Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಗಲು, ರಾತ್ರಿಯೆನ್ನದೇ ದುಡಿಮೆ.. ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಗಲು, ರಾತ್ರಿಯೆನ್ನದೇ ದುಡಿಮೆ.. ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು!

Latest

ಹಗಲು, ರಾತ್ರಿಯೆನ್ನದೇ ದುಡಿಮೆ.. ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು!

Public TV
Last updated: September 19, 2024 4:18 pm
Public TV
Share
2 Min Read
Ernst and Young India Employee Death
SHARE

– ಮಗಳ ಸಾವಿನ ಬಗ್ಗೆ ತಾಯಿಯ ಮನಕಲಕುವ ಪತ್ರದಲ್ಲೇನಿತ್ತು?
– ಉದ್ಯೋಗಿ ಸಾವಿನ ತನಿಖೆ ಕೈಗೆತ್ತಿಕೊಂಡ ಕೇಂದ್ರ

ನವದೆಹಲಿ: ಕಂಪನಿಯೊಂದರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿ ಕೆಲಸ ಮಾಡುತ್ತಿದ್ದ ಯುವತಿ ಸಾವು ಭಾರಿ ಆಕ್ರೋಶ ಕಾರಣವಾಗಿದೆ. ಕೆಲಸದ ಒತ್ತಡದಿಂದ ಮಗಳು ದುರಂತ ಸಾವಿಗೀಡಾಗಿದ್ದಾಳೆಂದು ತಾಯಿ ಗಂಭೀರ ಆರೋಪ ಮಾಡಿದ್ದಾರೆ.

26 ವರ್ಷದ ಅನ್ನಾ ಸೆಬಾಸ್ಟಿಯನ್‌ ಪೆರಾಯಿಲ್‌, ಕೆಲಸಕ್ಕೆ ಸೇರಿದ ನಾಲ್ಕು ತಿಂಗಳಲ್ಲೇ ಸಾವನ್ನಪ್ಪಿದ್ದಾರೆ. ನನ್ನ ಮಗಳಿಗೆ ಕೆಲಸದ ಒತ್ತಡ ಹೆಚ್ಚಿತ್ತು. ಹೀಗಾಗಿ ಅವಳು ಮೃತಪಟ್ಟಿದ್ದಾಳೆಂದು ಆಕೆಯ ತಾಯಿ ಆರೋಪಿಸಿದ್ದಾರೆ. ಮಗಳ ಸಾವಿನ ಬಗ್ಗೆ ಕಂಪನಿಗೆ ಮೃತ ಯುವತಿ ತಾಯಿ ಬರೆದಿರುವ ಪತ್ರ ಮನಕಲಕುವಂತಿದೆ.

ಅನ್ನಾ ಸೆಬಾಸ್ಟಿಯನ್‌ ಸಾವಿನ ವಿಚಾರವನ್ನು ಕೇಂದ್ರ ಕಾರ್ಮಿಕ ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ. ಸಾವಿನ ಕುರಿತ ದೂರನ್ನು ಕೈಗೆತ್ತಿಕೊಂಡಿದ್ದು, ಸೂಕ್ತ ತನಿಖೆ ನಡೆಸುವುದಾಗಿ ತಿಳಿಸಿದೆ.

ಅನ್ನಾ ಸೆಬಾಸ್ಟಿಯನ್ ಪೆರಾಯಿಲ್ ಅವರ ದುರಂತ ಸಾವಿನಿಂದ ತೀವ್ರ ದುಃಖವಾಗಿದೆ. ಅಸುರಕ್ಷಿತ ಮತ್ತು ಶೋಷಣೆಯ ಕೆಲಸದ ವಾತಾವರಣದ ಆರೋಪಗಳ ಬಗ್ಗೆ ಸಂಪೂರ್ಣ ತನಿಖೆ ನಡೆಯುತ್ತಿದೆ. ನ್ಯಾಯವನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ. ಕಾರ್ಮಿಕ ಸಚಿವಾಲಯವು ದೂರನ್ನು ಅಧಿಕೃತವಾಗಿ ತೆಗೆದುಕೊಂಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ.

ತಾಯಿ ಬರೆದ ಪತ್ರದಲ್ಲೇನಿದೆ?
ನನ್ನ ಮಗಳು ಕಂಪನಿಗೆ ಕೆಲಸ ಸೇರಿದ ನಾಲ್ಕು ತಿಂಗಳಲ್ಲೇ ಮೃತಪಟ್ಟಿದ್ದಾಳೆ. ಅವಳಿಗೆ ಕೆಲಸದ ಒತ್ತಡ ಜಾಸ್ತಿ ಇತ್ತು. ನನ್ನ ಹೃದಯ ಭಾರವಾಗಿದೆ. ನಾವು ಅನುಭವಿಸುತ್ತಿರುವ ನೋವನ್ನು ಬೇರೆ ಯಾವುದೇ ಕುಟುಂಬ ಅನುಭವಿಸಬಾರದು.

ಜುಲೈ 6 ರಂದು, ನನ್ನ ಪತಿ ಮತ್ತು ನಾನು, ಸಿಎ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ಪುಣೆಗೆ ಬಂದಿದ್ದೆವು. ಆಕೆ ಪಿಜಿಗೆ ತಲುಪಿದಾಗ ಎದೆಯ ಸೆಳೆತದ ಬಗ್ಗೆ ದೂರು ನೀಡಿದ್ದರಿಂದ, ನಾವು ಅವಳನ್ನು ಆಸ್ಪತ್ರೆಗೆ ಕರೆದೊಯ್ದೆವು. ಪುಣೆಯಲ್ಲಿ ಅವಳ ಇಸಿಜಿ ನಾರ್ಮಲ್‌ ಇತ್ತು. ಮಗಳ ದಿನಚರಿ ಬಗ್ಗೆ ಹೃದ್ರೋಗ ತಜ್ಞರು, ‘ನಿಮ್ಮ ಮಗಳು ಸಾಕಷ್ಟು ಸಮಯ ನಿದ್ರೆ ಮಾಡುತ್ತಿಲ್ಲ. ಸಮಯಕ್ಕೆ ಸರಿಯಾಗಿ ಊಟ-ತಿಂಡಿ ಮಾಡುತ್ತಿಲ್ಲ’ ಎಂಬ ಆತಂಕಕಾರಿ ವಿಚಾರವನ್ನು ನಮ್ಮ ಮುಂದಿಟ್ಟರು.

ವೈದ್ಯರನ್ನು ನೋಡಿದ ನಂತರವೂ ಕೆಲಸಕ್ಕೆ ಹೋಗಬೇಕೆಂದು ಮಗಳು ಒತ್ತಾಯಿಸಿದ್ದಳು. ಆ ರಾತ್ರಿ ತನಗೆ ರಜೆ ಸಿಗುವುದಿಲ್ಲ ಎಂದಿದ್ದಳು. ಜುಲೈ 7 ರಂದು ಭಾನುವಾರ ತಡವಾಗಿ ತನ್ನ ಪಿಜಿಗೆ ಮರಳಿದ್ದಳು. ಅವಳು ಘಟಿಕೋತ್ಸವದ ದಿನ ಬೆಳಗ್ಗೆ ನಮ್ಮೊಂದಿಗೆ ಇದ್ದಳು. ಆ ದಿನವೂ ಮಧ್ಯಾಹ್ನದ ವರೆಗೆ ಮನೆಯಿಂದ ಕೆಲಸ ಮಾಡುತ್ತಿದ್ದಳು. ಮಗಳು ಸಂಪೂರ್ಣ ದಣಿದ ಸ್ಥಿತಿಯಲ್ಲಿ ಮನೆಗೆ ಹಿಂದಿರುಗುತ್ತಿದ್ದಳು. ಕೆಲವೊಮ್ಮೆ ತನ್ನ ಬಟ್ಟೆಗಳನ್ನು ಬದಲಾಯಿಸದೆ ಹಾಸಿಗೆಯ ಮೇಲೆ ಮಲಗುತ್ತಿದ್ದಳು. ತನ್ನ ಕೆಲಸದ ಗಡುವನ್ನು ಪೂರೈಸಲು ತುಂಬಾ ಪ್ರಯತ್ನಿಸುತ್ತಿದ್ದಳು. ಅವಳು ಛಲಗಾರ್ತಿ. ಯಾವುದೇ ಕೆಲಸವನ್ನು ಸುಲಭಕ್ಕೆ ಬಿಟ್ಟುಕೊಡುತ್ತಿರಲಿಲ್ಲ. ಹೊಸ ಹೊಸ ವಿಚಾರಗಳನ್ನು ಕಲಿಯಲು ತುಂಬಾ ಆಸಕ್ತಿ ವಹಿಸುತ್ತಿದ್ದಳು. ಆದರೆ ಅತಿಯಾದ ಕೆಲಸದ ಒತ್ತಡ ಅವಳಿಗೆ ಈ ಪರಿಸ್ಥಿತಿ ತಂದಿತು.

ನನ್ನ ಮಗಳ ಅಂತ್ಯಕ್ರಿಯೆ ವೇಳೆ ಕಂಪನಿಯಿಂದ ಯಾರೊಬ್ಬರು ಕೂಡ ಬಂದಿರಲಿಲ್ಲ. ಸಂಸ್ಥೆಗಾಗಿ ದುಡಿದ ಉದ್ಯೋಗಿಯೊಬ್ಬರ ಅಂತ್ಯಕ್ರಿಯೆಗೆ ಬಾರದೇ ಇದ್ದದ್ದು ಮನಸ್ಸಿಗೆ ನೋವು ತಂದಿದೆ ಎಂದು ಅನ್ನಾ ತಾಯಿ ಪತ್ರದಲ್ಲಿ ನೋವು ತೋಡಿಕೊಂಡಿದ್ದಾರೆ.

TAGGED:Anna Sebastian PerayilOverworkUnion Labour Ministry
Share This Article
Facebook Whatsapp Whatsapp Telegram

Cinema news

Bigg Boss Rakshita Malu Dhruvanth
ರಕ್ಷಿತಾ-ಮಾಳುಗೆ ಧ್ರುವಂತ್‌ ಮೋಸ – ಕ್ಲಾಸ್‌ ತಗೆದುಕೊಳ್ಳುವಂತೆ ಆಗ್ರಹ
Cinema Latest Top Stories TV Shows
Baahubali The Epic 3
ಜಪಾನ್‌ನಲ್ಲಿ `ಬಾಹುಬಲಿ ದಿ ಎಪಿಕ್’ ರಿಲೀಸ್ – ಯಾವಾಗ ಗೊತ್ತಾ..?
Cinema Latest South cinema
Darshan
ʻದಾಸʼನಿಗೆ 82 ಲಕ್ಷ ಹಣದ ತಲೆಬಿಸಿ – ಕೃಷಿ, ಪ್ರಾಣಿ ಮಾರಾಟದಿಂದಲೇ ಹಣ ಸಿಕ್ಕಿದ್ದು ಎಂದ ದರ್ಶನ್‌
Bengaluru City Cinema Districts Karnataka Latest Main Post Sandalwood
Nanda Kishore and bekary raghu
ನಿರ್ದೇಶಕ ನಂದಕಿಶೋರ್‌ಗೆ ಸಾಲ ನೀಡಿದ ಕೇಸ್‌ಗೆ ಟ್ವಿಸ್ಟ್ – ಉದ್ಯಮಿ ಕಿಡ್ನ್ಯಾಪ್ ಹಿಂದೆ ರಘು ಕೈವಾಡ ಸಾಬೀತು
Bengaluru City Cinema Districts Karnataka Latest Sandalwood Top Stories

You Might Also Like

Modi Putin 2
Latest

ಶಾಂತಿಯುತ ಇತ್ಯರ್ಥಕ್ಕಾಗಿ ರಷ್ಯಾ ಕೆಲಸ ಮಾಡ್ತಿದೆ – ಉಕ್ರೇನ್‌ ಯುದ್ಧ ನಿಲ್ಲಿಸುವ ಸುಳಿವು ಕೊಟ್ಟ ಪುಟಿನ್‌

Public TV
By Public TV
17 minutes ago
Modi Putin 1
Latest

ನಾವು ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದ್ದೇವೆ – ಪುಟಿನ್‌ ಜೊತೆಗಿನ ಸಂವಾದದಲ್ಲಿ ಮೋದಿ ಮಾತು

Public TV
By Public TV
31 minutes ago
IndiGo 5
Latest

ದೆಹಲಿಯಲ್ಲಿ ಇಂದು ಮಧ್ಯರಾತ್ರಿವರೆಗೆ ಎಲ್ಲಾ ಇಂಡಿಗೋ ದೇಶೀಯ ವಿಮಾನಗಳ ಹಾರಾಟ ರದ್ದು

Public TV
By Public TV
2 hours ago
Indigo Flight
Bengaluru City

1000ಕ್ಕೂ ಹೆಚ್ಚು ವಿಮಾನ ಹಾರಾಟ ರದ್ದು – ಫೆಬ್ರವರಿ ವೇಳೆಗೆ ಸಮಸ್ಯೆಗೆ ಪರಿಹಾರ ಎಂದ ಇಂಡಿಗೋ

Public TV
By Public TV
2 hours ago
home loan
Latest

ಮನೆ, ಕಾರು ಖರೀದಿದಾರರಿಗೆ ಗುಡ್‌ನ್ಯೂಸ್‌ | ರೆಪೋ ದರ ಕಡಿತ – ಇಎಂಐ ಎಷ್ಟು ಇಳಿಕೆಯಾಗುತ್ತೆ?

Public TV
By Public TV
3 hours ago
Metro Suicide
Bengaluru City

ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಟ್ರ‍್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?