ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ಯಶವಂತನಗರದ ಸುಲ್ತಾನಪುರ ಬಳಿ ಸಿಮೆಂಟ್ ಸಾಗಿಸುತ್ತಿದ್ದ ಲಾರಿಯೊಂದು ಸೇತುವೆ ಮೇಲಿಂದ ಪಲ್ಟಿಯಾಗಿ ಕೆಳಗೆ ಬಿದ್ದಿದೆ.
ಸೇತುವೆ ಮೇಲಿಂದ ಲಾರಿ ಬಿದ್ದರೂ ಚಾಲಕ ಬಸವರಾಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಮೇಲಿಂದ ಬಿದ್ದಿದರಿಂದ ಸಿಮೆಂಟ್ ಚೀಲಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆ. ಜೆ.ಎಸ್.ಡಬ್ಲು ನಿಂದ ಸಿಮೆಂಟ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಇಂದು ನಸುಕಿನ ಜಾವ ಡ್ರೈವರ್ ಅಜಾಗರೂಕತೆಯಿಂದ ಸೇತುವೆ ಮೇಲಿಂದ ಪಲ್ಟಿಯಾಗಿ ಬಿದ್ದಿದೆ.
ಚಾಲಕ ಬಸವರಾಜನನ್ನು ಸಂಡೂರಿನ ಸರ್ಕಾರಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.