Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಳಿದ ತೀರ್ಮಾನಗಳನ್ನು ವೇಗವಾಗಿ ಕೈಗೊಳ್ಳುವ ಸರ್ಕಾರ, ನೆರೆ ಪರಿಹಾರದಲ್ಲಿ ವಿಳಂಬ ಮಾಡೋದು ಯಾಕೆ – ದಿನೇಶ್ ಗುಂಡೂರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉಳಿದ ತೀರ್ಮಾನಗಳನ್ನು ವೇಗವಾಗಿ ಕೈಗೊಳ್ಳುವ ಸರ್ಕಾರ, ನೆರೆ ಪರಿಹಾರದಲ್ಲಿ ವಿಳಂಬ ಮಾಡೋದು ಯಾಕೆ – ದಿನೇಶ್ ಗುಂಡೂರಾವ್

Bengaluru City

ಉಳಿದ ತೀರ್ಮಾನಗಳನ್ನು ವೇಗವಾಗಿ ಕೈಗೊಳ್ಳುವ ಸರ್ಕಾರ, ನೆರೆ ಪರಿಹಾರದಲ್ಲಿ ವಿಳಂಬ ಮಾಡೋದು ಯಾಕೆ – ದಿನೇಶ್ ಗುಂಡೂರಾವ್

Public TV
Last updated: August 13, 2019 7:59 pm
Public TV
Share
2 Min Read
dinesh gundurao
SHARE

ಬೆಂಗಳೂರು: ಬೇರೆ ಎಲ್ಲ ತೀರ್ಮಾನಗಳನ್ನು ಅತ್ಯಂತ ವೇಗವಾಗಿ ತೆಗೆದುಕೊಳ್ಳುವ ಕೇಂದ್ರ ಸರ್ಕಾರ ರಾಜ್ಯದ ನೆರೆ ಪರಿಹಾರ ಕಾಮಗಾರಿ ಬಗ್ಗೆ ತೀರ್ಮಾನ ಕೈಗೊಳ್ಳಲು ಯಾಕೆ ನಿಧಾನ ಧೋರಣೆ ಅನುಸರಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಂಭವಿಸಿರುವ ಭೀಕರ ಪ್ರವಾಹದ ಕುರಿತು ಕೇಂದ್ರ ಸರ್ಕಾರ ಈ ವರೆಗೆ ಯಾವುದೇ ಘೋಷಣೆಗಳನ್ನು ಮಾಡಿಲ್ಲ. ಇದೇ ರೀತಿ ಮುಂದುವರಿದರೆ ನಾವು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುತ್ತೇವೆ. ಪ್ರವಾಹದಿಂದ ಜನ ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರ್ಕಾರ ಈ ಕುರಿತು ತಕ್ಷಣ ನಿರ್ಧಾರ ಕೈಗೊಳ್ಳಬೇಕಿತ್ತು. ಆದರೆ, ಈ ವರೆಗೆ ಕ್ರಮ ಕೈಗೊಂಡಿಲ್ಲ. ಯಾಕಿಷ್ಟು ತಾತ್ಸಾರ ಮನೋಭಾವನೆ ಎಂಬುದು ತಿಳಿಯುತ್ತಿಲ್ಲ ಎಂದು ಕಿಡಿ ಕಾರಿದ್ದಾರೆ.

BLG NH 4 A

ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಬಹುದು ಎಂದು ಭಾವಿಸಿದ್ದೆವು. ಹೀಗಾಗಿ ಯಾವುದೇ ರೀತಿಯ ಒತ್ತಡ ಹಾಕಲು ನಿರ್ಧರಿಸಿರಲಿಲ್ಲ. ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, ಈ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಅಮಿತ್ ಶಾ ಅವರು ರಾಜ್ಯಕ್ಕಾಗಮಿಸಿ ಪ್ರವಾಹ ಸ್ಥಿತಿಯ ವೈಮಾನಿಕ ಸಮೀಕ್ಷೆ ನಡೆಸಿದ ನಂತರವೂ ಸಹ ಯಾವುದೇ ಘೋಷಣೆ ಮಾಡಲಿಲ್ಲ, ಈ ಕುರಿತು ಹೇಳಿಕೆಯನ್ನೂ ನೀಡಲಿಲ್ಲ. ಹೀಗಿರುವಾಗ ಜನರು ಏನೆಂದು ಪರಿಭಾವಿಸಬೇಕು. ಕೇಂದ್ರ ಸರ್ಕಾರ ಎಲ್ಲವನ್ನೂ ಅರಿತು ಶೀಘ್ರ ಪರಿಹಾರವನ್ನು ಘೋಷಿಸಬೇಕು ಎಂದು ತಿಳಿಸಿದ್ದಾರೆ.

ರಾಜ್ಯದ ನೆರೆ ಬಗ್ಗೆ ಇಂದು ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಚರ್ಚೆಯೇ ಆಗಿಲ್ಲ. ರಾಜ್ಯದ ಸಚಿವರೂ ಕೂಡ ಕ್ಯಾಬಿನೆಟ್ ಸಭೆಯಲ್ಲಿ ಭಾಗವಹಿಸಿದ್ದರೂ ಯಾವುದೇ ಚಕಾರ ಎತ್ತಿಲ್ಲ. ರಾಜ್ಯಕ್ಕೆ ಪರಿಹಾರ ನೀಡುವ ತೀರ್ಮಾನವನ್ನು ಕೇಂದ್ರ ಸರ್ಕಾರ ಕೈಗೊಂಡಿಲ್ಲ. ಆರಂಭದಲ್ಲಿ 5 ಸಾವಿರ ಕೋಟಿ ಬಿಡುಗಡೆ ಮಾಡುತ್ತಾರೆ ಎಂದು ಭಾವಿಸಿದ್ದೆವು. ಆದರೆ ಇಲ್ಲಿಯವರೆಗೆ ಮೌನವಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಹರಿಹಾಯ್ದಿದ್ದಾರೆ.

ಮೊನ್ನೆ ಅಮಿತ್ ಶಾ ಅವರು ಬಂದ್ರು,
ವೈಮಾನಿಕ ಸಮೀಕ್ಷೆ ಮಾಡಿ ಹೋದ್ರು.

ಇವತ್ತು ಕೇಂದ್ರದಲ್ಲಿ, ಸಚಿವ ಸಂಪುಟದ ಸಭೆ ಮಾಡಿ ನೆರವು ನೀಡುವುದರ ಬಗ್ಗೆ ಪ್ರಸ್ತಾವ ಮಾಡಿಲ್ಲ.
ರಾಜ್ಯದ ಜನರಿಗೆ ನಿರಾಸೆ ಮೂಡಿದೆ.

ಕೂಡಲೇ ೫ ಸಾವಿರ ಕೋಟಿ ನೆರೆವು ನೀಡಬೇಕು ಎಂದು ಆಗ್ರಹಿಸುತ್ತೇವೆ, ಇಲ್ಲದಿದ್ದಲ್ಲಿ ಉಗ್ರ ಹೋರಾಟವನ್ನು ಮಾಡಬೇಕಾಗುತ್ತದೆ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 13, 2019

ರಾಜ್ಯಾದ್ಯಂತ ಹೋರಾಟ ಮಾಡಲು ಯೋಜನೆ ರೂಪಿಸಿದ್ದೆವು. ಆದರೆ ಈ ಸಮಯದಲ್ಲಿ ಹೋರಾಟ ಮಾಡುವುದು ಸರಿಯಲ್ಲ ಎಂದು ಸುಮ್ಮನಿದ್ದೇವೆ. ಮುಂದಿನ ದಿನಗಳಲ್ಲಿ ಸರಿ ಹೋಗದಿದ್ದರೆ ಪ್ರತಿಭಟನೆ ಮಾಡಲೇ ಬೇಕಾಗುತ್ತದೆ. ಪರಿಹಾರ ಕೆಲಸಗಳು ಸಮರೋಪಾದಿಯಲ್ಲಿ ಸಾಗುತ್ತಿಲ್ಲ. ಇನ್ನೊಂದೆಡೆ ಚಿಕ್ಕಬಳ್ಳಾಪುರ, ಕೋಲಾರ ಸೇರಿ ಕೆಲವೆಡೆ ಭೀಕರ ಬರ ಇದೆ. ಈ ಜಿಲ್ಲೆಗಳಲ್ಲೂ ಬರ ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳಬೇಕು. ಇಷ್ಟಾದರೂ ಸಹ ಕೇಂದ್ರ ಸರ್ಕಾರ ತಾತ್ಸಾರ ಧೋರಣೆ ಅನುಸರಿಸುತ್ತಿದೆ ಎಂದು ತಿಳಿಸಿದರು.

ಬಾಲಚಂದ್ರ ಜಾರಕಿಹೊಳಿ ಸರ್ಕಾರ ಬೀಳಿಸುವ ಕುರಿತ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ಅವರ ಹೇಳಿಕೆ ಈ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದರು.

KPL 1

ನಾಳೆ ಹೊಸಕೋಟೆಯಲ್ಲಿ ಅತೃಪ್ತ ಶಾಸಕರ ರಾಜಕೀಯ ದ್ರೋಹದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಆಯೋಜಿಸಿದ್ದೆವು. ಆದರೆ, ರಾಜ್ಯದಲ್ಲಿ ನೆರೆಯಿಂದಾಗಿ ಜನತೆ ಸಂಕಷ್ಟದಲ್ಲಿದ್ದು, ಅವರ ನೆರವಿಗೆ ಧಾವಿಸಬೇಕಿದೆ. ಹೀಗಾಗಿ ನಾಳೆಯ ಪ್ರತಿಭಟನೆಯನ್ನ ರದ್ದು ಮಾಡಿದ್ದೇವೆ. ನಾಳೆ ನೆರೆ ಪರಿಹಾರ ಕಮಿಟಿ ಮಾಡುತ್ತೇವೆ. ಹೀಗಾಗಿ ಕೆಲ ನಾಯಕರ ಸಭೆ ಕರೆದಿದ್ದು, ಚರ್ಚೆ ನಡೆಸಿ ಕಮಿಟಿ ರಚಿಸಲಾಗುವುದು ಎಂದು ತಿಳಿಸಿದರು.

TAGGED:bjpbs yeddyurappaCentral Governmentchief ministercongressdinesh gunduraoPublic TVಕಾಂಗ್ರೆಸ್ಕೇಂದ್ರ ಸರ್ಕಾರದಿನೇಶ್ ಗುಂಡೂರಾವ್ಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿಜೆಪಿಮುಖ್ಯಮಂತ್ರಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
8 hours ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
8 hours ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
8 hours ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
8 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
8 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?