Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಐದಾರು ಬಾರಿ ಗೆದ್ದರೂ ಐದು ಪೈಸೆ ಉಪಯೋಗವಿಲ್ಲ’: ಅಂಕಣದ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಹೇಳಿದ್ದು ಹೀಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘ಐದಾರು ಬಾರಿ ಗೆದ್ದರೂ ಐದು ಪೈಸೆ ಉಪಯೋಗವಿಲ್ಲ’: ಅಂಕಣದ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಹೇಳಿದ್ದು ಹೀಗೆ

Bengaluru City

‘ಐದಾರು ಬಾರಿ ಗೆದ್ದರೂ ಐದು ಪೈಸೆ ಉಪಯೋಗವಿಲ್ಲ’: ಅಂಕಣದ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಹೇಳಿದ್ದು ಹೀಗೆ

Public TV
Last updated: December 28, 2017 3:45 pm
Public TV
Share
3 Min Read
SULIBELE
SHARE

ಬೆಂಗಳೂರು: ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರನ್ನು ಉದ್ದೇಶಿಸಿ ನಾನು ಅಂಕಣ ಬರೆದಿಲ್ಲ. ಐದು ಆರು ಬಾರಿ ಗೆದ್ದು ಯಾವುದೇ ಅಭಿವೃದ್ಧಿ ಮಾಡದ ಕರ್ನಾಟಕದ ಎಲ್ಲ ಜನಪ್ರತಿನಿಧಿಗಳನ್ನು ಉದ್ದೇಶಿಸಿ ಈ ಅಂಕಣವನ್ನು ನಾನು ಬರೆದಿದ್ದೇನೆ ಎಂದು ವಾಗ್ಮಿ, ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

‘ಐದಾರು ಬಾರಿ ಗೆದ್ದರೂ ಐದು ಪೈಸೆ ಉಪಯೋಗವಿಲ್ಲ’ ಎನ್ನುವ ಶೀರ್ಷಿಕೆ ಅಡಿ ಚಕ್ರವರ್ತಿ ಸೂಲಿಬೆಲೆ ಅವರು ಪತ್ರಿಕೆಯೊಂದಕ್ಕೆ ಬುಧವಾರ ಅಂಕಣ ಬರೆದಿದ್ದರು. ಈ ಅಂಕಣದಲ್ಲಿ ಉತ್ತರ ಕರ್ನಾಟಕ ಪ್ರವಾಸೋದ್ಯಮದಲ್ಲಿ ಹಿಂದೆ ಉಳಿದಿದೆ ಯಾಕೆ ಸೇರಿದಂತೆ ಕರ್ನಾಟಕ ಪ್ರವಾಸದ್ಯೋಮ ಕ್ಷೇತ್ರ ಅಭಿವೃದ್ಧಿ ಯಾಕೆ ಆಗಿಲ್ಲ ಎನ್ನುವ ವಿಚಾರಗಳನ್ನು ಪ್ರಸ್ತಾಪ ಮಾಡಿ ಬರೆದಿದ್ದರು. ಈ ಅಂಕಣವನ್ನು ಅನಂತ್ ಕುಮಾರ್ ಹೆಗ್ಡೆ ಉದ್ದೇಶಿಸಿ ಬರೆಯಲಾಗಿದೆ ಎಂದು ಹೆಗ್ಡೆ ಅಭಿಮಾನಿಗಳು ಆರೋಪಿಸಿ ಸೂಲಿಬೆಲೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡುವ ವೇಳೆ ಅವರು ಈ ಮೇಲಿನಂತೆ ಹೇಳಿಕೆ ನೀಡಿದ್ದಾರೆ.

SULIBELE PTV 2

ಅನಂತಕುಮಾರ್ ಹೆಗಡೆಗೆ ಸಂಬಂಧಿಸಿ ನಾನು ಈ ಅಂಕಣ ಬರೆದಿಲ್ಲ. ಐದು ಆರು ಬಾರಿ ಗೆದ್ದ ಎಲ್ಲ ಜನಪ್ರತಿನಿಧಿಗಳಿಗೂ ಅನ್ವಯಿಸುತ್ತದೆ. ಇದು ಕರ್ನಾಟಕ ಅಭಿವೃದ್ಧಿ ಕುರಿತಂತೆ ಕಳೆದ 6 ವರ್ಷಗಳಿಂದ ನಾವು ನೋಡಿದ್ದೇವೆ. 10 ವರ್ಷಗಳಿಂದ ಇಡೀ ರಾಜ್ಯದ ಬೆಳವಣೆಗೆ ಚಟುವಟಿಕೆಯನ್ನು ನೋಡಿದ್ದೇವೆ. 10 ವರ್ಷಗಳಿಂದ ಹಲವು ಸಿಎಂ ಬಂದು ಹೋಗಿದ್ದಾರೆ. ಇದೆಲ್ಲವನ್ನೂ ನೋಡಿ ನೋಡಿ ನನಗೆ ಮಾತ್ರವಲ್ಲ ಅಭಿವೃದ್ಧಿ ಬಯಸುವ ಪ್ರತಿಯೊಬ್ಬರಿಗೂ ಅಸಮಾಧಾನವಾಗಿದೆ ಎಂದು ತಿಳಿಸಿದರು.

ಉತ್ತರ ಕನ್ನಡವನ್ನು ನೋಡಿದರೇ ಇಂದಿಗೂ ನನಗೆ ನೋವಾಗುತ್ತದೆ. ಅಭಿವೃದ್ಧಿ ಮಾಡದ, ವಿಕಾಸವಾದ ಇಲ್ಲದವರಿಗೆ ಗೌರವ ಕೊಡಲು ಸಾಧ್ಯವಿಲ್ಲ. ವಿಕಾಸವನ್ನು ಬಿಟ್ಟು ಎಲ್ಲವನ್ನೂ ಮಾತನಾಡುತ್ತಾರೆ. ನಾನು ಬರೆದ ಅಂಕಣದಿಂದ ಹೆಗ್ಡೆ ಅವರ ಅಭಿಮಾನಿಗಳು ಕೆರಳಿದ್ರೆ ಕೆರಳಲಿ ನನಗೆ ಸಂತೋಷ. ಈ ಮೂಲಕವಾದರೂ ಉತ್ತರ ಕನ್ನಡ ಅಭಿವೃದ್ಧಿಯಾಗಲಿ ಎಂದರು.

ANANTHKUMAR HEGDE 1 1

ನೀರಿರುವ ಬಾವಿಯಲ್ಲಿ ನೀರು ಸೇದಿ ಮನೆಗೆ ತೆಗೆದುಕೊಂಡು ಹೋಗುವುದಕ್ಕೆ ಸಚಿವ ಸ್ಥಾನ ಕೊಟ್ಟಿದ್ದಲ್ಲ. ನೀರು, ಸಂಪತ್ತನ್ನು ಸೃಷ್ಟಿಸಿಕೊಳ್ಳಲು ನರೇಂದ್ರ ಮೋದಿ ಅವರು ಸಚಿವ ಸ್ಥಾನ ಕೊಟ್ಟಿದ್ದಾರೆ. ನನಗೆ ಇತ್ತೀಚೆಗೆ ರಾಜಕೀಯ ನಾಯಕರ ಮೇಲೆ ನಿರೀಕ್ಷೆ ಕಳೆದು ಹೋಗಿದೆ. ಐದೈದು ಬಾರಿ ಶಾಸಕರಾಗಿ, ಸಂಸದರಾಗಿ ಆಯ್ಕೆಯಾದವರ ಕ್ಷೇತ್ರಗಳಿಗೆ ನಾನು ಹೋಗಿ ನೋಡಿದ್ದೇನೆ. ಬಹಳ ಬೇಸರವಾಗುತ್ತದೆ. ಜನರು ಯಾಕೆ ಇವರನ್ನು ಪ್ರತಿ ಬಾರಿ ವೋಟು ನೀಡಿ ಗೆಲ್ಲಿಸಬೇಕು? ಅಭಿವೃದ್ಧಿ, ವಿಕಾಸ ಮಾಡದೇ ಇರುವರಿಗೆ ಗೌರವ ಕೊಡುವುದಕ್ಕೆ ಸಾಧ್ಯವಿಲ್ಲ ಎಂದು ಸೂಲಿಬೆಲೆ ಬೇಸರ ವ್ಯಕ್ತಪಡಿಸಿದರು.

ನಾನು ನಿರಂತರವಾಗಿ ನಾನು ಗ್ರಾಮೀಣ ಅಭಿವೃದ್ಧಿ, ಹಣಕಾಸು ವಿಚಾರ, ಮದ್ಯ ನಿಷೇಧದ ಬಗ್ಗೆ ಬರೆದಿದ್ದೇನೆ. ಆದರೂ ಯಾವುದು ಬೆಳವಣಿಗೆ ಆಗಿಲ್ಲ. ಇತ್ತೀಚಿಗೆ ಟೂರಿಸಂ ಅಭಿವೃದ್ಧಿ ಬಗ್ಗೆ ಬರೆದಿದ್ದೇನೆ. ಇದು ಅಗತ್ಯವಾದ ಸಂಗತಿಯಾಗಿದೆ. ಉತ್ತರ ಕನ್ನಡದಲ್ಲಿ ಗೆದ್ದು ಬಂದ ಸಂಸದ, ಶಾಸಕರ ನಿರ್ಲಕ್ಷ್ಯದಿಂದಾಗಿ ಪ್ರವಾಸೋದ್ಯಮ ಇನ್ನೂ ಅಭಿವೃದ್ಧಿಯಾಗಿಲ್ಲ. ಈ ವಿಚಾರವನ್ನು ಗಮನದಲ್ಲಿ ಇಟ್ಟುಕೊಂಡು ಬರೆದಿದ್ದೇನೆ. ಬರೀ ಅನಂತಕುಮಾರ್ ಹೆಗಡೆ ಒಬ್ಬರ ಬಗ್ಗೆ ಮಾತ್ರ ನಾನು ಹೇಳಿದ್ದಲ್ಲ. ಅಲ್ಲಿ ಆಯ್ಕೆ ಆಗಿರುವ ಎಲ್ಲ ರಾಜಕೀಯ ನಾಯಕರಿಗೆ ಇದು ಅನ್ವಯಿಸುತ್ತದೆ ಎಂದು ಸ್ಪಷ್ಟವಾಗಿ ತಿಳಿಸಿದರು.

ಚುನಾವಣೆಯ ಸಂದರ್ಭದಲ್ಲಿ ಧರ್ಮ ಜಾತಿ ನೆಪವಾಗುತ್ತದೆ. ವಿಕಾಸದ ಬಗ್ಗೆ ಮಾತನಾಡುವುದಕ್ಕೆ ಬದಲು ಧರ್ಮದ ಬಗ್ಗೆ ಮಾತನಾಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು. ನಾನು ನಾಗರಿಕನಾಗಿ ಶಾಶ್ವತವಾಗಿ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತು ಕರ್ನಾಟಕದ ಅಭಿವೃದ್ಧಿಗೋಸ್ಕರ ನನ್ನ ಕೊಡುಗೆ ಎಷ್ಟು ಕೊಡಲು ಆಗುತ್ತದೋ ಅಷ್ಟನ್ನು ನೀಡಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

https://www.youtube.com/watch?v=W443FWFfOAk

https://www.youtube.com/watch?v=Ph2IOPiR9vQ

SULIBELE PTV 3

SULIBELE PTV 1

TAGGED:ananth kumar hegdeBangloreChakravarty SulibelePublic TVಅನಂತಕುಮಾರ್ ಹೆಗಡೆಚಕ್ರವರ್ತಿ ಸೂಲಿಬೆಲೆಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

sunny leone
ಮಥುರಾದಲ್ಲಿ ಸನ್ನಿ ಲಿಯೋನ್ ʻDJ Nightʼ ನ್ಯೂ ಇಯರ್ ಕಾರ್ಯಕ್ರಮ ರದ್ದು
Bollywood Cinema Latest National Top Stories
father movie team
ಭಾವುಕ ಪ್ರಪಂಚಕ್ಕೆ ಕರೆದೊಯ್ಯುವ ‘ಫಾದರ್’ ಥೀಮ್ ಸಾಂಗ್
Cinema Latest Sandalwood Top Stories
Toxic Nayanatara
ಟಾಕ್ಸಿಕ್ ಟೀಮ್‌ನಿಂದ ನಯನತಾರಾ ಪಾತ್ರದ ಫಸ್ಟ್ ಲುಕ್ ರಿಲೀಸ್
Cinema Latest Sandalwood Top Stories
New Year Album Music
ಹೊಸ ವರ್ಷಕ್ಕೆ ಹೊಸ ಸಂಗೀತ ಸ್ಪರ್ಶ: ನ್ಯೂ ಇಯರ್ ಆಲ್ಬಂ
Cinema Latest Sandalwood Top Stories

You Might Also Like

Dharmasthala Temple
Dakshina Kannada

ಬುರುಡೆ ಕೇಸ್‌| ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ನ್ಯಾಯಾಲಯಕ್ಕೆ ವಕಾಲತ್ತು ಸಲ್ಲಿಕೆ

Public TV
By Public TV
19 minutes ago
new zealand new year
Latest

ಅದ್ದೂರಿ ಪಟಾಕಿ ಪ್ರದರ್ಶನದೊಂದಿಗೆ 2026ಕ್ಕೆ ವೆಲ್‌ಕಮ್‌ ಹೇಳಿದ ನ್ಯೂಜಿಲೆಂಡ್

Public TV
By Public TV
37 minutes ago
New Year 2026 Kiribati Becomes 1st Place In The World To Enter New Year
Latest

ಹೊಸ ವರ್ಷವನ್ನು ಸ್ವಾಗತಿಸಿದ ಕಿರಿಬಾಟಿ

Public TV
By Public TV
1 hour ago
pyaar
Latest

ಒಂದೇ ಮಾತಲ್ಲಿ `ಪ್ಯಾರ್’ ಅಂತಿದ್ದಾರೆ ಸಂಗೀತ ಪ್ರಿಯರು

Public TV
By Public TV
1 hour ago
Rajasthan Explosives Seize 1
Crime

ಹೊಸ ವರ್ಷಕ್ಕೂ ಮುನ್ನ ಭರ್ಜರಿ ಬೇಟೆ – 150 ಕೆಜಿ ಸ್ಫೋಟಕ, 200 ಬ್ಯಾಟರಿ, 1,100 ಮೀ ವೈರ್ ಸೀಜ್

Public TV
By Public TV
2 hours ago
R Ashoka 2
Bengaluru City

ಕೋಗಿಲು ಲೇಔಟ್ ತೆರವು ಪ್ರಕರಣ – ಪೌರತ್ವದ ಬಗ್ಗೆ NIA ತನಿಖೆ ಆಗಲಿ; ರಾಜ್ಯ ಸರ್ಕಾರಕ್ಕೆ ಬಿಜೆಪಿ ಆಗ್ರಹ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?