ಬೆಂಗಳೂರು: ಮುಡಾ ಅಕ್ರಮ ನಡೆದಿರೋದು ಬಿಜೆಪಿ (BJP) ಅವಧಿಯಲ್ಲಿ. ಕ್ರಮ ಆಗೋದಿದ್ದರೆ ಬಿಜೆಪಿಯವರ ಮೇಲೆ ಕ್ರಮ ಆಗಲಿ ಎಂದು ಸಚಿವ ಚಲುವರಾಯಸ್ವಾಮಿ (Chaluvaraya Swamy) ಆಗ್ರಹಿಸಿದ್ದಾರೆ.
ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯಗೆ (Siddaramaiah) ಲೋಕಾಯುಕ್ತ ಕ್ಲೀನ್ಚಿಟ್ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಅವರು ಮಾತಾನಾಡಿದರು. ಈ ವೇಳೆ, ಮುಡಾ ಕೇಸ್ನಲ್ಲಿ ಸತ್ಯ ಇಲ್ಲ ಎಂದು ನಮಗೆ ಗೊತ್ತಿದ್ದ ವಿಷಯ.ಇದರಲ್ಲಿ ಸಿಎಂ ಯಾವುದೇ ಪ್ರಭಾವ ಬೀರಿಲ್ಲ. ಯಾವುದೇ ಲೆಟರ್ ಬರೆದಿರಲಿಲ್ಲ. ಬದಲಿ ನಿವೇಶನ ಎಲ್ಲರಿಗೂ ಕೊಡ್ತಾರೆ. ಅದರಂತೆ ಸಿಎಂ ಪತ್ನಿಗೂ ಕೊಟ್ಟಿದ್ದಾರೆ. ಈ ತಪ್ಪು ಆಗಿರೋದು ಬಿಜೆಪಿ ಅವಧಿಯಲ್ಲಿ. ಏನಾದರೂ ಕ್ರಮ ಆಗೋದಿದ್ದರೆ ಅವರ ಮೇಲೆ ಕ್ರಮ ಆಗಬೇಕು ಎಂದಿದ್ದಾರೆ.
Advertisement
Advertisement
ಸಿದ್ದರಾಮಯ್ಯ ಅವರದ್ದು ಏನೇ ತಪ್ಪು ಇಲ್ಲದೇ ಹೋದರು ಪಾದಯಾತ್ರೆ ಮಾಡಿದ್ರು. ಈಗ ಕ್ಲೀನ್ಚಿಟ್ ಸಿಕ್ಕಿದೆ. ಇದರ ಹೊಣೆ ಈಗ ಬಿಜೆಪಿ-ಜೆಡಿಎಸ್ನವರು ಹೊರಬೇಕು. ಸಿಬಿಐ ತನಿಖೆ ಬೇಡ ಎಂದು ಕೋರ್ಟ್ ಹೇಳಿತ್ತು. ಲೋಕಾಯುಕ್ತಗೆ ವರದಿ ಕೊಟ್ಟಿದೆ. ಬಿಜೆಪಿ ಅವರಿಗೆ ನ್ಯಾಯಾಲಯದ ಮೇಲೆ ಗೌರವ ಇಲ್ಲ ಅಂದರೆ ನಾವೇನು ಮಾಡೋಣ? ಬಿಜೆಪಿಯವರು ಮಂಡು ಬಿದ್ದಿದ್ದಾರೆ ಎಂದು ಹೇಳಬೇಕು ಅಷ್ಟೇ ಎಂದು ವ್ಯಂಗ್ಯವಾಡಿದ್ದಾರೆ.