Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ತಾರ್ಕಿಕ ಅಂತ್ಯ – ನಿರ್ವಹಣಾ ಮಂಡಳಿ ಅಧಿಕೃತಗೊಳಿಸಿದ ಕೇಂದ್ರ ಸರ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾವೇರಿ ನೀರು ಹಂಚಿಕೆ ವಿವಾದಕ್ಕೆ ತಾರ್ಕಿಕ ಅಂತ್ಯ – ನಿರ್ವಹಣಾ ಮಂಡಳಿ ಅಧಿಕೃತಗೊಳಿಸಿದ ಕೇಂದ್ರ ಸರ್ಕಾರ

Bengaluru City

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ತಾರ್ಕಿಕ ಅಂತ್ಯ – ನಿರ್ವಹಣಾ ಮಂಡಳಿ ಅಧಿಕೃತಗೊಳಿಸಿದ ಕೇಂದ್ರ ಸರ್ಕಾರ

Public TV
Last updated: June 1, 2018 10:25 pm
Public TV
Share
3 Min Read
KRS 5
SHARE

ನವದೆಹಲಿ: ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಕಾವೇರಿ ನೀರು ನಿರ್ವಹಣಾ ಸಮಿತಿಯನ್ನು ಭಾರತ ಸರ್ಕಾರದ ಗೆಜೆಟ್ ನಲ್ಲಿ ಅಧಿಕೃತವಾಗಿ ಇಂದು ಸೇರ್ಪಡೆ ಮಾಡಲಾಗಿದೆ. ಕೇಂದ್ರ ಜಲ ಸಂಪನ್ಮೂಲ ಇಲಾಖೆ ಗೆಜೆಟ್ ಸೇರಿಸಲು ಸೂಚಿಸಿದ ಬೆನ್ನೆಲ್ಲೇ ಕೇಂದ್ರ ಸರ್ಕಾರದ ತನ್ನ ಅಧಿಕೃತ ಗೆಜೆಟ್ ಗೆ ಕಾವೇರಿ ನೀರು ನಿರ್ವಹಣಾ ಸಮಿತಿಯನ್ನು ಸೇರ್ಪಡೆ ಮಾಡಿಕೊಂಡಿದೆ. ಈ ಮೂಲಕ ಮೂರು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ನಡುವೆ ಇದ್ದ ಹಗ್ಗ ಜಗ್ಗಾಟಕ್ಕೆ ಬ್ರೇಕ್ ಹಾಕುವ ಪ್ರಯತ್ನ ಮಾಡಲಾಗಿದೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಫೆಬ್ರವರಿ 16 ರಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ನೀರು ಹಂಚಿಕೆಗೆ ಸಮಿತಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಸುಪ್ರೀಂ ಸೂಚನೆ ಹಿನ್ನೆಲೆ ಅಂತರಾಜ್ಯ ನದಿ ನೀರು ವಿವಾದ 1956 ರ ಕಾಯ್ದೆ ಅನ್ವಯ ಕರಡು ತಯಾರಿಸಿದ್ದ ಕೇಂದ್ರ ಸರ್ಕಾರ ಮೇ ಮೊದಲ ವಾರದಲ್ಲಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿತ್ತು. ಈ ವೇಳೆ ಕೆಲ ಮಾರ್ಪಾಡುಗಳೊಂದಿಗೆ ಒಪ್ಪಿಗೆ ಸೂಚಿಸಿದ್ದ ಸುಪ್ರೀಂ ಕೋರ್ಟ್ ಸಮಿತಿ ಅನುಷ್ಠಾನಕ್ಕೆ ತರುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.

ಇಂದು ಗೆಜೆಟ್ ಮುದ್ರಣ ವಿಭಾಗದ ಹಿರಿಯ ಜಂಟಿ ಆಯುಕ್ತ ಆರ್ ಕೆ ಕನೋಡಿಯಾ ಭಾರತ ಸರ್ಕಾರಿ ಮುದ್ರಣದ ಮ್ಯಾನೇಜರ್‍ಗೆ ಪ್ರಾಧಿಕಾರ ರಚನೆ ಕುರಿತಾಗಿ ಗ್ಯಾಜೆಟ್ ನಲ್ಲಿ ಪ್ರಕಟಿಸಲು ನಿರ್ದೇಶನ ನೀಡಿದರು. ಅದರಂತೆ ಗೆಜೆಟ್ ಮುದ್ರಣವಾಗಿದ್ದು ಅಧಿಕೃತವಾಗಿ ಕಾವೇರಿ ನೀರು ನಿರ್ವಹಣಾ ಸಮಿತಿ ಕಾರ್ಯನಿರ್ವಹಿಸಲಿದೆ.

KRS DAM 1

ಸ್ಕೀಂ ಕರಡಿನ ಮುಖ್ಯಾಂಶಗಳೇನು..?

ಸ್ಕೀಂ ರಚನೆ: ನ್ಯಾಯಮಂಡಳಿ ಆದೇಶ ಮಾರ್ಪಡಿಸಿ ತೀರ್ಪನ ಅನ್ವಯ ಪ್ರಾಧಿಕಾರದ ಸ್ವರೂಪದ ಸ್ಕೀಂ ರಚನೆ ಮಾಡಲಾಗಿದೆ. ಪ್ರಾಧಿಕಾರವು ಕಾವೇರಿ ನೀರಿನ ಸಂಗ್ರಹ, ಹಂಚಿಕೆ ಮತ್ತು ನಿಯಂತ್ರಣ ಕುರಿತು ಗಮನಹರಿಸಲಿದೆ. ಜಲಾಶಯಗಳ ಮೇಲುಸ್ತುವಾರಿ ಹಾಗೂ ನೀರು ಬಿಡುಗಡೆಗೆ ಸಮಿತಿಯ ಸಹಕಾರ ಪಡೆಯಲಿದೆ. ಬಿಳಿಗುಂಡ್ಲು ಮಾಪಕ ಕೇಂದ್ರದ ಮೂಲಕ ನೀರಿನ ಅಳತೆ ಮಾಡುವ ಜವಾಬ್ದಾರಿ ಕೂಡ ಪ್ರಾಧಿಕಾರದ್ದಾಗಿರುತ್ತದೆ. ಪ್ರಾಧಿಕಾರ ತನ್ನ ಸಹಾಯಕ್ಕಾಗಿ ಒಂದು ಅಥವಾ ಎರಡು ಸಮಿತಿ ನೇಮಿಸಿಕೊಳ್ಳುವ ಅಧಿಕಾರ ಹೊಂದಿರುತ್ತದೆ. ನೀರಿನ ಒಳಹರಿವು, ಸಂಗ್ರಹ, ಬಳಕೆ ಮತ್ತು ಬಿಡುಗಡೆ ಕುರಿತಂತೆ ಪ್ರಾಧಿಕಾರವು 10 ದಿನಕ್ಕೊಮ್ಮೆ ಪರಿಶೀಲಿಸಿ, ಸಂಬಂಧಿಸಿದ ರಾಜ್ಯಗಳಿಗೆ ನಿಯಮಿತವಾಗಿ ನೀರನ್ನು ಪಡೆಯಲು ಅವಕಾಶ ನೀಡಲಿದೆ. ಹಂಚಿಕೆಯಾದ ನೀರನ್ನು ಸಂಬಂಧಿಸಿದ ರಾಜ್ಯಗಳಿಗೆ ಕೊಡಿಸಲು ಪ್ರಾಧಿಕಾರವು ಪ್ರಯತ್ನಿಸಲಿದೆ. ಮಳೆ ಕೊರತೆಯನ್ನು ಪರಿಶೀಲಿಸಿ ಅರಿಯಲಿರುವ ಪ್ರಾಧಿಕಾರವು ಕೊರತೆಗೆ ಅನುಗುಣವಾಗಿಯೇ ನೀರು ಹಂಚಲಿದೆ.

ಮಾಹಿತಿ ಹಂಚಿಕೆ: ಪ್ರಮುಖವಾಗಿ ಆಯಾ ರಾಜ್ಯಗಳ ಬೆಳೆಯ ಪ್ರಮಾಣ, ಬೆಳೆ ಪದ್ಧತಿ, ನೀರಾವರಿ ಅವಲಂಬನೆ ಅರಿತು ಮತ್ತು ಕುಡಿಯುವ ನೀರು ಹಾಗೂ ಕೈಗಾರಿಕೆಗೂ ಮಳೆಯ ಪ್ರಮಾಣ ಆಧರಿಸಿಯೇ ನಿರ್ಧರಿಸಲಿದೆ. ಪ್ರಾಧಿಕಾರವು ಅತ್ಯುತ್ತಮ ಸಂವಹನ ಜಾಲ ರೂಪಿಸಿ ಎಲ್ಲಾ ಅಂಕಿ ಅಂಶಗಳು ಕಣಿವೆ ವ್ಯಾಪ್ತಿಯ ನಾಲ್ಕು ರಾಜ್ಯಗಳಿಗೆ ಲಭ್ಯವಾಗುವಂತೆ ಮಾಡಲಿದೆ. ಇದಕ್ಕಾಗಿ ಕೇಂದ್ರ ಜಲ ಆಯೋಗ ಮತ್ತು ಕೇಂದ್ರ-ರಾಜ್ಯ ಸರ್ಕಾರದ ಸಂಬಂಧಿಸಿದ ಇಲಾಖೆಗಳ ನೆರವು ಪಡೆಯಲಿದೆ.

KRS 2

ಬೇಡಿಕೆ ಪಟ್ಟಿ: ಕಣಿವೆ ವ್ಯಾಪ್ತಿಯ ರಾಜ್ಯಗಳು ಆಯಾ ವರ್ಷದ ಬೇಡಿಕೆ ಪಟ್ಟಿಯನ್ನು ಜಲವರ್ಷದ ಆರಂಭದಲ್ಲೇ ಪ್ರಾಧಿಕಾರಕ್ಕೆ ನೀಡುವುದು ಕಡ್ಡಾಯ. ಬೇರೆ ಬೇರೆ ಜಲಾನಯನ ಪ್ರದೇಶಗಳಲ್ಲಿ ಬೇರೆ ಬೇರೆ ಸಂದರ್ಭಗಳಲ್ಲಿ ಸುರಿಯುವ ಮಳೆಯ ಪ್ರಮಾಣ ಆಧರಿಸಿ ಬೇಡಿಕೆ ಪಟ್ಟಿ ತಯಾರಿಸುವುದು ಕಡ್ಡಾಯ. ಕಾವೇರಿ ಕಣಿವೆಯಲ್ಲಿ ಕೈಗೊಳ್ಳುವ ಯಾವುದೇ ಕಾಮಗಾರಿಯನ್ನು ಪರಿಶೀಲಿಸುವ ಪ್ರಾಧಿಕಾರ ಹಾಗೂ ಅದರ ಸದಸ್ಯರಿಗೆ ಇರುತ್ತದೆ. ರಾಜ್ಯಗಳು ತೀರ್ಪಿನ ಅನುಷ್ಠಾನಕ್ಕೆ ಸಮ್ಮತಿಸದಿದ್ದರೆ ಮತ್ತೆ ಕೇಂದ್ರ ಸರ್ಕಾರದ ಮೊರೆ ಹೋಗುವುದು. ನೀರಿನ ಸದ್ಬಳಕೆ ಮತ್ತು ಸಂಗ್ರಹ ಕುರಿತಂತೆ ಪ್ರಾಧಿಕಾರವು ರಾಜ್ಯ ಸರ್ಕಾರಗಳಿಗೆ ಸಲಹೆ ನೀಡುವ ಅಧಿಕಾರ ಹೊಂದಿದೆ. ಕಾವೇರಿ ಜಲ ನಿಯಂತ್ರಣ ಸಮಿತಿ ಅಗತ್ಯ ಎಂದು ಕಂಡುಬಂದಲ್ಲಿ ಅದನ್ನು ರಚಿಸುವ ಅಧಿಕಾರ ಪ್ರಾಧಿಕಾರಕ್ಕೆ ಇರುತ್ತದೆ.

ಬೆಳೆ ಪದ್ಧತಿ: ಬೆಳೆಯ ಪದ್ಧತಿಯಲ್ಲಿ ಬದಲಾವಣೆ ಹಾಗೂ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ನೀರಿನ ನಿಯಮಿತ ಬಳಕೆ ಬಗ್ಗೆ ಪ್ರಾಧಿಕಾರವು ಸಲಹೆ ನೀಡಬೇಕು. ಪ್ರಾಧಿಕಾರವು ಪ್ರತಿವರ್ಷ ಸೆಪ್ಟೆಂಬರ್ 30ರೊಳಗೆ ತನ್ನ ಕಾರ್ಯಚಟುವಟಿಕೆಯನ್ನು ಒಳಗೊಂಡ ಪಟ್ಟಿಯನ್ನು ಕಣಿವೆ ವ್ಯಾಪ್ತಿಯ ನಾಲ್ಕು ರಾಜ್ಯಗಳಿಗೆ ನೀಡಬೇಕು. ಪ್ರಾಧಿಕಾರದಲ್ಲಿ ಇರುವ ಮಾಹಿತಿಯನ್ನು ರಾಜ್ಯಗಳು ಬಯಸಿದಾಗ ಕೊಡಬೇಕು.

ವೆಚ್ಚ: ನೀರಿನ ಸಂಗ್ರಹ, ಬಳಕೆ, ಬಿಡುಗಡೆ, ಮಾಪನ ಕೇಂದ್ರಗಳ ಅಳವಡಿಕೆಯ ಖರ್ಚು ವೆಚ್ಚವನ್ನು ಆಯಾ ವ್ಯಾಪ್ತಿಯ ರಾಜ್ಯಗಳೇ ಭರಿಸಬೇಕಿದೆ. ಪ್ರಾಧಿಕಾರದ ಸಭೆ ಮತ್ತು ಚಟುವಟಿಕೆಗಳ ಎಲ್ಲಾ ದಾಖಲೆಗಳು ಹಾಗೂ ಲೆಕ್ಕಪತ್ರ ಸಂಗ್ರಹಿಸಿಡಲು ಸೂಕ್ತವಾದ ಕಚೇರಿ ಸ್ಥಾಪಿಸಬೇಕು. ದಾಖಲೆಗಳು ಮತ್ತು ಮಾಪನ ದತ್ತಾಂಶಗಳು ಈ ಕಚೇರಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಲಭ್ಯ ಇರಬೇಕು. ಈ ಪ್ರಾಧಿಕಾರದಲ್ಲಿ ಕಾರ್ಯನಿರ್ವಹಿಸಲಿರುವ ಎಲ್ಲಾ ಸಿಬ್ಬಂದಿ ಹಾಗೂ ಅಧಿಕಾರಗಳು ನೇಮಕ ಪ್ರಕ್ರಿಯೆ ಕೇಂದ್ರ ಸರ್ಕಾರದ ನಿಯಾಮವಳಿಗಳ ಪ್ರಕಾರ ಆಗಬೇಕು ಹಾಗೂ ಪ್ರಾಧಿಕಾರದ ಕೇಂದ್ರ ಕಚೇರಿಯು ದೆಹಲಿಯಲ್ಲೇ ಇರಬೇಕು ಎಂಬ ಅಂಶಗಳಿವೆ.

KRS 3

TAGGED:Cauvery RiverNew DelhiPublic TVSupreme Courtwater managementಕಾವೇರಿಕಾವೇರಿ ನೀರು ನಿರ್ವಹಣಾ ಮಂಡಳಿನದಿನವದೆಹಲಿನೀರು ಹಂಚಿಕೆಪಬ್ಲಿಕ್ ಟಿವಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
12 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
24 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
27 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
39 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
1 hour ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?