Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಗಲು, ರಾತ್ರಿಯೆನ್ನದೇ ದುಡಿಮೆ.. ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಗಲು, ರಾತ್ರಿಯೆನ್ನದೇ ದುಡಿಮೆ.. ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು!

Latest

ಹಗಲು, ರಾತ್ರಿಯೆನ್ನದೇ ದುಡಿಮೆ.. ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು!

Public TV
Last updated: September 19, 2024 4:18 pm
Public TV
Share
2 Min Read
Ernst and Young India Employee Death
SHARE

– ಮಗಳ ಸಾವಿನ ಬಗ್ಗೆ ತಾಯಿಯ ಮನಕಲಕುವ ಪತ್ರದಲ್ಲೇನಿತ್ತು?
– ಉದ್ಯೋಗಿ ಸಾವಿನ ತನಿಖೆ ಕೈಗೆತ್ತಿಕೊಂಡ ಕೇಂದ್ರ

ನವದೆಹಲಿ: ಕಂಪನಿಯೊಂದರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿ ಕೆಲಸ ಮಾಡುತ್ತಿದ್ದ ಯುವತಿ ಸಾವು ಭಾರಿ ಆಕ್ರೋಶ ಕಾರಣವಾಗಿದೆ. ಕೆಲಸದ ಒತ್ತಡದಿಂದ ಮಗಳು ದುರಂತ ಸಾವಿಗೀಡಾಗಿದ್ದಾಳೆಂದು ತಾಯಿ ಗಂಭೀರ ಆರೋಪ ಮಾಡಿದ್ದಾರೆ.

26 ವರ್ಷದ ಅನ್ನಾ ಸೆಬಾಸ್ಟಿಯನ್‌ ಪೆರಾಯಿಲ್‌, ಕೆಲಸಕ್ಕೆ ಸೇರಿದ ನಾಲ್ಕು ತಿಂಗಳಲ್ಲೇ ಸಾವನ್ನಪ್ಪಿದ್ದಾರೆ. ನನ್ನ ಮಗಳಿಗೆ ಕೆಲಸದ ಒತ್ತಡ ಹೆಚ್ಚಿತ್ತು. ಹೀಗಾಗಿ ಅವಳು ಮೃತಪಟ್ಟಿದ್ದಾಳೆಂದು ಆಕೆಯ ತಾಯಿ ಆರೋಪಿಸಿದ್ದಾರೆ. ಮಗಳ ಸಾವಿನ ಬಗ್ಗೆ ಕಂಪನಿಗೆ ಮೃತ ಯುವತಿ ತಾಯಿ ಬರೆದಿರುವ ಪತ್ರ ಮನಕಲಕುವಂತಿದೆ.

ಅನ್ನಾ ಸೆಬಾಸ್ಟಿಯನ್‌ ಸಾವಿನ ವಿಚಾರವನ್ನು ಕೇಂದ್ರ ಕಾರ್ಮಿಕ ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ. ಸಾವಿನ ಕುರಿತ ದೂರನ್ನು ಕೈಗೆತ್ತಿಕೊಂಡಿದ್ದು, ಸೂಕ್ತ ತನಿಖೆ ನಡೆಸುವುದಾಗಿ ತಿಳಿಸಿದೆ.

ಅನ್ನಾ ಸೆಬಾಸ್ಟಿಯನ್ ಪೆರಾಯಿಲ್ ಅವರ ದುರಂತ ಸಾವಿನಿಂದ ತೀವ್ರ ದುಃಖವಾಗಿದೆ. ಅಸುರಕ್ಷಿತ ಮತ್ತು ಶೋಷಣೆಯ ಕೆಲಸದ ವಾತಾವರಣದ ಆರೋಪಗಳ ಬಗ್ಗೆ ಸಂಪೂರ್ಣ ತನಿಖೆ ನಡೆಯುತ್ತಿದೆ. ನ್ಯಾಯವನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ. ಕಾರ್ಮಿಕ ಸಚಿವಾಲಯವು ದೂರನ್ನು ಅಧಿಕೃತವಾಗಿ ತೆಗೆದುಕೊಂಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ.

ತಾಯಿ ಬರೆದ ಪತ್ರದಲ್ಲೇನಿದೆ?
ನನ್ನ ಮಗಳು ಕಂಪನಿಗೆ ಕೆಲಸ ಸೇರಿದ ನಾಲ್ಕು ತಿಂಗಳಲ್ಲೇ ಮೃತಪಟ್ಟಿದ್ದಾಳೆ. ಅವಳಿಗೆ ಕೆಲಸದ ಒತ್ತಡ ಜಾಸ್ತಿ ಇತ್ತು. ನನ್ನ ಹೃದಯ ಭಾರವಾಗಿದೆ. ನಾವು ಅನುಭವಿಸುತ್ತಿರುವ ನೋವನ್ನು ಬೇರೆ ಯಾವುದೇ ಕುಟುಂಬ ಅನುಭವಿಸಬಾರದು.

ಜುಲೈ 6 ರಂದು, ನನ್ನ ಪತಿ ಮತ್ತು ನಾನು, ಸಿಎ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ಪುಣೆಗೆ ಬಂದಿದ್ದೆವು. ಆಕೆ ಪಿಜಿಗೆ ತಲುಪಿದಾಗ ಎದೆಯ ಸೆಳೆತದ ಬಗ್ಗೆ ದೂರು ನೀಡಿದ್ದರಿಂದ, ನಾವು ಅವಳನ್ನು ಆಸ್ಪತ್ರೆಗೆ ಕರೆದೊಯ್ದೆವು. ಪುಣೆಯಲ್ಲಿ ಅವಳ ಇಸಿಜಿ ನಾರ್ಮಲ್‌ ಇತ್ತು. ಮಗಳ ದಿನಚರಿ ಬಗ್ಗೆ ಹೃದ್ರೋಗ ತಜ್ಞರು, ‘ನಿಮ್ಮ ಮಗಳು ಸಾಕಷ್ಟು ಸಮಯ ನಿದ್ರೆ ಮಾಡುತ್ತಿಲ್ಲ. ಸಮಯಕ್ಕೆ ಸರಿಯಾಗಿ ಊಟ-ತಿಂಡಿ ಮಾಡುತ್ತಿಲ್ಲ’ ಎಂಬ ಆತಂಕಕಾರಿ ವಿಚಾರವನ್ನು ನಮ್ಮ ಮುಂದಿಟ್ಟರು.

ವೈದ್ಯರನ್ನು ನೋಡಿದ ನಂತರವೂ ಕೆಲಸಕ್ಕೆ ಹೋಗಬೇಕೆಂದು ಮಗಳು ಒತ್ತಾಯಿಸಿದ್ದಳು. ಆ ರಾತ್ರಿ ತನಗೆ ರಜೆ ಸಿಗುವುದಿಲ್ಲ ಎಂದಿದ್ದಳು. ಜುಲೈ 7 ರಂದು ಭಾನುವಾರ ತಡವಾಗಿ ತನ್ನ ಪಿಜಿಗೆ ಮರಳಿದ್ದಳು. ಅವಳು ಘಟಿಕೋತ್ಸವದ ದಿನ ಬೆಳಗ್ಗೆ ನಮ್ಮೊಂದಿಗೆ ಇದ್ದಳು. ಆ ದಿನವೂ ಮಧ್ಯಾಹ್ನದ ವರೆಗೆ ಮನೆಯಿಂದ ಕೆಲಸ ಮಾಡುತ್ತಿದ್ದಳು. ಮಗಳು ಸಂಪೂರ್ಣ ದಣಿದ ಸ್ಥಿತಿಯಲ್ಲಿ ಮನೆಗೆ ಹಿಂದಿರುಗುತ್ತಿದ್ದಳು. ಕೆಲವೊಮ್ಮೆ ತನ್ನ ಬಟ್ಟೆಗಳನ್ನು ಬದಲಾಯಿಸದೆ ಹಾಸಿಗೆಯ ಮೇಲೆ ಮಲಗುತ್ತಿದ್ದಳು. ತನ್ನ ಕೆಲಸದ ಗಡುವನ್ನು ಪೂರೈಸಲು ತುಂಬಾ ಪ್ರಯತ್ನಿಸುತ್ತಿದ್ದಳು. ಅವಳು ಛಲಗಾರ್ತಿ. ಯಾವುದೇ ಕೆಲಸವನ್ನು ಸುಲಭಕ್ಕೆ ಬಿಟ್ಟುಕೊಡುತ್ತಿರಲಿಲ್ಲ. ಹೊಸ ಹೊಸ ವಿಚಾರಗಳನ್ನು ಕಲಿಯಲು ತುಂಬಾ ಆಸಕ್ತಿ ವಹಿಸುತ್ತಿದ್ದಳು. ಆದರೆ ಅತಿಯಾದ ಕೆಲಸದ ಒತ್ತಡ ಅವಳಿಗೆ ಈ ಪರಿಸ್ಥಿತಿ ತಂದಿತು.

ನನ್ನ ಮಗಳ ಅಂತ್ಯಕ್ರಿಯೆ ವೇಳೆ ಕಂಪನಿಯಿಂದ ಯಾರೊಬ್ಬರು ಕೂಡ ಬಂದಿರಲಿಲ್ಲ. ಸಂಸ್ಥೆಗಾಗಿ ದುಡಿದ ಉದ್ಯೋಗಿಯೊಬ್ಬರ ಅಂತ್ಯಕ್ರಿಯೆಗೆ ಬಾರದೇ ಇದ್ದದ್ದು ಮನಸ್ಸಿಗೆ ನೋವು ತಂದಿದೆ ಎಂದು ಅನ್ನಾ ತಾಯಿ ಪತ್ರದಲ್ಲಿ ನೋವು ತೋಡಿಕೊಂಡಿದ್ದಾರೆ.

TAGGED:Anna Sebastian PerayilOverworkUnion Labour Ministry
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
20 minutes ago
Hampi Utsava
Bellary

ಹಂಪಿ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ – ಹೂವಲ್ಲೇ ವಿಜಯನಗರ ಸಾಮ್ರಾಜ್ಯದ ಗತವೈಭವ ಸೃಷ್ಟಿ

Public TV
By Public TV
21 minutes ago
zameer ahmed students
Bellary

ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್

Public TV
By Public TV
23 minutes ago
Hassan Lady Missing
Crime

ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

Public TV
By Public TV
46 minutes ago
Anti India Terror Accused
Latest

ಭಾರತ ವಿರೋಧಿ ಭಯೋತ್ಪಾದನಾ ಆರೋಪಿಗಳಿಗೆ ಬಾಂಗ್ಲಾ ಚುನಾವಣೆಯಲ್ಲಿ ಗೆಲುವು

Public TV
By Public TV
53 minutes ago
Mumbai metro
Crime

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತ – ಓರ್ವ ಸಾವು, ಮೂವರು ಗಂಭೀರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?