ಕೇಕ್ ಕತ್ತರಿಸಿದ ‘ಯಜಮಾನ’

Public TV
1 Min Read
DARSHAN cake copy

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಮುಂದಿನ ಬಹು ನಿರೀಕ್ಷಿತ ಚಿತ್ರ ‘ಯಜಮಾನ’ ಸಿನಿಮಾದ ಶೂಟಿಂಗ್ ಸೆಟ್ಟಲ್ಲೇ ಹೊಸ ವರ್ಷ ಆಚರಿಸಿದ್ದಾರೆ.

ನಗರದಲ್ಲಿ ‘ಯಜಮಾನ’ ಸಿನಿಮಾದ ಕೊನೆಯ ಹಾಡಿನ ಶೂಟಿಂಗ್ ನಡೆಯುತ್ತಿದ್ದು ಈ ವೇಳೆ ದರ್ಶನ್ ಯಜಮಾನ ಚಿತ್ರ ತಂಡದೊಂದಿಗೆ ಕೇಕ್ ಕಟ್ ಮಾಡುವುದರ ಮೂಲಕ ಹೊಸ ವರ್ಷವನ್ನ ಸ್ವಾಗತ ಮಾಡಿದರು.

ಈ ಹಿಂದೆ ಹಾಡಿನ ಶೂಟಿಂಗ್‍ಗಾಗಿ ಸ್ವೀಡನ್ ತೆರಳಿದ್ದ ದರ್ಶನ್, ಅಂಬಿ ನಿಧನದ ಸುದ್ದಿ ತಿಳಿಯುತ್ತಿದಂತೆ ಶೂಟಿಂಗ್ ಪ್ಯಾಕ್ ಅಪ್ ಮಾಡಿ ವಾಪಸ್ಸಾಗಿದ್ರು. ಹೀಗಾಗಿ ಬಾಕಿ ಇದ್ದ ಹಾಡಿನ ಶೂಟಿಂಗ್ ಬೆಂಗಳೂರಿನಲ್ಲಿ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗುತ್ತಿದೆ. ಭಟ್ರ ಸಾಹಿತ್ಯವಿರುವ `ಆಗೋಯ್ತು ಮರ್ಯಾದೆ ಸಸ್ತಾ ಮಾಲು’ ಪದಕ್ಕೆ ವಿ.ಹರಿಕೃಷ್ಯ ಸಂಗೀತ ನೀಡಿರೋ ಹಾಡಿನ ಚಿತ್ರೀಕರಣ ನಡೆಯುತ್ತಿದೆ. ಹರಿಕೃಷ್ಣ ಹಾಗೂ ಪಿ.ಕುಮಾರ್ ನಿರ್ದೇಶನದ ಯಜಮಾನ ಚಿತ್ರವನ್ನ ಶೈಲಜಾ ನಾಗ್ ನಿರ್ಮಿಸಿದ್ದು, ಬಿ. ಸುರೇಶ್ ಹಾಗೂ ಅವರ ಪತ್ನಿ ಶೈಲಜ ನಾಗ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸದ್ಯ ದರ್ಶನ್‍ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಹಾಗೂ ತಾನ್ಯ ಹೋಪ್ ಕಾಣಿಸಿಕೊಳ್ಳುತ್ತಿದ್ದಾರೆ.

ಇತ್ತ ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ಕೋರಿ ಟ್ವೀಟ್ ಮಾಡಿರುವ ದರ್ಶನ್, ಹೊಸ ವರ್ಷವೂ ನಿಮ್ಮ ಬಾಳಲ್ಲಿ ಹೊಸಬೆಳಕು ಮೂಡಿಸಿ ಸುಂದರ ಭವಿಷ್ಯದೆಡೆಗೆ ನಿಮ್ಮನ್ನು ಕರೆದೊಯ್ಯಲಿ. ನಾಡಿನ ಸಮಸ್ತ ಜನತೆಗೆ ನಿಮ್ಮ ದಾಸ ದರ್ಶನ್ ಕಡೆಯಿಂದ ಹೊಸ ಹುರುಪಿನಿಂದ ಕೂಡಿರುವ ಹೊಸ ವರ್ಷದ ಹಾರ್ದಿಕ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ. ಇತ್ತ ದರ್ಶನ್ ಪತ್ನಿ ಈ ಬಾರಿ ಕೊಂಚ ಭಿನ್ನವಾಗಿ ಹೊಸವರ್ಷದ ಶುಭಾಶಯ ತಿಳಿಸಿದ್ದು, ಹುಲಿಯೊಂದಿಗೆ ಕುಳಿರುತಿರುವ ತಮ್ಮ ಫೋಟೋ ಹಾಕಿ ವಿಶ್ ಮಾಡಿದ್ದಾರೆ.

 

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *