Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ದಲಿತ ಅಂತರ್ಜಾತಿ ವಿವಾಹವಾದ್ರೆ ಕೇಂದ್ರದಿಂದ ಸಿಗುತ್ತೆ 2.5 ಲಕ್ಷ ರೂ.: ಷರತ್ತು ಏನು ಗೊತ್ತಾ?

Public TV
Last updated: December 6, 2017 4:54 pm
Public TV
Share
2 Min Read
Love Marriage
SHARE

ನವದೆಹಲಿ: ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ಅಂತರ್ಜಾತಿ ವಿವಾಹಕ್ಕೆ ಬೆಂಬಲ ನೀಡಿ ಸಮಾಜದಲ್ಲಿ ಏಕತೆ ಮೂಡಿಸುವ ಸಲುವಾಗಿ ಡಾ. ಬಿಆರ್. ಅಂಬೇಡ್ಕರ್ ಯೋಜನೆಯನ್ನು 2013ರಲ್ಲಿ ಕೇಂದ್ರ ಸರ್ಕಾರ ಆರಂಭಿಸಿತ್ತು. ಈ ವೇಳೆ ಅಂತರ್ಜಾತಿ ವಿವಾಹವಾಗುವ ವಧು ಅಥವಾ ವರ ದಲಿತ ಸಮುದಾಯಕ್ಕೆ ಸೇರಿರಬೇಕು ಹಾಗೂ ಅವರ ಕುಟುಂಬದ ಆದಾಯ 5 ಲಕ್ಷ ರೂ. ಗಿಂತ ಜಾಸ್ತಿ ಇರಬಾರದು ಎನ್ನುವ ನಿಯಮವನ್ನು ವಿಧಿಸಲಾಗಿತ್ತು. ವಾರ್ಷಿಕವಾಗಿ 500 ಮಂದಿಗೆ ಈ ಆರ್ಥಿಕ ಸಹಾಯವನ್ನು ನೀಡುವ ಗುರಿಯನ್ನು ಸರ್ಕಾರ ಹಾಕಿಕೊಂಡಿತ್ತು.

ಆದರೆ ಈಗ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಎಲ್ಲ ರಾಜ್ಯಗಳಿಗೆ ಆದೇಶ ಹೊರಡಿಸಿದ್ದು, ಈ ಆದೇಶದಲ್ಲಿ 5 ಲಕ್ಷ ರೂ. ಆದಾಯ ಇರಬೇಕೆಂಬ ನಿಯಮವನ್ನು ಕೈ ಬಿಟ್ಟಿದೆ. ಮದುವೆಯಾದ ಎಲ್ಲರಿಗೂ ಪ್ರೋತ್ಸಾಹ ಧನವನ್ನು ನೀಡಲಾಗುವುದು ಎಂದು ತಿಳಿಸಿದೆ.

marriage 2

ನಿಯಮ ಏನು ಹೇಳುತ್ತೆ?
ಈ ಯೋಜನೆಯ ಫಲಾನುಭವಿಯಾಗಲು ದಂಪತಿಗೆ ಮೊದಲ ವಿವಾಹವಾಗಿರಬೇಕು. ಹಿಂದೂ ವಿವಾಹ ಕಾಯ್ದೆಯ ಅಡಿಯಲ್ಲಿ ವಿವಾಹ ನೋಂದಣಿಯಾಗಿರಬೇಕು. ಯೋಜನೆಗೆ ಬೇಕಾದ ಪೂರಕ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಿದರೆ ಸರ್ಕಾರವು 2.5 ಲಕ್ಷ ರೂ. ಹಣವನ್ನು ನೇರವಾಗಿ ನೀಡುತ್ತದೆ. ಈ ಹಣವನ್ನು ಪಡೆಯಲು ದಂಪತಿ ತಮ್ಮ ಆಧಾರ್ ಸಂಖ್ಯೆ ನೊಂದಣಿ ಮಾಡಿಸಿರುವ ಬ್ಯಾಂಕ್ ಖಾತೆಯ ಪೂರಕ ದಾಖಲೆಗಳನ್ನು ನೀಡಬೇಕಾಗುತ್ತದೆ.

ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ನೀಡುವ ಹಲವು ಯೋಜನೆಗಳನ್ನು ರಾಜ್ಯ ಸರ್ಕಾರಗಳು ಜಾರಿಗೆ ತಂದಿವೆ. ಅವುಗಳು ಯಾವುದೇ ಆದಾಯ ಮಿತಿ ವಿಧಿಸದ ಕಾರಣ ಸರ್ಕಾರ ಈಗ ಈ ನಿರ್ಧಾರ ಕೈಗೊಂಡಿದೆ ಎಂದು ಸಚಿವಾಲಯ ಅಧಿಕಾರಿಗಳು ತಿಳಿಸಿದ್ದಾರೆ.

Marriage

ಯೋಜನೆ ಜಾರಿಗೆಯಾದ ನಂತರ 2014-15 ಸಾಲಿನಲ್ಲಿ 5 ದಂಪತಿಗಳಿಗೆ ಹಣ ಮಂಜೂರು ಆಗಿದ್ದರೆ, 2015-16 ಸಾಲಿನಲ್ಲಿ ಇಲಾಖೆಗೆ 522 ಅರ್ಜಿಗಳು ಸಲ್ಲಿಕೆಯಾಗಿದ್ದು, 72 ಅರ್ಜಿಗಳಿ ಹಣ ಸಿಕ್ಕಿದೆ. 2016-17 ಸಾಲಿನಲ್ಲಿ ಸಲ್ಲಿಕೆಯಾದ 736 ಅರ್ಜಿಗಳಲ್ಲಿ 45 ಅರ್ಜಿಗಳನ್ನು ಆಯ್ಕೆ ಮಾಡಲಾಗಿದೆ. ಪ್ರಸ್ತುತ ವರ್ಷದಲ್ಲಿ ಇದುವರೆಗೂ 409 ಅರ್ಜಿಗಳು ಸಲ್ಲಿಕೆಯಾಗಿದ್ದು, 74 ದಂಪತಿಗಳ ಅರ್ಜಿಗಳನ್ನು ಅಂಗೀಕರಿಸಲಾಗಿದೆ.

ಈ ನೆರವು ಪಡೆಯಲು ವಿಧಿಸಲಾಗಿರುವ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡದ ಕಾರಣ ಬಹಳಷ್ಟು ಅರ್ಜಿಗಳು ತಿರಸ್ಕೃತಗೊಂಡಿದೆ. ವಿಶೇಷವಾಗಿ ಹಿಂದೂ ಮದುವೆ ಕಾಯ್ದೆಯಡಿ ಈ ಮದುವೆ ನೊಂದಣಿ ಆಗಬೇಕೆಂಬ ನಿಯಮವಿದ್ದರೂ ಬಹಳಷ್ಟು ಮದುವೆಗಳು ವಿಶೇಷ ವಿವಾಹ ಕಾಯ್ದೆಯ ಅಡಿಯಲ್ಲಿ ನೊಂದಣಿ ಆಗುತ್ತಿರುವ ಕಾರಣ ಅರ್ಜಿ ತಿರಸ್ಕೃತಗೊಳ್ಳುತ್ತಿವೆ. ಈ ಯೋಜನೆ ಬಗ್ಗೆ ಸಾರ್ವಜನಿಕರಲ್ಲಿ ಪೂರಕ ಅರಿವು ಕಡಿಮೆ ಇದ್ದು, ಯೋಜನೆ ಫಲಾನುಭವಿಯಾಗಲು ಸಂಸದ, ಶಾಸಕ ಅಥವಾ ಜಿಲ್ಲಾಧಿಕಾರಿಗಳ ಶಿಫಾರಸ್ಸು ಅಗತ್ಯವಿದೆ. ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಿಂದ ಮಾತ್ರ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತದಲ್ಲಿ ಎಷ್ಟು ಮಂದಿ ಅಂತರ್ಜಾತಿ ವಿವಾಹವಾಗಿದ್ದಾರೆ ಎನ್ನುವ ನಿಖರ ಮಾಹಿತಿ ಸಿಗುವುದು ಕಷ್ಟ. ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿಯ ನಂತರ ಸರ್ಕಾರ ಜಾತಿ ಡೇಟಾವನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡಿಲ್ಲ. ಆದರೆ ಕೆಲ ಸಂಶೋಧಕರು ಈ ವಿಚಾರದ ಬಗ್ಗೆ ಸಂಶೋಧನೆ ನಡೆಸಿ ವರದಿ ನೀಡಿದ್ದಾರೆ.

ಜಮ್ಮು ಕಾಶ್ಮೀರ, ರಾಜಸ್ಥಾನ, ಮಧ್ಯಪ್ರದೇಶ, ಮೇಘಾಲಯ, ತಮಿಳುನಾಡು ರಾಜ್ಯಗಳಲ್ಲಿ ಶೇ.95 ರಷ್ಟು ವಿವಾಹಗಳು ತಮ್ಮ ಜಾತಿಯಲ್ಲೇ ನಡೆಯುತ್ತವೆ. ಇನ್ನು ಪಂಜಾಬ್, ಸಿಕ್ಕಿಂ, ಗೋವಾ, ಕೇರಳ ರಾಜ್ಯಗಳಲ್ಲಿ ಶೇ.80 ವಿವಾಹಗಳು ತಮ್ಮ ಜಾತಿ ಮಿತಿಯಲ್ಲೇ ನಡೆಯುತ್ತವೆ ಎಂದು ಕೆಲ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ತಿಳಿದು ಬಂದಿದೆ.

 marriage

Marriage 1

Marriage 11

Marriage 3

Marriage 2

marriage

TAGGED:Central GovernmentIncentiveinter-caste marriageNew DelhiPublic TVಅಂತರ್ಜಾತಿ ವಿವಾಹಕೇಂದ್ರ ಸರ್ಕಾರನವದೆಹಲಿಪಬ್ಲಿಕ್ ಟಿವಿಪ್ರೋತ್ಸಾಹ ಧನ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
10 minutes ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
1 hour ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
1 hour ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
3 hours ago

You Might Also Like

tumakuru outrage erupts against hemavati express link canal project work temporarily halted 1
Districts

ಹೇಮಾವತಿ ನೀರಿಗೆ 2 ಜಿಲ್ಲೆಗಳ ಕಿತ್ತಾಟ; ಡಿಕೆಶಿ ಒತ್ತಡಕ್ಕೆ ತುಮಕೂರು `ಕೈ’ ನಾಯಕರು ಮೌನ ಸಮ್ಮತಿ ಆರೋಪ

Public TV
By Public TV
34 minutes ago
Rajastan Bomb Threat
Crime

ರಾಜಸ್ಥಾನದ ಮೂವರು ಸಚಿವರಿದ್ದ ಹೋಟೆಲ್‌ಗೆ ಬಾಂಬ್ ಬೆದರಿಕೆ ಸಂದೇಶ

Public TV
By Public TV
1 hour ago
chandra layout
Bengaluru City

ಬೆಂಗಳೂರು| ಬ್ಯಾಂಕ್ ಸಾಲ ಇದ್ದ ಕಟ್ಟಡವನ್ನ ಲೀಸ್‌ಗೆ ಪಡೆದು ಸಂಕಷ್ಟಕ್ಕೆ ಸಿಲುಕಿದ 17 ಕುಟುಂಬಗಳು

Public TV
By Public TV
2 hours ago
Mangaluru Landslide ASHWINI
Dakshina Kannada

Mangaluru Landslide | ಮಕ್ಕಳ ಅಗಲಿಕೆ ಮಧ್ಯೆ ಎರಡೂ ಕಾಲು ಕಳೆದುಕೊಂಡ ಅಶ್ವಿನಿ

Public TV
By Public TV
2 hours ago
madhu bangarappa 1
Belgaum

ಸರ್ಕಾರಿ ನೌಕರರಿಗೆ ಪ್ರತಿಭಟನೆ ಮಾಡುವ ಅವಕಾಶ ಇಲ್ಲ: ಮಧು ಬಂಗಾರಪ್ಪ

Public TV
By Public TV
3 hours ago
CRIME
Crime

ಅತ್ತಿಗೆಯ ಶಿರಚ್ಛೇದನ, ರುಂಡ ಹಿಡಿದು ಊರೆಲ್ಲಾ ಸುತ್ತಾಡಿ ಪೊಲೀಸರಿಗೆ ಶರಣಾದ ದುಷ್ಕರ್ಮಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?