Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದ GSTಯ ಒಂದು ಪೈಸೆಯೂ ಬಾಕಿ ಉಳಿಸಿಕೊಂಡಿಲ್ಲ – ನಿರ್ಮಲಾ ಸೀತಾರಾಮನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕದ GSTಯ ಒಂದು ಪೈಸೆಯೂ ಬಾಕಿ ಉಳಿಸಿಕೊಂಡಿಲ್ಲ – ನಿರ್ಮಲಾ ಸೀತಾರಾಮನ್

Bengaluru City

ಕರ್ನಾಟಕದ GSTಯ ಒಂದು ಪೈಸೆಯೂ ಬಾಕಿ ಉಳಿಸಿಕೊಂಡಿಲ್ಲ – ನಿರ್ಮಲಾ ಸೀತಾರಾಮನ್

Public TV
Last updated: February 7, 2024 6:34 pm
Public TV
Share
3 Min Read
Nirmala Sitharaman 2
SHARE

ನವದೆಹಲಿ: ಕರ್ನಾಟಕದ ಜಿಎಸ್‌ಟಿಯ ಒಂದು ಪೈಸೆಯನ್ನೂ ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಸ್ಪಷ್ಟನೆ ನೀಡಿದ್ದಾರೆ.

ದೆಹಲಿಯಲ್ಲಿಂದು (Delhi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ಕಡಿಮೆ ತೆರಿಗೆ ಹಂಚಿಕೆ ಮಾಡಲಾಗಿದೆ ಎಂಬ ಕಾಂಗ್ರೆಸ್ (Congress) ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದ ಜಿಎಸ್‌ಟಿಯ ಒಂದು ಪೈಸೆಯೂ ಬಾಕಿ ಉಳಿಸಿಕೊಂಡಿಲ್ಲ. ಕರ್ನಾಟಕದ ಜನತೆ ಈ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ. ತೆರಿಗೆ ಕಟ್ಟುತ್ತಿರುವುದಕ್ಕೆ ಕನ್ನಡಿಗರು ಹೆಮ್ಮೆ ಪಡುತ್ತಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ 40 ಸ್ಥಾನಗಳನ್ನಾದರೂ ಉಳಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಮೋದಿ ವ್ಯಂಗ್ಯ

#WATCH | Union Finance Minister Nirmala Sitharaman says, “Using taxpayers’ money, the Government of Karnataka has given full-page national newspaper advertisements…Six claims…but two are outrageously false claims…One, zero has been given as drought, disaster relief by the… pic.twitter.com/NEDJb13HXN

— ANI (@ANI) February 7, 2024

ಕರ್ನಾಟಕ ಸರ್ಕಾರ (Karnataka Government) ಮಾತನಾಡುತ್ತಿರುವ ಭಾಷೆ ಜನವಿರೋಧಿಯಾಗಿದೆ, ಕುಟುಂಬವಾದದಲ್ಲೇ ಮುಳುಗಿರುವ ಕಾಂಗ್ರೆಸ್ ಭಾಷೆ ದೇಶವನ್ನು ದಾರಿ ತಪ್ಪಿಸುತ್ತಿದೆ. ಕರ್ನಾಟಕಕ್ಕೆ ಕೇಂದ್ರ ತಾರತಮ್ಯ ಮಾಡಿದೆ ಎಂಬುದು ತಪ್ಪು. ಕಾಂಗ್ರೆಸ್ ನಾಯಕರ ಹೇಳಿಕೆ ಕುಚೇಷ್ಟೆಯಿಂದ ಕೂಡಿದೆ. ವಾಸ್ತವಾಂಶಗಳನ್ನ ಮುಚ್ಚಿಟ್ಟು ವಿತ್ತೀಯ ಹಕ್ಕುಗಳ ಬಗ್ಗೆ ತಪ್ಪು ಮಾಹಿತಿ ಕೊಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ICC ಟೆಸ್ಟ್‌ ರ‍್ಯಾಂಕಿಂಗ್‌ನಲ್ಲಿ ನಂ.1 ಪಟ್ಟ – ಹೊಸ ಇತಿಹಾಸ ನಿರ್ಮಿಸಿದ ಬೂಮ್‌ ಬೂಮ್‌ ಬುಮ್ರಾ

CM Siddaramaiah Mocks Finance Minister Nirmala Sitharaman Congress Protest in delhi

ಕರ್ನಾಟಕ 1,29,854 ಕೋಟಿ ರೂ. ಸ್ವೀಕರಿಸಿದೆ:
15ನೇ ಹಣಕಾಸು ಆಯೋಗದ (Finance Commission) ಅವಧಿಯಲ್ಲಿ ರಾಜ್ಯಕ್ಕೆ ಆದ ಲಾಭಗಳನ್ನು ಉಲ್ಲೇಖಿಸಿಲ್ಲ. ಕೆಲವು ಕಾಲ್ಪನಿಕ ನಷ್ಟಗಳನ್ನು ಮಾತ್ರ ಹೇಳುತ್ತಿದ್ದಾರೆ. ಕೇಂದ್ರ ಹಂಚುವ ಪ್ರತಿ ರಾಜ್ಯದ ಪಾಲು ಆಯೋಗದಿಂದ ಆಯೋಗಕ್ಕೆ ವ್ಯತ್ಯಾಸವಾಗುತ್ತದೆ. ರಾಜ್ಯಗಳ ಮೇಲೆ ಬೀರುವ ಎಲ್ಲಾ ಅಂಶಗಳನ್ನು ಪರಿಗಣಿಸಿ ಆಯೋಗ ಶಿಫಾರಸ್ಸುಗಳನ್ನು ಮಾಡುತ್ತದೆ. 14ನೇ ಆಯೋಗದ 5 ವರ್ಷಗಳ ನಿಗದಿತ ಅವಧಿಯಲ್ಲಿ ಕರ್ನಾಟಕವು 1,51,309 ಕೋಟಿ ರೂ.ಗಳ ತೆರಿಗೆ ಹಂಚಿಕೆ ಪಡೆದಿದೆ. ಪ್ರಸ್ತುತ 15ನೇ ಹಣಕಾಸು ಅವಧಿಯ ಮೊದಲ 4 ವರ್ಷಗಳಲ್ಲಿ, ಅಂದರೆ 2024ರ ಮಾರ್ಚ್ ವೇಳೆಗೆ ಕರ್ನಾಟಕವು 1,29,854 ಕೋಟಿ ರೂ.ಗಳನ್ನು ಸ್ವೀಕರಿಸಿದೆ. ಇದಲ್ಲದೇ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್‌ನಲ್ಲಿ 44,485 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಯೋಜಿಸಿದೆ. ಇದರಿಂದ ಕರ್ನಾಟಕ ಸರ್ಕಾರ 2024-25 ಹಣಕಾಸು ವರ್ಷ ಸೇರಿ 5 ವರ್ಷಗಳಲ್ಲಿ ಒಟ್ಟು 1,74,339 ಕೋಟಿ ರೂ.ಗಳನ್ನು ಪಡೆದಂತಾಗಲಿದೆ ಎಂದು ಮಾಹಿತಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

modi rajya sabha speech 1

ಕರ್ನಾಟಕ ಸರ್ಕಾರ 14ನೇ ಆಯೋಗದ ಅವಧಿಗಿಂತ 15ನೇ ಆಯೋಗದ ಅವಧಿಯ ಮೊದಲ 5 ವರ್ಷಗಳಲ್ಲಿ ಗಣನೀಯವಾಗಿ ಹೆಚ್ಚು ಹಣವನ್ನು ಪಡೆದುಕೊಂಡಿದೆ. ಆದ್ರೆ ಕಾಂಗ್ರೆಸ್ ಸರ್ಕಾರದ ನಷ್ಟವಾಗಿದೆ ಎಂಬ ಸುಳ್ಳು ಹೇಳಿಕೆಯನ್ನು ನೀಡುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ರಾಜಕೀಯ ಸ್ವಾರ್ಥಕ್ಕಾಗಿ ದೇಶ ಒಡೆಯುವ ಮಾತು, ರಾಷ್ಟ್ರವೆಂದರೆ ಕೇವಲ ಒಂದು ತುಂಡು ಭೂಮಿ ಅಲ್ಲ: ಡಿಕೆ ಸುರೇಶ್‌ ಹೇಳಿಕೆ ವಿರುದ್ಧ ಮೋದಿ ಕಿಡಿ

6,280 ಕೋಟಿ ರೂ. ಬಡ್ಡಿ ರಹಿತ ಸಾಲ ನೀಡಿದ್ದೇವೆ:
15ನೇ ಹಣಕಾಸು ಆಯೋಗದ ಶಿಫಾರಸಿನ ಮೇರೆಗೆ ಕೇರಳ ರಾಜ್ಯ ಸಹ ಕೇಂದ್ರದಿಂದ ಅನುದಾನ ಪಡೆದುಕೊಂಡಿದೆ. ಅದೇ ರೀತಿ ಬಿಜೆಪಿ ಆಡಳಿತ ರಾಜ್ಯಗಳಾದ ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ಮತ್ತು ಬಿಹಾರ ಯಾವುದೇ ರಾಜ್ಯಗಳಲ್ಲೂ ಅನುದಾನ ಕೊರತೆ ಕಂಡುಬಂದಿಲ್ಲ. ಏಕೆಂದರೆ ಕೇಂದ್ರ ಸರ್ಕಾರ ಯಾವುದೇ ರಾಜ್ಯಕ್ಕೂ ತಾರತಮ್ಯ ಮಾಡಿಲ್ಲ. 50 ವರ್ಷಗಳ ಬಡ್ಡಿ ರಹಿತ ಸಾಲವನ್ನು ಕಲ್ಪಿಸುವ ಯೋಜನೆಯನ್ನೂ ಕೇಂದ್ರ ತಂದಿದೆ. ಹಾಗಾಗಿಯೇ ಕರ್ನಾಟಕ ಸರ್ಕಾರಕ್ಕೆ ಕೇಂದ್ರ 6,280 ಕೋಟಿ ರೂ.ಗಳಷ್ಟು ಬಡ್ಡಿ ರಹಿತ ಸಾಲ ನೀಡಿದೆ. 15ನೇ ಹಣಕಾಸು ಅವಧಿಯಲ್ಲಿ ಇದುವರೆಗಿನ ವಿಪತ್ತು ನಿರ್ವಹಣೆಗೆ 6,196 ಕೋಟಿ ಕೇಂದ್ರದಿಂದ ಪಡೆದುಕೊಂಡಿದೆ ಎಂದು ವಿವರಿಸಿದ್ದಾರೆ.

ಬರ ಪರಿಹಾರಕ್ಕೆ 6,196 ಕೋಟಿ ರೂ. ಕೊಟ್ಟಿದ್ದೇವೆ:
ಬರಪರಿಹಾರಕ್ಕೆ ಪ್ರಾಕೃತಿಕ ವಿಕೋಪ ನಿಧಿ ಅಡಿಯಲ್ಲಿ 6,196 ಕೋಟಿ ರೂ. ಕರ್ನಾಟಕ ಸರ್ಕಾರ ಪಡೆದಿದೆ. ಇಲ್ಲಿಯವರೆಗೆ ಒಟ್ಟು 12,476 ರೂ. ಕರ್ನಾಟಕಕ್ಕೆ ನೀಡಲಾಗಿದೆ. ಆದ್ರೆ ಕಾಂಗ್ರೆಸ್ ಮಾತ್ರ ಒಂದೇ ಒಂದು ರೂಪಾಯಿ ನೀಡಿಲ್ಲ ಎಂದು ಪ್ರಕಟಣೆ ಬಿಡುಗಡೆ ಮಾಡಿದೆ. ತೆರಿಗೆ ನೀಡಿಲ್ಲ ಎಂದು ಜಾಹೀರಾತು ನೀಡಲು ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದೆ. ವಿಶೇಷ ಅನುದಾನ ನೀಡಲು ಹಣಕಾಸು ಆಯೋಗ ಶಿಫಾರಸು ಮಾಡಿಲ್ಲ. ಆದಾಗ್ಯೂ ಕರ್ನಾಟಕ ಸರ್ಕಾರ ಅನುದಾನವೇ ನೀಡಿಲ್ಲ ಎಂದು ಸುಳ್ಳು ಬಿತ್ತರಿಸಿದೆ ಎಂದು ಕೆಂಡಕಾರಿದ್ದಾರೆ.

TAGGED:DK ShivakumarFinance MinistergstKarnataka GovernmentNirmala Sitharamansiddaramaiahಕರ್ನಾಟಕ ತೆರಿಗೆಜಿಎಸ್‍ಟಿಡಿಕೆ ಶಿವಕುಮಾರ್ನನ್ನ ತೆರಿಗೆ ನನ್ನ ಹಕ್ಕುನಿರ್ಮಲಾ ಸೀತಾರಾಮನ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

VIJAYENDRA YATNAL
Latest

ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ: ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ

Public TV
By Public TV
33 minutes ago
TVK Vijay
Latest

ವಿಜಯ್‌ ರ‍್ಯಾಲಿಯಲ್ಲಿ ದುರಂತ – ಸ್ಥಳದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

Public TV
By Public TV
37 minutes ago
Ashok Pattana
Bengaluru City

ಇಕ್ಬಾಲ್ ಹುಸೇನ್‌ಗೆ ಸ್ವಲ್ಪ ಮೆಚ್ಯೂರಿಟಿ ಕಡಿಮೆ ಇದೆ – ಅಶೋಕ್ ಪಟ್ಟಣ

Public TV
By Public TV
50 minutes ago
mahashivratri 2024 Kedige Flower Why Ketaki Flower is Not Offered to Lord Shiva
Districts

ಶಿವರಾತ್ರಿ ದಿನ ಕೇದಗೆ ಹೂ ಬಳಸಲ್ಲ ಯಾಕೆ?

Public TV
By Public TV
1 hour ago
COURT
Latest

ಸೇವೆಯಲ್ಲಿರುವ ನ್ಯಾಯಾಧೀಶರ ವಿರುದ್ಧ 8,630 ದೂರು ದಾಖಲು: ಕಾನೂನು & ನ್ಯಾಯ ಸಚಿವಾಲಯ ಮಾಹಿತಿ

Public TV
By Public TV
1 hour ago
Blessing Muzarabani
Cricket

T20 World Cup | ಆರ್‌ಸಿಬಿ ವೇಗಿಯ ಬೆಂಕಿ ಬೌಲಿಂಗ್‌ ದಾಳಿಗೆ ಆಸ್ಟ್ರೇಲಿಯಾ ಛಿದ್ರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?