Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಬ್ಬ ಹಿಂದೂ ಆಗಿ ಸಾಯೋದಕ್ಕೆ ಹೆದರಿ ಬದುಕುವ ಜೀವ ನನ್ನದಲ್ಲ: ಸೂಲಿಬೆಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಒಬ್ಬ ಹಿಂದೂ ಆಗಿ ಸಾಯೋದಕ್ಕೆ ಹೆದರಿ ಬದುಕುವ ಜೀವ ನನ್ನದಲ್ಲ: ಸೂಲಿಬೆಲೆ

Bengaluru City

ಒಬ್ಬ ಹಿಂದೂ ಆಗಿ ಸಾಯೋದಕ್ಕೆ ಹೆದರಿ ಬದುಕುವ ಜೀವ ನನ್ನದಲ್ಲ: ಸೂಲಿಬೆಲೆ

Public TV
Last updated: January 17, 2020 4:13 pm
Public TV
Share
3 Min Read
sulibele 2
SHARE

ಬೆಂಗಳೂರು: ಒಬ್ಬ ಹಿಂದೂ ಆಗಿ ಸಾಯೋದಕ್ಕೆ ಹೆದರಿ ಬದುಕುವ ಜೀವ ನನ್ನದಲ್ಲ, ನಾವು ಕಾಳಿಯನ್ನು ಪೂಜೆ ಮಾಡುವವರು ಸಾವಿಗೆ ಹೆದರಲ್ಲ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರು ತಮ್ಮ ಮೇಲೆ ಕೊಲೆಯ ರೂಪಿಸಿದ ಸಂಚು ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಆರೋಪಿಗಳ ಎಲ್ಲಾ ಪ್ರಯತ್ನ ಕೂಡ ಶೇಕಡ 100ರಷ್ಟು ವ್ಯರ್ಥ ಪ್ರಯತ್ನ. ಒಬ್ಬ ಹಿಂದೂ ಆಗಿ ಸಾಯೋದಕ್ಕೆ ಹೆದರಿ ಬದುಕುವ ಜೀವ ನನ್ನದಲ್ಲ. ಕಾಳಿಯನ್ನು ಅಂದರೆ ಮೃತ್ಯು ದೇವತೆಯನ್ನು ಪೂಜೆ ಮಾಡಿ ಬಂದು ಕುಳಿತ ನಮಗೆ ಮೃತ್ಯವಿನ ಹೆದರಿಕೆ ಖಂಡಿತವಾಗಿಯೂ ಇಲ್ಲ. ಈ ರಾಷ್ಟ್ರವನ್ನು ಕಟ್ಟುವಂತ ಕೆಲಸವನ್ನು ನಾವು ಮಾಡುತ್ತೇವೆ. ಅವರು ಏನೇ ಮಾಡಿದರೂ ಬಗ್ಗುವ ಜೀವ ನಮ್ಮದಲ್ಲ ಎಂದು ಆರೋಪಿಗಳಿಗೆ ಹೇಳಲು ನಾನು ಇಚ್ಛಿಸುತ್ತೇನೆ ಅಂತ ಪ್ರತಿಕ್ರಯಿಸಿದರು.

chakravarti sulibele

ಸಿಎಎ ಪರ ಜನಜಾಗೃತಿ ವೇಳೆ ದೊಡ್ಡ ಗಾತ್ರದ ಕಲ್ಲು ಬಂದು ನನ್ನ ಮೇಲೆ ಬಿತ್ತು. ಇಷ್ಟೆಲ್ಲ ಜನರ ನಡುವೆ ಗುರಿಯಿಟ್ಟು ನನಗೆ ಹೊಡೆಯಲು ಅವರಿಗೆ ಸಾಧ್ಯವಾಯ್ತಲ್ಲ ಎನ್ನುವುದೇ ಆಶ್ಚರ್ಯಕರ ಸಂಗತಿ. ನನ್ನ ಪ್ರಕಾರ ಆರೋಪಿಗಳು ಮೊದಲೇ ತಯಾರಿ ನಡೆಸಿಕೊಂಡು ಬಂದಿದ್ದರು. ಆದರೆ ಅಂದು ನನಗೆ ಏನೂ ಮಾಡಲು ಆಗಲಿಲ್ಲ ಎಂದು ಕಲ್ಲು ಹೊಡೆದಿದ್ದಾರೆ. ಈ ಬಗ್ಗೆ ನಾನು ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್ ಅವರಿಗೆ ತಿಳಿಸಿದ್ದೆ. ಅವರು ನನಗೆ ಸಹಕರಿಸಿ ನನ್ನ ಮನೆ, ಕಚೇರಿಗೆ ಭದ್ರತೆ ಒದಗಿಸಿದ್ದರು. ಅವರಿಗೆ ಧನ್ಯವಾದ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.

sulibele 1

ಕೊಲ್ಲಬೇಕೆನ್ನುವ ಮಾನಸಿಕತೆ ಇರುವುದು ಕ್ರಿಮಿನಲ್ ಸಂಗತಿ. ಇಂತಹ ಮನಸ್ಥಿತಿ ಇರುವವರನ್ನು ನಿಷೇಧಿಸುವುದು ಖಂಡಿತವಾಗಿಯು ಅಗತ್ಯವಾಗಿದೆ. ಅವರನ್ನು ಇಲ್ಲಿ ಬೀಡುಬಿಡಲು ಅವಕಾಶ ನೀಡಬಾರದು. ಕರ್ನಾಟಕ ತುಂಬಾ ಶಾಂತಿಯುತವಾದ ಸುಂದರ ಜಾಗ. ಯಾವುದಕ್ಕೂ ನಾವು ನಮ್ಮ ರಾಜ್ಯವನ್ನು ಕ್ರಿಮಿನಲ್ ಮನಸ್ಥಿತಿ ಇರುವವರ ನಾಡಾಗಲು ಬಿಡಬಾರದು. ಕಳೆದ ಮೂರ್ನಾಲ್ಕು ದಿನಗಳಿಂದ ನಾನು ವರದಿಗಳನ್ನು ನೋಡುತ್ತಿದ್ದೇನೆ. ಈ ರೀತಿ ಕೃತ್ಯಗಳಿಗೆ ಮೈಸೂರು, ಮಂಗಳೂರು, ಉಡುಪಿ ಹೀಗೆ ರಾಜ್ಯದ ಹಲವು ನಗರಗಳನ್ನು ಚೆನ್ನಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ನನಗೆ ಅನಿಸುತ್ತಿದೆ. ಈ ಹೊಸ ಸರ್ಕಾರ ಈ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ ಅವರನ್ನು ಮಟ್ಟಹಾಕಬೇಕು. ಯಾವುದೇ ಕಾರಣಕ್ಕೂ ಅವರನ್ನು ಇಲ್ಲಿ ಬೀಡುಬಿಡಲು ಅವಕಾಶ ನೀಡಬಾರದು ಎಂದು ಸೂಲಿಬೆಲೆ ಸರ್ಕಾರಕ್ಕೆ ಮನವಿ ಮಾಡಿದರು.

CCB 7

ಇದು ಕೊಲೆಯ ಮಾನಸಿಕತೆ. ಪ್ರತಿಭಟನೆ ಎನ್ನುವುದು ಕೇವಲ ಪ್ರತಿಭಟನೆ ಅಷ್ಟೇ. ಆದರೆ ಅದನ್ನು ಕೊಲೆ ಮಾಡುವ ಮಟ್ಟಕ್ಕೆ ತೆಗೆದುಕೊಂಡು ಹೋಗೋದು ಒಂದು ಕೆಟ್ಟ ಪ್ರಯತ್ನ, ಹುಚ್ಚುತನ. ಈ ರೀತಿ ಪ್ರಯತ್ನವನ್ನು ಬುಡದಿಂದಲೇ ಚಿವುಟಿ ಹಾಕಬೇಕು. ನನ್ನ ಪ್ರಕಾರ ದೇಶವನ್ನು ತುಂಡರಿಸಿ ಆದರೂ ಅಧಿಕಾರ ಪಡೆಯಬೇಕು ಎಂದು ಆಲೋಚಿಸುವವರು ನೀಚರು. ಅಧಿಕಾರಕ್ಕಾಗಿ ಈ ರೀತಿ ಕೊಲೆ ಯತ್ನಕ್ಕೆ ಪ್ರಯತ್ನಿಸುವವರು ಕೊಲೆ ಮಾಡುವವರಿಗಿಂತ ನೀಚರು. ಈ ರೀತಿ ನೀಚ ಪ್ರಯತ್ನ ಮಾಡಬಾರದಿತ್ತು. ಆದರೆ ಇನ್ನಾದರೂ ಇವರೆಲ್ಲ ತಿದ್ದುಕೊಂಡು ರಾಷ್ಟ್ರದ ಕುರಿತು ಕೆಲಸ ಮಾಡಲು ಮುಂದಾದರೆ ಒಳ್ಳೆಯದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

sulibele

ನಾನು ಘಟನೆ ನಡೆದ ದಿನ ಸುಮಾರು 10:30ರ ಹೊತ್ತಿಗೆ ಟೌನ್‍ಹಾಲ್‍ಗೆ ಬಂದೆ. ಆದರೆ ಅಲ್ಲಿನ ಮೆಟ್ಟಿಲ ಬಳಿ ಹೋಗದೇ ನೆರೆದಿದ್ದ ಜನರ ನಡುವೆ ಕುಳಿತೆ. ನಾನು ಅಲ್ಲಿ ಕುಳಿತ 10ರಿಂದ 15 ನಿಮಿಷ ಆಸುಪಾಸಿಗೆ ನನ್ನ ಮೇಲೆ ಕಲ್ಲು ಬಿತ್ತು. ಸುಮಾರು 50 ಅಡಿ ಅಂತರದಿಂದ ಕಲ್ಲು ಬಿದ್ದಿತ್ತು. ಆರೋಪಿಗಳು ನಮ್ಮವರ ನಡುವೆ ಇದ್ದುಕೊಂಡು ಪ್ಲಾನ್ ಮಾಡಿ ಈ ರೀತಿ ಮಾಡಿದ್ದಾರೆ. ಆದರೆ ಕೊಲ್ಲುವವರಿಗಿಂತ ಕಾಯುವವನು ದೊಡ್ಡವನು. ಇಂತಹ ನೂರಾರು ಎಸ್‍ಡಿಪಿಐ(ಸೊಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ)ಗಳನ್ನ ಭಾರತ ನೋಡಿದೆ. ಅವರನ್ನೆಲ್ಲಾ ಮೆಟ್ಟಿ ನಿಲ್ಲುವ ಶಕ್ತಿ ಭಾರತಕ್ಕಿದೆ ಎಂದು ಸೂಲಿಬೆಲೆ ಹೇಳಿದರು.

TAGGED:bengaluruCAA AwarenessChakravarti SulibelePublic TVSDPITownhallಚಕ್ರವರ್ತಿ ಸೂಲಿಬೆಲೆಟೌನ್‍ಹಾಲ್ಪಬ್ಲಿಕ್ ಟಿವಿಬೆಂಗಳೂರುಸಿಎಎ ಜಾಗೃತಿ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

03 8
Big Bulletin

ಬಿಗ್‌ ಬುಲೆಟಿನ್‌ 14 February 2026 ಭಾಗ-3

Public TV
By Public TV
26 seconds ago
MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
11 minutes ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
13 minutes ago
DK Shivakumar 2
Davanagere

ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ: ಡಿಕೆಶಿ

Public TV
By Public TV
34 minutes ago
India vs Pakistan shake hands row
Cricket

ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Public TV
By Public TV
1 hour ago
Noida Suicide
Crime

Valentine’s Day Tragedy – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?