Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೇಕೆದಾಟು ಯೋಜನೆಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ: ಸಿಎಂ ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೇಕೆದಾಟು ಯೋಜನೆಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ: ಸಿಎಂ ಎಚ್‍ಡಿಕೆ

Latest

ಮೇಕೆದಾಟು ಯೋಜನೆಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ: ಸಿಎಂ ಎಚ್‍ಡಿಕೆ

Public TV
Last updated: October 5, 2018 1:45 pm
Public TV
Share
3 Min Read
HDK GADKARI
SHARE

ನವದೆಹಲಿ: ಮೇಕೆದಾಟು ಯೋಜನೆ ಬಗ್ಗೆ ಕೇಂದ್ರ ಜಲಸಂಪನ್ಮೂಲ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಗಡ್ಕರಿ ಭೇಟಿ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಜಲಸಂಪನ್ಮೂಲ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಲ್ಲದೇ ಕೇಂದ್ರ ಜಲ ಸಂಪನ್ಮೂಲ ಇಲಾಖೆಯ ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿದ್ದಾರೆ. ಈ ಬಾರಿ 200 ಟಿಎಂಸಿ ನೀರು ಸಮುದ್ರಕ್ಕೆ ವ್ಯರ್ಥವಾಗಿ ಹರಿದಿದೆ. ಈ ನೀರನ್ನು ಸಂಗ್ರಹಿಸಿಟ್ಟುಕೊಂಡರೆ, ಬರಗಾಲದ ಸಂದರ್ಭದಲ್ಲಿ ಬಳಕೆಗೆ ಅನುಕೂಲವಾಗಿರುತ್ತದೆ. ವಾಸ್ತವಾಂಶಗಳ ಕುರಿತು ಸಚಿವರ ಗಮನಕ್ಕೆ ತಂದಿದ್ದು, ಅವರೂ ಸಹ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

vlcsnap 2018 10 05 13h35m43s538

ಮೇಕೆದಾಟು ಯೋಜನೆಗೆ ಕಾನೂನಾತ್ಮಕ ಒಪ್ಪಿಗೆ ಪಡೆಯುವ ವಿಶ್ವಾಸ ಇದೆ. ನಮ್ಮ ಅಧಿಕಾರಿಗಳ ಜೊತೆ ಮಾತನಾಡಿ ಬಾಕಿ ಇರುವ ಕೆಲಸವನ್ನು ನೋಡಿಕೊಳ್ಳುತ್ತೇವೆ. ನಾವು ಅರಣ್ಯ ಮತ್ತು ಪರಿಸರ ಇಲಾಖೆಯ ಪರವಾನಿಗೆಯನ್ನೂ ಸಹ ಪಡೆಯಬೇಕಿದೆ. ಇದಲ್ಲದೇ ಮಹದಾಯಿ ತೀರ್ಪಿನಲ್ಲಿ ನೀಡಿರುವ ನೀರಿನ ಬಳಕೆಗೆ ರಾಜ್ಯಕ್ಕೆ ಅವಕಾಶ ಕೊಡಬೇಕಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಅವಕಾಶ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದೇನೆ. ಗೋವಾ ಸರ್ಕಾರ ಮಹಾದಾಯಿ ತೀರ್ಪಿನ ಬಗ್ಗೆ ಸ್ಪಷ್ಟಿಕರಣ ಅರ್ಜಿ ಸಲ್ಲಿಸಿದೆ. ಗೋವಾಕ್ಕೆ ಸ್ಪಷ್ಟೀಕರಣ ಸಿಕ್ಕ ನಂತರ ನೀರಿನ ಬಳಕೆಗೆ ಅನುಮತಿ ಕೊಡುವುದಾಗಿ ಹೇಳಿದ್ದಾರೆ. ಅದನ್ನು ಹೊರತುಪಡಿಸಿ ಹೆಚ್ಚುವರಿ ನೀರನ್ನು ಬಳಕೆ ಮಾಡಲು ಅನುಮತಿ ನೀಡುವ ಬಗ್ಗೆ ಕೇಳಿಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮೇಕೆದಾಟಿಗೂ ತಮಿಳುನಾಡು ಕ್ಯಾತೆ ಯಾಕೆ? ಯೋಜನೆಯಿಂದ ರಾಜ್ಯಕ್ಕಾಗುವ ಲಾಭ ಏನು?

vlcsnap 2018 10 05 13h36m08s543

ರಾಜ್ಯ ಅತಿವೃಷ್ಟಿ ಮತ್ತು ಅನಾವೃಷ್ಟಿಯ ಸಮಸ್ಯೆ ಎದುರಿಸುತ್ತಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗೆ ಅವಕಾಶ ಕೇಳಲಾಗಿತ್ತು. ಆದರೆ ಪ್ರಧಾನಿ ಬೇರೆ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್‍ರವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ. ರಾಜ್ಯಕ್ಕೆ ಬರಬೇಕಾದ ಪರಿಹಾರದ ಬಗ್ಗೆ ಚರ್ಚಿಸಿದ್ದೇನೆ. ವಿಶೇಷವಾಗಿ ಕಾಫಿ ಬೆಳಗಾರರ ಸಂಕಷ್ಟಕ್ಕೆ ಹೆಚ್ಚಿನ ನೆರವು ನೀಡಲು ಮನವಿ ಮಾಡಿಕೊಂಡಿದ್ದೇವೆ. ಕೇಂದ್ರ ಸಚಿವರು ನಮ್ಮ ಬೇಡಿಕೆಗೆ ಸ್ಪಂದಿಸಿದ್ದಾರೆ. ಅಲ್ಲದೇ ಸಹಕಾರ ನೀಡುವ ಭರವಸೆಯನ್ನು ನೀಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಈ ನಿಯೋಗದಲ್ಲಿ ಭಾಗವಹಿಸಿದ್ದು ನಮಗೆ ಸಹಾಯವಾಗಿದೆ ಎಂದು ಹೇಳಿದ್ರು.

vlcsnap 2018 10 05 13h37m34s559

ಸಾಲಮನ್ನಾ ಯೋಜನೆಗೆ ಮಾಹಿತಿ ಒದಗಿಸಲು ಕಾಲ ನಿಗದಿ ಮಾಡಿಲ್ಲ. ಈಗ ಕೇವಲ ಅರ್ಜಿಗಳನ್ನು ಮಾತ್ರ ಕೊಡಲಾಗುತ್ತಿದೆ. ಇದರ ಬಗ್ಗೆ ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ. ಕಾಲಹರಣ ಮಾಡದೇ ಮಾಹಿತಿಯನ್ನು ನಾಡ ಕಚೇರಿಗೆ ನೀಡಬಹುದು. ಆರಾಮಾಗಿ ಸರಿಯಾದ ಮಾಹಿತಿಯನ್ನು ನೀಡಬೇಕು. ಏಕೆಂದರೆ ರೈತರ ಖಾತೆಗಳಿಗೆ ನೇರವಾಗಿ ಸೌಲಭ್ಯ ಲಭ್ಯವಾಗಬೇಕು. ಇದರಲ್ಲಿ ಯಾವುದೇ ದಲ್ಲಾಳಿಗಳಿಗೆ ಲಾಭ ಆಗಬಾರದು ಎನ್ನುವ ಉದ್ದೇಶ ನಮ್ಮದು. ಯಾವುದೇ ಕಾಲಮಿತಿಯನ್ನು ಹಾಕಿಲ್ಲ. ಹೀಗಾಗಿ ಯಾವುದೇ ಸುಳ್ಳು ಸುದ್ದಿಗೆ ಕಿವಿಕೊಡಬೇಡಿ ಎಂದು ರೈತರಲ್ಲಿ ಮನವಿ ಮಾಡಿಕೊಂಡರು.

vlcsnap 2018 10 05 13h37m51s934

ಇದಲ್ಲದೇ ಈಗಾಗಲೇ ಋಣಮುಕ್ತ ಕಾಯ್ದೆ ವಿಚಾರ ಗೃಹ ಸಚಿವರೊಂದಿಗೆ ಚರ್ಚೆ ನಡೆಸಿದ್ದೇನೆ. ಈ ಬಗ್ಗೆ ಕಾನೂನು ಇಲಾಖೆ ಸ್ಪಷ್ಟನೆ ಕೇಳಿತ್ತು. ಅದನ್ನು ಈಗ ನೀಡಲಾಗಿದೆ. ಈ ಹಿಂದೆ ರಾಷ್ಟ್ರಪತಿಗಳ ಜೊತೆ ಚರ್ಚೆ ಮಾಡಿದೆ. ಇದರಿಂದಾಗಿ ರೈತರು ಖಾಸಗಿ ಸಾಲ ಪಡೆದು ಆತ್ಮಹತ್ಯೆ ಮಾಡಿಕೊಳ್ಳುವುದು ನಿಲ್ಲುತ್ತದೆ. ಸರ್ಕಾರ ದೊಡ್ಡ ಪ್ರಮಾಣದ ಯೋಜನೆಗಳನ್ನು ಜಾರಿಗೆ ತಂದಿದೆ. ಹೀಗಾಗಿ ಯಾವುದೇ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಕುಟುಂಬಗಳನ್ನು ಬೀದಿಪಾಲು ಮಾಡಬೇಡಿ ಎಂದು ವಿನಂತಿಸಿಕೊಂಡರು.

43082432 1869012233147232 6224707934727700480 n

ಸಚಿವ ಸಂಪುಟ ವಿಸ್ತರಣೆ ಮಾಡಬೇಕಾಗಿದೆ. ಇದಕ್ಕೆ ಕಾಂಗ್ರೆಸ್ಸಿನಿಂದ ತೀರ್ಮಾನ ಬರಬೇಕಾಗಿದೆ. ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಸಮಯ ಕೇಳಿದ್ದೇನೆ. ಭೇಟಿಗೆ ಅವಕಾಶ ಸಿಕ್ಕರೆ ಇದರ ಬಗ್ಗೆ ಚರ್ಚೆ ಮಾಡುತ್ತೇನೆ. ಇದೇ ವೇಳೆ ಜೆಡಿಎಸ್ ಉಪಮೇಯರ್ ರಮೀಳಾ ಶಂಕರ್ ನಿಧನದ ಸುದ್ದಿ ಬಗ್ಗೆ ಮಾತನಾಡಿ, ಉಪ ಮೇಯರ್ ರಮೀಳಾರ ನಿಧನ ನೋವು ತಂದಿದೆ. ಗುರುವಾರ ನಮ್ಮೊಂದಿಗೆ ಒಟ್ಟಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆದರೆ ಇಂದು ಅವರು ನಮ್ಮ ಜೊತೆಯಲ್ಲಿ ಅವರ ನಿಧನ ಸುದ್ದಿ ಕೇಳುತ್ತಲೇ ಆಘಾತವಾಗಿದೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅಲ್ಲದೇ ಪಾಲಿಕೆ ಆಯುಕ್ತರ ಮನವಿ ಮೇರೆಗೆ ಸರ್ಕಾರಿ ಗೌರವ ನೀಡಲು ಸೂಚಿಸಿದ್ದೇನೆ ಎಂದು ವಿಷಾದ ವ್ಯಕ್ತಪಡಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:CM KumaraswamyHD DevegowdaNew DelhiNithin GadkariPublic TVRajanath Singಎಚ್.ಡಿ. ದೇವೇಗೌಡನವದೆಹಲಿನಿತಿನ್ ಗಡ್ಕರಿಪಬ್ಲಿಕ್ ಟಿವಿರಾಜನಾಥ್ ಸಿಂಗ್ಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Donald Trump 1
Latest

ಶೀಘ್ರವೇ ಹಾರ್ಮುಜ್‌ ಜಲಸಂಧಿ ಓಪನ್‌: ಡೊನಾಲ್ಡ್‌ ಟ್ರಂಪ್‌

Public TV
By Public TV
2 minutes ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
32 minutes ago
Rain Pralhad Joshi 1
Dharwad

ಧಾರವಾಡ | ಜೋಶಿ ಭಾಷಣದ ವೇಳೆಯೇ ಅಬ್ಬರಿಸಿದ ಮಳೆರಾಯ – ಕುಸ್ತಿ ಪಂದ್ಯ ರದ್ದು

Public TV
By Public TV
58 minutes ago
Ayatollah Ali Khamenei
Latest

ಆಯತೊಲ್ಲಾ ಖಮೇನಿ ಭಾರತವನ್ನು ಪ್ರೀತಿಸುತ್ತಿದ್ದರು: ಇರಾನ್‌ ಸರ್ವೋಚ್ಚ ನಾಯಕನ ರಾಯಭಾರಿ

Public TV
By Public TV
2 hours ago
Punjab Police Bust ISI Funded Terror Module In Amritsar Recover AK 47 Glock Pistols
Crime

ಪಂಜಾಬ್‌ | ಪಾಕ್‌ ಪೋಷಿತ ಉಗ್ರರ ಘಟಕದ ಮೇಲೆ ಪೊಲೀಸರ ದಾಳಿ – ಇಬ್ಬರು ಶಂಕಿತರು ಅರೆಸ್ಟ್‌

Public TV
By Public TV
2 hours ago
Shri Ramayana Yatra
Latest

ಮಾ.30ರಿಂದ ಭಾರತೀಯ ರೈಲ್ವೇಯಿಂದ ಶ್ರೀ ರಾಮಾಯಣ ಯಾತ್ರೆ; 17 ದಿನಗಳ ಯಾತ್ರೆ – ಕರ್ನಾಟಕದ ಹಂಪಿಗೂ ಬರುತ್ತೆ ಈ ರೈಲು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?