Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೇಂದ್ರ, ರಾಜ್ಯ ಸರ್ಕಾರಗಳ ಕಾಯ್ದೆ-ಕಾನೂನು ಕನ್ನಡ ಭಾಷೆಯಲ್ಲೇ ಲಭ್ಯ; 74 ಅಧಿನಿಯಮಗಳ ಕನ್ನಡ ಆವೃತ್ತಿ ಲೋಕಾರ್ಪಣೆ

Public TV
Last updated: February 21, 2023 8:18 am
Public TV
Share
2 Min Read
j.c.madhuswamy
SHARE

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾಯ್ದೆ ಮತ್ತು ಕಾನೂನುಗಳು ಜನಸಾಮಾನ್ಯರಿಗೆ ಸ್ಥಳೀಯ ಭಾಷೆಯಲ್ಲಿ ಒದಗಿಸುವ ಮೂಲಕ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಸಿದ್ಧಪಡಿಸಲಾದ 42 ಕೇಂದ್ರ ಅಧಿನಿಯಮಗಳು ಹಾಗೂ 32 ರಾಜ್ಯ ಅಧಿನಿಯಮಗಳ ಕನ್ನಡ ಆವೃತ್ತಿಗಳನ್ನು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ (J.C.Madhuswamy) ಲೋಕಾರ್ಪಣೆ ಮಾಡಿದರು.

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ, ರಾಜಭಾಷಾ (ವಿಧಾಯೀ) ಆಯೋಗ ಹಾಗೂ ಭಾಷಾಂತರ ನಿರ್ದೇಶನಾಲಯದಿಂದ ಈ ಅಧಿನಿಯಮಗಳ ಕನ್ನಡ ಆವೃತ್ತಿ ಸಿದ್ಧಪಡಿಸಲಾಗಿದೆ. ಇದನ್ನೂ ಓದಿ: ಯತೀಂದ್ರ ಸಿದ್ದರಾಮಯ್ಯಗೆ ವರುಣಾ ಟಿಕೆಟ್‌ – ಡಿಕೆಶಿ ಘೋಷಣೆ

j.c.madhuswamy bengaluru

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಕಾನೂನಿನ ಮುಂದೆ ಎಲ್ಲರೂ ಸಮಾನರು. ಕಾನೂನಿನ ಅನುಷ್ಠಾನ ಮತ್ತು ಪಾಲನೆ ಮಾಡಬೇಕಾದರೇ ಅದರ ಅರಿವು ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಸ್ಥಳೀಯ ಭಾಷೆಯಲ್ಲಿ ಒದಗಿಸಿ ಅರ್ಥೈಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿನಿಯಮಗಳನ್ನು ಕನ್ನಡಕ್ಕೆ ಭಾಷಾಂತರಗೊಳಿಸಲಾಗಿದೆ ಎಂದರು.

ಜನಸಾಮಾನ್ಯರಿಗೆ ತಮ್ಮ ಸ್ಥಳೀಯ ಭಾಷೆಗಳಲ್ಲಿ ಕಾನೂನುಗಳನ್ನು ತಿಳಿದುಕೊಳ್ಳಲು ಹಾಗೂ ನ್ಯಾಯಾಲಯಗಳಲ್ಲಿ, ನ್ಯಾಯಾಧೀಕರಣಗಳಲ್ಲಿ ಸರ್ಕಾರದ ಕಚೇರಿಗಳಲ್ಲಿ ಕನ್ನಡದ ಬಳಕೆಯನ್ನು ಸುಗಮಗೊಳಿಸಲು ಈ ಅಧಿನಿಯಮಗಳು ತುಂಬಾ ಸಹಕಾರಿಯಾಗಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿನಿಯಮಗಳನ್ನು ಭಾಷಾಂತರಿಸುವ ಕೆಲಸ ವ್ಯಾಪಕವಾಗಿ ಆಗಬೇಕಿದೆ ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಸರ್ಕಾರ ಸತ್ತುಹೋಗಿದೆ ಅನ್ನೋದಕ್ಕೆ ಅಧಿಕಾರಿಗಳ ಬೀದಿ ರಂಪ ಸಾಕ್ಷಿ – ಸುರ್ಜೆವಾಲಾ

j.c.madhuswamy

ಕೇಂದ್ರ ಮತ್ತು ರಾಜ್ಯದ ಅಧಿನಿಯಮಗಳನ್ನು ಭಾಷಾಂತರಿಸುವುದಕ್ಕೆ ಕರ್ನಾಟಕದಲ್ಲಿ ವಿಶೇಷ ಒತ್ತು ನೀಡಲಾಗಿದ್ದು, ಕೇಂದ್ರ ಸರ್ಕಾರವೇ ಶ್ಲಾಘಿಸಿದೆ. ಜನರು ಕಾಯ್ದೆ, ಕಾನೂನುಗಳನ್ನು ಹೆಚ್ಚೆಚ್ಚು ತಿಳಿದುಕೊಂಡಲ್ಲಿ ಅವುಗಳ ಪರಿಣಾಮಕಾರಿ ಅನುಷ್ಠಾನ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕರ್ನಾಟಕದ ನ್ಯಾಯಾಲಯಗಳಲ್ಲಿ ಕನ್ನಡದ ತೀರ್ಪುಗಳು ಹೊರಬರಲು ಹಾಗೂ ಆಡಳಿತ ವ್ಯವಹಾರಗಳಲ್ಲಿ ಮತ್ತು ಮೊಕದ್ದಮೆಗಳಿಗೆ ಸಂಬಂಧಿಸಿದ ಪ್ರಕ್ರಿಯೆಯಲ್ಲೂ ಕೂಡ ಕನ್ನಡದ ಬಳಕೆ ಸಮರ್ಪಕವಾಗಿ ಆಗಬೇಕಾಗಿದೆ ಎಂದರು. ಇದನ್ನೂ ಓದಿ: ಸೈಬರ್ ಪ್ರಕರಣ ತಡೆಯಲು ಕಠಿಣ ಕ್ರಮ: ಆರಗ ಜ್ಞಾನೇಂದ್ರ

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ರಾಜಭಾಷಾ(ವಿಧಾಯೀ) ಆಯೋಗದ ಅಧ್ಯಕ್ಷರಾದ ಜಿ.ಶ್ರೀಧರ್ ಮಾತನಾಡಿ, ರಾಜಭಾಷಾ ಆಯೋಗವು ಇಲ್ಲಿಯವರೆಗೆ 371 ಕೇಂದ್ರ ಮತ್ತು 219 ರಾಜ್ಯ ಅಧಿನಿಯಮಗಳನ್ನು ಕನ್ನಡ ಭಾಷೆಗೆ ಭಾಷಾಂತರಿಸಿ ಪ್ರಕಟಿಸಿದೆ. ಭಾರತ ಸಂವಿಧಾನವನ್ನು ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಸ್ಥಳೀಯ ಭಾಷೆಯಲ್ಲಿ ಭಾಷಾಂತರಿಸಿ ಜನಸಾಮಾನ್ಯರಿಗೆ ತಲುಪಿಸಿದ ಕೀರ್ತಿ ನಮ್ಮ ಆಯೋಗಕ್ಕೆ ಸಲ್ಲುತ್ತದೆ ಎಂದು ಹೇಳಿದರು.

ದೇಶದ ಪ್ರಮುಖ ಕಾನೂನುಗಳಾದ ಭಾರತ ದಂಡ ಸಂಹಿತೆ, ದಂಡ ಪ್ರಕ್ರಿಯಾ ಸಂಹಿತೆ ಹಾಗೂ ಭಾರತ ಸಾಕ್ಷ್ಯ ಅಧಿನಿಯಮಗಳನ್ನು ಕನ್ನಡ ಭಾಷೆಗೆ ಭಾಷಾಂತರಿಸಿ ದ್ವಿಭಾಷೆಯಲ್ಲಿ ಪ್ರಕಟಿಸಲಾಗಿದೆ. ಪರಿಷ್ಕೃತ ಇಂಗ್ಲಿಷ್ ಕನ್ನಡ ಕಾನೂನು ಪದಕೋಶ ಇತ್ತೀಚೆಗೆ ಬಿಡುಗಡೆ ಮಾಡಲಾಗಿದ್ದು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ತರಿಸಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಕೆಲಸ ಎಲ್ಲ ರಾಜ್ಯಗಳಲ್ಲಾಗಿದ್ದರೆ ಸ್ಥಳೀಯ ಭಾಷೆಯಲ್ಲಿ ನ್ಯಾಯಾಲಯ ತೀರ್ಪುಗಳನ್ನು ಪ್ರಕಟಿಸಲು ಸಹಾಯಕವಾಗುತ್ತದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದನ್ನು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ ನಾರಾಯಣ, ಶಾಸಕ ದಿನಕರಶೆಟ್ಟಿ, ಭಾಷಾಂತರ ನಿರ್ದೇಶನಾಲಯದ ನಿರ್ದೇಶಕ ಎಂ.ವೆಂಕಟೇಶ, ರಾಜಭಾಷಾ(ವಿಧಾಯೀ) ಆಯೋಗದ ಸದಸ್ಯರು ಇದ್ದರು.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:ActsCentral GovernmentJ C MadhuswamyKarnataka Governmentlawಕಾನೂನುಕಾಯ್ದೆಕೇಂದ್ರಜೆ.ಸಿ ಮಾಧುಸ್ವಾಮಿಬೆಂಗಳೂರುರಾಜ್ಯ ಸರ್ಕಾರ
Share This Article
Facebook Whatsapp Whatsapp Telegram

Cinema Updates

ranjani raghavan
ಗೆಳೆಯನ ಜೊತೆ ರಂಜನಿ ರಾಘವನ್ ಲಾಂಗ್ ಡ್ರೈವ್
4 minutes ago
hamsalekha
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
13 hours ago
Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
16 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
17 hours ago

You Might Also Like

Abdul Rahim Murder
Crime

ಅಬ್ದುಲ್‌ ರಹಿಮಾನ್‌ ಹತ್ಯೆ ಕೇಸ್‌ | ಮತ್ತಿಬ್ಬರು ಆರೋಪಿಗಳು ಅರೆಸ್ಟ್‌ – ಹತ್ಯೆಗೆ ಕಾರಣವೇ ಇನ್ನೂ ಸಸ್ಪೆನ್ಸ್!‌

Public TV
By Public TV
41 minutes ago
Punjab Firecracker Factory 2
Crime

ಪಂಜಾಬ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಐವರು ಸಾವು, 25 ಮಂದಿಗೆ ಗಾಯ

Public TV
By Public TV
54 minutes ago
Bengaluru
Bengaluru City

ಸಲೂನ್‌ಗೆ ನುಗ್ಗಿ ಲೇಡಿ ರೌಡಿ ಗ್ಯಾಂಗ್‌ನಿಂದ ದಾಂಧಲೆ – ಮೂವರು ಅರೆಸ್ಟ್‌

Public TV
By Public TV
1 hour ago
Pakistan Spy 2
Crime

ಬೇಹುಗಾರಿಕೆಗಾಗಿ ಭಾರತೀಯ ಮೊಬೈಲ್‌ ಸಿಮ್‌ ಕಾರ್ಡ್‌ ಪೂರೈಸುತ್ತಿದ್ದ ಪಾಕ್‌ ಸ್ಪೈ ಅರೆಸ್ಟ್‌

Public TV
By Public TV
2 hours ago
KRS Dam
Districts

ನಾಲ್ಕೇ ದಿನಕ್ಕೆ KRSನಲ್ಲಿ 11 ಅಡಿ ನೀರು ಹೆಚ್ಚಳ – ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ ಭರ್ತಿ!

Public TV
By Public TV
2 hours ago
HS Venkata murty
Bengaluru City

ಕನ್ನಡದ ಖ್ಯಾತ ಕವಿ ಹೆಚ್.ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?