Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸದಾನಂದ ಗೌಡ್ರ ವಿರುದ್ಧ ಸೂಲಿಬೆಲೆ ಆಕ್ರೋಶ

Public TV
Last updated: October 2, 2019 3:00 pm
Public TV
Share
3 Min Read
GOWDA SULIBELE
SHARE

ಬೆಂಗಳೂರು: ಇತ್ತೀಚೆಗಷ್ಟೇ ಮೋದಿ ಸೇರಿದಂತೆ ಬಿಜೆಪಿ ಸಂಸದರ ವಿರುದ್ಧ ಅಸಮಾಧಾನ ಹೊರ ಹಾಕಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ ಇದೀಗ ಅವರು ಕೇಂದ್ರ ಸಚಿವ ಡಿವಿ ಸದಾನಂದ ಗೌಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವಾಹ ಪರಿಹಾರದ ಬಗ್ಗೆ ಇಲ್ಲಸಲ್ಲದ ಕಥೆ ಹೇಳಿ ಜನರ ದಾರಿ ತಪ್ಪಿಸುವ ಕೆಲಸ ಮಾಡುವವರ ಬಗ್ಗೆ ಕನಿಕರವಿದೆ ಎಂದು ಸದಾನಂದ ಗೌಡರು ಟ್ವೀಟ್ ಮಾಡಿದ್ದರು. ಈ ಟ್ವೀಟ್‍ಗೆ ಇವರು ಈಗ ಬಂದರು ಎಂದು ರಿಟ್ವೀಟ್ ಮಾಡುವ ಮೂಲಕ ಗೌಡರಿಗೆ ಸೂಲಿಬೆಲೆ ಟಾಂಗ್ ಕೊಟ್ಟಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಕ್ಕೆ ಬರಬೇಕಾದ ಪರಿಹಾರದ ಬಗ್ಗೆ ಇಲ್ಲ ಸಲ್ಲದ ಕಥೆ ಹೇಳಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿರುವವರ ಬಗ್ಗೆ ನಮಗೆ ಕನಿಕರವಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಆಗಬೇಕಾದ ತಕ್ಷಣ ಪರಿಹಾರ,ಮಧ್ಯಂತರ ಪರಿಹಾರ ಮತ್ತು ಧೀರ್ಘ ಕಾಲೀನ ಪರಿಹಾರದ ಬಗ್ಗೆ ಬೇಕಾದ ವರದಿಗಳನ್ನು ತಯಾರಿಸಿರುವ ಬಗ್ಗೆ ಕೇಂದ್ರ ಹಣಕಾಸು1/4

— Sadananda Gowda (@DVSadanandGowda) October 1, 2019

ಗೌಡರ ಟ್ವೀಟ್‍ನಲ್ಲೇನಿದೆ..?
ಪ್ರವಾಹ ಪೀಡಿತ ಪ್ರದೇಶಕ್ಕೆ ಬರಬೇಕಾದ ಪರಿಹಾರದ ಬಗ್ಗೆ ಇಲ್ಲ ಸಲ್ಲದ ಕಥೆ ಹೇಳಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿರುವವರ ಬಗ್ಗೆ ನಮಗೆ ಕನಿಕರವಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಆಗಬೇಕಾದ ತಕ್ಷಣ ಪರಿಹಾರ, ಮಧ್ಯಂತರ ಪರಿಹಾರ ಮತ್ತು ದೀರ್ಘ ಕಾಲೀನ ಪರಿಹಾರದ ಬಗ್ಗೆ ಬೇಕಾದ ವರದಿಗಳನ್ನು ತಯಾರಿಸಲಾಗಿದೆ.

ಸೂಲಿಬೆಲೆ ಟ್ವೀಟ್..?
ಲಾಲ್! ಇವರು ಈಗ ಬಂದರು.. ನೊಂದಿರುವ ಉತ್ತರ ಕರ್ನಾಟಕದ ಜನರನ್ನು ದಾರಿ ತಪ್ಪಿಸುವವರು ಎನ್ನುವಷ್ಟು ಧಾಷ್ಟ್ರ್ಯ ತೋರಿರುವ ನಿಮ್ಮ ಬಗ್ಗೆ ನಾಡಿಗೆ ಕನಿಕರವಿದೆ. ನಿಮ್ಮ ಮಂತ್ರಿಗಿರಿ ಜನರ ಭಿಕ್ಷೆ ಎನ್ನುವುದನ್ನು ಮರೆಯಬೇಡಿ. ಪ್ರವಾಹ ಕಳೆದು ಜನ ಬದುಕು ಕಟ್ಟಿಕೊಳ್ಳುವ ಕಾಲಕ್ಕೂ ಬರದ ಪರಿಹಾರ ಯಾವ ಪುರುಷಾರ್ಥಕ್ಕೆ ಎಂದು ಡಿವಿ ಸದಾನಂದ ಗೌಡರನ್ನು ಪ್ರಶ್ನಿಸಿದ್ದಾರೆ.

Lol! This man came now. @DVSadanandGowda ರೆ, ನೊಂದಿರುವ ಉತ್ತರ ಕರ್ನಾಟಕದ ಜನರನ್ನು ದಾರಿ ತಪ್ಪಿಸುವವರು ಎನ್ನುವಷ್ಟು ಧಾರ್ಷ್ಟ್ಯ ತೋರಿರುವ ನಿಮ್ಮ ಬಗ್ಗೆ ನಾಡಿಗೇ ಕನಿಕರವಿದೆ. ನಿಮ್ಮ ಮಂತ್ರಿಗಿರಿ ಜನರ ಭಿಕ್ಷೆ ಎನ್ನುವುದನ್ನು ಮರೆಯಬೇಡಿ. ಪ್ರವಾಹ ಕಳೆದು ಜನ ಬದುಕು ಕಟ್ಟಿಕೊಳ್ಳುವ ಕಾಲಕ್ಕೂ ಬರದ ಪರಿಹಾರ ಯಾವ ಪುರುಷಾರ್ಥಕ್ಕೆ? https://t.co/vykCBoDDn5

— Chakravarty Sulibele (@astitvam) October 2, 2019

ಇತ್ತೀಚೆಗಷ್ಟೇ ತಮ್ಮ ಯುವಲೈವ್ ವೆಬ್‍ಸೈಟಿನಲ್ಲಿ ಬರಹ ಪ್ರಕಟಿಸಿರುವ ಸೂಲಿಬೆಲೆ, ನಿಜ ಹೇಳಬೇಕೆಂದರೆ ಪ್ರವಾಹದ ನಂತರವೇ ಬೆಂಗಳೂರಿನ ಸಂಸದ ಅನಂತ್ ಕುಮಾರ್ ಅವರ ಅನುಪಸ್ಥಿತಿ ಎದ್ದು ಕಾಣುತ್ತಿರುವುದು. ಕೇಂದ್ರ ಸರ್ಕಾರದಲ್ಲಿ ಕರ್ನಾಟಕದ ದನಿಯನ್ನು ಪ್ರಭಾವಿಯಾಗಿ ಮಂಡಿಸಬಲ್ಲ ಸಂಸದರೇ ಇಲ್ಲವೇನೋ ಎನಿಸುತ್ತದೆ ಬೇಸರ ವ್ಯಕ್ತಪಡಿಸಿದ್ದರು.

ಸೆ.30 ರಂದು ಈ ಸಂಬಂಧ ತಮ್ಮ ಯುವಲೈವ್ ವೆಬ್‍ಸೈಟಿನಲ್ಲಿ ಬರಹ ಪ್ರಕಟಿಸಿರುವ ಅವರು, ನಿಜ ಹೇಳಬೇಕೆಂದರೆ ಪ್ರವಾಹದ ನಂತರವೇ ಬೆಂಗಳೂರಿನ ಸಂಸದ ಅನಂತ್ ಕುಮಾರ್ ಅವರ ಅನುಪಸ್ಥಿತಿ ಎದ್ದು ಕಾಣುತ್ತಿರುವುದು. ಕೇಂದ್ರ ಸರ್ಕಾರದಲ್ಲಿ ಕರ್ನಾಟಕದ ದನಿಯನ್ನು ಪ್ರಭಾವಿಯಾಗಿ ಮಂಡಿಸಬಲ್ಲ ಸಂಸದರೇ ಇಲ್ಲವೇನೋ ಎನಿಸುತ್ತದೆ ಬೇಸರ ವ್ಯಕ್ತಪಡಿಸಿದ್ದರು.

blg ramadhurga flood

ಕರ್ನಾಟಕದ ಒಳಿತಿಗಾಗಿ ಕೇಂದ್ರದೊಂದಿಗೆ ಗುದ್ದಾಡಿ ಬೇಕಾದ್ದನ್ನು ಪಡೆದುಕೊಂಡು ಬರಬಲ್ಲ ಸಾಮರ್ಥ್ಯ ಯಾವ ಸಂಸದರಿಗೂ ಇಲ್ಲವಲ್ಲ ಎಂಬುದೇ ದುಃಖದ ಸಂಗತಿ. ಮತ್ತು ಇವರು ಒಬ್ಬಿಬ್ಬರಲ್ಲ, ಬರೋಬ್ಬರಿ 25 ಜನ. ಇನ್ನುಳಿದ ಮೂವರಲ್ಲಿ ಒಬ್ಬರು ಈಗ ತಾನೇ ಸಂಸತ್ತು ಪ್ರವೇಶಿಸಿರುವ ಸುಮಲತಾ ಆದರೆ ಪ್ರಜ್ವಲ್ ಅವರದ್ದೂ ಹೆಚ್ಚು ಕಡಿಮೆ ಅದೇ ಸ್ಥಾನ. ಇವರುಗಳಿಗೆ ಸಂಸತ್ತಿನ ಕಾರ್ಯವೈಖರಿಯ ಅರಿವಾಗುವುದರೊಳಗೆ ಅದರ ಕಾರ್ಯ ಅವಧಿ ಮುಗಿದು ಹೋಗಿರುತ್ತದೆ. ಕಾಂಗ್ರೆಸ್ಸಿನ ಒಬ್ಬೇ ಒಬ್ಬ ಸಂಸದ ಅಣ್ಣನನ್ನು ಬಿಡಿಸಿಕೊಂಡು ಬರುವುದರಲ್ಲಿ ತಿಪ್ಪರಲಾಗ ಹಾಕುತ್ತಿದ್ದಾರೆ. ಹೀಗಾಗಿ ಕರ್ನಾಟಕದ ಪರವಾಗಿ, ಕನ್ನಡದ ಪರವಾಗಿ ಸಮರ್ಥವಾಗಿ ದನಿ ಎತ್ತಬಲ್ಲವರೇ ಇಲ್ಲವಾಗಿಬಿಟ್ಟಿದ್ದಾರೆ ಎಂದಿದ್ದಾರೆ.

ANANTH

ಅನಂತ್‍ಕುಮಾರ್ ಇದ್ದಾಗ ಕೇಂದ್ರದ ಇತರೆ ಮಂತ್ರಿಗಳೊಂದಿಗೆ ಅವರು ಬೆಳೆಸಿಕೊಂಡಿದ್ದ ಸಂಬಂಧ ಅವರ ಮಾತಿಗೆ ಗೌರವ ತಂದುಕೊಡುವಂತಿತ್ತು. ಅವರಷ್ಟೇ ಬಾರಿ ಸಂಸದರಾಗಿದ್ದರೂ ಅಂಥದ್ದೊಂದು ಬಾಂಧವ್ಯವನ್ನೇ ಬೆಳೆಸಿಕೊಳ್ಳದ ಅನೇಕರನ್ನು ಕಂಡಾಗ ಸಂಕಟವೆನಿಸುತ್ತದೆ. ಕರ್ನಾಟಕದಿಂದಲೇ ಮಂತ್ರಿಗಳಾದವರು ಎಷ್ಟೋ ಜನರಿದ್ದಾರೆ. ಆದರೆ ಪ್ರತ್ಯಕ್ಷ ಕೇಂದ್ರದಲ್ಲಿ ಪ್ರಭಾವ ಬೀರುವ ವಿಚಾರ ಬಂದಾಗ ಕೆಲಸಕ್ಕೆ ಬಾರದವರಾಗಿ ಬಿಡುತ್ತಾರಲ್ಲಾ ಎಂಬುದೇ ನೋವಿನ ಸಂಗತಿ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದರು.

ನಮ್ಮ ಸಂಸದರು ತಮಿಳುನಾಡಿನಿಂದ, ಕೇರಳದ ಸಂಸದರಿಂದ ಕಲಿಯುವುದು ಸಾಕಷ್ಟಿದೆ. ಅವರು ಹಠಕ್ಕೆ ಬಿದ್ದಾದರೂ ಕೊನೆಗೆ ರಾಜಿನಾಮೆ ಕೊಟ್ಟಾದರೂ ತಮ್ಮ ರಾಜ್ಯದ ಹಿತಾಸಕ್ತಿ ಉಳಿಸಿಕೊಳ್ಳಲು ಕೇಂದ್ರದ ಸಹಕಾರವನ್ನು ತರುತ್ತಾರೆ. ನಾಡಿನ ಗೌರವವನ್ನು ರಾಷ್ಟ್ರಮಟ್ಟದಲ್ಲಿ ಬಲಿಕೊಡಲು ಅವರೆಂದಿಗೂ ಸಿದ್ಧರಾಗುವುದಿಲ್ಲ. ಮೋದಿಯವರ ಪ್ರತಿಯೊಂದು ನಡೆಯಲ್ಲಿಯೂ ಭವಿಷ್ಯದ ದೃಷ್ಟಿಕೋನ ಇದ್ದೇ ಇರುತ್ತದೆ ಎಂಬುದನ್ನು ನಂಬಿಕೊಂಡಿರುವ ಅನೇಕರಿಗೆ ಈ ನಿರ್ಲಕ್ಷ್ಯದ ಹಿಂದಿನ ದೃಷ್ಟಿ ಖಂಡಿತ ಅರಿವಾಗುತ್ತಿಲ್ಲ. ಗೊತ್ತಿದ್ದವರು ತಿಳಿಸಿಕೊಡಬೇಕು. ಒಂದೋ ಕರ್ನಾಟಕದ ಜನತೆಗೆ, ಇಲ್ಲವೇ ಸ್ವತಃ ಮೋದಿಗೆ ಎಂದು ನೇರವಾಗಿ ಬರೆದು ಚಾಟಿ ಬೀಸಿದ್ದಾರೆ.

sulibele 2

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚಕ್ರವರ್ತಿ ಸೂಲಿಬೆಲೆಯವರು ನರೇಂದ್ರ ಮೋದಿ ಅವರ ಪರವಾಗಿ ರಾಜ್ಯವಾಪಿ ಪ್ರಚಾರ ನಡೆಸಿದ್ದರು. ಈ ಸಂದರ್ಭದಲ್ಲಿ ಚುನಾವಣೆ ಹತ್ತಿರ ಬಂದಾಗ ಸಮಸ್ಯೆ ಇದೆ ಎಂದು ಜನಪ್ರತಿನಿಧಿಗಳ ವಿರುದ್ಧ ಪ್ರತಿಭಟನೆ ಮಾಡುವುದಲ್ಲ. ಮತವನ್ನು ಚಲಾಯಿಸಿ ಮೌನವಾಗಿ ಕುಳಿತುಕೊಳ್ಳುವುದಲ್ಲ. ಆರಂಭದಿಂದಲೇ ಸಮಸ್ಯೆಯ ಬಗ್ಗೆ ಒತ್ತಡ ಹೇರಿ ಜನಪ್ರತಿನಿಧಿಗಳಿಂದ ಕೆಲಸ ಮಾಡಿಸಿಕೊಳ್ಳಬೇಕು ಎಂದು ಹೇಳಿದ್ದರು.

TAGGED:bengaluruchakravarthi sulibelePublic TVsadananda gowdatweet. flood relief fundಚಕ್ರವರ್ತಿ ಸೂಲಿಬೆಲೆಟ್ವೀಟ್ನೆರೆಪರಿಹಾರಪಬ್ಲಿಕ್ ಟಿವಿಬೆಂಗಳೂರುಸದಾನಂದ ಗೌಡ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

nanda kishore rowdy sheeter rajesh
ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿ ಕಿಡ್ನ್ಯಾಪ್ – ನಿರ್ದೇಶಕ ನಂದಕಿಶೋರ್‌ಗೆ ಹಣ ಕೊಡಿಸಿದ್ದ ರೌಡಿಶೀಟರ್‌
Bengaluru City Cinema Crime Latest Sandalwood Top Stories
PAVITHRA GOWDA 2
ಎ1 ಆರೋಪಿ ಪವಿತ್ರಾ ಗೌಡಗೆ ಮತ್ತೆ ಶಾಕ್ – ಜಾಮೀನು ಅರ್ಜಿ ವಜಾ
Bengaluru City Cinema Court Latest Main Post Sandalwood
Chikkanna Marriage
ಕಾಮಿಡಿ ಸ್ಟಾರ್‌ಗೆ ಕಂಕಣ ಭಾಗ್ಯ – ಚಿಕ್ಕಣ್ಣನ ಬದುಕಿಗೆ ಮನಮೆಚ್ಚಿದ ಹುಡುಗಿ
Cinema Latest Sandalwood Top Stories
Sudeep 02
ಅಭಿಮಾನಿಗಳಿಗೆ ಬರ್ತ್‌ಡೇ ಗಿಫ್ಟ್‌ – ಕಿಚ್ಚನ ಹೊಸ ಚಿತ್ರಕ್ಕೆ ಟೈಟಲ್‌ ಫಿಕ್ಸ್‌
Bengaluru City Cinema Latest Sandalwood Top Stories
Darshan Sudeep
`ತಿಪ್ಪರ್‌ಲಾಗ ಹೊಡೆದ್ರೂ ನೀನು ಬೇಡ ನಿನ್ನ ಕುದುರೆ ಸಹವಾಸನೂ ಬೇಡʼ – ದರ್ಶನ್‌ಗೆ ಸುದೀಪ್‌ ಹೀಗಂದಿದ್ಯಾಕೆ?
Cinema Latest Sandalwood Top Stories

You Might Also Like

Hyderabad Police 1
Crime

ಹೈದರಾಬಾದ್‌ನಲ್ಲಿ ಕಿಡ್ನ್ಯಾಪ್‌ ಜಾಲ ಪತ್ತೆ – ಐವರು ಅರೆಸ್ಟ್‌, 6 ಮಕ್ಕಳ ರಕ್ಷಣೆ

Public TV
By Public TV
2 minutes ago
Ambari Ganesha
Bengaluru Rural

ಆನೆಯ ಮೇಲೆ ಅಂಬಾರಿ ಕಂಡೆ.. ಅಂಬಾರಿಯೊಳಗೆ ಗಣೇಶನ ಕಂಡೆ..!

Public TV
By Public TV
38 minutes ago
Rastra Bhaktara Balaga Dharmasthala chalo 1
Districts

ಗಂಗೆ, ತುಂಗೆಯ ಜೊತೆ ಧರ್ಮಸ್ಥಳ ಯಾತ್ರೆ ಹೊರಟ ಈಶ್ವರಪ್ಪ

Public TV
By Public TV
1 hour ago
Bengaluru 1
Bengaluru City

ಇಂದಿನಿಂದ ಗ್ರೇಟರ್ ಬೆಂಗಳೂರು ಆಡಳಿತ ಜಾರಿ

Public TV
By Public TV
1 hour ago
Karnataka Bhovi Nigama
Bengaluru City

ಭೋವಿ ನಿಗಮದ ಅಕ್ರಮ; ಕಾಂಗ್ರೆಸ್ ಸರ್ಕಾರದ 60% ಕಮಿಷನ್‌ಗೆ ಸಾಕ್ಷಿ – ಜೆಡಿಎಸ್ ಕಿಡಿ

Public TV
By Public TV
1 hour ago
sameer jamaat e islami hind
Bengaluru City

ಸಮೀರ್ ಮುಸ್ಲಿಂ ಸಮುದಾಯದ ಪ್ರತಿನಿಧಿ ಅಲ್ಲ: ಜಮಾತ್ ಎ ಇಸ್ಲಾಮಿ ಹಿಂದ್ ಸಂಘಟನೆ ಸ್ಪಷ್ಟನೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?