Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದ GSTಯ ಒಂದು ಪೈಸೆಯೂ ಬಾಕಿ ಉಳಿಸಿಕೊಂಡಿಲ್ಲ – ನಿರ್ಮಲಾ ಸೀತಾರಾಮನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕದ GSTಯ ಒಂದು ಪೈಸೆಯೂ ಬಾಕಿ ಉಳಿಸಿಕೊಂಡಿಲ್ಲ – ನಿರ್ಮಲಾ ಸೀತಾರಾಮನ್

Bengaluru City

ಕರ್ನಾಟಕದ GSTಯ ಒಂದು ಪೈಸೆಯೂ ಬಾಕಿ ಉಳಿಸಿಕೊಂಡಿಲ್ಲ – ನಿರ್ಮಲಾ ಸೀತಾರಾಮನ್

Public TV
Last updated: February 7, 2024 6:34 pm
Public TV
Share
3 Min Read
Nirmala Sitharaman 2
SHARE

ನವದೆಹಲಿ: ಕರ್ನಾಟಕದ ಜಿಎಸ್‌ಟಿಯ ಒಂದು ಪೈಸೆಯನ್ನೂ ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಸ್ಪಷ್ಟನೆ ನೀಡಿದ್ದಾರೆ.

ದೆಹಲಿಯಲ್ಲಿಂದು (Delhi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ಕಡಿಮೆ ತೆರಿಗೆ ಹಂಚಿಕೆ ಮಾಡಲಾಗಿದೆ ಎಂಬ ಕಾಂಗ್ರೆಸ್ (Congress) ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದ ಜಿಎಸ್‌ಟಿಯ ಒಂದು ಪೈಸೆಯೂ ಬಾಕಿ ಉಳಿಸಿಕೊಂಡಿಲ್ಲ. ಕರ್ನಾಟಕದ ಜನತೆ ಈ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ. ತೆರಿಗೆ ಕಟ್ಟುತ್ತಿರುವುದಕ್ಕೆ ಕನ್ನಡಿಗರು ಹೆಮ್ಮೆ ಪಡುತ್ತಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ 40 ಸ್ಥಾನಗಳನ್ನಾದರೂ ಉಳಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಮೋದಿ ವ್ಯಂಗ್ಯ

#WATCH | Union Finance Minister Nirmala Sitharaman says, “Using taxpayers’ money, the Government of Karnataka has given full-page national newspaper advertisements…Six claims…but two are outrageously false claims…One, zero has been given as drought, disaster relief by the… pic.twitter.com/NEDJb13HXN

— ANI (@ANI) February 7, 2024

ಕರ್ನಾಟಕ ಸರ್ಕಾರ (Karnataka Government) ಮಾತನಾಡುತ್ತಿರುವ ಭಾಷೆ ಜನವಿರೋಧಿಯಾಗಿದೆ, ಕುಟುಂಬವಾದದಲ್ಲೇ ಮುಳುಗಿರುವ ಕಾಂಗ್ರೆಸ್ ಭಾಷೆ ದೇಶವನ್ನು ದಾರಿ ತಪ್ಪಿಸುತ್ತಿದೆ. ಕರ್ನಾಟಕಕ್ಕೆ ಕೇಂದ್ರ ತಾರತಮ್ಯ ಮಾಡಿದೆ ಎಂಬುದು ತಪ್ಪು. ಕಾಂಗ್ರೆಸ್ ನಾಯಕರ ಹೇಳಿಕೆ ಕುಚೇಷ್ಟೆಯಿಂದ ಕೂಡಿದೆ. ವಾಸ್ತವಾಂಶಗಳನ್ನ ಮುಚ್ಚಿಟ್ಟು ವಿತ್ತೀಯ ಹಕ್ಕುಗಳ ಬಗ್ಗೆ ತಪ್ಪು ಮಾಹಿತಿ ಕೊಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ICC ಟೆಸ್ಟ್‌ ರ‍್ಯಾಂಕಿಂಗ್‌ನಲ್ಲಿ ನಂ.1 ಪಟ್ಟ – ಹೊಸ ಇತಿಹಾಸ ನಿರ್ಮಿಸಿದ ಬೂಮ್‌ ಬೂಮ್‌ ಬುಮ್ರಾ

CM Siddaramaiah Mocks Finance Minister Nirmala Sitharaman Congress Protest in delhi

ಕರ್ನಾಟಕ 1,29,854 ಕೋಟಿ ರೂ. ಸ್ವೀಕರಿಸಿದೆ:
15ನೇ ಹಣಕಾಸು ಆಯೋಗದ (Finance Commission) ಅವಧಿಯಲ್ಲಿ ರಾಜ್ಯಕ್ಕೆ ಆದ ಲಾಭಗಳನ್ನು ಉಲ್ಲೇಖಿಸಿಲ್ಲ. ಕೆಲವು ಕಾಲ್ಪನಿಕ ನಷ್ಟಗಳನ್ನು ಮಾತ್ರ ಹೇಳುತ್ತಿದ್ದಾರೆ. ಕೇಂದ್ರ ಹಂಚುವ ಪ್ರತಿ ರಾಜ್ಯದ ಪಾಲು ಆಯೋಗದಿಂದ ಆಯೋಗಕ್ಕೆ ವ್ಯತ್ಯಾಸವಾಗುತ್ತದೆ. ರಾಜ್ಯಗಳ ಮೇಲೆ ಬೀರುವ ಎಲ್ಲಾ ಅಂಶಗಳನ್ನು ಪರಿಗಣಿಸಿ ಆಯೋಗ ಶಿಫಾರಸ್ಸುಗಳನ್ನು ಮಾಡುತ್ತದೆ. 14ನೇ ಆಯೋಗದ 5 ವರ್ಷಗಳ ನಿಗದಿತ ಅವಧಿಯಲ್ಲಿ ಕರ್ನಾಟಕವು 1,51,309 ಕೋಟಿ ರೂ.ಗಳ ತೆರಿಗೆ ಹಂಚಿಕೆ ಪಡೆದಿದೆ. ಪ್ರಸ್ತುತ 15ನೇ ಹಣಕಾಸು ಅವಧಿಯ ಮೊದಲ 4 ವರ್ಷಗಳಲ್ಲಿ, ಅಂದರೆ 2024ರ ಮಾರ್ಚ್ ವೇಳೆಗೆ ಕರ್ನಾಟಕವು 1,29,854 ಕೋಟಿ ರೂ.ಗಳನ್ನು ಸ್ವೀಕರಿಸಿದೆ. ಇದಲ್ಲದೇ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್‌ನಲ್ಲಿ 44,485 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಯೋಜಿಸಿದೆ. ಇದರಿಂದ ಕರ್ನಾಟಕ ಸರ್ಕಾರ 2024-25 ಹಣಕಾಸು ವರ್ಷ ಸೇರಿ 5 ವರ್ಷಗಳಲ್ಲಿ ಒಟ್ಟು 1,74,339 ಕೋಟಿ ರೂ.ಗಳನ್ನು ಪಡೆದಂತಾಗಲಿದೆ ಎಂದು ಮಾಹಿತಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

modi rajya sabha speech 1

ಕರ್ನಾಟಕ ಸರ್ಕಾರ 14ನೇ ಆಯೋಗದ ಅವಧಿಗಿಂತ 15ನೇ ಆಯೋಗದ ಅವಧಿಯ ಮೊದಲ 5 ವರ್ಷಗಳಲ್ಲಿ ಗಣನೀಯವಾಗಿ ಹೆಚ್ಚು ಹಣವನ್ನು ಪಡೆದುಕೊಂಡಿದೆ. ಆದ್ರೆ ಕಾಂಗ್ರೆಸ್ ಸರ್ಕಾರದ ನಷ್ಟವಾಗಿದೆ ಎಂಬ ಸುಳ್ಳು ಹೇಳಿಕೆಯನ್ನು ನೀಡುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ರಾಜಕೀಯ ಸ್ವಾರ್ಥಕ್ಕಾಗಿ ದೇಶ ಒಡೆಯುವ ಮಾತು, ರಾಷ್ಟ್ರವೆಂದರೆ ಕೇವಲ ಒಂದು ತುಂಡು ಭೂಮಿ ಅಲ್ಲ: ಡಿಕೆ ಸುರೇಶ್‌ ಹೇಳಿಕೆ ವಿರುದ್ಧ ಮೋದಿ ಕಿಡಿ

6,280 ಕೋಟಿ ರೂ. ಬಡ್ಡಿ ರಹಿತ ಸಾಲ ನೀಡಿದ್ದೇವೆ:
15ನೇ ಹಣಕಾಸು ಆಯೋಗದ ಶಿಫಾರಸಿನ ಮೇರೆಗೆ ಕೇರಳ ರಾಜ್ಯ ಸಹ ಕೇಂದ್ರದಿಂದ ಅನುದಾನ ಪಡೆದುಕೊಂಡಿದೆ. ಅದೇ ರೀತಿ ಬಿಜೆಪಿ ಆಡಳಿತ ರಾಜ್ಯಗಳಾದ ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ಮತ್ತು ಬಿಹಾರ ಯಾವುದೇ ರಾಜ್ಯಗಳಲ್ಲೂ ಅನುದಾನ ಕೊರತೆ ಕಂಡುಬಂದಿಲ್ಲ. ಏಕೆಂದರೆ ಕೇಂದ್ರ ಸರ್ಕಾರ ಯಾವುದೇ ರಾಜ್ಯಕ್ಕೂ ತಾರತಮ್ಯ ಮಾಡಿಲ್ಲ. 50 ವರ್ಷಗಳ ಬಡ್ಡಿ ರಹಿತ ಸಾಲವನ್ನು ಕಲ್ಪಿಸುವ ಯೋಜನೆಯನ್ನೂ ಕೇಂದ್ರ ತಂದಿದೆ. ಹಾಗಾಗಿಯೇ ಕರ್ನಾಟಕ ಸರ್ಕಾರಕ್ಕೆ ಕೇಂದ್ರ 6,280 ಕೋಟಿ ರೂ.ಗಳಷ್ಟು ಬಡ್ಡಿ ರಹಿತ ಸಾಲ ನೀಡಿದೆ. 15ನೇ ಹಣಕಾಸು ಅವಧಿಯಲ್ಲಿ ಇದುವರೆಗಿನ ವಿಪತ್ತು ನಿರ್ವಹಣೆಗೆ 6,196 ಕೋಟಿ ಕೇಂದ್ರದಿಂದ ಪಡೆದುಕೊಂಡಿದೆ ಎಂದು ವಿವರಿಸಿದ್ದಾರೆ.

ಬರ ಪರಿಹಾರಕ್ಕೆ 6,196 ಕೋಟಿ ರೂ. ಕೊಟ್ಟಿದ್ದೇವೆ:
ಬರಪರಿಹಾರಕ್ಕೆ ಪ್ರಾಕೃತಿಕ ವಿಕೋಪ ನಿಧಿ ಅಡಿಯಲ್ಲಿ 6,196 ಕೋಟಿ ರೂ. ಕರ್ನಾಟಕ ಸರ್ಕಾರ ಪಡೆದಿದೆ. ಇಲ್ಲಿಯವರೆಗೆ ಒಟ್ಟು 12,476 ರೂ. ಕರ್ನಾಟಕಕ್ಕೆ ನೀಡಲಾಗಿದೆ. ಆದ್ರೆ ಕಾಂಗ್ರೆಸ್ ಮಾತ್ರ ಒಂದೇ ಒಂದು ರೂಪಾಯಿ ನೀಡಿಲ್ಲ ಎಂದು ಪ್ರಕಟಣೆ ಬಿಡುಗಡೆ ಮಾಡಿದೆ. ತೆರಿಗೆ ನೀಡಿಲ್ಲ ಎಂದು ಜಾಹೀರಾತು ನೀಡಲು ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದೆ. ವಿಶೇಷ ಅನುದಾನ ನೀಡಲು ಹಣಕಾಸು ಆಯೋಗ ಶಿಫಾರಸು ಮಾಡಿಲ್ಲ. ಆದಾಗ್ಯೂ ಕರ್ನಾಟಕ ಸರ್ಕಾರ ಅನುದಾನವೇ ನೀಡಿಲ್ಲ ಎಂದು ಸುಳ್ಳು ಬಿತ್ತರಿಸಿದೆ ಎಂದು ಕೆಂಡಕಾರಿದ್ದಾರೆ.

TAGGED:DK ShivakumarFinance MinistergstKarnataka GovernmentNirmala Sitharamansiddaramaiahಕರ್ನಾಟಕ ತೆರಿಗೆಜಿಎಸ್‍ಟಿಡಿಕೆ ಶಿವಕುಮಾರ್ನನ್ನ ತೆರಿಗೆ ನನ್ನ ಹಕ್ಕುನಿರ್ಮಲಾ ಸೀತಾರಾಮನ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Bidar boy death
Bidar

ಟ್ರ್ಯಾಕ್ಟರ್‌ ಪಲ್ಟಿಯಾಗಿ ಸ್ಥಳದಲ್ಲೇ 13ರ ಬಾಲಕ ದುರ್ಮರಣ

Public TV
By Public TV
9 minutes ago
satish jarkiholi
Bengaluru City

ಡಿಕೆಶಿ ಪರವಾಗಿ ನಾವಿದ್ದೇವೆ, ದೆಹಲಿಯಿಂದ ನಾಳೆನೇ ಬರಲಿ ತೊಂದ್ರೆ ಇಲ್ಲ: ಸತೀಶ್ ಜಾರಕಿಹೊಳಿ

Public TV
By Public TV
11 minutes ago
rice trade hit iran war
Latest

ಇರಾನ್ ಯುದ್ಧದಿಂದ ಭಾರತಕ್ಕೆ ಸಂಕಷ್ಟ – ಅಕ್ಕಿ ವರ್ತಕರಿಗೆ ರೈಸ್ ಮಿಲ್ ಮುಚ್ಚುವ ಭೀತಿ

Public TV
By Public TV
14 minutes ago
ಬೆಂಗಳೂರು ವಿಮಾನ ನಿಲ್ದಾಣ
Bengaluru City

ಇರಾನ್‌-ಇಸ್ರೇಲ್‌ ಯುದ್ಧ; ಬೆಂಗಳೂರಿಗೆ ಆಗಮಿಸಬೇಕಿದ್ದ 9, ನಿರ್ಗಮಿಸಬೇಕಿದ್ದ 10 ವಿಮಾನಗಳು ರದ್ದು

Public TV
By Public TV
1 hour ago
car catches fire in bagepalli chikkaballapura 70 year old man burnt alive
Chikkaballapur

ಬಾಗೇಪಲ್ಲಿ | ಹೊತ್ತಿ ಉರಿದ ಕಾರು – 70ರ ವೃದ್ಧ ಸಜೀವ ದಹನ

Public TV
By Public TV
2 hours ago
Gautam Gambhir Suryakumar Yadav Jay Shah
Cricket

ಟೀಂ ಇಂಡಿಯಾ ಗೆಲುವಿನ ಬೆನ್ನಲ್ಲೇ ಹನುಮಾನ್‌ ದೇವಾಲಯಕ್ಕೆ ಸೂರ್ಯ, ಗಂಭೀರ್‌, ಜಯ್‌ ಶಾ ಭೇಟಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?