Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Chitradurga

ಕೋಟೆನಾಡಲ್ಲಿ ಕೇಂದ್ರೀಯ ವಿದ್ಯಾಲಯಕ್ಕೆ ಕೇಂದ್ರ ಸರ್ಕಾರ ಅಸ್ತು

Public TV
Last updated: December 7, 2024 3:15 pm
Public TV
Share
3 Min Read
Chitradurga Zilla Panchayat
SHARE

–  2025ರಿಂದಲೇ ಕಾರ್ಯಾರಂಭ ಸಾಧ್ಯತೆ

ಚಿತ್ರದುರ್ಗ: ಹಲವು ದಶಕಗಳ ಕನಸಾದ ಚಿತ್ರದುರ್ಗ (Chitradurga) ಜಿಲ್ಲೆಯ ಜನರ ಪ್ರಮುಖ ಬೇಡಿಕೆಯಾಗಿದ್ದ ಕೇಂದ್ರೀಯ ವಿದ್ಯಾಲಯಕ್ಕೆ (KV) ಕೊನೆಗೂ ಕೇಂದ್ರ ಸರ್ಕಾರ ಅಸ್ತು ಎಂದಿದೆ.

ಡಿಸೆಂಬರ್ 06ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ನಡೆದ ಕೇಂದ್ರದ ಸಚಿವ ಸಂಪುಟ ಸಭೆಯಲ್ಲಿ ದೇಶಕ್ಕೆ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ಕರ್ನಾಟಕ ರಾಜ್ಯಕ್ಕೂ ಮೂರು ಕೇಂದ್ರೀಯ ವಿದ್ಯಾಲಯ ಮಂಜೂರಾಗಿವೆ. ಚಿತ್ರದುರ್ಗ ಜಿಲ್ಲೆಯ ಕುಂಚಿಗನಾಳು ಗ್ರಾಮದ ಬಳಿಯ ಹೊಸ ಕೇಂದ್ರೀಯ ವಿದ್ಯಾಲಯ ಇದರಲ್ಲಿ ಸೇರಿದೆ. ಇದರೊಂದಿಗೆ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೂ ನೂತನ ಕೆವಿಗಳು ಮಂಜೂರಾಗಿವೆ. ಇದನ್ನೂ ಓದಿ: ಜಿ.ಪಂ ಸಿಇಓ ಸಹಿ ನಕಲು ಮಾಡಿ ಎಂಜಿನಿಯರ್‌ಗೆ ನೇಮಕಾತಿ ಪತ್ರ – ಎಫ್‌ಡಿಎ ಮೇಲೆ ಎಫ್‌ಐಆರ್

Govinda Karajola

ಕೇಂದ್ರೀಯ ವಿದ್ಯಾಲಯದ ತರಗತಿಗಳು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಕಾರ್ಯಾರಂಭ ಮಾಡುವ ಸಾಧ್ಯತೆಯಿದ್ದು, ತಾತ್ಕಾಲಿಕವಾಗಿ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ಪ್ರಾರಂಭವಾಗಲಿವೆ. ಮುಂದಿನ ಮೂರು ವರ್ಷದಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡಿ ನಂತರ ಅಲ್ಲಿ ಹೊಸ ತರಗತಿಗಳನ್ನು ಪ್ರಾರಂಭಿಸುವುದು ಕೇಂದ್ರೀಯ ವಿದ್ಯಾಲಯದ ನಿಯಮವಾಗಿದೆ. ಇದನ್ನೂ ಓದಿ: ಬೆಳಗ್ಗೆ ವಾಕಿಂಗ್‌ಗೆ ಹೋಗಿದ್ದ ಉದ್ಯಮಿಗೆ ಗುಂಡಿಕ್ಕಿ ಹತ್ಯೆ

A Narayanaswamy

ಮಾಜಿ ಸಂಸದ ಎ.ನಾರಾಯಣಸ್ವಾಮಿ ಶ್ರಮ ಅಪಾರ:
ಅತಿ ಹಿಂದುಳಿದ ಪ್ರದೇಶ ಎನಿಸಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಹೊಸ ಕೇಂದ್ರೀಯ ವಿದ್ಯಾಲಯ ಆರಂಭವಾಗುವುದರ ಹಿಂದೆ ಕೇಂದ್ರದ ಮಾಜಿ ಸಚಿವರು, ಮಾಜಿ ಸಂಸದರೂ ಆಗಿರುವ ಎ.ನಾರಾಯಣಸ್ವಾಮಿ ಅವರ ಶ್ರಮ ಅಪಾರವಾಗಿದೆ. ಈ ಹಿಂದೆ ಅವರು ಕೇಂದ್ರೀಯ ವಿದ್ಯಾಲಯ ಆರಂಭಿಸಲು ಸಾಕಷ್ಟು ಪ್ರಯತ್ನ ಮಾಡಿದ್ದರು. ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ತಾತ್ಕಾಲಿಕ ತರಗತಿ ಆರಂಭಿಸಲು ಪತ್ರ ವ್ಯವಹಾರ ನಡೆಸಿ ಕೊಠಡಿಗಳನ್ನು ಮಂಜೂರು ಮಾಡಿಸಿದ್ದರು. 2021ರಲ್ಲೇ ಬಹುತೇಕ ಎಲ್ಲಾ ಪ್ರಕ್ರಿಯೆಗಳು ಅಂತಿಮವಾಗಿ ಎರಡು ವರ್ಷದ ಹಿಂದೆಯೇ ಕೇಂದ್ರೀಯ ವಿದ್ಯಾಲಯ ಆರಂಭವಾಗಲಿದೆ ಎನ್ನಲಾಗುತ್ತಿತ್ತು. ಇದನ್ನೂ ಓದಿ: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Chitradurga KV

ಆದರೆ, ಕೇಂದ್ರ ಸರ್ಕಾರ ದೇಶದ ಇತರೆ ರಾಜ್ಯಗಳ ಪ್ರಸ್ತಾವನೆಯ ಜೊತೆಗೆ ಒಟ್ಟಿಗೆ ಅನುಮೋದನೆ ನೀಡುವ ಉದ್ದೇಶದಿಂದ ಚಿತ್ರದುರ್ಗ ಕೇಂದ್ರೀಯ ವಿದ್ಯಾಲಯವನ್ನು ಪೆಂಡಿಂಗ್ ಇಟ್ಟಿತ್ತು. ಆದರೆ ಈ ಬಾರಿ ಕೇಂದ್ರದ ಸಂಪುಟ ಸಭೆಯಲ್ಲಿ ನಿರ್ಧರಿಸಿದಂತೆ ಕುಂಚಿಗನಾಳು ಬಳಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಈಗಾಗಲೇ ಭೂಮಿ ಸಿದ್ಧವಾಗಿದೆ. ವಿಆರ್‌ಎಲ್ ಸಮೀಪದಲ್ಲಿ ಹೊಸ ಕೇಂದ್ರೀಯ ವಿದ್ಯಾಲಯಕ್ಕೆ ಜಾಗ ಅಂತಿಮವಾಗಿದ್ದು, ಕೆಲ ದಿನಗಳಲ್ಲೇ ಕಟ್ಟಡ ನಿರ್ಮಾಣ ಕಾಮಗಾರಿಯೂ ಪ್ರಾರಂಭವಾಗಲಿದೆ. ಇದನ್ನೂ ಓದಿ: ಬಾಣಂತಿಯರ ಸರಣಿ ಸಾವು ಕೇಸ್ – ಬಳ್ಳಾರಿ ಜಿಲ್ಲಾಸ್ಪತ್ರೆ ಮೇಲೆ ‘ಲೋಕಾ’ ದಾಳಿ

ಗೋವಿಂದ ಕಾರಜೋಳ ಮೊದಲ ಪ್ರಯತ್ನ ಯಶಸ್ವಿ:
ಎ.ನಾರಾಯಣಸ್ವಾಮಿ ಅವರ ಪ್ರಯತ್ನಕ್ಕೆ ಪೂರಕವಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ನೂತನ ಸಂಸದರಾಗಿ ಆಯ್ಕೆಯಾಗಿ ಬಂದ ಗೋವಿಂದ ಕಾರಜೋಳ ಅವರು ಕೇಂದ್ರೀಯ ವಿದ್ಯಾಲಯ ಕುರಿತು ಮೊದಲ ದಿನವೇ ಅಧಿವೇಶನದಲ್ಲಿ ಸದ್ದು ಮಾಡಿದ್ದರು. ಸಂಸದರಾಗಿ ದೆಹಲಿಗೆ ತೆರಳಿದ ಮೊದಲ ದಿನವೇ ಕೇಂದ್ರದ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿಯಾಗಿ ಹಿಂದುಳಿದ ಜಿಲ್ಲೆಗೆ ಕೇಂದ್ರೀಯ ವಿದ್ಯಾಲಯ ಮಂಜೂರಾಗಬೇಕು ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: ಪ್ರಧಾನಿ ಅಂಗಳ ತಲುಪಿದ ಮುಡಾ ಪ್ರಕರಣ – ಸಿಬಿಐಗೆ ವಹಿಸುವಂತೆ ವಕೀಲನಿಂದ ಪತ್ರ

ಅಲ್ಲದೇ ಮೊದಲ ದಿನವೇ ಸಂಸತ್ತಿನ ಅಧಿವೇಶನದಲ್ಲಿ ಚಿತ್ರದುರ್ಗದ ಕೇಂದ್ರೀಯ ವಿದ್ಯಾಲಯ ಆರಂಭದ ಕುರಿತು ಪ್ರಶ್ನೆ ಮಾಡಿದ್ದ ಹಿನ್ನೆಲೆ ಕೋಟೆನಾಡಿನ ಬಹುದಿನಗಳ ಕನಸಾದ ಕೇಂದ್ರಿಯ ವಿದ್ಯಾಲಯ ಮಂಜೂರಾಗಿದ್ದು, ಶೈಕ್ಷಣಿಕವಾಗಿ, ಆರ್ಥಿಕವಾಗಿ ಅತಿಹಿಂದುಳಿದ ಪ್ರದೇಶ ಎನಿಸಿರುವ ಚಿತ್ರದುರ್ಗಕ್ಕೆ ಇದೊಂದು ವರದಾನ. ಪ್ರತಿಭಾವಂತ ವಿದ್ಯಾರ್ಥಿಗಳಿಗೊಂದು ಸುವರ್ಣವಕಾಶ ಎನಿಸಿದೆ. ಇದನ್ನೂ ಓದಿ: ಬಿಬಿಎಂಪಿ‌ ವ್ಯಾಪ್ತಿಯಲ್ಲಿ ಇ-ಖಾತಾ ನಾಗರಿಕ ಸಹಾಯವಾಣಿ ಪ್ರಾರಂಭ

TAGGED:Chitradurgagovinda karajolaKendriya Vidyalayanarendra modiಕೆವಿಕೇಂದ್ರೀಯ ವಿದ್ಯಾಲಯಚಿತ್ರದುರ್ಗನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema Updates

ravi mohan kenishaa
ಡಿವೋರ್ಸ್ ಘೋಷಿಸಿದ ಬೆನ್ನಲ್ಲೇ ಗಾಯಕಿ ಜೊತೆ ಕಾಣಿಸಿಕೊಂಡ ರವಿ ಮೋಹನ್
17 hours ago
rajamouli
ಆರ್ಮಿಗೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್ ಮಾಡಬೇಡಿ: ರಾಜಮೌಳಿ ಮನವಿ
17 hours ago
Kamal Haasan
ಭಾರತ-ಪಾಕ್ ನಡುವೆ ಉದ್ವಿಗ್ನ ಹೊತ್ತಲ್ಲೇ ದಿಟ್ಟ ನಿರ್ಧಾರ ಕೈಗೊಂಡ ಕಮಲ್ ಹಾಸನ್
19 hours ago
JHANVI KAPOOR
ಜಗದೇಕ ವೀರುಡು ಅತಿಲೋಕ ಸುಂದರಿ ರೀ ರಿಲೀಸ್‌ – ರಿಮೇಕ್‌ ಆದ್ರೆ ಜಾನ್ವಿಯೇ ಬೇಕು ಎಂದ ಮೆಗಾಸ್ಟಾರ್‌!
19 hours ago

You Might Also Like

Vyomika Singh
Latest

ಆಸ್ಪತ್ರೆ, ಮೂಲಸೌಕರ್ಯ ಗುರಿಯಾಗಿಸಿ ಪಾಕ್‌ ಮಿಸೈಲ್‌ ದಾಳಿ, ತಕ್ಕ ಉತ್ತರ ಕೊಟ್ಟಿದ್ದೇವೆ: ವ್ಯೋಮಿಕಾ ಸಿಂಗ್

Public TV
By Public TV
21 minutes ago
Pakistans former Air Marshal Masood Akhtar
Latest

ಭಾರತದೊಂದಿಗಿನ ಯುದ್ಧದಲ್ಲಿ ನಮಗೆ ಉಳಿಗಾಲವಿಲ್ಲ: ಪಾಕ್ ನಿವೃತ್ತ ಏರ್ ಮಾರ್ಷಲ್

Public TV
By Public TV
31 minutes ago
vyomika singh sofia qureshi vikram misri
Latest

ಭಾರತದ ವಾಯುನೆಲೆಗೆ ಯಾವುದೇ ಹಾನಿಯಾಗಿಲ್ಲ, ಗಡಿಯಲ್ಲಿ ಸೇನೆಯನ್ನು ನಿಯೋಜಿಸುತ್ತಿದೆ ಪಾಕ್‌ : ಭಾರತ

Public TV
By Public TV
52 minutes ago
Pakistan Army Asim Munir
Latest

ಅಸಿಮ್ ಮುನೀರ್‌ನಿಂದ ದೇಶ ನಾಶ – ರೊಚ್ಚಿಗೆದ್ದ ಪಾಕ್‌ ಜನ

Public TV
By Public TV
2 hours ago
kea
Bengaluru City

CET ದಾಖಲೆ ಪರಿಶೀಲನೆ – ಜಮ್ಮು ವಿದ್ಯಾರ್ಥಿಗಳಿಗೆ ವಿಶೇಷ ಅವಕಾಶ, ಆತಂಕ ಬೇಡ: ಕೆಇಎ

Public TV
By Public TV
3 hours ago
PETROL
Latest

ಪಾಕ್‌ ತತ್ತರ – ಇಸ್ಲಾಮಾಬಾದ್‌ನಲ್ಲಿ 48 ಗಂಟೆಗಳವರೆಗೆ ಪೆಟ್ರೋಲ್ ಪಂಪ್‌ಗಳು ಬಂದ್‌

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?