Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೆಡ್ಡು ಹೊಡೆದರೆ ಗೆದ್ದೇ ತೀರುವ ಹಠದ ಒಡೆಯ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸೆಡ್ಡು ಹೊಡೆದರೆ ಗೆದ್ದೇ ತೀರುವ ಹಠದ ಒಡೆಯ!

Bengaluru City

ಸೆಡ್ಡು ಹೊಡೆದರೆ ಗೆದ್ದೇ ತೀರುವ ಹಠದ ಒಡೆಯ!

Public TV
Last updated: December 12, 2019 5:50 pm
Public TV
Share
2 Min Read
odeya
SHARE

ದರ್ಶನ್ ಅಭಿಮಾನಿಗಳ ಪಾಲಿಗೆ ಹ್ಯಾಟ್ರಿಕ್ ಹಬ್ಬದಂತೆ ಬಿಂಬಿಸಲ್ಪಟ್ಟಿದ್ದ ಚಿತ್ರ ಒಡೆಯ. ಒಂದು ಪಕ್ಕಾ ಫ್ಯಾಮಿಲಿ ಕಂ ಮಾಸ್ ಸಬ್ಜೆಕ್ಟಿನೊಂದಿಗೆ ರೂಪುಗೊಂಡಿರೋ ಈ ಚಿತ್ರವೀಗ ಬಿಡುಗಡೆಯಾಗಿದೆ. ಸಂದೇಶ್ ಪ್ರೊಡಕ್ಷನ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಈ ಸಿನಿಮಾ ಶುರುವಾತಿನಿಂದಲೂ ಮೂಡಿಸಿದ್ದ ನಿರೀಕ್ಷೆ, ಕುತೂಹಲಗಳದ್ದೊಂದು ಚೆಂದದ ಹಾದಿ. ದರ್ಶನ್ ಯಾವುದೇ ಸಿನಿಮಾಗಳಲ್ಲಿ ಅಭಿನಯಿಸಿದರೂ ಕೂಡಾ ಇಂಥಾದ್ದೊಂದು ಕ್ರೇಜ್ ಹುಟ್ಟಿಕೊಳ್ಳೋದು ಅಪರೂಪದ ವಿದ್ಯಮಾನವೇನಲ್ಲ. ಆದರೆ, ಒಡೆಯನ ವಿಚಾರದಲ್ಲಿ ಅದರ ತೀವ್ರತೆ ತುಸು ಹೆಚ್ಚೇ ಇತ್ತು. ಅದೆಲ್ಲವೂ ತಣಿಯುವಂತೆ, ನಿರೀಕ್ಷೆಗೂ ಮೀರಿದ ಶೈಲಿಯಲ್ಲಿ ಈ ಸಿನಿಮಾವೀಗ ಪ್ರೇಕ್ಷಕರನ್ನು ಎದುರುಗೊಂಡಿದೆ.

Odeya Main

ಈಗಾಗಲೇ ದರ್ಶನ್ ಅವರ ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿ ಸೈ ಅನ್ನಿಸಿಕೊಂಡಿದ್ದ ಎಂ.ಡಿ ಶ್ರೀಧರ್ ನಿರ್ದೇಶನ, ಈ ಹಿಂದೆಯೇ ಎರಡು ಯಶಸ್ವೀ ಚಿತ್ರಗಳನ್ನು ದರ್ಶನ್‍ರೊಂದಿಗೆ ಕೊಡಮಾಡೊರೋ ಸಂದೇಶ್ ಪ್ರೊಡಕ್ಷನ್ ಬ್ಯಾನರ್‍ನ ನಿರ್ಮಾಣ… ಇದೆಲ್ಲದರೊಂದಿಗೆ ಮತ್ತೊಂದು ಮಹಾ ಗೆಲುವು ದಕ್ಕಿಸಿಕೊಳ್ಳುವ ಆವೇಗದೊಂದಿಗೇ ಈ ಸಿನಿಮಾ ಸಾಗಿ ಬಂದಿತ್ತು. ಒಂದರೆ ಕ್ಷಣವೂ ಅತ್ತಿತ್ತ ಕದಲದಂಥಾ ಕ್ಯೂರಿಯಾಸಿಟಿ, ಸದಾ ಅಂತರ್ಗತ ಒರತೆಯಂತೆ ಫ್ಯಾಮಿಲಿ ಸೆಂಟಿಮೆಂಟಿನ ಪಸೆಯನ್ನು ಕಾಪಾಡಿಕೊಂಡು ಸಾಗುವ ಗಟ್ಟಿ ಕಥೆ ಮತ್ತು ಇದೆಲ್ಲದರ ಕೇಂದ್ರ ಬಿಂದುವಾಗಿ ಅಬ್ಬರಿಸೋ ಗಜೇಂದ್ರನ ಪಾತ್ರಗಳೆಲ್ಲವೂ ಸೇರಿ ಒಡೆಯ ಚಿತ್ರವನ್ನು ಬೇರೆಯದ್ದೇ ಮಟ್ಟಕ್ಕೇರಿಸಿ ಬಿಟ್ಟಿವೆ.

Odeya

ಇಲ್ಲಿನ ಕಥೆಯ ಕೇಂದ್ರಬಿಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿರ್ವಹಿಸಿರುವ ಗಜೇಂದ್ರನ ಪಾತ್ರ. ಗಜೇಂದ್ರ ಟ್ರೇಡಿಂಗ್ ಮತ್ತು ಟ್ರಾನ್ಸ್‍ಪೋರ್ಟ್ ಕಂಪೆನಿಯ ಮಾಲೀಕ. ಹೀಗೆ ತನ್ನ ವ್ಯವಹಾರದಲ್ಲಿ ಬ್ಯುಸಿಯಾಗಿದ್ದುಕೊಂಡೇ ವ್ಯಕ್ತಿಗತವಾಗಿ ತಮ್ಮಂದಿರ ಪ್ರೀತಿಯನ್ನೇ ಜಗತ್ತೆಂದುಕೊಂಡವನು ಗಜೇಂದ್ರ. ಹಾಗಂತ ಈತನದ್ದು ತನ್ನ ವ್ಯವಹಾರ ಮತ್ತು ವೈಯಕ್ತಿಕ ಬದುಕನ್ನೇ ಜಗತ್ತಾಗಿಸಿಕೊಂಡಿರೋ ವ್ಯಕ್ತಿತ್ವಲ್ಲ. ಗಜೇಂದ್ರ ಅನ್ಯಾಯ ಕಂಡರೆ ಕೆಂಡವಾಗಿ ಆರ್ಭಟಿಸುತ್ತಾನೆ. ಪ್ರೀತಿಯ ಮುಂದೆ ಕರಗುತ್ತಲೇ ರೈತರ ಪರವಾಗಿ ನಿಂತು ಬಡಿದಾಡುತ್ತಾನೆ. ಅನ್ಯಾಯವೆಸಗುವಾತ ಎಂಥಾದ್ದೇ ರಕ್ಕಸ ಪ್ರವೃತ್ತಿ ಹೊಂದಿದವನಾಗಿದ್ದರೂ ಸೆಡ್ಡು ಹೊಡೆದು ನಿಂತು ಮಣ್ಣು ಮುಕ್ಕಿಸುತ್ತಾನೆ.

ODEYA 1

ಇದಿಷ್ಟು ಕಥಾ ಎಳೆಯೇ ದರ್ಶನ್ ಒಡೆಯನಾಗಿ ಅದ್ಯಾವ ಪರಿಯಾಗಿ ಮಿಂಚಿದ್ದಾರೆಂಬುದನ್ನು ಸಾರಿ ಹೇಳುತ್ತದೆ. ಮುಂದಿನ ಕಥೆಯ ಎಳೆ ಹೇಳೋದಕ್ಕಿಂತ ಅದನ್ನು ಸಿನಿಮಾ ಮಂದಿರಗಳಲ್ಲಿ ನೋಡಿ ಖುಷಿ ಪಡುವುದೇ ಉತ್ತಮ. ಒಟ್ಟಾರೆಯಾಗಿ ಇಡೀ ಚಿತ್ರದಲ್ಲಿ ಮಾಸ್ ಮತ್ತು ಫ್ಯಾಮಿಲಿ ಸೆಂಟಿಮೆಂಟ್ ಕಥೆಗಳು ಒಟ್ಟೋಟ್ಟಾಗಿಯೇ ಸಾಗುತ್ತವೆ. ಅದೆಲ್ಲವೂ ಕಣ್ಮನ ತಣಿಸುವಂಥಾ ದೃಷ್ಯ ವೈಭವದ ಮೂಲಕ ಮತ್ತಷ್ಟು ಪರಿಣಾಮಕಾರಿಯಾಗಿ ಮೂಡಿ ಬಂದಿದೆ. ಈ ಮೂಲಕ ನಿರ್ದೇಶಕ ಎಂ.ಡಿ ಶ್ರೀಧರ್ ತಮ್ಮ ಕುಸುರಿ ಕಲೆಯ ಪಾಂಡಿತ್ಯವನ್ನು ಸಾಬೀತುಗೊಳಿಸಿದ್ದಾರೆ. ದರ್ಶನ್ ಅವರನ್ನು ಶ್ರೀಧರ್ ಇಲ್ಲಿ ಓರ್ವ ನಟನಾಗಿ ಮತ್ತೊಂದು ಮಟ್ಟಕ್ಕೇರುವಂತೆಯೇ ದೃಶ್ಯ ಕಟ್ಟಿದ್ದಾರೆ. ದರ್ಶನ್ ಗಜೇಂದ್ರನಾಗಿ ಅಬ್ಬರಿಸಿದ ರೀತಿಯ ಬಗೆಗಂತೂ ಯಾವ ವಿವರಣಗಳ ಅಗತ್ಯವೂ ಇಲ್ಲ.

Odeya 2

ಹೀಗೆ ದರ್ಶನ್ ಅವರೊಂದಿಗೆ ಸಲೀಸಾಗಿ ಎಣಿಸಲೂ ಕಷ್ಟವಾಗುವಷ್ಟು ದೊಡ್ಡ ತಾರಾಗಣ ಸಾಥ್ ನೀಡಿದೆ. ಆ ಇಡೀ ತಾರಾಗಣವನ್ನು ಇಲ್ಲಿನ ದೃಷ್ಯಗಳಿಗೆ ಬೇಕಾದಂತೆ ದುಡಿಸಿಕೊಳ್ಳಲಾಗಿದೆ. ಇಲ್ಲಿ ಪ್ರತಿ ಪಾತ್ರಗಳೂ ಮನಸಲ್ಲಿ ನೆಲೆ ನಿಲ್ಲುತ್ತವೆ. ರವಿಶಂಕರ್, ಶರತ್ ಲೋಹಿತಾಶ್ವ ಎಂದಿನಂತೆಯೇ ವಿಲ್ಲನ್ನುಗಳಾಗಿ ಅಬ್ಬರಿಸಿದ್ದಾರೆ. ಸಾಮಾನ್ಯವಾಗಿ ಅಬ್ಬರದ ಪಾತ್ರಗಳಲ್ಲಿ ಕಾಣಿಸಿಕೊಳ್ಳೋ ದೇವರಾಜ್ ಇಲ್ಲಿ ಮತ್ತಷ್ಟು ಭಿನ್ನವಾದ ಪಾತ್ರಕ್ಕೆ ಜೀವ ತುಂಬಿದ್ದಾರೆ. ಒಟ್ಟಾರೆಯಾಗಿ ಒಡೆಯ ಎಲ್ಲ ವರ್ಗದ ಪ್ರೇಕ್ಷಕರೂ ಕೂತು ನೋಡಿ ಮನತಣಿಸಿಕೊಳ್ಳುವಂಥಾ ಸ್ವರೂಪದಲ್ಲಿಯೇ ಮೂಡಿ ಬಂದಿದೆ.

ರೇಟಿಂಗ್: 4 / 5

TAGGED:challenging stardarshankannada filmodeyaPublic TVSana thimmaiahಒಡೆಯದರ್ಶನ್ಸಂದೇಶ್ ನಾಗರಾಜ್ಸನಾ ತಿಮ್ಮಯ್ಯ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Narendra Modi Ring Metro Delhi
Latest

ದೇಶದ ಮೊದಲ ‘ರಿಂಗ್ ಮೆಟ್ರೋ’ ಉದ್ಘಾಟಿಸಿದ ಮೋದಿ

Public TV
By Public TV
37 seconds ago
Garbage Auto
Bengaluru City

ಬೆಂಗಳೂರಿಗರಿಗೆ ಗುಡ್‌ನ್ಯೂಸ್ – ಇನ್ಮುಂದೆ ರಾತ್ರಿಯೂ ಬರಲಿದೆ ಕಸದ ಗಾಡಿಗಳು

Public TV
By Public TV
48 minutes ago
GBA
Bengaluru City

ಜಿಬಿಎ 5 ನಗರ ಪಾಲಿಕೆಯ ವಾರ್ಡ್‌ಗಳ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

Public TV
By Public TV
1 hour ago
Sanju Samson Ishan Kishan
Cricket

ಸಿಕ್ಸರ್‌, ಬೌಂಡರಿಗಳ ಸುರಿಮಳೆ – 255 ರನ್‌ ಹೊಡೆದು ವಿಶ್ವದಾಖಲೆ ಬರೆದ ಟೀಂ ಇಂಡಿಯಾ

Public TV
By Public TV
1 hour ago
Abhishek Sharma 1
Cricket

ಫೈನಲಿನಲ್ಲಿ ಅಬ್ಬರಿಸಿ ಸ್ಫೋಟಕ ಬ್ಯಾಟಿಂಗ್‌ – ವಿಶ್ವದಾಖಲೆ ಬರೆದ ಅಭಿಷೇಕ್‌ ಶರ್ಮಾ

Public TV
By Public TV
2 hours ago
HC Mahadevappa Shivanagouda Naik
Chitradurga

ದಲಿತರಿಗೆ ಅನ್ಯಾಯವೆಸಗಿರುವ ಸಚಿವ ಮಹದೇವಪ್ಪ ಸಿಕ್ಕರೆ ಕಪಾಳಮೋಕ್ಷ ಮಾಡುವಾಸೆ: ಶಿವನಗೌಡ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?