Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ, ಡಿಸಿಎಂ ತಲೆದಂಡದ ಬದಲು ಜಾತಿಗಣತಿ ಅಡ್ಡ ಇಟ್ಟ ಎಐಸಿಸಿ: ಛಲವಾದಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ, ಡಿಸಿಎಂ ತಲೆದಂಡದ ಬದಲು ಜಾತಿಗಣತಿ ಅಡ್ಡ ಇಟ್ಟ ಎಐಸಿಸಿ: ಛಲವಾದಿ ಕಿಡಿ

Bengaluru City

ಸಿಎಂ, ಡಿಸಿಎಂ ತಲೆದಂಡದ ಬದಲು ಜಾತಿಗಣತಿ ಅಡ್ಡ ಇಟ್ಟ ಎಐಸಿಸಿ: ಛಲವಾದಿ ಕಿಡಿ

Public TV
Last updated: June 11, 2025 8:49 pm
Public TV
Share
2 Min Read
Chalavadi narayanaswamy
SHARE

– ಕಾಂಗ್ರೆಸ್ ದಿನಕ್ಕೊಂದಲ್ಲ, ಒಂದೇ ದಿನಕ್ಕೆ 3 ಹಗರಣ ಮಾಡ್ತಿದೆ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಸಾವಿಗೆ ಸಂಬಂಧಿಸಿದಂತೆ ಎಐಸಿಸಿ ಸಿಎಂ, ಡಿಸಿಎಂ ಅವರ ತಲೆದಂಡ ಮಾಡುತ್ತದೆ ಎಂಬ ನಿರೀಕ್ಷೆಯಲ್ಲಿದ್ದೆವು. ಆದರೆ ಜಾತಿಗಣತಿ ಅಡ್ಡ ಇಟ್ಟು ಜನರ ಗಮನ ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ (BJP) ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ (Congress) ಸರ್ಕಾರವು ಆರ್‌ಸಿಬಿ ಗೆಲುವಿನ ಪ್ರಯೋಜನ ಪಡೆಯಲು ಪಂದ್ಯ ಗೆಲ್ಲುವ ಮೊದಲೇ ಸಂಭ್ರಮಾಚರಣೆಗೆ ಪ್ಲ್ಯಾನ್‌ ಮಾಡಿತ್ತು. ಬಳಿಕ ಸಂಭ್ರಮ ಆಚರಿಸಲು ಹೋಗಿ 11 ಜನರ ಸಾವಿಗೆ ಕಾರಣವಾಯಿತು. ಇದೀಗ ಈ ಘಟನೆ ಇಡೀ ದೇಶದಲ್ಲಿ ಸುದ್ದಿಯಾಗಿದೆ. ನೂರಾರು ಜನರು ಗಾಯಗೊಂಡ ಈ ದುರ್ಘಟನೆಯ ಬಗ್ಗೆ ಬಿಜೆಪಿ, ದುರಂತವನ್ನು ಎಳೆ ಎಳೆಯಾಗಿ ಬಿಡಿಸಿ ಖಂಡಿಸಿದೆ. ಈ ಹಿನ್ನೆಲೆ ಎಐಸಿಸಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳನ್ನು ದೆಹಲಿಗೆ ಕರೆಸಿಕೊಂಡಿದ್ದರು. ಇವರು ಮಾಡಿದ ಅಪರಾಧಕ್ಕೆ ಇವರಿಬ್ಬರ ತಲೆದಂಡವಾಗುತ್ತದೆ ಎಂದುಕೊಂಡಿದ್ದೆವು. ಅವರು ಜಾತಿಗಣತಿಯನ್ನು ಮುಂದಿಟ್ಟು ಜನರ ಗಮನ ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಬಿಜೆಪಿ ಯಾವುದೇ ಕಾರಣಕ್ಕೂ ಇವರ ವಿರುದ್ಧ ಹೋರಾಟ ನಿಲ್ಲಿಸುವುದಿಲ್ಲ, ಇವರಿಬ್ಬರೂ ಘಟನೆಯ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸುವವರೆಗೂ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ವಿಧಾನಸೌಧದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು KSCA, RCB : ಸಿದ್ದರಾಮಯ್ಯ

ಕಾಂಗ್ರೆಸ್ ಶಾಸಕರ ಮನೆ ಮೇಲೆ ಇಂದು ಇಡಿ ದಾಳಿಯಾಗಿದೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಹಣವನ್ನು ಕದ್ದು ತಿಂದಿದ್ದರು. ಶಾಸನ ಸಭೆಯಲ್ಲಿ ಮುಖ್ಯಮಂತ್ರಿಗಳು ಕೇವಲ 87 ಕೋಟಿ ರೂ. ಎಂದು ಒಪ್ಪಿಕೊಂಡಿದ್ದರು. ಭ್ರಷ್ಟಾಚಾರವನ್ನು ಒಪ್ಪಿಕೊಂಡ ನಂತರವೂ ಅಧಿಕಾರದಲ್ಲಿ ಮುಂದುವರೆದಿರುವುದು ನಾಚಿಕೆಗೇಡಿನ ಸಂಗತಿ ಎಂದು ವ್ಯಂಗ್ಯವಾಡಿದ್ದಾರೆ.

ಇ.ಡಿ ದಾಳಿಗೊಳಗಾದ ಜನನಾಯಕರು ಯರ‍್ಯಾರು? ಎಷ್ಟೆಷ್ಟು ಬಳಸಿದ್ದಾರೆ? ಎಂಬ ವಿವರ ಸಿಕ್ಕಿದೆ, ಈ ಪ್ರಕರಣದಲ್ಲಿ ಅಧಿಕಾರಿ ಚಂದ್ರಶೇಖರ್ ಮರಣ ಹೊಂದಿದ್ದು, ಇವರ ಸಾವಿನ ಬಗ್ಗೆ ಸರ್ಕಾರ ಒಂದು ದಿನವೂ ಪ್ರಸ್ತಾಪ ಮಾಡಿಲ್ಲ. ಯಾರೆಲ್ಲ ಈ ಅಪರಾಧದಲ್ಲಿ ಪಾಲ್ಗೊಂಡಿದ್ದಾರೋ ಅವರೆಲ್ಲರ ಸದಸ್ಯತ್ವವು ರದ್ದಾಗುತ್ತದೆ. ಸೋಮವಾರ ಇ.ಡಿ ಬಿಡುಗಡೆ ಮಾಡಿದ ಪತ್ರದಲ್ಲಿ ಮುಡಾದಲ್ಲಿ 400 ಕೋಟಿ ರೂ.ಗಳ ಆಸ್ತಿಯನ್ನು ವಶಪಡಿಸಿಕೊಂಡಿರುವ ಬಗ್ಗೆ ಉಲ್ಲೇಖಿಸಿದೆ. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರವನ್ನು ದೂರುತ್ತಿದ್ದಾರೆ. ಜನರ ಗಮನ ಬೇರೆಡೆಗೆ ಸೆಳೆಯಲು ಪ್ರಯತ್ನ ಮಾಡಬಾರದು. ಬಿಜೆಪಿ, ಈ ಕಾಲ್ತುಳಿತದ ಪ್ರಕರಣವನ್ನು ಬಿಡುವ ಪ್ರಶ್ನೆಯೇ ಇಲ್ಲ, ಸರ್ಕಾರವು ತಮ್ಮ ಭ್ರಷ್ಟಾಚಾರ ಮತ್ತು ಕಾಲ್ತುಳಿತದ ಪ್ರಕರಣವನ್ನು ಒಪ್ಪಿಕೊಂಡು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಸರ್ಕಾರವು ದಿನಕ್ಕೊಂದು ಹಗರಣವಲ್ಲ, ಒಂದೇ ದಿನಕ್ಕೆ ಮೂರು ಹಗರಣಗಳನ್ನು ಮಾಡುತ್ತಿದೆ. ಸರ್ಕಾರದಲ್ಲಿರುವವರು ಮುಖಭಂಗ, ಅವಮಾನವನ್ನೆಲ್ಲ ಗಾಳಿಗೆ ತೂರಿ, ಅಧಿಕಾರಕ್ಕೆ ಅಂಟಿಕೊಂಡಿದ್ದಾರೆ. ಸರ್ಕಾರ ಎಲ್ಲಾ ತರದ ತಪ್ಪುಗಳನ್ನು ಮಾಡಿ, ನಾಚಿಕೆ, ಮಾನ-ಮರ್ಯಾದೆ ಬಿಟ್ಟು ಏನೂ ಆಗಿಲ್ಲವೆಂದು ವರ್ತಿಸುತ್ತಿದೆ. ಇವರು ತಪ್ಪು ಮಾಡಿದ್ದಕ್ಕಾಗಿಯೇ ಇ.ಡಿ ಮತ್ತು ಸಿಬಿಐ ತನಿಖೆ ಮಾಡಲು ಬರೋದು? ಇವರು ತಪ್ಪು ಮಾಡಿಲ್ಲವೆಂದರೆ ತನಿಖಾ ಸಂಸ್ಥೆಗಳು ಏಕೆ ಬರುತ್ತವೆ? ಎಂದು ಪ್ರಶ್ನಿಸಿದ್ದಾರೆ.ಇದನ್ನೂ ಓದಿ: ಗಲಾಟೆಗೆ ಕೇಸ್ ಇಲ್ಲದೇ ರೌಡಿಶೀಟರ್ ಓಪನ್, ಕೊಲೆಗಳಿಗೆ ಅದೆಷ್ಟು ರೌಡಿಶೀಟರ್ ತೆರೆದಿದ್ದೀರಿ? – ರೇವಣ್ಣ ಕಿಡಿ

TAGGED:aiccbengalurubjpchalavadi narayanaswamyChinnaswamy Stampedecongressrcbಚಿನ್ನಸ್ವಾಮಿ ಸ್ಟೇಡಿಯಂಛಲವಾದಿ ನಾರಾಯಣಸ್ವಾಮಿಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
7 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
8 hours ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
8 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
8 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
8 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?