Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರ, ರಾಜ್ಯ ಸರ್ಕಾರಗಳ ಕಾಯ್ದೆ-ಕಾನೂನು ಕನ್ನಡ ಭಾಷೆಯಲ್ಲೇ ಲಭ್ಯ; 74 ಅಧಿನಿಯಮಗಳ ಕನ್ನಡ ಆವೃತ್ತಿ ಲೋಕಾರ್ಪಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೇಂದ್ರ, ರಾಜ್ಯ ಸರ್ಕಾರಗಳ ಕಾಯ್ದೆ-ಕಾನೂನು ಕನ್ನಡ ಭಾಷೆಯಲ್ಲೇ ಲಭ್ಯ; 74 ಅಧಿನಿಯಮಗಳ ಕನ್ನಡ ಆವೃತ್ತಿ ಲೋಕಾರ್ಪಣೆ

Bengaluru City

ಕೇಂದ್ರ, ರಾಜ್ಯ ಸರ್ಕಾರಗಳ ಕಾಯ್ದೆ-ಕಾನೂನು ಕನ್ನಡ ಭಾಷೆಯಲ್ಲೇ ಲಭ್ಯ; 74 ಅಧಿನಿಯಮಗಳ ಕನ್ನಡ ಆವೃತ್ತಿ ಲೋಕಾರ್ಪಣೆ

Public TV
Last updated: February 21, 2023 8:18 am
Public TV
Share
2 Min Read
j.c.madhuswamy
SHARE

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾಯ್ದೆ ಮತ್ತು ಕಾನೂನುಗಳು ಜನಸಾಮಾನ್ಯರಿಗೆ ಸ್ಥಳೀಯ ಭಾಷೆಯಲ್ಲಿ ಒದಗಿಸುವ ಮೂಲಕ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಸಿದ್ಧಪಡಿಸಲಾದ 42 ಕೇಂದ್ರ ಅಧಿನಿಯಮಗಳು ಹಾಗೂ 32 ರಾಜ್ಯ ಅಧಿನಿಯಮಗಳ ಕನ್ನಡ ಆವೃತ್ತಿಗಳನ್ನು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ (J.C.Madhuswamy) ಲೋಕಾರ್ಪಣೆ ಮಾಡಿದರು.

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ, ರಾಜಭಾಷಾ (ವಿಧಾಯೀ) ಆಯೋಗ ಹಾಗೂ ಭಾಷಾಂತರ ನಿರ್ದೇಶನಾಲಯದಿಂದ ಈ ಅಧಿನಿಯಮಗಳ ಕನ್ನಡ ಆವೃತ್ತಿ ಸಿದ್ಧಪಡಿಸಲಾಗಿದೆ. ಇದನ್ನೂ ಓದಿ: ಯತೀಂದ್ರ ಸಿದ್ದರಾಮಯ್ಯಗೆ ವರುಣಾ ಟಿಕೆಟ್‌ – ಡಿಕೆಶಿ ಘೋಷಣೆ

j.c.madhuswamy bengaluru

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಕಾನೂನಿನ ಮುಂದೆ ಎಲ್ಲರೂ ಸಮಾನರು. ಕಾನೂನಿನ ಅನುಷ್ಠಾನ ಮತ್ತು ಪಾಲನೆ ಮಾಡಬೇಕಾದರೇ ಅದರ ಅರಿವು ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಸ್ಥಳೀಯ ಭಾಷೆಯಲ್ಲಿ ಒದಗಿಸಿ ಅರ್ಥೈಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿನಿಯಮಗಳನ್ನು ಕನ್ನಡಕ್ಕೆ ಭಾಷಾಂತರಗೊಳಿಸಲಾಗಿದೆ ಎಂದರು.

ಜನಸಾಮಾನ್ಯರಿಗೆ ತಮ್ಮ ಸ್ಥಳೀಯ ಭಾಷೆಗಳಲ್ಲಿ ಕಾನೂನುಗಳನ್ನು ತಿಳಿದುಕೊಳ್ಳಲು ಹಾಗೂ ನ್ಯಾಯಾಲಯಗಳಲ್ಲಿ, ನ್ಯಾಯಾಧೀಕರಣಗಳಲ್ಲಿ ಸರ್ಕಾರದ ಕಚೇರಿಗಳಲ್ಲಿ ಕನ್ನಡದ ಬಳಕೆಯನ್ನು ಸುಗಮಗೊಳಿಸಲು ಈ ಅಧಿನಿಯಮಗಳು ತುಂಬಾ ಸಹಕಾರಿಯಾಗಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿನಿಯಮಗಳನ್ನು ಭಾಷಾಂತರಿಸುವ ಕೆಲಸ ವ್ಯಾಪಕವಾಗಿ ಆಗಬೇಕಿದೆ ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಸರ್ಕಾರ ಸತ್ತುಹೋಗಿದೆ ಅನ್ನೋದಕ್ಕೆ ಅಧಿಕಾರಿಗಳ ಬೀದಿ ರಂಪ ಸಾಕ್ಷಿ – ಸುರ್ಜೆವಾಲಾ

j.c.madhuswamy

ಕೇಂದ್ರ ಮತ್ತು ರಾಜ್ಯದ ಅಧಿನಿಯಮಗಳನ್ನು ಭಾಷಾಂತರಿಸುವುದಕ್ಕೆ ಕರ್ನಾಟಕದಲ್ಲಿ ವಿಶೇಷ ಒತ್ತು ನೀಡಲಾಗಿದ್ದು, ಕೇಂದ್ರ ಸರ್ಕಾರವೇ ಶ್ಲಾಘಿಸಿದೆ. ಜನರು ಕಾಯ್ದೆ, ಕಾನೂನುಗಳನ್ನು ಹೆಚ್ಚೆಚ್ಚು ತಿಳಿದುಕೊಂಡಲ್ಲಿ ಅವುಗಳ ಪರಿಣಾಮಕಾರಿ ಅನುಷ್ಠಾನ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕರ್ನಾಟಕದ ನ್ಯಾಯಾಲಯಗಳಲ್ಲಿ ಕನ್ನಡದ ತೀರ್ಪುಗಳು ಹೊರಬರಲು ಹಾಗೂ ಆಡಳಿತ ವ್ಯವಹಾರಗಳಲ್ಲಿ ಮತ್ತು ಮೊಕದ್ದಮೆಗಳಿಗೆ ಸಂಬಂಧಿಸಿದ ಪ್ರಕ್ರಿಯೆಯಲ್ಲೂ ಕೂಡ ಕನ್ನಡದ ಬಳಕೆ ಸಮರ್ಪಕವಾಗಿ ಆಗಬೇಕಾಗಿದೆ ಎಂದರು. ಇದನ್ನೂ ಓದಿ: ಸೈಬರ್ ಪ್ರಕರಣ ತಡೆಯಲು ಕಠಿಣ ಕ್ರಮ: ಆರಗ ಜ್ಞಾನೇಂದ್ರ

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ರಾಜಭಾಷಾ(ವಿಧಾಯೀ) ಆಯೋಗದ ಅಧ್ಯಕ್ಷರಾದ ಜಿ.ಶ್ರೀಧರ್ ಮಾತನಾಡಿ, ರಾಜಭಾಷಾ ಆಯೋಗವು ಇಲ್ಲಿಯವರೆಗೆ 371 ಕೇಂದ್ರ ಮತ್ತು 219 ರಾಜ್ಯ ಅಧಿನಿಯಮಗಳನ್ನು ಕನ್ನಡ ಭಾಷೆಗೆ ಭಾಷಾಂತರಿಸಿ ಪ್ರಕಟಿಸಿದೆ. ಭಾರತ ಸಂವಿಧಾನವನ್ನು ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಸ್ಥಳೀಯ ಭಾಷೆಯಲ್ಲಿ ಭಾಷಾಂತರಿಸಿ ಜನಸಾಮಾನ್ಯರಿಗೆ ತಲುಪಿಸಿದ ಕೀರ್ತಿ ನಮ್ಮ ಆಯೋಗಕ್ಕೆ ಸಲ್ಲುತ್ತದೆ ಎಂದು ಹೇಳಿದರು.

ದೇಶದ ಪ್ರಮುಖ ಕಾನೂನುಗಳಾದ ಭಾರತ ದಂಡ ಸಂಹಿತೆ, ದಂಡ ಪ್ರಕ್ರಿಯಾ ಸಂಹಿತೆ ಹಾಗೂ ಭಾರತ ಸಾಕ್ಷ್ಯ ಅಧಿನಿಯಮಗಳನ್ನು ಕನ್ನಡ ಭಾಷೆಗೆ ಭಾಷಾಂತರಿಸಿ ದ್ವಿಭಾಷೆಯಲ್ಲಿ ಪ್ರಕಟಿಸಲಾಗಿದೆ. ಪರಿಷ್ಕೃತ ಇಂಗ್ಲಿಷ್ ಕನ್ನಡ ಕಾನೂನು ಪದಕೋಶ ಇತ್ತೀಚೆಗೆ ಬಿಡುಗಡೆ ಮಾಡಲಾಗಿದ್ದು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ತರಿಸಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಕೆಲಸ ಎಲ್ಲ ರಾಜ್ಯಗಳಲ್ಲಾಗಿದ್ದರೆ ಸ್ಥಳೀಯ ಭಾಷೆಯಲ್ಲಿ ನ್ಯಾಯಾಲಯ ತೀರ್ಪುಗಳನ್ನು ಪ್ರಕಟಿಸಲು ಸಹಾಯಕವಾಗುತ್ತದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದನ್ನು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ ನಾರಾಯಣ, ಶಾಸಕ ದಿನಕರಶೆಟ್ಟಿ, ಭಾಷಾಂತರ ನಿರ್ದೇಶನಾಲಯದ ನಿರ್ದೇಶಕ ಎಂ.ವೆಂಕಟೇಶ, ರಾಜಭಾಷಾ(ವಿಧಾಯೀ) ಆಯೋಗದ ಸದಸ್ಯರು ಇದ್ದರು.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:ActsCentral GovernmentJ C MadhuswamyKarnataka Governmentlawಕಾನೂನುಕಾಯ್ದೆಕೇಂದ್ರಜೆ.ಸಿ ಮಾಧುಸ್ವಾಮಿಬೆಂಗಳೂರುರಾಜ್ಯ ಸರ್ಕಾರ
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

bjp jds protest
Bengaluru City

ಅಬಕಾರಿ ಇಲಾಖೆ ಅವ್ಯವಹಾರದ ವಿರುದ್ಧ ‘ದೋಸ್ತಿ’ ಸಮರ; ಸದನದಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ

Public TV
By Public TV
1 hour ago
Delhi Capitals Women
Cricket

WPL 2026: ಗುಜರಾತ್‌ ವಿರುದ್ಧ 7 ವಿಕೆಟ್‌ಗಳ ಜಯ – ಫೈನಲ್‌ಗೆ ಡೆಲ್ಲಿ ಲಗ್ಗೆ

Public TV
By Public TV
1 hour ago
Residential School
Bengaluru City

ವಸತಿ ಶಾಲೆ ಅರ್ಜಿ ಸಲ್ಲಿಸಲು ಫೆ.7ರವರೆಗೆ ಅವಕಾಶ – ಕೆಇಎ

Public TV
By Public TV
1 hour ago
kea
Bengaluru City

ಎಂ-ಫಾರ್ಮಾ: ಫೆ.7ರಿಂದ ಇಚ್ಛೆ/ಆಪ್ಷನ್ ನಮೂದಿಸಲು ಅವಕಾಶ- ಕೆಇಎ

Public TV
By Public TV
2 hours ago
HD Kumaraswamy
Latest

ತಂಬಾಕು ಮೇಲಿನ 18% ಅಬಕಾರಿ ಸುಂಕ ಹಿಂದಕ್ಕೆ – ಬೆಳೆಗಾರರು ನಿರಾಳ

Public TV
By Public TV
2 hours ago
Karwar Suicide
Crime

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್ – ಜೆಡಿಎಸ್ ಮುಖಂಡೆ ಪುತ್ರ ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?