Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿನೋದ್ ಪ್ರಭಾಕರ್ ನಟನೆಯ 25ನೇ ಚಿತ್ರಕ್ಕೆ ಚೈತನ್ಯ ಡೈರೆಕ್ಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವಿನೋದ್ ಪ್ರಭಾಕರ್ ನಟನೆಯ 25ನೇ ಚಿತ್ರಕ್ಕೆ ಚೈತನ್ಯ ಡೈರೆಕ್ಟರ್

Cinema

ವಿನೋದ್ ಪ್ರಭಾಕರ್ ನಟನೆಯ 25ನೇ ಚಿತ್ರಕ್ಕೆ ಚೈತನ್ಯ ಡೈರೆಕ್ಟರ್

Public TV
Last updated: February 6, 2024 4:59 pm
Public TV
Share
3 Min Read
Vinod Prabhakar
SHARE

ವಿನೋದ್ ಪ್ರಭಾಕರ್ (Vinod Prabhakar) ನಾಯಕರಾಗಿ ನಟಿಸುತ್ತಿರುವ 25 ನೇ ಚಿತ್ರದ ಶೀರ್ಷಿಕೆ ಅನಾವರಣ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಇದೇ ಸಂದರ್ಭದಲ್ಲಿ ಪದ್ಮಾವತಿ ಫಿಲಂಸ್ ಎಂಬ ನೂತನ ನಿರ್ಮಾಣ ಸಂಸ್ಥೆ ಕೂಡ ಆರಂಭವಾಯಿತು. ಗೃಹ ಸಚಿವ ಜಿ.ಪರಮೇಶ್ವರ್  ನೂತನ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಿದರು. ‘ಬಲರಾಮನ ದಿನಗಳು’ (Balaramana Dinagalu)  ಎಂದು ಚಿತ್ರಕ್ಕೆ ಹೆಸರಿಡಲಾಗಿದೆ.  ಆ ದಿನಗಳು ಖ್ಯಾತಿಯ ಕೆ.ಎಂ.ಚೈತನ್ಯ (KM Chaitanya) ಈ  ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

Balaramana Dinagalu 2

ನಿರ್ಮಾಪಕ ಶ್ರೇಯಸ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಚಿತ್ರದ ಶೀರ್ಷಿಕೆ ಅನಾವರಣ ಅದ್ದೂರಿಯಾಗಿ ನಡೆಯಿತು. ಇದೇ ಸಂದರ್ಭದಲ್ಲಿ ವಿನೋದ್ ಪ್ರಭಾಕರ್ ಅವರಿಗೆ ಟೈಗರ್ ಎಂದು ಬಿರುದು ನೀಡಿ ಸನ್ಮಾನಿಸಲಾಯಿತು. ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.

Balaramana Dinagalu 1

ಪ್ರತಿಯೊಬ್ಬರಿಗೂ ಜೀವನದಲ್ಲಿ ವೈದ್ಯ, ಪೊಲೀಸ್‍, ರಾಜಕಾರಣಿ, ವಿಜ್ಞಾನಿ  ಹೀಗೆ ಏನೇನೋ ಆಗಬೇಕು ಎಂಬ ಆಸೆ ಇರುತ್ತದೆ. ಆದರೆ, ನಮ್ಮ ಶ್ರೇಯಸ್‍ಗೆ ಚಿತ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳುವ ಆಸೆ ಇದ್ದು, ಈ ನಿಟ್ಟಿನಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ  ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ. ಹಿಂದೆ ಸಿನಿಮಾದಲ್ಲಿ ಸಂದೇಶ ಇರುತ್ತಿತ್ತು. ಮೌಲ್ಯಗಳ ಪಾಠ ಇರುತ್ತಿತ್ತು. ಈಗ ಕಮರ್ಷಿಯಲ್‍ ಚಿತ್ರಗಳ ಸಂಖ್ಯೆ ಜಾಸ್ತಿ ಆಗಿದೆ. ಹಣ ಮಾಡಬೇಕು ನಿಜ. ಆದರೆ, ಜೊತೆಗೆ ಚಿತ್ರ ನೋಡುವ ಪ್ರೇಕ್ಷಕರಿಗೆ ಒಂದು ಸಂದೇಶ ಸಹ ಹೋಗಬೇಕು. ಚಲನಚಿತ್ರ ಒಂದು ಪ್ರಬಲವಾದ ಮಾಧ್ಯಮ. ಈ ಮಾಧ್ಯಮದ ಮೂಲಕ ಜನರ ಮನಸ್ಸು ಬದಲಾವಣೆ ಮಾಡುವ ಅವಕಾಶವಿರುತ್ತದೆ. ಹಾಗಾಗಿ, ಯಾವ ಸಿನಿಮಾ ಮಾಡಿದರೂ ಅದರ ಮೂಲಕ ಪ್ರೇಕ್ಷಕರಿಗೆ ಒಂದು ಸಂದೇಶ ಕೊಡಿ. ನನಗೆ ಟೈಗರ್ ಪ್ರಭಾಕರ್ ಪರಿಚಿತರು. ಅವರ ಮಗ ಇಂದು ತಮ್ಮ 25ನೇ ಸಿನಿಮಾ ಮಾಡುತ್ತಿದ್ದಾರೆ. ಇದು ತಮಾಷೆ ವಿಷಯವಲ್ಲ. ಅವರು ಇನ್ನೂ 25 ಸಿನಿಮಾಗಳನ್ನು ಮಾಡಲಿ ಎಂಬುದು ನನ್ನ ಹಾರೈಕೆ ಎಂದು ಜಿ.ಪರಮೇಶ್ವರ್ ತಿಳಿಸಿದರು.

Balaramana Dinagalu 3

ಚಿತ್ರ ನಿರ್ಮಿಸಬೇಕು ಎಂಬುದು ನನ್ನ ಕನಸು ಎಂದು ಮಾತನಾಡಿದ ನಿರ್ಮಾಪಕ ಶ್ರೇಯಸ್,  ಆ ಕನಸಿಗೆ ನನ್ನ ತಂದೆ, ತಾಯಿ ಮತ್ತು ಸಹೋದರ ಶಕ್ತಿ ತುಂಬುತ್ತಿದ್ದಾರೆ. ವಿನೋದ್‍ ಪ್ರಭಾಕರ್ ಅವರು ನನ್ನ ಚಿತ್ರರಂಗದ ಗುರುಗಳು. ಅವರ ಸಹಕಾರದಿಂದ ನಾನು ಪದ್ಮಾವತಿ  ಫಿಲಂಸ್ ಎಂಬ ಸಂಸ್ಥೆ ಹುಟ್ಟುಹಾಕಿ ಈ ಚಿತ್ರ ನಿರ್ಮಿಸುತ್ತಿದ್ದೇನೆ ಎಂದರು. ನನಗೆ ಈ ಸಂಸ್ಥೆಯವರು ಟೈಗರ್ ಎಂಬ ಬಿರುದು ಕೊಟ್ಟಿದ್ದಾರೆ. ನನ್ನ ಅಭಿನಯದ ಮೂರು ಚಿತ್ರಗಳು ಬಿಡುಗಡೆಗೆ ಸಿದ್ದವಾಗುತ್ತಿದೆ.  ಬಿರುದಿಗೆ ಆ ಚಿತ್ರಗಳು ಧಕ್ಕೆ ತರದಂತೆ ನೋಡಿಕೊಳ್ಳುತ್ತೇನೆ. ಚೈತನ್ಯ ಅವರ ‘ಆ ದಿನಗಳು’ ಚಿತ್ರ ನೋಡಿದಾಗಿನಿಂದ ನಾನು ಅವರ ಅಭಿಮಾನಿ. ಅವರ ಜೊತೆಗೆ ಕೆಲಸ ಮಾಡಬೇಕು ಎಂಬ ಆಸೆ ಇತ್ತು. ಅದು ಈಗ ಈಡೇರಿದೆ. ಅವರೇನು ಬಲರಾಮನ ಪಾತ್ರ ಸೃಷ್ಠಿ ಮಾಡಿದ್ದಾರೋ, ಪ್ರಾಣ ಒತ್ತೆಯಿಟ್ಟು, ಬೆವರು-ರಕ್ತ ಹರಿಸಿ ಅದಕ್ಕೆ ನ್ಯಾಯ ಸಲ್ಲಿಸುತ್ತೇನೆ ಎಂದರು ನಾಯಕ ವಿನೋದ್ ಪ್ರಭಾಕರ್.

ಹೆಚ್ಚಿನ ಸಿನಿಮಾಗಳಲ್ಲಿ ಮನರಂಜನೆ ಇರುತ್ತದೆ. ಸಂದೇಶಗಳು ಕಡಿಮೆಯಾಗುತ್ತಿವೆ ಎಂದು ಮಾತು ಅರಂಭಿಸಿದ ನಿರ್ದೇಶಕ ಕೆ.ಎಂ.ಚೈತನ್ಯ,  ನಾನು ನಿರ್ದೇಶಿಸಿರುವ ಸಿನಿಮಾಗಳಲ್ಲಿ ಪ್ರತ್ಯಕ್ಷವಾಗಿ ಅಲ್ಲದಿದ್ದರೂ, ಪರೋಕ್ಷವಾಗಿ ಸಂದೇಶ ಹೇಳಿದ್ದೇನೆ. ಇದರಲ್ಲೂ ಅದು ಮುಂದುವರೆಯುತ್ತದೆ. ಈ ಚಿತ್ರ ಆಗುತ್ತಿರುವುದಕ್ಕೆ ಮುಖ್ಯ ಕಾರಣ ಶ್ರೇಯಸ್‍. ಈ ಕಥೆ ಆಯ್ಕೆ ಮಾಡಿದ್ದು ಅವರು. ಭೂಗತಲೋಕದ ಬಗ್ಗೆ ಸಾಕಷ್ಟು ಕಥೆಗಳನ್ನು ಮಾಡಿದ್ದೆ. ಅದರಲ್ಲಿ ಯಾವ ಕಥೆ ಮಾಡಬೇಕು ಅಂತ ಹೇಳಿದ್ದು ಅವರೆ. ಜೊತೆಗೆ ಬಹಳ ವರ್ಷಗಳಿಂದ ವಿನೋದ್‍ ಪ್ರಭಾಕರ್ ಜೊತೆಗೆ ಚಿತ್ರ ಮಾಡುವ ಆಸೆ ಇತ್ತು. ಅದಕ್ಕೆ ಪೂರಕವಾಗಿ ಕಥೆ ಸಿಕ್ಕಿದೆ. ಈ ಚಿತ್ರಕ್ಕೆ ಅವರು ಬಹಳ ಅತ್ಯುತ್ತಮ ಆಯ್ಕೆ. ಇದು ಭೂಗತಲೋಕದ ಸಿನಿಮಾ.  ಭೂಗತ ಲೋಕದ ಜೊತೆಗೆ ಸಮಾಜ, ರಾಜಕೀಯ ಹೀಗೆ ಎಲ್ಲಾ ಆಯಾಮಗಳು ಇರುತ್ತವೆ. ಚಿತ್ರದ ಬಗ್ಗೆ ಈಗಲೇ ಹೆಚ್ಚು ಹೇಳುವುದು ಕಷ್ಟ. ನಿಜಜೀವನದ ಕಥೆ ಆಧರಿಸಿದ ಕಾಲ್ಪನಿಕ ಚಿತ್ರ. ಇದು ಯಾವುದೇ ವ್ಯಕ್ತಿಯ ಕುರಿತಾದ ಚಿತ್ರ ಅಲ್ಲ. ಇದರಲ್ಲಿ ಮನರಂಜನೆ ಇರುತ್ತದೆ. ಇಡೀ ಕುಟುಂಬ ನೋಡುವ ಚಿತ್ರ ಎಂದು ತಿಳಿಸಿದರು.

TAGGED:Balaramana DinagaluKM ChaitanyatitleVinod Prabhakarಕೆ.ಎಂ.ಚೈತನ್ಯಟೈಟಲ್ಬಲರಾಮನ ದಿನಗಳುವಿನೋದ್ ಪ್ರಭಾಕರ್
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

watermelon 1
Food

ಊಟ ಮಾಡಿದ ತಕ್ಷಣ ಕಲ್ಲಂಗಡಿ ತಿನ್ನಬಾರದು ಯಾಕೆ?

Public TV
By Public TV
2 minutes ago
Mangaluru Blast Case The Shariq cooker bomb capable of blowing up the bus FSL Investigation report 1
Court

ಮಧ್ಯ ವಯಸ್ಸಲ್ಲಿ ಶಾರಿಕ್‌ ಹೊರಗೆ ಬಂದ್ರೆ ಅಪಾಯ – ಶಿಕ್ಷೆ ಪ್ರಮಾಣ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲು NIA ಸಿದ್ಧತೆ

Public TV
By Public TV
13 minutes ago
Prostitution
Bengaluru City

ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ – ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ

Public TV
By Public TV
49 minutes ago
KN Rajanna
Bengaluru City

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ – ಮುಂದೆ ದಲಿತರು ಸಿಎಂ ಆಗ್ಬೇಕು: ರಾಜಣ್ಣ ಸ್ಫೋಟಕ ಹೇಳಿಕೆ

Public TV
By Public TV
1 hour ago
Vachanananda Swamiji Managuli Sangabasava Swamiji
Davanagere

ನಾನು ಪಂಚಮಸಾಲಿ ಪೀಠಕ್ಕೆ ಬರೋದು ಭಕ್ತರಿಗೆ ಬಿಟ್ಟ ವಿಚಾರ: ಮನಗುಳಿ ಸಂಗನಬಸವ ಶ್ರೀ

Public TV
By Public TV
1 hour ago
Nitesh Rane
Court

ಮಹಾ ಸಚಿವ ನಿತೇಶ್ ರಾಣೆಗೆ 1 ತಿಂಗಳು ಜೈಲು ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?