Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲ್ಲಿದ್ದಲು ಅನೀಲಿಕರಣ ಯೋಜನೆ ಶೀಘ್ರದಲ್ಲೇ ಸಚಿವ ಸಂಪುಟದ ಮುಂದೆ ಮಂಡನೆ – ಪ್ರಹ್ಲಾದ್‌ ಜೋಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಲ್ಲಿದ್ದಲು ಅನೀಲಿಕರಣ ಯೋಜನೆ ಶೀಘ್ರದಲ್ಲೇ ಸಚಿವ ಸಂಪುಟದ ಮುಂದೆ ಮಂಡನೆ – ಪ್ರಹ್ಲಾದ್‌ ಜೋಶಿ

Bengaluru City

ಕಲ್ಲಿದ್ದಲು ಅನೀಲಿಕರಣ ಯೋಜನೆ ಶೀಘ್ರದಲ್ಲೇ ಸಚಿವ ಸಂಪುಟದ ಮುಂದೆ ಮಂಡನೆ – ಪ್ರಹ್ಲಾದ್‌ ಜೋಶಿ

Public TV
Last updated: January 13, 2024 11:04 am
Public TV
Share
2 Min Read
PRALHAD JOSHI 1
SHARE

– ಭೂಗತ ಕಲ್ಲಿದ್ದಲು ಗಣಿಗಾರಿಕೆಗೆ ಶೇ.50ರಷ್ಟು ರಿಯಾಯಿತಿ – ಜೋಶಿ ಭರವಸೆ

ಬೆಂಗಳೂರು: ಕಲ್ಲಿದ್ದಲು (Coal) ಅನಿಲೀಕರಣ ಯೋಜನೆಯನ್ನು ಶೀಘ್ರದಲ್ಲೇ ಕೇಂದ್ರ ಸಚಿವ ಸಂಪುಟದ ಮುಂದಿಡಲಾಗುವುದು. ನಂತರ ಔಪಚಾರಿಕವಾಗಿ ಪ್ರಾರಂಭಿಸಲಾಗುವುದು ಎಂದು ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

coal raichur 1 2

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಭೂಗತ ಕಲ್ಲಿದ್ದಲು ಅನೀಲಿಕರಣ ಯೋಜನೆಗೆ ಶೇ.50 ರಷ್ಟು ರಿಯಾಯಿತಿ ನೀಡಲಾಗುವುದು. ವಾಣಿಜ್ಯ ಗಣಿಗಳಲ್ಲಿ ಭೂಗತ ಗಣಿಗಾರಿಕೆ (Mining) ಮಾಡುವವರಿಗೆ ಕೇಂದ್ರ ಸರ್ಕಾರ ಆಯಾ ರಾಜ್ಯಗಳೊಂದಿಗೆ ಆದಾಯ ಹಂಚಿಕೆಯಲ್ಲಿ ಶೇ.50ರಷ್ಟು ರಿಯಾಯಿತಿ ನೀಡುತ್ತದೆ ಎಂದಿದ್ದಾರೆ. ಇದನ್ನೂ ಓದಿ: Ayodhya Ram Mandir: ಕಾಶಿ ಯಜ್ಞಶಾಲೆಯಲ್ಲಿ 40 ದಿನ ವಿಶೇಷ ಪೂಜೆ – ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿ

ವಾಣಿಜ್ಯ ಕಲ್ಲಿದ್ದಲು ಗಣಿಗಾರಿಕೆ ಮೂಲಕ ಭೂಗತ ಗಣಿಗಾರಿಕೆಗೆ ಪ್ರವೇಶಿಸುವವರಿಗೆ ಈ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ. ಮೇಲ್ಮೈ ಗಣಿಗಾರಿಕೆಗೆ ಹೋಲಿಸಿದರೆ ಭೂಗತ ಗಣಿಗಾರಿಕೆ ಕಡಿಮೆ ಮಾಲಿನ್ಯಕಾರಕವಾಗಿದೆ. ಹಾಗಾಗಿ ಇದನ್ನು ಪ್ರೋತ್ಸಾಹಿಸಲು ಭವಿಷ್ಯದಲ್ಲಿ ಈ ಸಬ್ಸಿಡಿ (ಸಹಾಯಧನ) ಹೆಚ್ಚಿಸಲೂ ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದ್ದಾರೆ.

ಕಲ್ಲಿದ್ದಲು ಸಚಿವಾಲಯದ ಪಿಎಸ್‌ಯುಗಳು ಒಟ್ಟಾಗಿ 2030ರ ವೇಳೆಗೆ 12 GW ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಹೊಂದಲು ಯೋಜಿಸಲಾಗಿದೆ. ಭಾರತವು ಪ್ರಸ್ತುತ ತೆರೆದ ಗಣಿಗಾರಿಕೆ ವಿಧಾನದ ಮೇಲೆ ಹೆಚ್ಚು ಅವಲಂಬಿತವಾಗಿದೆ. ಭೂಗತ ಗಣಿಗಾರಿಕೆ ಪ್ರಸ್ತುತ ಭಾರತದ ಒಟ್ಟು ಕಲ್ಲಿದ್ದಲು ಗಣಿಗಾರಿಕೆ ಉತ್ಪಾದನೆಯಲ್ಲಿ ಕೇವಲ 4 ಪ್ರತಿಶತದಷ್ಟಿದ್ದು ಇದನ್ನು ಹೆಚ್ಚಿಸಲು ಯೋಜಿಸಲಾಗುತ್ತಿದೆ. ಇದನ್ನೂ ಓದಿ: ಪ್ರಿಯಕರನೊಂದಿಗೆ ಸರಸಕ್ಕೆ ಅಡ್ಡಿಯಾದ ಪತಿ – ಕ್ಷಣಮಾತ್ರದಲ್ಲೇ ಸ್ಕೆಚ್‌ ಹಾಕಿ ಪ್ರಿಯಕರನಿಂದ್ಲೇ ಕೊಲೆ ಮಾಡಿಸಿದ್ಲು ಪತ್ನಿ

ಮೇಲ್ಮೈ ಕಲ್ಲಿದ್ದಲು ಗಣಿಗಾರಿಕೆ ವಿಧಾನದಲ್ಲಿ ಉತ್ತಮ ಗುಣಮಟ್ಟದ ಹಾಗೂ ಒಂದೇ ಬಾರಿಗೆ ಹೆಚ್ಚಿನ ಪ್ರಮಾಣದಲ್ಲಿ ಕಲ್ಲಿದ್ದಲು ಹೊರ ತೆಗೆಯಲಿದ್ದು, ಅಷ್ಟೇ ಅನಾನುಕೂಲತೆ ಸಹ ಹೊಂದಿದೆ. ಅತಿಯಾದ ಹೊರತೆಗೆಯುವಿಕೆಯಿಂದಾಗಿ ಹೆಚ್ಚಿನ ಮಾಲಿನ್ಯ, ಪುನರ್ವಸತಿ ಮತ್ತು ಭೂ ಸ್ವಾಧೀನದ ವೆಚ್ಚಗಳು ಹಾಗೂ ಅರಣ್ಯದ ಸ್ಥಳಾಂತರ ಸಮಸ್ಯೆಗಳು ಅಧಿಕವಾಗಿವೆ ಎಂದು ಸಚಿವ ಜೋಶಿ ವಿವರಿಸಿದ್ದಾರೆ.

ದೇಶದ ಅತಿದೊಡ್ಡ ಕಲ್ಲಿದ್ದಲು ಗಣಿಗಾರಿಕೆ ಸಂಸ್ಥೆ ಕೋಲ್ ಇಂಡಿಯಾ ಲಿಮಿಟೆಡ್ (Coal India Limited) ತನ್ನ ಭೂಗತ ಗಣಿಗಾರಿಕೆ ಉತ್ಪಾದನೆಯನ್ನು 2030ರ ವೇಳೆಗೆ 100 ಮಿಲಿಯನ್ ಟನ್‌ಗಳಿಗೆ (MT) 4 ಪಟ್ಟು ಹೆಚ್ಚಿಸಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ರೇಸ್‌ಕೊರ್ಸ್ ಬುಕ್ಕಿಂಗ್‌ ಕೌಂಟರ್‌ ಮೇಲೆ CCB ದಾಳಿ – 3.47 ಕೋಟಿ ರೂ. ಸೀಜ್

ಇನ್ನೂ ಕಲ್ಲಿದ್ದಲು ಅನಿಲೀಕರಣಕ್ಕಾಗಿ, ಅನಿಯಂತ್ರಿತ ವಲಯಕ್ಕೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗಾಗಿ ಹೊಸ ಉಪವಿಭಾಗವನ್ನು ಸರ್ಕಾರ ಸೇರಿಸಿದೆ. ಭಾರೀ ಗಣಿಗಾರಿಕೆ ಉಪಕರಣಗಳಿಗೆ ಯಾವುದೇ ಉತ್ಪಾದನಾ-ಸಂಯೋಜಿತ ಪ್ರೋತ್ಸಾಹವನ್ನು (PLI) ಯೋಜಿಸಿಲ್ಲ. ಭಾರೀ ಗಣಿಗಾರಿಕೆ ಮತ್ತು ನಿರ್ಮಾಣ ಉಪಕರಣಗಳ ಉತ್ಪಾದನೆಗೆ ಪಿಎಲ್‌ಐ ನೀಡಲು ಸರ್ಕಾರ ಯಾವುದೇ ಯೋಜನೆ ಹೊಂದಿಲ್ಲ. ನಮ್ಮ PSU ಗಳಿಗೆ ಮತ್ತು ಕಲ್ಲಿದ್ದಲು ಬ್ಲಾಕ್‌ಗಳಲ್ಲಿ ಭಾಗವಹಿಸುವ ಖಾಸಗಿ ಕಂಪನಿಗಳಿಗೆ ಖನಿಜ ಹರಾಜಿನಲ್ಲಿ ಖರೀದಿಸಲು ಹೇಳುತ್ತಿದ್ದೇವೆ ಎಂದಿದ್ದಾರೆ.

ಎನ್‌ಎಲ್‌ಸಿ ಇಂಡಿಯಾ ಮತ್ತು ಕೋಲ್ ಇಂಡಿಯಾದ ಮಾಲೀಕತ್ವವನ್ನು ಸರ್ಕಾರ ಯಾವಾಗಲೂ ಉಳಿಸಿಕೊಳ್ಳುತ್ತದೆ ಎಂದು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

TAGGED:central cabinetCILcoalCoal CompaniesMiningMinistry of Coal.Pralhad Joshiಕಲ್ಲಿದ್ದಲುಕೋಲ್ ಇಂಡಿಯಾ ಲಿಮಿಟೆಡ್ಗಣಿಗಾರಿಕೆಪ್ರಹ್ಲಾದ್ ಜೋಶಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
22 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
26 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
51 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
1 hour ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
2 hours ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?