Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುರುವಾರದಿಂದ ಸಿಇಟಿ ಪರೀಕ್ಷೆ ಆರಂಭ- ವಿದ್ಯಾರ್ಥಿಗಳಿಗೆ ಕಡ್ಡಾಯ ಮಾರ್ಗಸೂಚಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗುರುವಾರದಿಂದ ಸಿಇಟಿ ಪರೀಕ್ಷೆ ಆರಂಭ- ವಿದ್ಯಾರ್ಥಿಗಳಿಗೆ ಕಡ್ಡಾಯ ಮಾರ್ಗಸೂಚಿ

Bengaluru City

ಗುರುವಾರದಿಂದ ಸಿಇಟಿ ಪರೀಕ್ಷೆ ಆರಂಭ- ವಿದ್ಯಾರ್ಥಿಗಳಿಗೆ ಕಡ್ಡಾಯ ಮಾರ್ಗಸೂಚಿ

Public TV
Last updated: April 17, 2024 3:35 pm
Public TV
Share
3 Min Read
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
SHARE

ಬೆಂಗಳೂರು: ಎಂಜಿನಿಯರಿಂಗ್‌, ಕೃಷಿ ವಿಜ್ಞಾನ, ವೆಟರಿನರಿ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಿರ್ಣಾಯಕವಾದ ಸಾಮಾನ್ಯ ಪ್ರವೇಶ ಪರೀಕ್ಷೆ (CET Exam) ರಾಜ್ಯಾದ್ಯಂತ ಗುರುವಾರದಿಂದ ಪ್ರಾರಂಭವಾಗಲಿದೆ.

ಒಟ್ಟು 737 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಬಾರಿ 3,49,637 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ. ಈ ಕುರಿತು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್‌ ವರಿಷ್ಠಾಧಿಕಾರಿಗಳು ಬಿಗಿಭದ್ರತೆಯ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ಸಿಇಟಿ ಕರ್ತವ್ಯಕ್ಕೆ ಒಟ್ಟಾರೆ 20,300 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.

ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 167 ಪರೀಕ್ಷಾ ಕೇಂದ್ರಗಳಿದ್ದು, ಈ ಬಾರಿ 648 ವಿಶೇಷ ಚೇತನ ಅಭ್ಯರ್ಥಿಗಳು ಸಿಇಟಿ ಪರೀಕ್ಷೆ ಬರೆಯುತ್ತಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ ಒಂದು ಲಕ್ಷದಷ್ಟು ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದು,ಇದಕ್ಕೆ ವ್ಯಾಪಕ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗುರುವಾರ ಜೀವಶಾಸ್ತ್ರ ಮತ್ತು ಗಣಿತ ಹಾಗೂ ಶುಕ್ರವಾರ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಬೆಳಗ್ಗೆ 10.30ಕ್ಕೆ ಮತ್ತು ಮಧ್ಯಾಹ್ನ 2.30ಕ್ಕೆ ಆರಂಭವಾಗುವ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಸಾಕಷ್ಟು ಮುಂಚಿತವಾಗಿಯೇ ಹಾಜರಿರಬೇಕು. ಬೆಳಗ್ಗೆ 10.40 ಮತ್ತು ಮಧ್ಯಾಹ್ನ 2.40ಕ್ಕೆ ಮೂರನೇ ಬಾರಿಗೆ ಬೆಲ್‌ ಬಾರಿಸಿದ ಬಳಿಕ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಇರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

CET

ಇಂಗ್ಲಿಷ್‌ ಮತ್ತು ಕನ್ನಡ ಎರಡರಲ್ಲೂ ಪ್ರಶ್ನೆಪತ್ರಿಕೆ ಇರಲಿದೆ. ಒಂದು ವೇಳೆ ಅಭ್ಯರ್ಥಿಗಳಿಗೆ ಏನಾದರೂ ಗೊಂದಲ ಉಂಟಾದಲ್ಲಿ ಇಂಗ್ಲಿಷ್‌ ಆವೃತ್ತಿಯನ್ನೇ ಅಂತಿಮವೆಂದು ಪರಿಗಣಿಸಬೇಕು. ಈ ವಿಚಾರದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಪ್ರಶ್ನೆಗಳಿಗೆ ಅವಕಾಶ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಧಾರವಾಡದಲ್ಲಿ 18 ಕೋಟಿ ಪತ್ತೆ – ಎಸ್‌ಬಿಐ ಬ್ಯಾಂಕ್‌ಗೆ ಹಣ ರವಾನೆ

ಕಲಬುರಗಿ ಮುಂತಾದ ಉತ್ತರ ಕರ್ನಾಟಕದ ಭಾಗಗಳ ಕೆಲವು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಗೊಂದಲವನ್ನು ಬಗೆಹರಿಸಿದ್ದು, ಸಾಧ್ಯವಾದಷ್ಟೂ ವಿದ್ಯಾರ್ಥಿಗಳಿಗೆ ಅವರ ಸಮೀಪದ ಕೇಂದ್ರಗಳಲ್ಲೇ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಬೇಸಿಗೆಯ ಝಳ ಇರುವುದರಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಕುಡಿಯುವ ನೀರಿಗೆ ವ್ಯವಸ್ಥೆ ಮಾಡಲಾಗಿದೆ. ಆಶಾ ಕಾರ್ಯಕರ್ತೆಯರು, ಎನ್‌ಸಿಸಿ ಮತ್ತು ಎನ್‌ಎಸ್‌ಎಸ್‌ ಕೆಡೆಟ್‌ಗಳು ಪರೀಕ್ಷೆಯು ಸುಗಮವಾಗಿ ನಡೆಯಲು ಸಹಕರಿಸಲಿದ್ದಾರೆ. ಒಂದು ಪರೀಕ್ಷಾ ಕೊಠಡಿಯಲ್ಲಿ 16 ಆವೃತ್ತಿಗಳ ಪ್ರಶ್ನೆ ಪತ್ರಿಕೆಗಳು ಇರಲಿದ್ದು, ನಕಲು ಮಾಡಲು ಅವಕಾಶ ಆಗದಂತೆ ಯೋಜನೆ ರೂಪಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ಕೂಡ ಇರಲಿದೆ ಎಂದು ತಿಳಿಸಿದರು.

ಇದೇ 20ರಂದು ಬೆಳಗಾವಿ, ಮಂಗಳೂರು ಮತ್ತು ಬೆಂಗಳೂರು ಕೇಂದ್ರಗಳಲ್ಲಿ ಹೊರನಾಡು ಮತ್ತು ಗಡಿನಾಡು ಕನ್ನಡ ಅಭ್ಯರ್ಥಿಗಳಿಗೆ ಬೆಳಗ್ಗೆ 11.30ರಿಂದ 12.30ರವರೆಗೆ ಕನ್ನಡ ಪರೀಕ್ಷೆ ನಡೆಯಲಿದೆ. ಈ ಸಲ ಒಟ್ಟು 1,545 ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲಿದ್ದಾರೆ ಅಂತ ಮಾಹಿತಿ ನೀಡಿದ್ರು.

ಪರೀಕ್ಷೆ ಬರೆಯೋ ವಿದ್ಯಾರ್ಥಿಗಳಿಗೆ ಕೆಲ ಮಾರ್ಗಸೂಚಿಗಳು ಹೀಗಿವೆ.
* ಪ್ರವೇಶಪತ್ರ ಮತ್ತು ಗುರುತಿನ ಪತ್ರದೊಂದಿಗೆ ಬರುವುದು ಕಡ್ಡಾಯ.
* ನೀಲಿ ಅಥವಾ ಕಪ್ಪು ಬಣ್ಣದ ಪೆನ್‌ ಮಾತ್ರ ಬಳಸತಕ್ಕದ್ದು.
* ತುಂಬು ತೋಳಿನ ಅಂಗಿ ಧರಿಸಿಕೊಂಡು ಬರುವಂತಿಲ್ಲ.
* ಮೊಬೈಲ್‌, ಬ್ಲೂಟೂತ್‌, ಟ್ಯಾಬ್ಲೆಟ್‌, ಕೈಗಡಿಯಾರ, ಕ್ಯಾಲುಕುಲೇಟರ್‌, ನೋಟ್ ಪ್ಯಾಡ್‌, ಐ-ಪಾಡ್‌, ಇಯರ್‌ ಫೋನ್‌ ಇತ್ಯಾದಿಗಳನ್ನು ತರುವಂತಿಲ್ಲ.
* ಒಮ್ಮೆ ಉತ್ತರವನ್ನು ಗುರುತು ಮಾಡಿದ ಬಳಿಕ ಅದನ್ನು ಅಳಿಸಲು ಅವಕಾಶವಿರುವುದಿಲ್ಲ.
* ಓಎಂಆರ್‌ ಶೀಟ್‌ನಲ್ಲಿ ಪ್ರವೇಶಪತ್ರ ಸಂಖ್ಯೆ, ಪ್ರಶ್ನೆಪತ್ರಿಕೆಯ ವರ್ಶನ್‌ ಕೋಡ್‌ ನಮೂದಿಸುವುದು ಕಡ್ಡಾಯ.
* ಓಎಂಆರ್‌ ಶೀಟ್‌ನ ಕೆಳಭಾಗದಲ್ಲಿ ಅಭ್ಯರ್ಥಿಗಳು ಮರೆಯದೆ ಸಹಿ ಮಾಡಬೇಕು.
* ಓಎಂಆರ್‌ ಶೀಟ್‌ನಲ್ಲಿರುವ ಟೈಮಿಂಗ್‌ ಮಾರ್ಕ್‌ ಮೇಲೆ ಏನನ್ನೂ ಬರೆಯುವುದಾಗಲಿ, ಗೀಚುವುದಾಗಲಿ ಮಾಡಬೇಡಿ.

TAGGED:bengaluruCET Examಪರೀಕ್ಷೆಬೆಂಗಳೂರುಸಿಇಟಿ
Share This Article
Facebook Whatsapp Whatsapp Telegram

Cinema news

Darshan 8
ಅಲೋಕ್‌ ಕುಮಾರ್‌ ಖಡಕ್‌ ನಡೆ – ದರ್ಶನ್‌ಗೆ ಮನೆಯ ಬ್ಲಾಂಕೆಟ್ ಸಿಗೋದು ಅನುಮಾನ
Bengaluru City Cinema Karnataka Latest Main Post
gilli rashika
ಗಿಲ್ಲಿ ಜೊತೆ ಜಗಳಕ್ಕೆ ಬಿದ್ದ ರಾಶಿಕಾ; ಕಾರಣವೇನು ಗೊತ್ತಾ?
Cinema Latest Top Stories TV Shows
Drishyam 3
ದೃಶ್ಯಂ-3 ರಿಲೀಸ್ ಡೇಟ್ ಫಿಕ್ಸ್: ಸಸ್ಪೆನ್ಸ್ ಥ್ರಿಲ್ಲರ್ ಸೀಕ್ವೆಲ್‌ಗೆ ಜನ ಕಾತುರ 
Cinema Latest South cinema Top Stories
bigg boss
ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಕ್ಕೆ ನೂರು ದಿನಗಳ ಸಂಭ್ರಮ; ಆಟ ಇಲ್ಲಿಗೆ ಮುಗಿದಿಲ್ಲ!
Cinema Latest Top Stories TV Shows

You Might Also Like

commissioner shashi kumar
Crime

ಮಹಿಳೆಯೇ ಬಟ್ಟೆ ಬಿಚ್ಚಿ ಸೀನ್‌ ಕ್ರಿಯೇಟ್‌ ಮಾಡಿದ್ದಾಳೆ, ಆಕೆ ವಿರುದ್ಧ 9 ಕೇಸ್‌ ಇದೆ: ಹು-ಧಾ ಆಯುಕ್ತ ಶಶಿಕುಮಾರ್‌

Public TV
By Public TV
10 minutes ago
ICC T20 World Cup
Cricket

ಭಾರತಕ್ಕೆ ಬನ್ನಿಇಲ್ವೋ ಅಂಕ ಕಳೆದುಕೊಳ್ಳಿ – ಬಾಂಗ್ಲಾದೇಶಕ್ಕೆ ಐಸಿಸಿ ಖಡಕ್‌ ಮಾತು

Public TV
By Public TV
21 minutes ago
trump maga
Latest

ವೆನೆಜುವೆಲಾದಿಂದ 50 ಮಿಲಿಯನ್‌ ಬ್ಯಾರೆಲ್‌ ಕಚ್ಚಾ ತೈಲ ನಮಗೆ ಸಿಗಲಿದೆ: ಟ್ರಂಪ್‌

Public TV
By Public TV
1 hour ago
BJP Worker
Crime

ಹುಬ್ಬಳ್ಳಿಯಲ್ಲಿ ಅಮಾನುಷ ಕೃತ್ಯ – ಪೊಲೀಸರಿಂದಲೇ ಬಿಜೆಪಿ ಕಾರ್ಯಕರ್ತೆಗೆ ಬಟ್ಟೆಬಿಚ್ಚಿ ಥಳಿಸಿದ ಆರೋಪ!

Public TV
By Public TV
2 hours ago
Shivamogga
Crime

ಕೈದಿ ಭೇಟಿಯಾಗಲು ಗಾಂಜಾ ತಂದಿದ್ದ ಇಬ್ಬರು ಜೈಲಿನಲ್ಲೇ ಲಾಕ್‌!

Public TV
By Public TV
3 hours ago
Karwar Pavan Bhat
Crime

ಮದುವೆಗೆ ಒಪ್ಪದ ಯುವತಿ – ಪುರೋಹಿತ ಆತ್ಮಹತ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?