ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಈ ಮೊದಲು ನಿಗದಿಗೊಳಿಸಿದ್ದ, ಸಿಇಟಿ ಕನ್ನಡ ಪರೀಕ್ಷೆಯನ್ನು ಏ.18ಕ್ಕೆ ಬದಲಾಗಿ ಏ.15ರಂದೇ (ಮಂಗಳವಾರ) ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೋಮವಾರ ಪ್ರಕಟಿಸಿದೆ.
ಏ.18 ರಂದು ಶುಭ ಶುಕ್ರವಾರ ಇರುವುದರಿಂದ ಈ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಬೇಕೆಂದು ಕೋರಿಕೆಗಳು ಬಂದಿದ್ದವು. ಆ ಹಿನ್ನೆಲೆಯಲ್ಲಿ, ಸರ್ಕಾರದ ನಿರ್ದೇಶನದಂತೆ ಈ ಬದಲಾವಣೆ ಮಾಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.
UGCET-25 ಹೊರನಾಡು & ಗಡಿನಾಡು ಕನ್ನಡಿಗ ಅಭ್ಯರ್ಥಿಗಳ ಕನ್ನಡ ಭಾಷಾ ಪರೀಕ್ಷೆಯನ್ನು ಏ.18ರ ಬದಲಾಗಿ ಏ.15ರಂದೇ ನಡೆಸಲಾಗುವುದು. ಉಳಿದಂತೆ ಸಿಇಟಿ ಪರೀಕ್ಷೆ ಏ.16 & 17ರಂದು ನಡೆಯಲಿದೆ. ಇದರಲ್ಲಿ ಯಾವ ಬದಲಾವಣೆ ಇರುವುದಿಲ್ಲ. ಸದ್ಯದಲ್ಲೇ ಪ್ರವೇಶ ಪತ್ರ ಡೌನ್ಲೋಡ್ ಗೂ ಅವಕಾಶ ನೀಡಲಾಗುವುದು.@CMofKarnataka @drmcsudhakar pic.twitter.com/cE3IcvgVwr
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) March 17, 2025
ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ಕೇಂದ್ರಗಳಲ್ಲಿ ಮಾತ್ರ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಅಂದು ಬೆಳಗ್ಗೆ 10:30 ರಿಂದ 11:30 ರ ವರೆಗೆ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.
ಸಿಇಟಿ-25 ರ ಉಳಿದ ಪರೀಕ್ಷೆಗಳು ನಿಗದಿಯಂತೆ ಏ.16 ಮತ್ತು 17ರಂದು ನಡೆಯಲಿವೆ. ಸದ್ಯದಲ್ಲೇ ಪ್ರವೇಶ ಪತ್ರ ಡೌನ್ಲೋಡ್ಗೂ ಅವಕಾಶ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ವೇಳಾಪಟ್ಟಿಗಾಗಿ ಪ್ರಾಧಿಕಾರದ ವೆಬ್ಸೈಟ್ ನೋಡುವಂತೆ ಪ್ರಕಟಣೆಯಲ್ಲಿ ಸೂಚಿಸಲಾಗಿದೆ.