Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಸಾಲದ ದುಡ್ಡು ವಾಪಸ್ ಕೊಡುವವರೆಗೂ ಶವ ಸಂಸ್ಕಾರಕ್ಕೆ ಬಿಡಲ್ಲ’- ಯಜಮಾನರ ಪಟ್ಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ‘ಸಾಲದ ದುಡ್ಡು ವಾಪಸ್ ಕೊಡುವವರೆಗೂ ಶವ ಸಂಸ್ಕಾರಕ್ಕೆ ಬಿಡಲ್ಲ’- ಯಜಮಾನರ ಪಟ್ಟು

Chamarajanagar

‘ಸಾಲದ ದುಡ್ಡು ವಾಪಸ್ ಕೊಡುವವರೆಗೂ ಶವ ಸಂಸ್ಕಾರಕ್ಕೆ ಬಿಡಲ್ಲ’- ಯಜಮಾನರ ಪಟ್ಟು

Public TV
Last updated: March 11, 2020 5:17 pm
Public TV
Share
3 Min Read
CNG Death Main
SHARE

– ಮೃತನ ಮನೆಗೆ ಹೋಗದಂತೆ ಗ್ರಾಮಸ್ಥರಿಗೆ ಆದೇಶ
– 19,300 ರೂ. ಕೊಟ್ಟ ಬಳಿಕ ನಡೆದ ಅಂತ್ಯಸಂಸ್ಕಾರ
– ಮೂಕಪ್ರೇಕ್ಷಕರಂತೆ 4 ಗಂಟೆ ನಿಂತಿದ್ದ ಪೊಲೀಸರು

ಚಾಮರಾಜನರ: ‘ಸಾಲದ ದುಡ್ಡು ವಾಪಸ್ ಕೊಡುವವರೆಗೂ ಶವ ಸಂಸ್ಕಾರಕ್ಕೆ ಬಿಡಲ್ಲ’ ಎಂದು ಯಜಮಾನರು ಪಟ್ಟು ಹಿಡಿದ ಅಮಾನವೀಯ ಘಟನೆ ಜಿಲ್ಲೆಯ ಅಮಚವಾಡಿ ಗ್ರಾಮದಲ್ಲಿ ನಡೆದಿದೆ.

ಅಮಚವಾಡಿ ಗ್ರಾಮದ ನಿವಾಸಿ ಲಿಂಗರಾಜ್ ನಾಯಕ್ (45) ಮೃತ ವ್ಯಕ್ತಿ. ಅದೇ ಗ್ರಾಮದ ಯಜಮಾನರು ಲಿಂಗರಾಜ್ ಕುಟುಂಬಸ್ಥರಿಗೆ ಬಹಿಷ್ಕಾರ ಹಾಕಿದ್ದಾರೆ. ಅಷ್ಟೇ ಅಲ್ಲದೆ ಸಾಲದ ಹಣ ಪಾವತಿಸುವವರೆಗೂ ಶವ ಸಂಸ್ಕಾರಕ್ಕೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.

CNG Death 2

ಲಿಂಗರಾಜ್ ನಾಯಕ್ ಮೃತಪಟ್ಟು ಅರ್ಧ ದಿನವೇ ಕಳೆದು ಹೋಗಿತ್ತು. ಆತನ ಸಾವಿನ ಸುದ್ದಿ ಇಡೀ ಊರಿಗೆ ಹರಡಿತ್ತು. ಸಾವಿರಾರು ಜನರಿರುವ ಅಮಚವಾಡಿ ಗ್ರಾಮದ ಯಾರೊಬ್ಬರೂ ಲಿಂಗರಾಜ್ ಮನೆಗೆ ಕಡೆಗೆ ಸುಳಿಯಲಿಲ್ಲ. ಬೇರೆ ಬೇರೆ ಕಡೆಯಿಂದ ಬಂದ ನೆಂಟರಸ್ಥರಿಗೂ ಅಂತ್ಯ ಸಂಸ್ಕಾರ ಮಾಡದಂತೆ ಗ್ರಾಮದ ಯಜಮಾನರು ಅಲಿಖಿತ ಆದೇಶ ನೀಡಿದ್ದರು. ಹೊತ್ತು ಮುಳುಗುತ್ತಿದ್ದರೂ ಅಂತ್ಯ ಸಂಸ್ಕಾರ ಆಗದೇ ಇರುವುದನ್ನು ನೆನೆದು ಲಿಂಗರಾಜ್‍ನ ಮಕ್ಕಳು ಮತ್ತು ಪತ್ನಿ ಕಣ್ಣೀರಿಡುತ್ತಿದ್ದ ದೃಶ್ಯ ನೋಡುಗರ ಮನಕಲಕುವಂತೆ ಮಾಡಿತ್ತು.

ಲಿಂಗರಾಜ್ ನಾಯಕ್‍ಗೆ ಇಬ್ಬರು ಪತ್ನಿಯರು ಹಾಗೂ ನಾಲ್ಕು ಮಕ್ಕಳಿದ್ದಾರೆ. ಮೊದಲನೇ ಹೆಂಡತಿ ಕಳೆದ 12 ವರ್ಷಗಳ ಹಿಂದೆಯೇ ಮೃತಪಟ್ಟಿದ್ದಳು. ಎರಡನೇ ಹೆಂಡತಿ ಪತಿಯ ಕಿರುಕುಳ ತಾಳಲಾರದೇ ತವರು ಮನೆ ಸೇರದ್ದಳು. ಮೊದಲನೇ ಹೆಂಡತಿ ಎರಡು ಮಕ್ಕಳನ್ನ ಮದುವೆ ಮಾಡಲಾಗಿತ್ತು. ಉಳಿದವರು ಬೇರೆ ಕಡೆ ವಾಸವಿದ್ದರು. ಹಾಗಾಗಿ ಲಿಂಗರಾಜ್ ನಾಯಕ್ ಮನೆಯಲ್ಲಿ ಒಬ್ಬನೇ ವಾಸವಾಗಿದ್ದ.

CNG Death A

ಮದ್ಯ ಕುಡಿತದ ದಾಸನಾಗಿದ್ದ ಲಿಂಗರಾಜ್ ವಿವಿಧ ಸಂಘಗಳಿಂದ ಸಾಲ ಮಾಡಿದ್ದ. ಸಾಲ ಕೊಡದೇ ಇದ್ದಾಗ ಗ್ರಾಮಸ್ಥರು ಅವನಿಗೆ 19,300 ರೂ. ಕೊಡುವವರೆಗೂ ಸಾಮಾಜಿಕ ಬಹಿಷ್ಕಾರ ಹಾಕಿದ್ದರು. ಜೊತೆಗೆ ಲಿಂಗರಾಜ್ ಮೂರು ಎಕರೆ ಜಾಗವನ್ನು ಇಬ್ಬರಿಗೆ ಮಾರ್ಟ್ ಗೇಜ್ ಮಾಡಿ ಹಣ ಪಡೆದಿದ್ದ. ಬಹಿಷ್ಕಾರಕ್ಕೆ ಕ್ಯಾರೇ ಎನ್ನದೆ ತನ್ನಷ್ಟಕ್ಕೆ ತಾನು ಎಂಬತಿದ್ದ. ಆದರೆ ಇದ್ದಕ್ಕಿದ್ದಂತೆ ಮಂಗಳವಾರ ರಾತ್ರಿ ನೇಣಿಗೆ ಶರಣಾಗಿದ್ದಾನೆ. ಬೆಳಗ್ಗೆ ಮಕ್ಕಳು ಬಂದರೂ ಕೂಡ ಅಂತ್ಯ ಸಂಸ್ಕಾರಕ್ಕೆ ಗ್ರಾಮದ ಯಜಮಾನರು ಅವಕಾಶ ಕಲ್ಪಿಸಿರಲಿಲ್ಲ. ಅಷ್ಟೇ ಅಲ್ಲದೆ ಯಾರೂ ಕೂಡ ಮೃತ ಲಿಂಗರಾಜ್ ಮನೆಗೆ ಹೋಗುವಂತಿಲ್ಲ ಎಂದು ಯಜಮಾನರು ಗ್ರಾಮಸ್ಥರಿಗೆ ತಾಕೀತು ಮಾಡಿದ್ದರು.

money 1 1

19,300 ರೂ. ನೀಡ ಬೇಕು. ಜೊತೆಗೆ ಜಮೀನ್ನು ಮಾರ್ಟ್ ಗೇಜ್ ಮಾಡಿ ಪಡೆದಿರುವ ಒಂದೂವರೆ ಲಕ್ಷ ರೂ. ಹಣವನ್ನ ಕೊಡ ಬೇಕು ಎಂದು ಯಜಮಾನರು ಮೃತನ ಮಗನಿಗೆ ಹೇಳಿದ್ದರು. ಸಾವಿರಾರು ರೂಪಾಯಿ ಹಣ ಇಲ್ಲದೇ ಇರುವಾಗ ಲಕ್ಷಾಂತರ ರೂಪಾಯಿ ತರುವುದಾದರು ಎಲ್ಲಿಂದ ಎಂದು ಮೃತನ ಮಕ್ಕಳು ಯಜಮಾನರ ಬಳಿ ಅಂಗಲಾಚಿದ್ದರು. ಆದರೆ ಅದ್ಯಾವುದಕ್ಕೂ ಒಪ್ಪದ ಯಜಮಾನರು ಹಣ ನೀಡುವವರೆಗೆ ಶವ ಎತ್ತದಂತೆ ಕಟ್ಟಪ್ಪಣೆ ಹೊರಡಿಸಿದ್ದರು.

ಈ ಮಧ್ಯೆ ಸ್ಥಳಕ್ಕೆ ಭೇಟಿ ನೀಡಿದ ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಮೂಕಪ್ರೇಕ್ಷಕರಾಗಿ ನಾಲ್ಕೈದು ಗಂಟೆಗಳ ಕಾಲ ಕುಳಿತ್ತಿದ್ದರು. ನಂತರ ಸಾಲಸೋಲ ಮಾಡಿ 19,300 ರೂ. ಕೊಡುತ್ತಿದ್ದಂತೆ ಶವ ಎತ್ತಲು ಅವಕಾಶ ಕಲ್ಪಿಸಲಾಯಿತು. ಆದರೂ ಅಂತ್ಯ ಸಂಸ್ಕಾರಕ್ಕೆ ಗ್ರಾಮಸ್ಥರು ಹೋಗದಂತೆ ನಿರ್ಬಂಧ ವಿಧಿಸಲಾಗಿತ್ತು.

CNG Death B

ಇಂತಹ ಆಧುನಿಕ ಯುಗದಲ್ಲೂ ಸಾಮಾಜಿಕ ಬಹಿಷ್ಕಾರ ಎಂಬ ಅನಿಷ್ಟ ಪದ್ಧತಿ ಜಾರಿಯಲ್ಲಿ ಇರುವುದು ಮಾತ್ರ ದುರಾದೃಷ್ಟ. ಬಹಿಸ್ಕಾರದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಶವ ಸಂಸ್ಕಾರಕ್ಕೆ ಅವಕಾಶ ಕಲ್ಪಿಸದೇ ಇರುವುದು ಮಾತ್ರ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಸ್ಥಳಕ್ಕೆ ಬಂದ ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಕೂಡ ಬಹಿಸ್ಕಾರ ಹಾಕಿದವರ ವಿರುದ್ಧ ಮಾತನಾಡದೇ ಇದ್ದದ್ದು ದುರ್ದೈವ ಎಂದು ಸ್ಥಳೀಯರು ದೂರಿದ್ದಾರೆ.

TAGGED:Amachavadi villagechamarajanagarFuneral ceremonyMass excommunicationmoneyPublic TVಅನಿಷ್ಟ ಪದ್ಧತಿಚಾಮರಾಜನಗರಪಬ್ಲಿಕ್ ಟಿವಿವ್ಯಕ್ತಿಸಾಮೂಹಿಕ ಬಹಿಷ್ಕಾರ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

GBA
Bengaluru City

ಸಿಲಿಂಡರ್ ಕೊರತೆ – ಬಯೋಗ್ಯಾಸ್ ಉತ್ಪಾದನೆಗೆ ಮುಂದಾದ ಜಿಬಿಎ

Public TV
By Public TV
13 minutes ago
bank loan
Districts

9 ರೂ. ಸಾಲಕ್ಕೆ ಬೆನ್ನು ಬಿದ್ದ ಬ್ಯಾಂಕ್‌ – ಸಾಲ ತೀರಿಸಿ ಕೊನೆಗೂ ತನ್ನ ಖಾತೆಗೆ ಬಾಕಿ 66 ಪೈಸೆ ಹಾಕಿಸಿಕೊಂಡ ರೈತ

Public TV
By Public TV
27 minutes ago
Varthuru Murder
Bengaluru City

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌

Public TV
By Public TV
52 minutes ago
Chennai Crime Kalaiselvan
Crime

ಕುಡಿದ ಮತ್ತಲ್ಲಿ ಆಟೋದಲ್ಲೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ – ಗುಂಪಿನಿಂದ ಹಲ್ಲೆ, ವ್ಯಕ್ತಿ ಸಾವು

Public TV
By Public TV
1 hour ago
DK Shivakumar Odisha Congress MLAs
Districts

ಬಿಡದಿ ರೆಸಾರ್ಟ್‌ನಿಂದ ಮೈಸೂರು ಪ್ರವಾಸಕ್ಕೆ ತೆರಳಿದ ಒಡಿಶಾ ಕೈ ಶಾಸಕರು

Public TV
By Public TV
2 hours ago
Iran Foreign Minister Abbas Araghchi
Latest

ರಷ್ಯಾದಿಂದ ಕಚ್ಚಾ ತೈಲ ಖರೀದಿಸುವಂತೆ ಅಮೆರಿಕ ಭಾರತದ ಜೊತೆ ಬೇಡಿಕೊಂಡಿದೆ: ಇರಾನ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?