ್ಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದೊಂದಿಗೆ ಸಭೆ ನಡೆಸುವ ಸಲುವಾಗಿ ಮಮತಾ ಬ್ಯಾನರ್ಜಿ ದೆಹಲಿಗೆ ಆಗಮಿಸಿದ್ದರು. ಈ ವೇಳೆ ಬಂಗ ಭವನಕ್ಕೂ ಭೇಟಿ ನೀಡಿದ್ದಾರೆ. ಭವನದ ಸುತ್ತ ಪೊಲೀಸರನ್ನು ನಿಯೋಜಿಸಿರುವುದರ ಬಗ್ಗೆ ಪ್ರಶ್ನಿಸಿದ ಅವರು, ನಾನು ಇಲ್ಲಿ ಆಂದೋಲನ ಮಾಡುವುದಕ್ಕಾಗಿ ಬಂದಿಲ್ಲ, ಆದೋಲನಕ್ಕಾಗಿ ಬಂದಿದ್ದರೆ ನೀವು ಹುಚ್ಚರಾಗಿಬಿಡುತ್ತಿದ್ದಿರಿ ಎಂದು ವಾಗ್ವಾದಕ್ಕಿಳಿದಿದ್ದಾರೆ. ಇದನ್ನೂ ಓದಿ: ಬರೋಬ್ಬರಿ 4,685 ಹೆಕ್ಟೇರ್ನಲ್ಲಿ ದ್ವಿದಳ ಧಾನ್ಯ ಬೆಳೆದ ಹಾವೇರಿ ರೈತರು – ಜನ ಮೆಚ್ಚುಗೆ
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್ಐಆರ್ನಿಂದ ತೊಂದರೆಗೀಡಾದ ಹಲವು ಮಂದಿ ಬಂಗ ಭವನದಲ್ಲಿ ಇದ್ದಾರೆ. ಅವರನ್ನು ಬೆದರಿಸಲಾಗುತ್ತಿದೆ. ಈ ಕುಟುಂಬಗಳು ವಾಸಿಸುವ ಎಲ್ಲೆಡೆ ದೆಹಲಿ ಪೊಲೀಸರನ್ನು ಏಕೆ ನಿಯೋಜಿಸಲಾಗಿದೆ. ದೆಹಲಿಯಲ್ಲಿ ಬಾಂಬ್ ಸ್ಫೋಟವಾದಾಗ ಈ ಪೊಲೀಸರು ಎಲ್ಲಿ ಹೋಗಿದ್ದರು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಫ್ಯೂಯಲ್ ಕಂಟ್ರೋಲ್ ಸ್ವಿಚ್ನಲ್ಲಿ ದೋಷ; ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಹಾರಾಟ ಸ್ಥಗಿತ
ನಾನು ಪೊಲೀಸರನ್ನು ದೂಷಿಸಲ್ಲ, ಬದಲಾಗಿ ಅಧಿಕಾರದಲ್ಲಿರುವವರನ್ನು ದೂಷಿಸುತ್ತೇನೆ. ಅವರು ದೇಶವನ್ನು ರಕ್ಷಿಸಲಾಗದೆ ಬಂಗಾಳಿಗಳನ್ನು, ಸಾಮಾನ್ಯ ಜನರನ್ನು ಹಿಂಸಿಸುತ್ತಿದ್ದಾರೆ. ಎಸ್ಐಆರ್ ಹೆಸರಿನಲ್ಲಿ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಚಿನ್ನದ ನಿಕ್ಷೇಪಕ್ಕಾಗಿ ಶೋಧ – ಹೆಲಿಕಾಪ್ಟರ್ ಮೂಲಕ ಏರಿಯಲ್ ಸರ್ವೆ
ಎಸ್ಐಆರ್ನಿಂದ ತೊಂದರೆಗೀಡಾದ ಕುಟುಂಬಗಳ ಸದಸ್ಯರು ಹಾಗೂ ಟಿಎಂಸಿ ನಾಯಕರ ನಿಯೋಗದೊಂದಿಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೋಮವಾರ ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಭೆ ಬಳಿಕ ಮಾತನಾಡಿದ ಬ್ಯಾನರ್ಜಿ, ಎಸ್ಐಆರ್ನಿಂದಾಗಿ ಪಟ್ಟಿಯಲ್ಲಿ ಹೆಸರು ಕಳೆದುಕೊಂಡ ಜನರು ಚುನಾವಣಾ ಆಯೋಗಕ್ಕೆ ದೂರು ನೀಡಲು ಇಲ್ಲಿಗೆ ಬಂದಿದ್ದಾರೆ. ಆದರೆ ದೆಹಲಿ ಪೊಲೀಸರು ಭದ್ರತೆ ನೀಡುವ ನೆಪದಲ್ಲಿ ಅವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಮತ್ತೆ ಸರ್ಕಾರ Vs ಗವರ್ನರ್; ದ್ವೇಷ ಭಾಷಣ ಮಸೂದೆಗೆ ಕೊಕ್ಕೆ – 29 ಕಾರಣ ಕೊಟ್ಟ ಗವರ್ನರ್!

