Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿಎಂ, ಡಿಸಿಎಂ ತಲೆದಂಡದ ಬದಲು ಜಾತಿಗಣತಿ ಅಡ್ಡ ಇಟ್ಟ ಎಐಸಿಸಿ: ಛಲವಾದಿ ಕಿಡಿ

Public TV
Last updated: June 11, 2025 8:49 pm
Public TV
Share
2 Min Read
Chalavadi narayanaswamy
SHARE

– ಕಾಂಗ್ರೆಸ್ ದಿನಕ್ಕೊಂದಲ್ಲ, ಒಂದೇ ದಿನಕ್ಕೆ 3 ಹಗರಣ ಮಾಡ್ತಿದೆ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಸಾವಿಗೆ ಸಂಬಂಧಿಸಿದಂತೆ ಎಐಸಿಸಿ ಸಿಎಂ, ಡಿಸಿಎಂ ಅವರ ತಲೆದಂಡ ಮಾಡುತ್ತದೆ ಎಂಬ ನಿರೀಕ್ಷೆಯಲ್ಲಿದ್ದೆವು. ಆದರೆ ಜಾತಿಗಣತಿ ಅಡ್ಡ ಇಟ್ಟು ಜನರ ಗಮನ ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ (BJP) ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ (Congress) ಸರ್ಕಾರವು ಆರ್‌ಸಿಬಿ ಗೆಲುವಿನ ಪ್ರಯೋಜನ ಪಡೆಯಲು ಪಂದ್ಯ ಗೆಲ್ಲುವ ಮೊದಲೇ ಸಂಭ್ರಮಾಚರಣೆಗೆ ಪ್ಲ್ಯಾನ್‌ ಮಾಡಿತ್ತು. ಬಳಿಕ ಸಂಭ್ರಮ ಆಚರಿಸಲು ಹೋಗಿ 11 ಜನರ ಸಾವಿಗೆ ಕಾರಣವಾಯಿತು. ಇದೀಗ ಈ ಘಟನೆ ಇಡೀ ದೇಶದಲ್ಲಿ ಸುದ್ದಿಯಾಗಿದೆ. ನೂರಾರು ಜನರು ಗಾಯಗೊಂಡ ಈ ದುರ್ಘಟನೆಯ ಬಗ್ಗೆ ಬಿಜೆಪಿ, ದುರಂತವನ್ನು ಎಳೆ ಎಳೆಯಾಗಿ ಬಿಡಿಸಿ ಖಂಡಿಸಿದೆ. ಈ ಹಿನ್ನೆಲೆ ಎಐಸಿಸಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳನ್ನು ದೆಹಲಿಗೆ ಕರೆಸಿಕೊಂಡಿದ್ದರು. ಇವರು ಮಾಡಿದ ಅಪರಾಧಕ್ಕೆ ಇವರಿಬ್ಬರ ತಲೆದಂಡವಾಗುತ್ತದೆ ಎಂದುಕೊಂಡಿದ್ದೆವು. ಅವರು ಜಾತಿಗಣತಿಯನ್ನು ಮುಂದಿಟ್ಟು ಜನರ ಗಮನ ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಬಿಜೆಪಿ ಯಾವುದೇ ಕಾರಣಕ್ಕೂ ಇವರ ವಿರುದ್ಧ ಹೋರಾಟ ನಿಲ್ಲಿಸುವುದಿಲ್ಲ, ಇವರಿಬ್ಬರೂ ಘಟನೆಯ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸುವವರೆಗೂ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ವಿಧಾನಸೌಧದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು KSCA, RCB : ಸಿದ್ದರಾಮಯ್ಯ

ಕಾಂಗ್ರೆಸ್ ಶಾಸಕರ ಮನೆ ಮೇಲೆ ಇಂದು ಇಡಿ ದಾಳಿಯಾಗಿದೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಹಣವನ್ನು ಕದ್ದು ತಿಂದಿದ್ದರು. ಶಾಸನ ಸಭೆಯಲ್ಲಿ ಮುಖ್ಯಮಂತ್ರಿಗಳು ಕೇವಲ 87 ಕೋಟಿ ರೂ. ಎಂದು ಒಪ್ಪಿಕೊಂಡಿದ್ದರು. ಭ್ರಷ್ಟಾಚಾರವನ್ನು ಒಪ್ಪಿಕೊಂಡ ನಂತರವೂ ಅಧಿಕಾರದಲ್ಲಿ ಮುಂದುವರೆದಿರುವುದು ನಾಚಿಕೆಗೇಡಿನ ಸಂಗತಿ ಎಂದು ವ್ಯಂಗ್ಯವಾಡಿದ್ದಾರೆ.

ಇ.ಡಿ ದಾಳಿಗೊಳಗಾದ ಜನನಾಯಕರು ಯರ‍್ಯಾರು? ಎಷ್ಟೆಷ್ಟು ಬಳಸಿದ್ದಾರೆ? ಎಂಬ ವಿವರ ಸಿಕ್ಕಿದೆ, ಈ ಪ್ರಕರಣದಲ್ಲಿ ಅಧಿಕಾರಿ ಚಂದ್ರಶೇಖರ್ ಮರಣ ಹೊಂದಿದ್ದು, ಇವರ ಸಾವಿನ ಬಗ್ಗೆ ಸರ್ಕಾರ ಒಂದು ದಿನವೂ ಪ್ರಸ್ತಾಪ ಮಾಡಿಲ್ಲ. ಯಾರೆಲ್ಲ ಈ ಅಪರಾಧದಲ್ಲಿ ಪಾಲ್ಗೊಂಡಿದ್ದಾರೋ ಅವರೆಲ್ಲರ ಸದಸ್ಯತ್ವವು ರದ್ದಾಗುತ್ತದೆ. ಸೋಮವಾರ ಇ.ಡಿ ಬಿಡುಗಡೆ ಮಾಡಿದ ಪತ್ರದಲ್ಲಿ ಮುಡಾದಲ್ಲಿ 400 ಕೋಟಿ ರೂ.ಗಳ ಆಸ್ತಿಯನ್ನು ವಶಪಡಿಸಿಕೊಂಡಿರುವ ಬಗ್ಗೆ ಉಲ್ಲೇಖಿಸಿದೆ. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರವನ್ನು ದೂರುತ್ತಿದ್ದಾರೆ. ಜನರ ಗಮನ ಬೇರೆಡೆಗೆ ಸೆಳೆಯಲು ಪ್ರಯತ್ನ ಮಾಡಬಾರದು. ಬಿಜೆಪಿ, ಈ ಕಾಲ್ತುಳಿತದ ಪ್ರಕರಣವನ್ನು ಬಿಡುವ ಪ್ರಶ್ನೆಯೇ ಇಲ್ಲ, ಸರ್ಕಾರವು ತಮ್ಮ ಭ್ರಷ್ಟಾಚಾರ ಮತ್ತು ಕಾಲ್ತುಳಿತದ ಪ್ರಕರಣವನ್ನು ಒಪ್ಪಿಕೊಂಡು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಸರ್ಕಾರವು ದಿನಕ್ಕೊಂದು ಹಗರಣವಲ್ಲ, ಒಂದೇ ದಿನಕ್ಕೆ ಮೂರು ಹಗರಣಗಳನ್ನು ಮಾಡುತ್ತಿದೆ. ಸರ್ಕಾರದಲ್ಲಿರುವವರು ಮುಖಭಂಗ, ಅವಮಾನವನ್ನೆಲ್ಲ ಗಾಳಿಗೆ ತೂರಿ, ಅಧಿಕಾರಕ್ಕೆ ಅಂಟಿಕೊಂಡಿದ್ದಾರೆ. ಸರ್ಕಾರ ಎಲ್ಲಾ ತರದ ತಪ್ಪುಗಳನ್ನು ಮಾಡಿ, ನಾಚಿಕೆ, ಮಾನ-ಮರ್ಯಾದೆ ಬಿಟ್ಟು ಏನೂ ಆಗಿಲ್ಲವೆಂದು ವರ್ತಿಸುತ್ತಿದೆ. ಇವರು ತಪ್ಪು ಮಾಡಿದ್ದಕ್ಕಾಗಿಯೇ ಇ.ಡಿ ಮತ್ತು ಸಿಬಿಐ ತನಿಖೆ ಮಾಡಲು ಬರೋದು? ಇವರು ತಪ್ಪು ಮಾಡಿಲ್ಲವೆಂದರೆ ತನಿಖಾ ಸಂಸ್ಥೆಗಳು ಏಕೆ ಬರುತ್ತವೆ? ಎಂದು ಪ್ರಶ್ನಿಸಿದ್ದಾರೆ.ಇದನ್ನೂ ಓದಿ: ಗಲಾಟೆಗೆ ಕೇಸ್ ಇಲ್ಲದೇ ರೌಡಿಶೀಟರ್ ಓಪನ್, ಕೊಲೆಗಳಿಗೆ ಅದೆಷ್ಟು ರೌಡಿಶೀಟರ್ ತೆರೆದಿದ್ದೀರಿ? – ರೇವಣ್ಣ ಕಿಡಿ

TAGGED:aiccbengalurubjpchalavadi narayanaswamyChinnaswamy Stampedecongressrcbಚಿನ್ನಸ್ವಾಮಿ ಸ್ಟೇಡಿಯಂಛಲವಾದಿ ನಾರಾಯಣಸ್ವಾಮಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

Arjun Janya
ಅರ್ಜುನ್ ಜನ್ಯ ನಿರ್ದೇಶನದ ಚಿತ್ರಕ್ಕೆ ಉಗಾಂಡ ಕಲಾವಿದರ ಮೆರಗು
8 minutes ago
Timmana Mottegalu 4
ತಿಮ್ಮನ ಮೊಟ್ಟೆಗಳು ಟ್ರೈಲರ್‌ಗೆ ಭಾರೀ ಮೆಚ್ಚುಗೆ
17 minutes ago
Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
17 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
19 hours ago

You Might Also Like

Rajasthan Youth Tea Selling 1
Latest

ಅತ್ತೆ ಮನೆ ಮುಂದೆ ಅಳಿಯನ ಟೀ ಅಂಗಡಿ – ಕೈಗೆ ಕೋಳ ಧರಿಸಿ ಚಹಾ ಮಾರಾಟ

Public TV
By Public TV
22 minutes ago
Nikhil Kumaraswamy 1 2
Bengaluru City

ಕೇಂದ್ರ ಜಾತಿಗಣತಿ ಮಾಡೋವಾಗ ರಾಜ್ಯ ಸರ್ಕಾರದಿಂದ ಜಾತಿಗಣತಿ ಬೇಡ: ನಿಖಿಲ್ ಕುಮಾರಸ್ವಾಮಿ

Public TV
By Public TV
25 minutes ago
Nikhil Kumaraswamy
Bengaluru City

ರಾಜ್ಯಕ್ಕೆ ಅನುದಾನದ ಕೊರತೆ ಆಗಿದ್ದರೆ ಪ್ರಧಾನಿಗಳ ಜೊತೆ ಸಿಎಂ ಮಾತಾಡಲಿ: ನಿಖಿಲ್ ಕುಮಾರಸ್ವಾಮಿ

Public TV
By Public TV
33 minutes ago
Ram Mohan Naidu
Latest

ಏರ್‌ ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್‌ಲೈನ್: ಸಚಿವ ರಾಮಮೋಹನ್ ನಾಯ್ಡು

Public TV
By Public TV
36 minutes ago
Payal Khatik 2
Latest

Plane Crash | ಇಂಜಿನಿಯರ್‌ ಆಗುವ ಕನಸು ಕಂಡಿದ್ದ ಆಟೋ ಚಾಲಕನ ಮಗಳ ದುರಂತ ಅಂತ್ಯ

Public TV
By Public TV
46 minutes ago
Harangi Dam
Districts

ಕೊಡಗಿನಲ್ಲಿ ಮಳೆ – ಹಾರಂಗಿ ಜಲಾಶಯದಿಂದ ಕಾವೇರಿ ನದಿಗೆ 4,000 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
51 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?