Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Court

ವೈವಾಹಿಕ ಅತ್ಯಾಚಾರ ಅಪರಾಧೀಕರಣ – ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಹೇಳಿದ್ದೇನು?

Public TV
Last updated: October 3, 2024 11:39 pm
Public TV
Share
2 Min Read
SUPREME COURT
SHARE

ನವದೆಹಲಿ: ಒಬ್ಬ ವ್ಯಕ್ತಿ ತನ್ನ ಪತ್ನಿಯೊಂದಿಗೆ ನಡೆಸುವ ಲೈಂಗಿಕ ಕ್ರಿಯೆಗಳನ್ನು ದಂಡನಾರ್ಹ ʻಅತ್ಯಾಚಾರʼ ಎಂದು ಪರಿಗಣಿಸಿದಲ್ಲಿ, ಅದು ವೈವಾಹಿಕ ಸಂಬಂಧದ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ (Supreme Court) ಗುರುವಾರ ತಿಳಿಸಿದೆ.

ವೈವಾಹಿಕ ಸಂಬಂಧದಲ್ಲಿ ಅತ್ಯಾಚಾರ (marital rape) ನಡೆದರೆ, ಕಾನೂನಿನ ತತ್ವಗಳ ಆಧಾರದಲ್ಲಿ, ಪತಿಗೆ ಕ್ರಿಮಿನಲ್‌ ಕ್ರಮದಿಂದ ವಿನಾಯಿತಿ ನೀಡಿರುವುದನ್ನು ತೆಗೆದುಹಾಕಿದಲ್ಲಿ ಅದು ವೈವಾಹಿಕ ಸಂಬಂಧದ ಮೇಲೆ ಅಗಾಧ ಪರಿಣಾಮ ಬೀರಲಿದೆ. ಸಾಮಾಜಿಕ ಮತ್ತು ಕೌಟುಂಬಿಕ ಸಂರಚನೆಯಲ್ಲಿ ವೇಗದ ಬದಲಾವಣೆಗಳನ್ನು ಕಾಣುತ್ತಿದ್ದೇವೆ. ಈಗ, ಈ ವಿಷಯಕ್ಕೆ ಸಂಬಂಧಿಸಿದ ಕಾನೂನಿನಲ್ಲಿ ಮಾಡುವ ತಿದ್ದುಪಡಿಗಳು ದುರ್ಬಳಕೆಯಾಗುತ್ತದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ ಎಂದೂ ಕೇಂದ್ರ ಸರ್ಕಾರ (Union Government) ತಿಳಿಸಿದೆ.

supreme Court 1

ವೈವಾಹಿಕ ಸಂಬಂಧದಲ್ಲಿ ನಡೆಯುವ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಪ್ರತಿಕ್ರಿಯೆಯಲ್ಲಿ ಕೇಂದ್ರವು ಈ ಅಭಿಪ್ರಾಯ ತಿಳಿಸಿದೆ.

ಅಪ್ರಾಪ್ತ ವಯಸ್ಕಳಲ್ಲದ ತನ್ನ ಹೆಂಡತಿಯನ್ನು ಲೈಂಗಿಕ ಕ್ರಿಯೆಗೆ ಒತ್ತಾಯಿಸಿದರೇ ಅತ್ಯಾಚಾರದ ಅಪರಾಧಕ್ಕಾಗಿ ಪತಿ ಕಾನೂನು ಕ್ರಮದಿಂದ ವಿನಾಯಿತಿ ಪಡೆಯಬೇಕೇ ಎಂಬ ಕಾನೂನಾತ್ಮಕ ಪ್ರಶ್ನೆಯನ್ನು ಎತ್ತುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತ್ವರಿತಗತಿಯಲ್ಲಿ ಕೈಗೆತ್ತಿಕೊಂಡಿದೆ. ಈಗ ರದ್ದಾಗಿ ಭಾರತೀಯ ನ್ಯಾಯ ಸಂಹಿತೆ ಎಂದಾಗಿರುವ ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ, ಅಪ್ರಾಪ್ತ ವಯಸ್ಕಳಲ್ಲದ ತನ್ನ ಪತ್ನಿಯೊಂದಿಗೆ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆ ನಡೆಸಿದರೆ ಅದು ಅತ್ಯಾಚಾರವಲ್ಲ. ಹೊಸ ಕಾನೂನಿನ ಅಡಿಯಲ್ಲಿಯೂ ಸೆಕ್ಷನ್ 63 ವಿನಾಯಿತಿ 2 (ಅತ್ಯಾಚಾರ) 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪತ್ನಿಯೊಂದಿಗೆ ಪುರುಷ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರವಲ್ಲ. ಸಾಂವಿಧಾನಿಕ ಸಿಂಧುತ್ವದ ಆಧಾರದ ಮೇಲೆ ಐಪಿಸಿಯ ಸೆಕ್ಷನ್ 375 ರಡಿ ಪತಿಗೆ ಕ್ರಿಮಿನಲ್ ಕ್ರಮದಿಂದ ವಿನಾಯಿತಿ ನೀಡಿರುವುದನ್ನು ತೆಗೆದುಹಾಕಿದ್ದಲ್ಲಿ ಅದು ವೈವಾಹಿಕ ಸಂಬಂಧದ ಮೇಲೆ ಅಗಾಧ ಪರಿಣಾಮ ಬೀರಲಿದೆ. ಜೊತೆಗೆ ಮದುವೆ ಸಂಸ್ಥೆಯಲ್ಲಿ ಗಂಭೀರ ಅಡಚಣೆಗಳಿಗೆ ಕಾರಣವಾಗಬಹುದು ಎದು ಕೇಂದ್ರ ಸರ್ಕಾರ ತನ್ನ ಅಫಿಡವಿಟ್ ನಲ್ಲಿ ತಿಳಿಸಿದೆ.

Marriage

ಕೇಂದ್ರ ಸರ್ಕಾರ ಅಫಿಡವಿಟ್‌ನಲ್ಲಿ ಹೇಳಿರುವುದೇನು?
ವೈವಾಹಿಕ ಸಂಬಂಧದಲ್ಲಿ ಅತ್ಯಾಚಾರ ನಡೆದರೆ ಪತಿಗೆ ಕ್ರಿಮಿನಲ್‌ ಕ್ರಮದಿಂದ ವಿನಾಯಿತಿ ನೀಡಿರುವುದು ಸಮರ್ಥನೀಯವಾಗಿದೆ. ಈ ವಿಷಯವನ್ನು ಕಟ್ಟುನಿಟ್ಟಿನಿಂದ ಕಾನೂನಾತ್ಮಕ ದೃಷ್ಟಿಯಿಂದ ನೋಡುವ ಬದಲು ಸಮಗ್ರವಾಗಿ ನೋಡಬೇಕು. ಪತ್ನಿಯ ಒಪ್ಪಿಗೆ ಉಲ್ಲಂಘನೆ ಮಾಡುವ ಮೂಲಭೂತ ಹಕ್ಕನ್ನು ಪತಿ ಹೊಂದಿಲ್ಲ. ಆದರೆ ವೈವಾಹಿಕ ಸಂಬಂಧದಲ್ಲಿ ‘ಅತ್ಯಾಚಾರ’ ಸ್ವರೂಪದಲ್ಲಿ ಅಪರಾಧವಾಗಿ ಪರಿಗಣಿಸುವುದು ವಿಪರೀತ ಕಠಿಣವೆಂದೇ ಪರಿಗಣಿಸಬಹುದು. ಹೀಗಾಗಿ ಇದು ಅಳತೆಮೀರಿದ ಕ್ರಮವೆನಿಸಲಿದೆ ಎಂದಿದೆ.

ಒಬ್ಬ ವಿವಾಹಿತ ಮಹಿಳೆ ಹಾಗೂ ಆಕೆಯ ಪತಿಗೆ ಸಂಬಂಧಿಸಿದ ಪ್ರಕರಣವನ್ನು ಇತರ ಪ್ರಕರಣಗಳಂತೆ ಪರಿಗಣಿಸಬಾರದು. ಮಹಿಳೆ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿ ಪ್ರಕರಣಗಳಲ್ಲಿ ಕಾನೂನು ಕ್ರಮಕ್ಕೆ ಬೇರೆ ಬೇರೆ ಅವಕಾಶಗಳಿವೆ. ವೈವಾಹಿಕ ಸಂಬಂಧದಲ್ಲಿ ಲೈಂಗಿಕ ಕ್ರಿಯೆಗೆ ಸಂಬಂಧಿಸಿ ಪರಸ್ಪರರಲ್ಲಿ ನಿರಂತರ ನಿರೀಕ್ಷೆಗಳು ಇರುತ್ತವೆ. ಇಂತಹ ನಿರೀಕ್ಷೆಯು ಲೈಂಗಿಕ ಕ್ರಿಯೆಗಾಗಿ ಪತ್ನಿಯನ್ನು ಬಲವಂತ ಮಾಡುವ ಅಥವಾ ಆಕೆಯ ಇಚ್ಛೆಗೆ ವಿರುದ್ಧವಾಗಿ ನಡೆದುಕೊಳ್ಳುವ ಹಕ್ಕನ್ನು ಪತಿಗೆ ನೀಡುವುದಿಲ್ಲ. ಆದರೆ ಇತರ ಅನ್ನೋನ್ಯ ಸಂಬಂಧ ಅಥವಾ ಅಪರಿಚಿತನಿಂದ ಲೈಂಗಿಕ ಕ್ರಿಯೆಗೆ ಒತ್ತಾಯ ಕಂಡುಬಂದಲ್ಲಿ ಪ್ರಕರಣವೇ ಬೇರೆಯಾಗುತ್ತದೆ.

ಆಗ ವೈವಾಹಿಕ ಸಂಬಂಧದಲ್ಲಿಯೇ ಒಪ್ಪಿತ ಲೈಂಗಿಕತೆ ಹಾಗೂ ವಿವಾಹೇತರ ಸಂಬಂಧದಲ್ಲಿ ಲೈಂಗಿಕತೆ ನಡುವಿನ ವ್ಯತ್ಯಾಸವನ್ನು ನಿರೂಪಿಸಲು ಕಾನೂನು ರಚನೆಗೆ ಆಧಾರವಾಗಲಿದೆ ಎಂದು ಹೇಳಿದೆ.

TAGGED:married womenNew DelhiSupreme Courtಮದುವೆಮಹಿಳೆಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema Updates

SAROJADEVI
ಸರೋಜಾದೇವಿ ವೈಕುಂಠ ಸಮಾರಾಧನೆ – ಭಾಗಿಯಾದ ಸೆಲೆಬ್ರೆಟಿಗಳು
Cinema Karnataka Latest Sandalwood Top Stories
Toxic movie
ಮತ್ತೆ ಟಾಕ್ಸಿಕ್ ಅಖಾಡಕ್ಕೆ ರಾಕಿಭಾಯ್
Cinema Latest Sandalwood Top Stories
Om Saiprakash
ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Cinema Latest Sandalwood Top Stories
Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories
Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post

You Might Also Like

Joe Root
Cricket

ವಿಕೆಟ್‌ ಪಡೆಯಲು ಪರದಾಡಿದ ಬೌಲರ್‌ಗಳು – ಭರ್ಜರಿ 186 ರನ್‌ ಮುನ್ನಡೆಯಲ್ಲಿ ಇಂಗ್ಲೆಂಡ್‌

Public TV
By Public TV
1 hour ago
An intelligence department constable committed suicide in Chikkamagaluru
Chikkamagaluru

ಚಿಕ್ಕಮಗಳೂರು | ಡೆತ್‌ನೋಟ್‌ ಬರೆದಿಟ್ಟು ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

Public TV
By Public TV
2 hours ago
Veda Krishnamurthy
Chikkamagaluru

ಅಂತಾರಾಷ್ಟ್ರೀಯ ಕ್ರಿಕೆಟಿಗೆ ಕನ್ನಡತಿ ವೇದಾ ಕೃಷ್ಣಮೂರ್ತಿ ವಿದಾಯ

Public TV
By Public TV
2 hours ago
Mallikarjun Kharge 2
Latest

ಆರ್‌ಎಸ್‌ಎಸ್‌ ವಿಷವಿದ್ದಂತೆ ರುಚಿ ನೋಡಿದ್ರೆ ಸತ್ತು ಹೋಗ್ತೀರಿ: ಮಲ್ಲಿಕಾರ್ಜುನ ಖರ್ಗೆ

Public TV
By Public TV
2 hours ago
Davanagere Drugs Arrest
Crime

ದಾವಣಗೆರೆ | ಮಾದಕ ವಸ್ತು ಮಾರಾಟ ಜಾಲ – ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿ ಐವರು ಬಂಧನ

Public TV
By Public TV
2 hours ago
Siddaramaiah 10
Latest

ಎಐಸಿಸಿ ಒಬಿಸಿ ವಿಭಾಗದ `ಭಾಗೀಧಾರಿ ನ್ಯಾಯ ಸಮ್ಮೇಳನ’ದ ಉದ್ದೇಶ ವಿವರಿಸಿದ ಸಿಎಂ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?