ಬಾಂಗ್ಲಾ ಕ್ರಾಂತಿ ಹಿಂದೆ ಪಾಕ್‌ ಕೈವಾಡ ಇದ್ಯಾ – ಸರ್ವಪಕ್ಷ ಸಭೆಯಲ್ಲಿ ರಾಹುಲ್‌ ಪ್ರಶ್ನೆಗೆ ಉತ್ತರ ಕೊಟ್ಟ ಜೈಶಂಕರ್‌

Public TV
2 Min Read
Centres All Party Meet On Bangladesh Turmoil Rahul Gandhis Pak Question At Meeting On Bangladesh S Jaishankars Reply 3

– ಎಸ್‌ ಜೈಶಂಕರ್‌ ನೇತೃತ್ವದಲ್ಲಿ ನಡೆದ ಸಭೆ

ನವದೆಹಲಿ: ಬಾಂಗ್ಲಾದೇಶದಲ್ಲಿ (Bangladesh Unrest) ನಡೆದ ಕ್ಷಿಪ್ರ ಕ್ರಾಂತಿ ಸಂಬಂಧ ಇಂದು ವಿದೇಶಾಂಗ ಸಚಿವ ಎಸ್‌ ಜೈಶಂಕರ್‌ (S Jaishankar) ಅವರು ಸರ್ವಪಕ್ಷ ಸಭೆ ನಡೆಸಿದರು.

ಈ ಸಭೆಯಲ್ಲಿ ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಮೂರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಾಪಿತ ಸರ್ಕಾರವನ್ನು ಉರುಳಿಸುವ ಹಿಂದೆ ವಿದೇಶಿ ಕೈವಾಡ ಇದ್ಯಾ? ಪಾಕ್‌ ಪಾತ್ರದ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಜೈಶಂಕರ್‌, ವಿದೇಶಿ ಪಿತೂರಿಯ ಬಗ್ಗೆ ಈಗ ಏನು ಹೇಳಲು ಸಾಧ್ಯವಿಲ್ಲ. ಹಾಗೆಂದ ಮಾತ್ರಕ್ಕೆ ಆರೋಪವನ್ನು ತಳ್ಳಿ ಹಾಕಲು ಆಗುವುದಿಲ್ಲ. ಪಾಕಿಸ್ತಾನದ ರಾಜತಾಂತ್ರಿಕ ಅಧಿಕಾರಿ ಸಾಮಾಜಿಕ ಜಾಲತಾಣದಲ್ಲಿ ಬಾಂಗ್ಲಾದೇಶದ ಆಂದೋಲನವನ್ನು ಬೆಂಬಲಿಸುವ ಪ್ರೊಫೈಲ್‌ ಚಿತ್ರ ಹಾಕಿದ್ದಾರೆ ಎಂದು ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಜಾಶ್ರಯಕ್ಕೆ ಹಸೀನಾ ಯುಕೆಗೆ ಹೋಗೋದು ಯಾಕೆ? – ವಾಯುನೆಲೆಯಲ್ಲಿ ದೋವಲ್‌ ಭೇಟಿ

Centres All Party Meet On Bangladesh Turmoil Rahul Gandhis Pak Question At Meeting On Bangladesh S Jaishankars Reply 1

ಢಾಕಾದಲ್ಲಿನ ಅಧಿಕಾರ ಬದಲಾವಣೆಯ ರಾಜತಾಂತ್ರಿಕ ಪರಿಣಾಮಗಳನ್ನು ಎದುರಿಸಲು ಸರ್ಕಾರದ ಅಲ್ಪಾವಧಿಯ ಮತ್ತು ದೀರ್ಘಾವಧಿಯ ಕಾರ್ಯತಂತ್ರ ಏನು ಎಂಬ ಪ್ರಶ್ನೆಗೆ ಸದ್ಯ ಈಗ ಅಲ್ಲಿ ಹಲವು ವಿದ್ಯಮಾನಗಳು ನಡೆಯುತ್ತಿದೆ. ಕೇಂದ್ರವು ತನ್ನ ಮುಂದಿನ ನಡೆಯನ್ನು ಉತ್ತಮಗೊಳಿಸಲು ನಡೆಯುತ್ತಿರುವ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ವಿಶ್ಲೇಷಿಸುತ್ತಿದೆ ಎಂದು ಸಚಿವರು ಉತ್ತರಿಸಿದರು. ಇದನ್ನೂ ಓದಿ: ದೇಶ ತೊರೆದ ಶೇಖ್ ಹಸೀನಾಗೆ ಭಾರತ ಆಶ್ರಯ – ʻಮಹಾ ಪಲಾಯನʼ ಬೆನ್ನಲ್ಲೇ ಉದ್ರಿಕ್ತರಿಂದ ಸಂಭ್ರಮಾಚರಣೆ

ಬಾಂಗ್ಲಾದೇಶದಲ್ಲಿ ಈ ಸಮಸ್ಯೆ ಹೇಗೆ ವ್ಯಾಪಿಸಿದೆ ಮತ್ತು ದೇಶದ ಪರಿಸ್ಥಿತಿಯ ಬಗ್ಗೆ ಜೈಶಂಕರ್ ನಾಯಕರಿಗೆ ವಿವರಿಸಿದರು. ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಕ್ ಹಸೀನಾ (Sheikh Hasina) ಭಾರತಕ್ಕೆ ಹೇಗೆ ಆಗಮಿಸಿದರು? ಈಗ ಶೇಕ್ ಹಸೀನಾ ಅವರನ್ನು ಭಾರತ ಹೇಗೆ ನೋಡಿಕೊಳ್ಳುತ್ತಿದೆ ಎಂಬುದರ ಕುರಿತು ಅವರು ಮಾಹಿತಿ ನೀಡಿದರು.

Centres All Party Meet On Bangladesh Turmoil Rahul Gandhis Pak Question At Meeting On Bangladesh S Jaishankars Reply 2

ಶೇಕ್ ಹಸೀನಾ ಅವರು ಸದ್ಯ ನಮ್ಮ ದೇಶದಲ್ಲಿದ್ದಾರೆ. ಅವರ ಮುಂದಿನ ನಿರ್ಧಾರ ಏನು ಎಂದು ತಿಳಿಸಲು ಭಾರತ ಸರ್ಕಾರ ಅವರಿಗೆ ಸಮಯ ನೀಡಲು ಬಯಸಿದೆ ಎಂದು ಜೈಶಂಕರ್ ಹೇಳಿದರು. ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಕ್ಷಿಪ್ರಕ್ರಾಂತಿ – ಹಿಂದೂ ದೇವಸ್ಥಾನಗಳ ಮೇಲೆ ಪುಂಡರ ದಾಳಿ

ಕೇಂದ್ರ ಸರ್ಕಾರ ಬಾಂಗ್ಲಾದೇಶ ಸೇನೆಯೊಂದಿಗೂ ಸಂಪರ್ಕದಲ್ಲಿದೆ ಎಂದು ಸಭೆಯಲ್ಲಿ ಜೈಶಂಕರ್ ನಾಯಕರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆಎ.

ಬಾಂಗ್ಲಾದೇಶದಲ್ಲಿ 20,000 ಭಾರತೀಯ ಪ್ರಜೆಗಳಿದ್ದಾರೆ ಎಂದು ಪಕ್ಷದ ಸಭೆಯಲ್ಲಿ ನಾಯಕರಿಗೆ ತಿಳಿಸಲಾಯಿತು. ಮೂಲಗಳ ಪ್ರಕಾರ, ಇದುವರೆಗೆ 8,000 ಭಾರತೀಯ ಪ್ರಜೆಗಳು ಹಿಂತಿರುಗಿದ್ದಾರೆ. ಭಾರತ ಸರ್ಕಾರವು ಭಾರತೀಯ ಪ್ರಜೆಗಳೊಂದಿಗೆ ಸಂಪರ್ಕದಲ್ಲಿದೆ ಮತ್ತು ಅಲ್ಲಿನ ಹೈಕಮಿಷನ್ ಕಾರ್ಯನಿರ್ವಹಿಸುತ್ತಿದೆ ಎಂದು ಜೈಶಂಕರ್ ಸಭೆಗೆ ತಿಳಿಸಿದರು.

Share This Article