ಮೂರು ಬಾರಿ ಗೆದ್ದು ಏನ್ ಮಾಡಿದ್ರಿ- ಗ್ರಾಮಸ್ಥರ ಪ್ರಶ್ನೆಗಳಿಂದ ಬೇಸತ್ತು ನಿಮ್ಮ ಮತವೇ ಬೇಡವಂದ್ರು ಶಾಸಕ ರಾಜು ಕಾಗೆ

Public TV
1 Min Read
RAJU KAGE

ಬೆಳಗಾವಿ: ನಮ್ಮ ಗ್ರಾಮಕ್ಕೆ ಯಾಕೆ ಬಂದಿದ್ದೀರಿ? ಎರಡು ಅವಧಿಯಲ್ಲಿ ನಮ್ಮ ಗ್ರಾಮಕ್ಕೆ ಏನ್ ಅಭಿವೃದ್ಧಿ ಮಾಡಿದ್ದೀರಿ? ಲೆಕ್ಕ ಕೊಡಿ ಎಂದು ಕಾಗವಾಡ ಕ್ಷೇತ್ರದ ಬಿಜೆಪಿ ಶಾಸಕ ರಾಜು ಕಾಗೆಯನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ಹಾಲಿ ಬಿಜೆಪಿ ಶಾಸಕ ರಾಜೂ ಕಾಗೆಯನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದು, ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ ನಮ್ಮ ಗ್ರಾಮಕ್ಕೆ ಏನ್ ಅಭಿವೃದ್ಧಿ ಮಾಡಿದ್ದೀರಿ ಎಂದು ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ.

RAJU

ಗ್ರಾಮಸ್ಥರ ಆಕ್ರೋಶಕ್ಕೆ ರಾಜು ಕಾಗೆ ಬೇಸತ್ತು ನಿಮ್ಮ ಮತ ನನಗೆ ಬೇಡ ಎಂದು ಮತ್ತೊಮ್ಮೆ ಗೂಂಡಾಗಿರಿ ಪ್ರದರ್ಶನ ಮಾಡಿದ್ದಾರೆ. ಇದರಿಂದ ವಿಚಲಿತಗೊಂಡ ಗ್ರಾಮಸ್ಥರು ನಮ್ಮ ಗ್ರಾಮಕ್ಕೆ ನೀವು ಕಾಲು ಇಡಬೇಡಿ. ನಿಮ್ಮಿಂದ ಅಭಿವೃದ್ಧಿ ಸಾಧ್ಯವಿಲ್ಲ. ನಾವು ನಿಮಗೆ ಮತ ಹಾಕುವುದಿಲ್ಲ ಎಂದು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದಕ್ಕೆ ಗರಂ ಆದ ರಾಜು ಕಾಗೆ ನೀವೇನ್ ಓಟ್ ಹಾಕ್ ಬೇಡಿ ಹೋಗ್ರಿ ಅಂತ ಸಿಡಿಮಿಡಿಗೊಂಡ್ರು.

ಈ ವೇಳೆ ಸ್ವಲ್ಪ ಕಾಲ ಮಾತಿನ ಚಕಮಕಿ ನಡೆಯಿತು. ಬಳಿಕ ಮರು ಉತ್ತರ ನೀಡದೆ ತಲೆ ತಗ್ಗಿಸಿದ ಹಾಲಿ ಶಾಸಕ ರಾಜೂ ಕಾಗೆ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಸತತ 4 ಬಾರಿ ಶಾಸಕರಾಗಿರುವ ಶಾಸಕ ರಾಜು, ಕ್ಷೇತ್ರದ ಅಭಿವೃದ್ಧಿ ಮಾಡಿಲ್ಲ ಎಂಬ ಆರೋಪ ಇದೀಗ ಮುಳುವಾಗುವ ಎಲ್ಲ ಸಾಧ್ಯತೆಗಳು ಕಂಡುಬರುತ್ತಿವೆ.

Share This Article
Leave a Comment

Leave a Reply

Your email address will not be published. Required fields are marked *