Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಲಿತ ಅಂತರ್ಜಾತಿ ವಿವಾಹವಾದ್ರೆ ಕೇಂದ್ರದಿಂದ ಸಿಗುತ್ತೆ 2.5 ಲಕ್ಷ ರೂ.: ಷರತ್ತು ಏನು ಗೊತ್ತಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದಲಿತ ಅಂತರ್ಜಾತಿ ವಿವಾಹವಾದ್ರೆ ಕೇಂದ್ರದಿಂದ ಸಿಗುತ್ತೆ 2.5 ಲಕ್ಷ ರೂ.: ಷರತ್ತು ಏನು ಗೊತ್ತಾ?

Latest

ದಲಿತ ಅಂತರ್ಜಾತಿ ವಿವಾಹವಾದ್ರೆ ಕೇಂದ್ರದಿಂದ ಸಿಗುತ್ತೆ 2.5 ಲಕ್ಷ ರೂ.: ಷರತ್ತು ಏನು ಗೊತ್ತಾ?

Public TV
Last updated: December 6, 2017 4:54 pm
Public TV
Share
2 Min Read
Love Marriage
SHARE

ನವದೆಹಲಿ: ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ಅಂತರ್ಜಾತಿ ವಿವಾಹಕ್ಕೆ ಬೆಂಬಲ ನೀಡಿ ಸಮಾಜದಲ್ಲಿ ಏಕತೆ ಮೂಡಿಸುವ ಸಲುವಾಗಿ ಡಾ. ಬಿಆರ್. ಅಂಬೇಡ್ಕರ್ ಯೋಜನೆಯನ್ನು 2013ರಲ್ಲಿ ಕೇಂದ್ರ ಸರ್ಕಾರ ಆರಂಭಿಸಿತ್ತು. ಈ ವೇಳೆ ಅಂತರ್ಜಾತಿ ವಿವಾಹವಾಗುವ ವಧು ಅಥವಾ ವರ ದಲಿತ ಸಮುದಾಯಕ್ಕೆ ಸೇರಿರಬೇಕು ಹಾಗೂ ಅವರ ಕುಟುಂಬದ ಆದಾಯ 5 ಲಕ್ಷ ರೂ. ಗಿಂತ ಜಾಸ್ತಿ ಇರಬಾರದು ಎನ್ನುವ ನಿಯಮವನ್ನು ವಿಧಿಸಲಾಗಿತ್ತು. ವಾರ್ಷಿಕವಾಗಿ 500 ಮಂದಿಗೆ ಈ ಆರ್ಥಿಕ ಸಹಾಯವನ್ನು ನೀಡುವ ಗುರಿಯನ್ನು ಸರ್ಕಾರ ಹಾಕಿಕೊಂಡಿತ್ತು.

ಆದರೆ ಈಗ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಎಲ್ಲ ರಾಜ್ಯಗಳಿಗೆ ಆದೇಶ ಹೊರಡಿಸಿದ್ದು, ಈ ಆದೇಶದಲ್ಲಿ 5 ಲಕ್ಷ ರೂ. ಆದಾಯ ಇರಬೇಕೆಂಬ ನಿಯಮವನ್ನು ಕೈ ಬಿಟ್ಟಿದೆ. ಮದುವೆಯಾದ ಎಲ್ಲರಿಗೂ ಪ್ರೋತ್ಸಾಹ ಧನವನ್ನು ನೀಡಲಾಗುವುದು ಎಂದು ತಿಳಿಸಿದೆ.

marriage 2

ನಿಯಮ ಏನು ಹೇಳುತ್ತೆ?
ಈ ಯೋಜನೆಯ ಫಲಾನುಭವಿಯಾಗಲು ದಂಪತಿಗೆ ಮೊದಲ ವಿವಾಹವಾಗಿರಬೇಕು. ಹಿಂದೂ ವಿವಾಹ ಕಾಯ್ದೆಯ ಅಡಿಯಲ್ಲಿ ವಿವಾಹ ನೋಂದಣಿಯಾಗಿರಬೇಕು. ಯೋಜನೆಗೆ ಬೇಕಾದ ಪೂರಕ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಿದರೆ ಸರ್ಕಾರವು 2.5 ಲಕ್ಷ ರೂ. ಹಣವನ್ನು ನೇರವಾಗಿ ನೀಡುತ್ತದೆ. ಈ ಹಣವನ್ನು ಪಡೆಯಲು ದಂಪತಿ ತಮ್ಮ ಆಧಾರ್ ಸಂಖ್ಯೆ ನೊಂದಣಿ ಮಾಡಿಸಿರುವ ಬ್ಯಾಂಕ್ ಖಾತೆಯ ಪೂರಕ ದಾಖಲೆಗಳನ್ನು ನೀಡಬೇಕಾಗುತ್ತದೆ.

ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ನೀಡುವ ಹಲವು ಯೋಜನೆಗಳನ್ನು ರಾಜ್ಯ ಸರ್ಕಾರಗಳು ಜಾರಿಗೆ ತಂದಿವೆ. ಅವುಗಳು ಯಾವುದೇ ಆದಾಯ ಮಿತಿ ವಿಧಿಸದ ಕಾರಣ ಸರ್ಕಾರ ಈಗ ಈ ನಿರ್ಧಾರ ಕೈಗೊಂಡಿದೆ ಎಂದು ಸಚಿವಾಲಯ ಅಧಿಕಾರಿಗಳು ತಿಳಿಸಿದ್ದಾರೆ.

Marriage

ಯೋಜನೆ ಜಾರಿಗೆಯಾದ ನಂತರ 2014-15 ಸಾಲಿನಲ್ಲಿ 5 ದಂಪತಿಗಳಿಗೆ ಹಣ ಮಂಜೂರು ಆಗಿದ್ದರೆ, 2015-16 ಸಾಲಿನಲ್ಲಿ ಇಲಾಖೆಗೆ 522 ಅರ್ಜಿಗಳು ಸಲ್ಲಿಕೆಯಾಗಿದ್ದು, 72 ಅರ್ಜಿಗಳಿ ಹಣ ಸಿಕ್ಕಿದೆ. 2016-17 ಸಾಲಿನಲ್ಲಿ ಸಲ್ಲಿಕೆಯಾದ 736 ಅರ್ಜಿಗಳಲ್ಲಿ 45 ಅರ್ಜಿಗಳನ್ನು ಆಯ್ಕೆ ಮಾಡಲಾಗಿದೆ. ಪ್ರಸ್ತುತ ವರ್ಷದಲ್ಲಿ ಇದುವರೆಗೂ 409 ಅರ್ಜಿಗಳು ಸಲ್ಲಿಕೆಯಾಗಿದ್ದು, 74 ದಂಪತಿಗಳ ಅರ್ಜಿಗಳನ್ನು ಅಂಗೀಕರಿಸಲಾಗಿದೆ.

ಈ ನೆರವು ಪಡೆಯಲು ವಿಧಿಸಲಾಗಿರುವ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡದ ಕಾರಣ ಬಹಳಷ್ಟು ಅರ್ಜಿಗಳು ತಿರಸ್ಕೃತಗೊಂಡಿದೆ. ವಿಶೇಷವಾಗಿ ಹಿಂದೂ ಮದುವೆ ಕಾಯ್ದೆಯಡಿ ಈ ಮದುವೆ ನೊಂದಣಿ ಆಗಬೇಕೆಂಬ ನಿಯಮವಿದ್ದರೂ ಬಹಳಷ್ಟು ಮದುವೆಗಳು ವಿಶೇಷ ವಿವಾಹ ಕಾಯ್ದೆಯ ಅಡಿಯಲ್ಲಿ ನೊಂದಣಿ ಆಗುತ್ತಿರುವ ಕಾರಣ ಅರ್ಜಿ ತಿರಸ್ಕೃತಗೊಳ್ಳುತ್ತಿವೆ. ಈ ಯೋಜನೆ ಬಗ್ಗೆ ಸಾರ್ವಜನಿಕರಲ್ಲಿ ಪೂರಕ ಅರಿವು ಕಡಿಮೆ ಇದ್ದು, ಯೋಜನೆ ಫಲಾನುಭವಿಯಾಗಲು ಸಂಸದ, ಶಾಸಕ ಅಥವಾ ಜಿಲ್ಲಾಧಿಕಾರಿಗಳ ಶಿಫಾರಸ್ಸು ಅಗತ್ಯವಿದೆ. ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಿಂದ ಮಾತ್ರ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತದಲ್ಲಿ ಎಷ್ಟು ಮಂದಿ ಅಂತರ್ಜಾತಿ ವಿವಾಹವಾಗಿದ್ದಾರೆ ಎನ್ನುವ ನಿಖರ ಮಾಹಿತಿ ಸಿಗುವುದು ಕಷ್ಟ. ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿಯ ನಂತರ ಸರ್ಕಾರ ಜಾತಿ ಡೇಟಾವನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡಿಲ್ಲ. ಆದರೆ ಕೆಲ ಸಂಶೋಧಕರು ಈ ವಿಚಾರದ ಬಗ್ಗೆ ಸಂಶೋಧನೆ ನಡೆಸಿ ವರದಿ ನೀಡಿದ್ದಾರೆ.

ಜಮ್ಮು ಕಾಶ್ಮೀರ, ರಾಜಸ್ಥಾನ, ಮಧ್ಯಪ್ರದೇಶ, ಮೇಘಾಲಯ, ತಮಿಳುನಾಡು ರಾಜ್ಯಗಳಲ್ಲಿ ಶೇ.95 ರಷ್ಟು ವಿವಾಹಗಳು ತಮ್ಮ ಜಾತಿಯಲ್ಲೇ ನಡೆಯುತ್ತವೆ. ಇನ್ನು ಪಂಜಾಬ್, ಸಿಕ್ಕಿಂ, ಗೋವಾ, ಕೇರಳ ರಾಜ್ಯಗಳಲ್ಲಿ ಶೇ.80 ವಿವಾಹಗಳು ತಮ್ಮ ಜಾತಿ ಮಿತಿಯಲ್ಲೇ ನಡೆಯುತ್ತವೆ ಎಂದು ಕೆಲ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ತಿಳಿದು ಬಂದಿದೆ.

 marriage

Marriage 1

Marriage 11

Marriage 3

Marriage 2

marriage

TAGGED:Central GovernmentIncentiveinter-caste marriageNew DelhiPublic TVಅಂತರ್ಜಾತಿ ವಿವಾಹಕೇಂದ್ರ ಸರ್ಕಾರನವದೆಹಲಿಪಬ್ಲಿಕ್ ಟಿವಿಪ್ರೋತ್ಸಾಹ ಧನ
Share This Article
Facebook Whatsapp Whatsapp Telegram

Cinema news

Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories

You Might Also Like

US Snowstorm
Latest

ಅಮೆರಿಕದಲ್ಲಿ ಭಾರಿ ಹಿಮಪಾತ; 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು – ಶಾಲೆಗಳಿಗೆ ರಜೆ

Public TV
By Public TV
11 minutes ago
hunsur gold robbery
Crime

ಹುಣಸೂರಿನಲ್ಲಿ ಕದ್ದ 10 ಕೋಟಿ ಮೌಲ್ಯದ ಚಿನ್ನವನ್ನ ನೇಪಾಳದಲ್ಲಿ ಮಾರಿದ ದರೋಡೆಕೋರರು

Public TV
By Public TV
36 minutes ago
Kamal Maula Mosque
Court

ಪ್ರಾಚೀನ ದೇವಾಲಯದ ಅವಶೇಷಗಳಿಂದ ಕಮಲ್ ಮೌಲಾ ಮಸೀದಿ ನಿರ್ಮಾಣ

Public TV
By Public TV
1 hour ago
Canada Pm and PM modi
Latest

ಫೆ.26ಕ್ಕೆ ಭಾರತಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ

Public TV
By Public TV
1 hour ago
Uday Bhanu Chib Arrest
Latest

ಎಐ ಶೃಂಗಸಭೆಯಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟನೆ – ಯುವ ಕಾಂಗ್ರೆಸ್ ಮುಖ್ಯಸ್ಥ ಬಂಧನ

Public TV
By Public TV
3 hours ago
CJ Roy 2
Bengaluru City

ಸಿ.ಜೆ.ರಾಯ್ ಕೇಸ್ – ಆತ್ಮಹತ್ಯೆ ಹಿಂದಿನ ಕಾರಣ ಮೇಲ್ನೋಟಕ್ಕೆ ರಿವೀಲ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?