Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿನೋದ್ ಪ್ರಭಾಕರ್ ನಟನೆಯ 25ನೇ ಚಿತ್ರಕ್ಕೆ ಚೈತನ್ಯ ಡೈರೆಕ್ಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವಿನೋದ್ ಪ್ರಭಾಕರ್ ನಟನೆಯ 25ನೇ ಚಿತ್ರಕ್ಕೆ ಚೈತನ್ಯ ಡೈರೆಕ್ಟರ್

Cinema

ವಿನೋದ್ ಪ್ರಭಾಕರ್ ನಟನೆಯ 25ನೇ ಚಿತ್ರಕ್ಕೆ ಚೈತನ್ಯ ಡೈರೆಕ್ಟರ್

Public TV
Last updated: February 6, 2024 4:59 pm
Public TV
Share
3 Min Read
Vinod Prabhakar
SHARE

ವಿನೋದ್ ಪ್ರಭಾಕರ್ (Vinod Prabhakar) ನಾಯಕರಾಗಿ ನಟಿಸುತ್ತಿರುವ 25 ನೇ ಚಿತ್ರದ ಶೀರ್ಷಿಕೆ ಅನಾವರಣ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಇದೇ ಸಂದರ್ಭದಲ್ಲಿ ಪದ್ಮಾವತಿ ಫಿಲಂಸ್ ಎಂಬ ನೂತನ ನಿರ್ಮಾಣ ಸಂಸ್ಥೆ ಕೂಡ ಆರಂಭವಾಯಿತು. ಗೃಹ ಸಚಿವ ಜಿ.ಪರಮೇಶ್ವರ್  ನೂತನ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಿದರು. ‘ಬಲರಾಮನ ದಿನಗಳು’ (Balaramana Dinagalu)  ಎಂದು ಚಿತ್ರಕ್ಕೆ ಹೆಸರಿಡಲಾಗಿದೆ.  ಆ ದಿನಗಳು ಖ್ಯಾತಿಯ ಕೆ.ಎಂ.ಚೈತನ್ಯ (KM Chaitanya) ಈ  ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

Balaramana Dinagalu 2

ನಿರ್ಮಾಪಕ ಶ್ರೇಯಸ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಚಿತ್ರದ ಶೀರ್ಷಿಕೆ ಅನಾವರಣ ಅದ್ದೂರಿಯಾಗಿ ನಡೆಯಿತು. ಇದೇ ಸಂದರ್ಭದಲ್ಲಿ ವಿನೋದ್ ಪ್ರಭಾಕರ್ ಅವರಿಗೆ ಟೈಗರ್ ಎಂದು ಬಿರುದು ನೀಡಿ ಸನ್ಮಾನಿಸಲಾಯಿತು. ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.

Balaramana Dinagalu 1

ಪ್ರತಿಯೊಬ್ಬರಿಗೂ ಜೀವನದಲ್ಲಿ ವೈದ್ಯ, ಪೊಲೀಸ್‍, ರಾಜಕಾರಣಿ, ವಿಜ್ಞಾನಿ  ಹೀಗೆ ಏನೇನೋ ಆಗಬೇಕು ಎಂಬ ಆಸೆ ಇರುತ್ತದೆ. ಆದರೆ, ನಮ್ಮ ಶ್ರೇಯಸ್‍ಗೆ ಚಿತ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳುವ ಆಸೆ ಇದ್ದು, ಈ ನಿಟ್ಟಿನಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ  ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ. ಹಿಂದೆ ಸಿನಿಮಾದಲ್ಲಿ ಸಂದೇಶ ಇರುತ್ತಿತ್ತು. ಮೌಲ್ಯಗಳ ಪಾಠ ಇರುತ್ತಿತ್ತು. ಈಗ ಕಮರ್ಷಿಯಲ್‍ ಚಿತ್ರಗಳ ಸಂಖ್ಯೆ ಜಾಸ್ತಿ ಆಗಿದೆ. ಹಣ ಮಾಡಬೇಕು ನಿಜ. ಆದರೆ, ಜೊತೆಗೆ ಚಿತ್ರ ನೋಡುವ ಪ್ರೇಕ್ಷಕರಿಗೆ ಒಂದು ಸಂದೇಶ ಸಹ ಹೋಗಬೇಕು. ಚಲನಚಿತ್ರ ಒಂದು ಪ್ರಬಲವಾದ ಮಾಧ್ಯಮ. ಈ ಮಾಧ್ಯಮದ ಮೂಲಕ ಜನರ ಮನಸ್ಸು ಬದಲಾವಣೆ ಮಾಡುವ ಅವಕಾಶವಿರುತ್ತದೆ. ಹಾಗಾಗಿ, ಯಾವ ಸಿನಿಮಾ ಮಾಡಿದರೂ ಅದರ ಮೂಲಕ ಪ್ರೇಕ್ಷಕರಿಗೆ ಒಂದು ಸಂದೇಶ ಕೊಡಿ. ನನಗೆ ಟೈಗರ್ ಪ್ರಭಾಕರ್ ಪರಿಚಿತರು. ಅವರ ಮಗ ಇಂದು ತಮ್ಮ 25ನೇ ಸಿನಿಮಾ ಮಾಡುತ್ತಿದ್ದಾರೆ. ಇದು ತಮಾಷೆ ವಿಷಯವಲ್ಲ. ಅವರು ಇನ್ನೂ 25 ಸಿನಿಮಾಗಳನ್ನು ಮಾಡಲಿ ಎಂಬುದು ನನ್ನ ಹಾರೈಕೆ ಎಂದು ಜಿ.ಪರಮೇಶ್ವರ್ ತಿಳಿಸಿದರು.

Balaramana Dinagalu 3

ಚಿತ್ರ ನಿರ್ಮಿಸಬೇಕು ಎಂಬುದು ನನ್ನ ಕನಸು ಎಂದು ಮಾತನಾಡಿದ ನಿರ್ಮಾಪಕ ಶ್ರೇಯಸ್,  ಆ ಕನಸಿಗೆ ನನ್ನ ತಂದೆ, ತಾಯಿ ಮತ್ತು ಸಹೋದರ ಶಕ್ತಿ ತುಂಬುತ್ತಿದ್ದಾರೆ. ವಿನೋದ್‍ ಪ್ರಭಾಕರ್ ಅವರು ನನ್ನ ಚಿತ್ರರಂಗದ ಗುರುಗಳು. ಅವರ ಸಹಕಾರದಿಂದ ನಾನು ಪದ್ಮಾವತಿ  ಫಿಲಂಸ್ ಎಂಬ ಸಂಸ್ಥೆ ಹುಟ್ಟುಹಾಕಿ ಈ ಚಿತ್ರ ನಿರ್ಮಿಸುತ್ತಿದ್ದೇನೆ ಎಂದರು. ನನಗೆ ಈ ಸಂಸ್ಥೆಯವರು ಟೈಗರ್ ಎಂಬ ಬಿರುದು ಕೊಟ್ಟಿದ್ದಾರೆ. ನನ್ನ ಅಭಿನಯದ ಮೂರು ಚಿತ್ರಗಳು ಬಿಡುಗಡೆಗೆ ಸಿದ್ದವಾಗುತ್ತಿದೆ.  ಬಿರುದಿಗೆ ಆ ಚಿತ್ರಗಳು ಧಕ್ಕೆ ತರದಂತೆ ನೋಡಿಕೊಳ್ಳುತ್ತೇನೆ. ಚೈತನ್ಯ ಅವರ ‘ಆ ದಿನಗಳು’ ಚಿತ್ರ ನೋಡಿದಾಗಿನಿಂದ ನಾನು ಅವರ ಅಭಿಮಾನಿ. ಅವರ ಜೊತೆಗೆ ಕೆಲಸ ಮಾಡಬೇಕು ಎಂಬ ಆಸೆ ಇತ್ತು. ಅದು ಈಗ ಈಡೇರಿದೆ. ಅವರೇನು ಬಲರಾಮನ ಪಾತ್ರ ಸೃಷ್ಠಿ ಮಾಡಿದ್ದಾರೋ, ಪ್ರಾಣ ಒತ್ತೆಯಿಟ್ಟು, ಬೆವರು-ರಕ್ತ ಹರಿಸಿ ಅದಕ್ಕೆ ನ್ಯಾಯ ಸಲ್ಲಿಸುತ್ತೇನೆ ಎಂದರು ನಾಯಕ ವಿನೋದ್ ಪ್ರಭಾಕರ್.

ಹೆಚ್ಚಿನ ಸಿನಿಮಾಗಳಲ್ಲಿ ಮನರಂಜನೆ ಇರುತ್ತದೆ. ಸಂದೇಶಗಳು ಕಡಿಮೆಯಾಗುತ್ತಿವೆ ಎಂದು ಮಾತು ಅರಂಭಿಸಿದ ನಿರ್ದೇಶಕ ಕೆ.ಎಂ.ಚೈತನ್ಯ,  ನಾನು ನಿರ್ದೇಶಿಸಿರುವ ಸಿನಿಮಾಗಳಲ್ಲಿ ಪ್ರತ್ಯಕ್ಷವಾಗಿ ಅಲ್ಲದಿದ್ದರೂ, ಪರೋಕ್ಷವಾಗಿ ಸಂದೇಶ ಹೇಳಿದ್ದೇನೆ. ಇದರಲ್ಲೂ ಅದು ಮುಂದುವರೆಯುತ್ತದೆ. ಈ ಚಿತ್ರ ಆಗುತ್ತಿರುವುದಕ್ಕೆ ಮುಖ್ಯ ಕಾರಣ ಶ್ರೇಯಸ್‍. ಈ ಕಥೆ ಆಯ್ಕೆ ಮಾಡಿದ್ದು ಅವರು. ಭೂಗತಲೋಕದ ಬಗ್ಗೆ ಸಾಕಷ್ಟು ಕಥೆಗಳನ್ನು ಮಾಡಿದ್ದೆ. ಅದರಲ್ಲಿ ಯಾವ ಕಥೆ ಮಾಡಬೇಕು ಅಂತ ಹೇಳಿದ್ದು ಅವರೆ. ಜೊತೆಗೆ ಬಹಳ ವರ್ಷಗಳಿಂದ ವಿನೋದ್‍ ಪ್ರಭಾಕರ್ ಜೊತೆಗೆ ಚಿತ್ರ ಮಾಡುವ ಆಸೆ ಇತ್ತು. ಅದಕ್ಕೆ ಪೂರಕವಾಗಿ ಕಥೆ ಸಿಕ್ಕಿದೆ. ಈ ಚಿತ್ರಕ್ಕೆ ಅವರು ಬಹಳ ಅತ್ಯುತ್ತಮ ಆಯ್ಕೆ. ಇದು ಭೂಗತಲೋಕದ ಸಿನಿಮಾ.  ಭೂಗತ ಲೋಕದ ಜೊತೆಗೆ ಸಮಾಜ, ರಾಜಕೀಯ ಹೀಗೆ ಎಲ್ಲಾ ಆಯಾಮಗಳು ಇರುತ್ತವೆ. ಚಿತ್ರದ ಬಗ್ಗೆ ಈಗಲೇ ಹೆಚ್ಚು ಹೇಳುವುದು ಕಷ್ಟ. ನಿಜಜೀವನದ ಕಥೆ ಆಧರಿಸಿದ ಕಾಲ್ಪನಿಕ ಚಿತ್ರ. ಇದು ಯಾವುದೇ ವ್ಯಕ್ತಿಯ ಕುರಿತಾದ ಚಿತ್ರ ಅಲ್ಲ. ಇದರಲ್ಲಿ ಮನರಂಜನೆ ಇರುತ್ತದೆ. ಇಡೀ ಕುಟುಂಬ ನೋಡುವ ಚಿತ್ರ ಎಂದು ತಿಳಿಸಿದರು.

TAGGED:Balaramana DinagaluKM ChaitanyatitleVinod Prabhakarಕೆ.ಎಂ.ಚೈತನ್ಯಟೈಟಲ್ಬಲರಾಮನ ದಿನಗಳುವಿನೋದ್ ಪ್ರಭಾಕರ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Vijayapura Fire Accident
Districts

ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ – ಹೊತ್ತಿಯುರಿದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು

Public TV
By Public TV
5 minutes ago
Mukesh Ambani Reliance Donald Trump
Latest

ಅಮೆರಿಕದಲ್ಲಿ ರಿಲಯನ್ಸ್‌ನಿಂದ ಹೊಸ ತೈಲ ಸಂಸ್ಕರಣಾ ಘಟಕ: ಟ್ರಂಪ್‌ ಘೋಷಣೆ

Public TV
By Public TV
29 minutes ago
Mandya Crime
Crime

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ, ಲವ್ವರ್ಸ್‌ ಅರೆಸ್ಟ್

Public TV
By Public TV
30 minutes ago
ಸಾಂದರ್ಭಿಕ ಚಿತ್ರ
Latest

ಇರಾನ್‌ನಿಂದ ಖಡಕ್‌ ಪ್ರತಿಕ್ರಿಯೆ – ತೈಲ ಟ್ಯಾಂಕರ್‌ ಕುರಿತ ಅಮೆರಿಕದ ಪೋಸ್ಟ್‌ ಡಿಲೀಟ್‌

Public TV
By Public TV
1 hour ago
Punjab Accident Foreign Womem
Latest

ರಸ್ತೆ ದಾಟುವಾಗ ಕಾರು ಡಿಕ್ಕಿ – 14 ಅಡಿ ಎತ್ತರದಿಂದ ಹಾರಿ ಬಿದ್ದ ವಿದೇಶಿ ಯುವತಿ, ಸ್ಥಳದಲ್ಲೇ ಸಾವು

Public TV
By Public TV
1 hour ago
Siddaramaiah Zameer Ahmed SS Mallikarjun
Bengaluru City

ಡಿಸಿಎಂ ಡಿಕೆಶಿ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?