Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಡವರ ಆರೋಗ್ಯದ ಮೇಲೆ ಕೇಂದ್ರ, ರಾಜ್ಯ ಸರ್ಕಾರ ಹೆಚ್ಚಿನ ಗಮನವಿಟ್ಟಿದೆ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಡವರ ಆರೋಗ್ಯದ ಮೇಲೆ ಕೇಂದ್ರ, ರಾಜ್ಯ ಸರ್ಕಾರ ಹೆಚ್ಚಿನ ಗಮನವಿಟ್ಟಿದೆ: ಸುಧಾಕರ್

Bengaluru City

ಬಡವರ ಆರೋಗ್ಯದ ಮೇಲೆ ಕೇಂದ್ರ, ರಾಜ್ಯ ಸರ್ಕಾರ ಹೆಚ್ಚಿನ ಗಮನವಿಟ್ಟಿದೆ: ಸುಧಾಕರ್

Public TV
Last updated: April 29, 2022 3:11 pm
Public TV
Share
3 Min Read
DR K SUDHKAR
SHARE

– ವೈದ್ಯಕೀಯ ಶಿಕ್ಷಣದಲ್ಲಿ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ

ಬೆಂಗಳೂರು: ನರೇಂದ್ರ ಮೋದಿಯವರು ಆರಂಭಿಸಿರುವ ಆಯುಷ್ಮಾನ್ ಭಾರತ್ ಯೋಜನೆ ಎಲ್ಲರಿಗೂ ಉಚಿತ ಆರೋಗ್ಯ ವಿಮೆ ನೀಡುತ್ತಿದೆ. ಉಚಿತವಾಗಿ ಆರೋಗ್ಯ ವಿಮೆ ನೀಡುತ್ತಿರುವ ಏಕೈಕ ದೇಶ ಭಾರತವಾಗಿದೆ. ಶೂನ್ಯ ಪ್ರಿಮಿಯಂನಲ್ಲಿ 5 ಲಕ್ಷ ರೂಪಾಯಿ ತನಕ ಶಾಶ್ವತ ಆರೋಗ್ಯ ವಿಮೆಯನ್ನು ಸರ್ಕಾರ ನೀಡುತ್ತಿದೆ. ದೇಶದ ಬಡವರ ಆರೋಗ್ಯದ ಮೇಲೆ ಸರ್ಕಾರ ಹೆಚ್ಚಿನ ಗಮನವಿಟ್ಟಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

DR K SUDHAKAR

ಬೆಂಗಳೂರು ಮೆಡಿಕಲ್ ಕಾಲೇಜ್‍ನ ಪದವಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇಂದು ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಹೆಣ್ಣುಮಕ್ಕಳು ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ. ಇದು ದೇಶದಲ್ಲಿ ಮಹಿಳಾ ಸಬಲೀಕರಣದ ಸಂಕೇತ. ಸಮಾಜದಲ್ಲಿ ಬದಲಾವಣೆಗಳು ಆಗುತ್ತಿವೆ. ಬಡವರ ಮಕ್ಕಳು ಕೂಡ ವೈದ್ಯರಾಗಬೇಕೆಂಬ ಕನಸು ಈಡೇರುತ್ತಿದೆ. ಕಳೆದ 7 ವರ್ಷಗಳಲ್ಲಿ ದೇಶದಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಬದಲಾವಣೆ ಕಂಡಿದೆ. ಪ್ರತೀ ವರ್ಷ 65,000 ಎಂಬಿಬಿಎಸ್ ವೈದ್ಯರು ಮತ್ತು 30,000 ವೈದ್ಯರು ಸ್ನಾತಕೋತ್ತರ ಪದವಿ ಪಡೆದು ಸೇವೆಗೆ ಲಭ್ಯರಾಗುತ್ತಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಒಂದು ಲಕ್ಷ ಉದ್ಯೋಗ ಸೃಷ್ಟಿಸುವ FMCG ಕ್ಲಸ್ಟರ್ ಯೋಜನೆ ಇದೇ ವರ್ಷ ಪ್ರಾರಂಭ: ಬೊಮ್ಮಾಯಿ

ಬೆಂಗಳೂರು ಮೆಡಿಕಲ್ ಕಾಲೇಜು (ಬಿಎಂಸಿ) ದೇಶದ ಹೆಮ್ಮೆಯ ಕಾಲೇಜ್‍ಗಳಲ್ಲಿ ಒಂದು. ಇಲ್ಲಿ ಪ್ರವೇಶ ಪಡೆಯುವ ಕನಸು ಹಲವು ವಿದ್ಯಾರ್ಥಿಗಳಿಗೆ ಇರುತ್ತದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಅದೃಷ್ಟವಂತರಲ್ಲಿ ಅದೃಷ್ಟವಂತರು. ಅತ್ಯುತ್ತಮ ಸಂಸ್ಥೆಯಲ್ಲಿ ಕಲಿತವನ ಅನುಭವ ಜೊತೆಗೆ ಸಮಾಜದಲ್ಲಿ ವಿಭಿನ್ನ ಮತ್ತು ವಿಶಿಷ್ಟ ಗೌರವ ಸಿಗುತ್ತದೆ. ವೈದ್ಯರಿಗೆ ಸಮಾಜದ ಎಲ್ಲಾ ಕಡೆಯೂ ವಿಶಿಷ್ಟ ಗೌರವ ಇದೆ. ವೈದ್ಯ ವಿದ್ಯಾರ್ಥಿಗಳು, ಪದವಿ ಪಡೆದವರು ಈ ಸಮಾಜದ ಹೆಮ್ಮೆ ಎಂದು ತಿಳಿಸಿದರು.

DR K SUDHAKAR 2

ಕರ್ನಾಟಕದಲ್ಲಿ ಒಟ್ಟು 65 ಮೆಡಿಕಲ್ ಕಾಲೇಜುಗಳಿವೆ. 4 ಸರ್ಕಾರಿ ಮೆಡಿಕಲ್ ಕಾಲೇಜ್‍ಗಳು ಶೀಘ್ರದಲ್ಲಿ ಆರಂಭವಾಗಲಿವೆ. ಖಾಸಗಿಯಲ್ಲಿ 3 ಹೆಚ್ಚುವರಿ ಮೆಡಿಕಲ್ ಕಾಲೇಜ್‍ಗಳಿಗೆ ಅನುಮತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ 9 ಜಿಲ್ಲೆಗಳಲ್ಲಿ ಹೊಸತಾಗಿ 9 ಮೆಡಿಕಲ್ ಕಾಲೇಜ್‍ಗಳು ಆರಂಭ ಮಾಡಲು ತಯಾರಿಗಳು ನಡೆಯುತ್ತಿವೆ. ದೇಶದ ವೈದ್ಯ ವಿದ್ಯಾರ್ಥಿಗಳಲ್ಲಿ ಶೇಕಡಾ 30.5 ರಷ್ಟು ಕೊಡುಗೆ ಕರ್ನಾಟಕದ್ದಾಗಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ ನಂತರ ಕರ್ನಾಟಕದಲ್ಲಿ ಅತೀ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ – ಮರುಪರೀಕ್ಷೆಗೆ ಸರ್ಕಾರ ತೀರ್ಮಾನ

corona

ಪ್ರಧಾನ ಮಂತ್ರಿ ನರೇಂದ್ರ ಮೋದಿ, ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. 2014ಕ್ಕೂ ಮೊದಲು ದೇಶದಲ್ಲಿ ಕೆಲವೇ ಕೆಲವು ಮೆಡಿಕಲ್ ಕಾಲೇಜ್‍ಗಳಿದ್ದವು. ಆದರೆ ಕಳೆದ 7 ವರ್ಷಗಳಲ್ಲಿ ಹೊಸತಾಗಿ 150ಕ್ಕೂ ಅಧಿಕ ಮೆಡಿಕಲ್ ಕಾಲೇಜ್‍ಗಳು ಆರಂಭವಾಗಿವೆ. 65,000 ಎಂಬಿಬಿಎಸ್ ಡಾಕ್ಟರ್‌ಗಳು ಪ್ರತೀ ವರ್ಷ ಹೊರ ಬರುತ್ತಾರೆ. 30,000 ಸ್ನಾತಕೋತ್ತರ ಪದವಿ ಪಡೆದ ವೈದ್ಯರು ಸಮಾಜ ಸೇವೆಗೆ ಲಭ್ಯರಾಗುತ್ತಿದ್ದಾರೆ. ವೈದ್ಯಕೀಯ ಶಿಕ್ಷಣದ ಕ್ಷೇತ್ರ ದುಬಾರಿ ವೆಚ್ಚವನ್ನು ಬಯಸುತ್ತಿದೆ. ಆದರೆ ಇದನ್ನು ಸರ್ಕಾರ ಹಂತ ಹಂತವಾಗಿ ಕಡಿಮೆ ಮಾಡಲು ಯೋಜನೆ ರೂಪಿಸಿದೆ. ಬಡವರಿಗೂ ಸಹ ವೈದ್ಯಕೀಯ ಶಿಕ್ಷಣ ಸಿಗಬೇಕು ಅನ್ನುವುದೇ ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದೆ ಎಂದು ನುಡಿದರು. ಇದನ್ನೂ ಓದಿ: ತಮ್ಮದೇ ಪಕ್ಷದ ಮುಖಂಡರ ಫ್ಲೆಕ್ಸ್ ವಿರುದ್ಧ ಪ್ರತಾಪ್ ಸಿಂಹ ಗರಂ

ಕೊರೊನಾ ಸಾಂಕ್ರಾಮಿಕ ರೋಗದ ವೇಳೆ ವೈದ್ಯಕೀಯ ವಿದ್ಯಾರ್ಥಿಗಳು ಅನನ್ಯ ಸೇವೆ ಸಲ್ಲಿಸಿದ್ದಾರೆ. ಜೀವನದಲ್ಲಿ ಎದುರಾಗಬಹುದುದಾದ ಸಂಕಷ್ಟಗಳು ಕಲಿಕೆಯ ಹಂತದಲ್ಲೇ ಅನುಭವಕ್ಕೆ ಬಂದಿದೆ. ಇದು ಜೀವನದ ಅಂತ್ಯವಲ್ಲ, ಆರಂಭ ಎಂದು ಪ್ರಧಾನಿಯವರು ಹೇಳಿದರಂತೆ ಎಲ್ಲಾ ವೈದ್ಯಕೀಯ ವಿದ್ಯಾರ್ಥಿಗಳ ಹೊಸ ಜೀವನ ಇಂದಿನಿಂದ ಆರಂಭವಾಗಿದೆ. ಕಳೆದ 5 ವರ್ಷಗಳಲ್ಲಿ ತೋರಿದ ಬದ್ಧತೆ, ಶ್ರದ್ಧೆ ಮತ್ತು ಅಧ್ಯಯನ ಶೀಲತೆಯನ್ನು ಬದುಕಿನ ಉದ್ದಕ್ಕೂ ಅಳವಡಿಸಿಕೊಳ್ಳಬೇಕು ಎಂದು ಆಶಿಸಿದರು.

narendra modi office pm

ಭಾರತ ವೈದ್ಯಕೀಯ ವಿಜ್ಞಾನಕ್ಕೆ ಅದ್ಭುತ ಇತಿಹಾಸವಿದೆ. ಆಯುರ್ವೇದದಲ್ಲಿ ಚರಕ, ಶುಶ್ರೂತರ ಕೊಡುಗೆ ಅಮೂಲ್ಯವಾದದ್ದು. ಬಿಎಂಸಿ ಕೂಡ ಕೇವಲ ವೈದ್ಯರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುತ್ತಿಲ್ಲ. ಬದಲಾಗಿ ಸಂಶೋಧನೆ ಮತ್ತು ಅಭಿವೃದ್ಧಿ ಕಡೆಗೂ ಗಮನ ಹರಿಸಿದೆ. ಕೊರೊನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ ಬಿಎಂಸಿಯ ವಿದ್ಯಾರ್ಥಿಗಳು ನೀಡಿದ ಸೇವೆಗೆ ಧನ್ಯವಾಧಗಳು. ಇವರ ಶ್ರಮದಿಂದ ಲಸಿಕೆ ಬರುವ ಹಂತದ ವರೆಗೆ ಕೊರೊನಾವನ್ನು ಕಂಟ್ರೋಲ್ ಮಾಡಲು ಸಾಧ್ಯವಾಯಿತು ಎಂದರು.

ವೈದ್ಯರ ಸೇವೆ ಸಮಾಜದಲ್ಲಿ ವಿಭಿನ್ನ ಗೌರವವನ್ನು ಹೊಂದಿದೆ. ಮನುಷ್ಯತ್ವ ಮತ್ತುಸೇವೆಯನ್ನು ಒಂದೇ ಕಾಲದಲ್ಲಿ ಅಪೇಕ್ಷೆ ಮಾಡುವ ಕೆಲಸ ಇದಾಗಿದೆ. ಇದರಲ್ಲಿ ಆತ್ಮ ತೃಪ್ತಿಯೂ ಇದೆ. ಎಲ್ಲವನ್ನೂ ಮರೆತು ಸಮಾಜಕ್ಕಾಗಿ, ಇನ್ನೊಬ್ಬರಿಗಾಗಿ ಕೆಲಸ ಮಾಡಬೇಕಾಗುತ್ತದೆ. ಎಲ್ಲಾ ತ್ಯಾಗವನ್ನು ಮಾಡಲು ಸದಾ ಸಿದ್ಧರಿರಬೇಕಾದ ಕೆಲಸ ಇದು. ಎಲ್ಲಾ ಕ್ಷಣದಲ್ಲೂ, ಎಲ್ಲಾ ದಿನವೂ ವೈದ್ಯರು ಸಮಾಜದ ಬಗ್ಗೆ ಮಾತ್ರ ಯೋಚನೆ ಮಾಡಬೇಕು ಎಂದು ಹೇಳಿದರು.

TAGGED:Ayushman BharatCoronaCovid 19dr. k sudhakarnarendra modiಆಯುಷ್ಮಾನ್ ಭಾರತ್ಕೊರೊನಾಡಾ ಕೆ ಸುಧಾಕರ್ನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood

You Might Also Like

drug peddlers
Crime

ಮಂಗಳೂರು| ಮಾದಕವಸ್ತು ಮಾರಾಟ ಮಾಡಲು ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ

Public TV
By Public TV
7 minutes ago
R Ashok 1
Bengaluru City

ಸಾವಿರ ದಿನಗಳಲ್ಲಿ ಸಾವಿರಾರು ಹಗರಣಗಳ ಸರದಾರ ಸಿಎಂ: ಆರ್.ಅಶೋಕ್

Public TV
By Public TV
14 minutes ago
s 400 2
Latest

ರಷ್ಯಾದ ಸುದರ್ಶನ ಚಕ್ರಕ್ಕೆ ಬಲ – 288 ಎಸ್‌-400 ಕ್ಷಿಪಣಿ ಖರೀದಿಗೆ ಮುಂದಾದ ಭಾರತ

Public TV
By Public TV
22 minutes ago
Byrati Basavaraj 1
Bengaluru City

ರೌಡಿಶೀಟರ್ ಕೊಲೆ ಕೇಸ್; ಬೈರತಿ ಬಸವರಾಜ್‌ಗೆ ಒಂದು ದಿನದ ರಿಲೀಫ್

Public TV
By Public TV
31 minutes ago
urus and shivaratri pooja performed Ladle Mashak Dargah aland Kalaburagi 1
Kalaburagi

ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆ; ಮತ್ತೆ 13 ಮಂದಿಗೆ ಪೂಜೆಗೆ ಕೋರ್ಟ್ ಅವಕಾಶ

Public TV
By Public TV
2 hours ago
Yadagiri Stone Mining
Districts

ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?