Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿವಾಸ ಖಾಲಿ ಮಾಡಿ, ಇಲ್ದಿದ್ರೆ ನೀರು, ವಿದ್ಯುತ್ ಕಡಿತ – ಮಾಜಿ ಸಂಸದರಿಗೆ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಿವಾಸ ಖಾಲಿ ಮಾಡಿ, ಇಲ್ದಿದ್ರೆ ನೀರು, ವಿದ್ಯುತ್ ಕಡಿತ – ಮಾಜಿ ಸಂಸದರಿಗೆ ಸೂಚನೆ

Latest

ನಿವಾಸ ಖಾಲಿ ಮಾಡಿ, ಇಲ್ದಿದ್ರೆ ನೀರು, ವಿದ್ಯುತ್ ಕಡಿತ – ಮಾಜಿ ಸಂಸದರಿಗೆ ಸೂಚನೆ

Public TV
Last updated: August 20, 2019 9:05 am
Public TV
Share
2 Min Read
parliment 1
SHARE

ನವದೆಹಲಿ: ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾಗಿ ಸುಮಾರು 2 ತಿಂಗಳು ಕಳೆದಿದೆ. ಆದರೆ ಮಾಜಿ ಸಂಸದರು ನೂತನ ಸಂಸದರಿಗೆ ಸರ್ಕಾರಿ ನಿವಾಸ ಬಿಟ್ಟು ಕೊಡದೆ ಅಲ್ಲಿಯೇ ವಾಸವಿದ್ದಾರೆ. ಈ ನಡೆಯನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ 1 ವಾರದೊಳಗೆ ಸರ್ಕಾರಿ ನಿವಾಸವನ್ನು ಖಾಲಿ ಮಾಡುವಂತೆ ಮಾಜಿ ಸಂಸದರಿಗೆ ಆದೇಶ ನೀಡಿದೆ. ಜೊತೆಗೆ ಮೂರು ದಿನದೊಳಗೆ ನಿವಾಸಗಳಿಗೆ ನೀಡಿದ್ದ ನೀರು, ಗ್ಯಾಸ್ ಹಾಗೂ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

ಹೌದು. ಮೇ 25ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು 16ನೇ ಲೋಕಸಭೆಯನ್ನು ವಿಸರ್ಜನೆ ಮಾಡಿದ್ದರು. ಬಳಿಕ ಎರಡನೇ ಬಾರಿಗೆ ಮೋದಿ ಸರ್ಕಾರ ಅಧಿಕಾರಕ್ಕೆ ಬಂತು. ನಿಯಮದ ಪ್ರಕಾರ, ಲೋಕಸಭೆ ವಿಸರ್ಜನೆಗೊಂಡ 1 ತಿಂಗಳ ಒಳಗೆ ಮಾಜಿ ಸಂಸದರು ಸರ್ಕಾರಿ ನಿವಾಸಗಳನ್ನು ಖಾಲಿ ಮಾಡಬೇಕು. ಆದರೆ ಅವಧಿ ಮೀರಿ 2 ತಿಂಗಳು ಕಳೆಯುತ್ತಾ ಬಂದಿದ್ದರೂ ಮಾಜಿ ಸಂಸದರು ಮಾತ್ರ ನಿವಾಸ ಖಾಲಿ ಮಾಡಿಲ್ಲ. ಇದನ್ನೂ ಓದಿ:ಅಧಿಕೃತ ನಿವಾಸವನ್ನು 1 ತಿಂಗಳಲ್ಲಿ ತೆರವುಗೊಳಿಸಿ ಮೆಚ್ಚುಗೆಗೆ ಪಾತ್ರರಾದ ಸುಷ್ಮಾ ಸ್ವರಾಜ್

ex mlas

ನಗರದ ಪ್ರತಿಷ್ಠಿತ ಲ್ಯೂಟೆನ್ಸ್ ದೆಹಲಿ ಪ್ರದೇಶದಲ್ಲಿ ಹಂಚಿಕೆ ಮಾಡಲಾಗಿದ್ದ ಸರ್ಕಾರಿ ನಿವಾಸಗಳಲ್ಲಿಯೇ 200 ಮಾಜಿ ಸಂಸದರು ಉಳಿದುಕೊಂಡಿದ್ದಾರೆ. ಅವರಿಗೆ ಮನೆ ಖಾಲಿ ಮಾಡಲು ಏಳು ದಿನಗಳ ಗಡುವು ನೀಡಲಾಗಿದ್ದು, ಮೂರು ದಿನದೊಳಗೆ ನೀರು ಮತ್ತು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಕೇಂದ್ರ ಸೂಚನೆ ನೀಡಿದೆ ಎಂದು ಸಂಸತ್‍ನ ವಸತಿ ಸಮಿತಿ ಅಧ್ಯಕ್ಷ ಸಿ.ಆರ್.ಪಾಟೀಲ್ ತಿಳಿಸಿದ್ದಾರೆ.

ಮಾಜಿ ಸಂಸದರು ಸರ್ಕಾರಿ ನಿವಾಸವನ್ನು ಖಾಲಿ ಮಾಡದ ಕಾರಣಕ್ಕೆ ಹೊಸ ಸಂಸದರಿಗೆ ವಸತಿ ಕಲ್ಪಿಸುವುದು ಕಷ್ಟವಾಗಿದೆ. ಸದ್ಯ ನೂತನ ಸಂಸದರು ಉಳಿದುಕೊಳ್ಳಲು ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಕೆಲ ದಿನಗಳ ಹಿಂದೆ ಮೃತಪಟ್ಟಿದ್ದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಜೂನ್ ತಿಂಗಳಿನಲ್ಲಿ ಟ್ವೀಟ್ ಮಾಡಿ ಸರ್ಕಾರ ನೀಡಿದ ನಿವಾಸವನ್ನು ಖಾಲಿ ಮಾಡುತ್ತೇನೆ ಎಂದು ತಿಳಿಸಿದ್ದರು. ನಾನೀಗ ನಂ.8 ಸಫ್ದಾರ್ಜಂಗ್ ರಸ್ತೆ, ನವದೆಹಲಿಯ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿದ್ದೇನೆ. ಹೀಗಾಗಿ ನಾನು ಈ ವಿಳಾಸ ಹಾಗೂ ಸಂಪರ್ಕ ಸಂಖ್ಯೆಯಲ್ಲಿ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದರು. ಸುಷ್ಮಾ ಸ್ವರಾಜ್ ಅವರ ಈ ನಡೆ ಮೆಚ್ಚುಗೆಗೆ ಪಾತ್ರವಾಗಿತ್ತು.

I have moved out of my official residence 8, Safdarjung Lane, New Delhi. Please note that I am not contactable on the earlier address and phone numbers.

— Sushma Swaraj (@SushmaSwaraj) June 29, 2019

ಅನಧಿಕೃತವಾಗಿ ಸಾರ್ವಜನಿಕ ನಿವಾಸದಲ್ಲಿ ತಂಗಿರುವ ವ್ಯಕ್ತಿಗಳನ್ನು ಹೊರ ಹಾಕುವ ತಿದ್ದುಪಡಿ ಮಸೂದೆ ಈ ಬಾರಿಯ ಸಂಸತ್ತಿನಲ್ಲಿ ಮಂಡನೆಯಾಗಿ ಎರಡು ಸದನದಲ್ಲಿ ಪಾಸ್ ಆಗಿತ್ತು.

ಈ ಕಾಯ್ದೆ ಅನ್ವಯ ಆರಂಭದಲ್ಲಿ ನೋಟಿಸ್ ನೀಡಲಾಗುತ್ತದೆ. ಬಳಿಕ ಶೋಕಾಸ್ ನೋಟಿಸ್ ನೀಡಿ ತನಿಖೆ ನಡೆಸಲಾಗುತ್ತದೆ. ಅಷ್ಟೇ ಅಲ್ಲದೇ ಎಸ್ಟೇಟ್ ಅಧಿಕಾರಿಗೆ ತೆರವುಗೊಳಿಸುವಂತೆ ಸೂಚಿಸಲಾಗುತ್ತದೆ. ಬಂಗಲೆಯಲ್ಲಿ 5 ತಿಂಗಳಿಗೂ ಹೆಚ್ಚು ದಿನಗಳ ಕಾಲ ವಾಸವಾಗಿದ್ದಲ್ಲಿ 10 ಲಕ್ಷ ರೂ. ದಂಡ ವಿಧಿಸುವ ಅಂಶ ಕಾಯ್ದೆಯಲ್ಲಿದೆ.

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಕಳೆದ ವರ್ಷ ಲಕ್ನೋನಲ್ಲಿರುವ ಸರ್ಕಾರಿ ಬಂಗಲೆ ಖಾಲಿ ಮಾಡಲು 2 ವರ್ಷಗಳ ಕಾಲಾವಕಾಶವನ್ನು ಕೇಳಿ ಕೆಂಗಣ್ಣಿಗೆ ಗುರಿಯಾಗಿದ್ದರು. ಅಲ್ಲದೆ, ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ ಅವರ ಅಧಿಕೃತ ನಿವಾಸವನ್ನು ಬಿಎಸ್‍ಪಿ ಸಂಸ್ಥಾಪಕ ಹಾಗೂ ಮಾರ್ಗದರ್ಶಕ ಕನ್ಶಿ ರಾಮ್ ಅವರ ಸ್ಮಾರಕವನ್ನಾಗಿ ಪರಿವರ್ತಿಸಲು ಯತ್ನಿಸಿ ಟೀಕೆ ಒಳಗಾಗಿದ್ದರು.

TAGGED:Central GovernmentFormer MP'sGovernment ResidenceNew DelhiOrderPublic TVಆದೇಶಕೇಂದ್ರ ಸರ್ಕಾರನವದೆಹಲಿಪಬ್ಲಿಕ್ ಟಿವಿಮಾಜಿ ಸಂಸದರುಸರ್ಕಾರಿ ನಿವಾಸ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
33 minutes ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
41 minutes ago
HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
1 hour ago
Iran Flight
Latest

ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್‌ ನಿಯೋಗ

Public TV
By Public TV
2 hours ago
Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
2 hours ago
Digital Arrest
Belgaum

ಬೆಳಗಾವಿ ಉದ್ಯಮಿಗೆ ಡಿಜಿಟಲ್‌ ಅರೆಸ್ಟ್‌ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?