Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಂಧೂ ನದಿ ನೀರು ಈಶಾನ್ಯ ರಾಜ್ಯಗಳಿಗೆ ಹರಿಸಲು ಕೇಂದ್ರ ಸರ್ಕಾರ ಪ್ಲ್ಯಾನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಿಂಧೂ ನದಿ ನೀರು ಈಶಾನ್ಯ ರಾಜ್ಯಗಳಿಗೆ ಹರಿಸಲು ಕೇಂದ್ರ ಸರ್ಕಾರ ಪ್ಲ್ಯಾನ್‌

Latest

ಸಿಂಧೂ ನದಿ ನೀರು ಈಶಾನ್ಯ ರಾಜ್ಯಗಳಿಗೆ ಹರಿಸಲು ಕೇಂದ್ರ ಸರ್ಕಾರ ಪ್ಲ್ಯಾನ್‌

Public TV
Last updated: September 25, 2025 8:00 pm
Public TV
Share
3 Min Read
indus river
SHARE

– ಪಾಕಿಸ್ತಾನಕ್ಕೆ ಹೆಚ್ಚುವರಿ ನೀರು ಹರಿಯುವುದನ್ನು ತಪ್ಪಿಸುತ್ತೆ ಯೋಜನೆ

ನವದೆಹಲಿ: ಸಿಂಧೂ ನದಿ (Indus River) ನೀರನ್ನು ಈಶಾನ್ಯ ರಾಜ್ಯಗಳಿಗೆ ಹರಿಸಲು ಕೇಂದ್ರ ಸರ್ಕಾರ ಯೋಜಿಸಿದೆ. 2029ರ ಚುನಾವಣೆಗೂ ಮುನ್ನ ಯೋಜನೆ ಪೂರ್ಣಗೊಳಿಸಲು ಕೇಂದ್ರ ಮುಂದಾಗಿದೆ.

ಕಳೆದ ಶುಕ್ರವಾರ ಕೇಂದ್ರದ ಹಿರಿಯ ಸಚಿವ ಸಭೆಯಲ್ಲಿ ಈ ಸಂಬಂಧ ಡಿಪಿಆರ್ ಸಿದ್ಧಪಡಿಸಲು ಒಪ್ಪಿಗೆ ಸೂಚಿಸಲಾಗಿದೆ. ಮುಂದಿನ ವರ್ಷದಲ್ಲಿ ವಿಸ್ತೃತ ಯೋಜನಾ ವರದಿ ನೀಡಲು ಎಲ್ ಆ್ಯಂಡ್ ಟಿ ಕಂಪನಿಗೆ ಸೂಚನೆ ನೀಡಲಾಗಿದೆ.

ಉತ್ತರ ರಾಜ್ಯಗಳ ನೀರಿನ ಬೇಡಿಕೆಗಳನ್ನು ಪೂರೈಸಲು ಭಾರತ ಸಿಂಧೂ ನದಿ ವ್ಯವಸ್ಥೆಯಲ್ಲಿ ಬೃಹತ್ ಬದಲಾವಣೆಗಳನ್ನು ಮಾಡಲು ಸಜ್ಜಾಗಿದೆ. ಪಾಕಿಸ್ತಾನದೊಂದಿಗಿನ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿದ ನಂತರ ಕೇಂದ್ರ ಈ ಕಾರ್ಯತಂತ್ರ ರೂಪಿಸಿದೆ. ಇದನ್ನೂ ಓದಿ: ಅ.6ರ ಬಳಿಕ ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸುವ ಸಾಧ್ಯತೆ

ಉತ್ತರ ರಾಜ್ಯಗಳಿಗೆ ಸಿಂಧೂ ನದಿ ನೀರನ್ನು ತಲುಪಿಸುವ ಉದ್ದೇಶಿತ 113 ಕಿ.ಮೀ. ಕಾಲುವೆಯ ಕಾಮಗಾರಿ ಬಗ್ಗೆ ಸಭೆಯಲ್ಲಿ ಪರಿಶೀಲಿಸಲಾಯಿತು ಎಂದು ಮೂಲಗಳು ತಿಳಿಸಿವೆ.

india vs pakistan

ಸಿಂಧೂ ನದಿ ನೀರು ಒಪ್ಪಂದವು 1960 ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಆಗಿತ್ತು. ವಿಶ್ವಬ್ಯಾಂಕ್ ಹಸ್ತಕ್ಷೇಪದ ನಂತರ ಸಹಿ ಹಾಕಲಾದ ಒಂದು ಮಹತ್ವದ ನೀರು ಹಂಚಿಕೆ ಒಪ್ಪಂದ ಇದಾಗಿದೆ. ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು ಒಪ್ಪಂದವನ್ನು ಸ್ಥಗಿತಗೊಳಿಸಿತು. ‘ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ’ ಎಂದು ಸರ್ಕಾರ ಪ್ರತಿಪಾದಿಸಿತ್ತು.

ಅಂದಿನಿಂದ ಸರ್ಕಾರವು ಭಾರತದ ಸಿಂಧೂ ನದಿ ನೀರಿನ ಪಾಲನ್ನು ಬಳಸಿಕೊಳ್ಳಲು ವಿವರವಾದ ಯೋಜನೆಯನ್ನು ರೂಪಿಸುತ್ತಿದೆ. ಅದಕ್ಕಾಗಿ, ಅಂತರ-ಜಲಾನಯನ ಸಿಂಧೂ ಜಲ ವರ್ಗಾವಣೆ ಯೋಜನೆಯಡಿಯಲ್ಲಿ ಮಹತ್ವಾಕಾಂಕ್ಷೆಯ ಯೋಜನೆಯನ್ನು ರೂಪಿಸಲಾಗಿದೆ. ಸರ್ಕಾರದ ಉನ್ನತ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡಲಾಗುತ್ತಿದೆ.

14 ಕಿ.ಮೀ. ಸುರಂಗದ ನಿರ್ಮಾಣ ಮಾಡುವುದು ಈ ಯೋಜನೆಯ ಅತ್ಯಂತ ಸವಾಲಿನ ಸಂಗತಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಅಂತಹ ಸುರಂಗಕ್ಕೆ ಪರ್ವತ ಬಂಡೆಗಳ ವಿವರವಾದ ಅಧ್ಯಯನದ ಅಗತ್ಯವಿದೆ. ಇದನ್ನೂ ಓದಿ: ಜಾಗತಿಕ ಅಡೆತಡೆ, ಅನಿಶ್ಚಿತತೆಗಳ ಹೊರತಾಗಿಯೂ ಭಾರತದ ಬೆಳವಣಿಗೆ ಆಕರ್ಷಕವಾಗಿದೆ: ಮೋದಿ

ವೇಗ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸುರಂಗ ಕೊರೆಯುವ ಯಂತ್ರಗಳು ಮತ್ತು ರಾಕ್ ಶೀಲ್ಡ್ ತಂತ್ರಜ್ಞಾನದ ಬಳಕೆಯನ್ನು ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಈ ಸುರಂಗವನ್ನು ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಉಜ್ ಬಹುಪಯೋಗಿ ಯೋಜನೆಗೆ ಸಂಪರ್ಕಿಸಲಾಗುವುದು. ಇದು ರಾವಿಯ ಉಪನದಿಯಾದ ಉಜ್ ನದಿಯಿಂದ ಬಿಯಾಸ್ ಜಲಾನಯನ ಪ್ರದೇಶಕ್ಕೆ ನೀರನ್ನು ವರ್ಗಾಯಿಸಲು ಅನುವು ಮಾಡಿಕೊಡುತ್ತದೆ.

ಈ ಸುರಂಗದ ಕಾಮಗಾರಿ ಪೂರ್ಣಗೊಳ್ಳುವುದರಿಂದ ರವಿ-ಬಿಯಾಸ್-ಸಟ್ಲೆಜ್ ವ್ಯವಸ್ಥೆಯನ್ನು ಸಿಂಧೂ ನದಿ ಜಲಾನಯನ ಪ್ರದೇಶಕ್ಕೆ ಸಂಪರ್ಕಿಸುತ್ತದೆ. ಇದರಿಂದಾಗಿ ಭಾರತವು ತನ್ನ ನೀರಿನ ಪಾಲಿನ ಬಳಕೆಯನ್ನು ಗರಿಷ್ಠಗೊಳಿಸಲು ಸಾಧ್ಯವಾಗುತ್ತದೆ. ಇದರ ನಿರ್ಮಾಣವು ಮೂರರಿಂದ ನಾಲ್ಕು ವರ್ಷಗಳನ್ನು ತೆಗೆದುಕೊಳ್ಳುತ್ತದೆ. 2028 ರ ವೇಳೆಗೆ ಸಿದ್ಧವಾಗಲಿದೆ ಎಂದು ಮೂಲಗಳು ಅಂದಾಜಿಸಿವೆ. ಅಂದಾಜು ವೆಚ್ಚ ಸುಮಾರು 4,000-5,000 ಕೋಟಿ ರೂ. ಆಗಬಹುದು ಎನ್ನಲಾಗಿದೆ.

ಈ ಯೋಜನೆಯು ರಾಜಸ್ಥಾನದ ಶುಷ್ಕ ಪ್ರದೇಶಗಳಲ್ಲಿ ಇಂದಿರಾ ಗಾಂಧಿ ಕಾಲುವೆಗೆ ನೀರನ್ನು ತಿರುಗಿಸುವ ಮೂಲಕ ನೀರಾವರಿ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಜಮ್ಮು ಮತ್ತು ಕಾಶ್ಮೀರ, ಹರಿಯಾಣ, ದೆಹಲಿ ಮತ್ತು ಪಂಜಾಬ್‌ನಂತಹ ರಾಜ್ಯಗಳು ಸಹ ಈ ಯೋಜನೆಯಿಂದ ಪ್ರಯೋಜನ ಪಡೆಯುತ್ತವೆ. ಚೆನಾಬ್ ನದಿಯನ್ನು ರವಿ-ಬಿಯಾಸ್-ಸಟ್ಲೆಜ್ ವ್ಯವಸ್ಥೆಗೆ ಸಂಪರ್ಕಿಸಲು ಕಾಲುವೆಯನ್ನು ನಿರ್ಮಿಸಲಾಗುವುದು. ಈ ರಾಜ್ಯಗಳ ಅಸ್ತಿತ್ವದಲ್ಲಿರುವ ಕಾಲುವೆ ವ್ಯವಸ್ಥೆಗಳಿಗೆ ಇದನ್ನು ಸಂಪರ್ಕಿಸಲಾಗುವುದು. ಇದರಿಂದ ನೀರು ನೇರವಾಗಿ ಇಂದಿರಾ ಗಾಂಧಿ ಕಾಲುವೆಯನ್ನು ತಲುಪಬಹುದು. ರಾಜಸ್ಥಾನದ ಶ್ರೀ ಗಂಗಾನಗರಕ್ಕೆ ನೀರನ್ನು ತಲುಪಿಸಬಹುದು.

ಅಲ್ಲದೇ, ಈ ಯೋಜನೆಯು ದೆಹಲಿ, ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನಗಳಲ್ಲಿ ಕುಡಿಯುವ ನೀರಿನ ಲಭ್ಯತೆಯನ್ನು ಹೆಚ್ಚಿಸುತ್ತದೆ. ಈ ಯೋಜನೆಯು ಭಾರತದ ಪಾಲಿನ ಹೆಚ್ಚುವರಿ ನೀರನ್ನು ಪಾಕಿಸ್ತಾನಕ್ಕೆ ಹರಿಯುವುದನ್ನು ತಪ್ಪಿಸುತ್ತದೆ. ಹೀಗಾಗಿ, ದೇಶದ ನೀರಿನ ಭದ್ರತೆಯನ್ನು ಬಲಪಡಿಸುತ್ತದೆ. ಇದು ಹವಾಮಾನ ಬದಲಾವಣೆ ಮತ್ತು ಬದಲಾಗುತ್ತಿರುವ ಮಳೆಯ ಮಾದರಿಗಳ ಪರಿಣಾಮಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಅಸ್ತಿತ್ವದಲ್ಲಿರುವ 13 ಕಾಲುವೆ ವ್ಯವಸ್ಥೆಗಳನ್ನು ಬಲಪಡಿಸುತ್ತದೆ ಎನ್ನಲಾಗಿದೆ.

TAGGED:CentreIndus RiverNorth Indiapakistanಈಶಾನ್ಯ ರಾಜ್ಯಗಳುಕೇಂದ್ರ ಸರ್ಕಾರಪಾಕಿಸ್ತಾನಸಿಂಧೂ ನದಿ
Share This Article
Facebook Whatsapp Whatsapp Telegram

Cinema news

vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood

You Might Also Like

Yalahanka
Bengaluru City

ಪಾರ್ಕಿಂಗ್‌ ವಿಚಾರಕ್ಕೆ ಯಲಹಂಕ ʻಕೈʼ ಮುಖಂಡನ ಅಳಿಯ & ಸ್ಥಳೀಯರ ನಡುವೆ ಕಿರಿಕ್‌

Public TV
By Public TV
8 minutes ago
Faridabad Father Kills Daughter Over Home Work
Crime

ಹೋಂ ವರ್ಕ್ ಸರಿಯಾಗಿ ಬರೆದಿಲ್ಲವೆಂದು 4 ವರ್ಷದ ಮಗಳನ್ನು ಕೊಂದ ತಂದೆ

Public TV
By Public TV
33 minutes ago
Greater Noida B.Tech Student Suicide
Crime

ಮದ್ಯ ಸೇವಿಸಿದ್ದಕ್ಕೆ ಬೈಗುಳ – ಹಾಸ್ಟೆಲ್ ಕಟ್ಟಡದಿಂದ ಜಿಗಿದು ಬಿ.ಟೆಕ್ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
1 hour ago
Jammu Kashmir
Latest

ಜಮ್ಮು-ಕಾಶ್ಮೀರದಲ್ಲಿ ನಿರಂತರ ಹಿಮಪಾತ – ಶ್ರೀನಗರ ಏರ್‌ಪೋರ್ಟ್‌ನಲ್ಲಿ ಹಿಮ ತೆರವು ಕಾರ್ಯ

Public TV
By Public TV
1 hour ago
shidlaghatta City Municipal Council Commissioner Amrutha Gowda receives death threat from Congress Leader Rajeev Gowda 1
Bengaluru City

ನಗರಸಭೆ ಪೌರಾಯುಕ್ತೆಗೆ ಬೆದರಿಕೆ – ರಾಜೀವ್ ಗೌಡ ನಿವಾಸದ ಮೇಲೆ ಪೊಲೀಸರ ದಾಳಿ

Public TV
By Public TV
2 hours ago
Indian Man Shoot
Latest

ಅಮೆರಿಕದಲ್ಲಿ ಪತ್ನಿ, ಮೂವರು ಸಂಬಂಧಿಕರನ್ನ ಗುಂಡಿಟ್ಟು ಕೊಂದ ಭಾರತೀಯ ವ್ಯಕ್ತಿ – 12 ಕೇಸ್‌ ದಾಖಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?