Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಸಾಲದ ದುಡ್ಡು ವಾಪಸ್ ಕೊಡುವವರೆಗೂ ಶವ ಸಂಸ್ಕಾರಕ್ಕೆ ಬಿಡಲ್ಲ’- ಯಜಮಾನರ ಪಟ್ಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ‘ಸಾಲದ ದುಡ್ಡು ವಾಪಸ್ ಕೊಡುವವರೆಗೂ ಶವ ಸಂಸ್ಕಾರಕ್ಕೆ ಬಿಡಲ್ಲ’- ಯಜಮಾನರ ಪಟ್ಟು

Chamarajanagar

‘ಸಾಲದ ದುಡ್ಡು ವಾಪಸ್ ಕೊಡುವವರೆಗೂ ಶವ ಸಂಸ್ಕಾರಕ್ಕೆ ಬಿಡಲ್ಲ’- ಯಜಮಾನರ ಪಟ್ಟು

Public TV
Last updated: March 11, 2020 5:17 pm
Public TV
Share
3 Min Read
CNG Death Main
SHARE

– ಮೃತನ ಮನೆಗೆ ಹೋಗದಂತೆ ಗ್ರಾಮಸ್ಥರಿಗೆ ಆದೇಶ
– 19,300 ರೂ. ಕೊಟ್ಟ ಬಳಿಕ ನಡೆದ ಅಂತ್ಯಸಂಸ್ಕಾರ
– ಮೂಕಪ್ರೇಕ್ಷಕರಂತೆ 4 ಗಂಟೆ ನಿಂತಿದ್ದ ಪೊಲೀಸರು

ಚಾಮರಾಜನರ: ‘ಸಾಲದ ದುಡ್ಡು ವಾಪಸ್ ಕೊಡುವವರೆಗೂ ಶವ ಸಂಸ್ಕಾರಕ್ಕೆ ಬಿಡಲ್ಲ’ ಎಂದು ಯಜಮಾನರು ಪಟ್ಟು ಹಿಡಿದ ಅಮಾನವೀಯ ಘಟನೆ ಜಿಲ್ಲೆಯ ಅಮಚವಾಡಿ ಗ್ರಾಮದಲ್ಲಿ ನಡೆದಿದೆ.

ಅಮಚವಾಡಿ ಗ್ರಾಮದ ನಿವಾಸಿ ಲಿಂಗರಾಜ್ ನಾಯಕ್ (45) ಮೃತ ವ್ಯಕ್ತಿ. ಅದೇ ಗ್ರಾಮದ ಯಜಮಾನರು ಲಿಂಗರಾಜ್ ಕುಟುಂಬಸ್ಥರಿಗೆ ಬಹಿಷ್ಕಾರ ಹಾಕಿದ್ದಾರೆ. ಅಷ್ಟೇ ಅಲ್ಲದೆ ಸಾಲದ ಹಣ ಪಾವತಿಸುವವರೆಗೂ ಶವ ಸಂಸ್ಕಾರಕ್ಕೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.

CNG Death 2

ಲಿಂಗರಾಜ್ ನಾಯಕ್ ಮೃತಪಟ್ಟು ಅರ್ಧ ದಿನವೇ ಕಳೆದು ಹೋಗಿತ್ತು. ಆತನ ಸಾವಿನ ಸುದ್ದಿ ಇಡೀ ಊರಿಗೆ ಹರಡಿತ್ತು. ಸಾವಿರಾರು ಜನರಿರುವ ಅಮಚವಾಡಿ ಗ್ರಾಮದ ಯಾರೊಬ್ಬರೂ ಲಿಂಗರಾಜ್ ಮನೆಗೆ ಕಡೆಗೆ ಸುಳಿಯಲಿಲ್ಲ. ಬೇರೆ ಬೇರೆ ಕಡೆಯಿಂದ ಬಂದ ನೆಂಟರಸ್ಥರಿಗೂ ಅಂತ್ಯ ಸಂಸ್ಕಾರ ಮಾಡದಂತೆ ಗ್ರಾಮದ ಯಜಮಾನರು ಅಲಿಖಿತ ಆದೇಶ ನೀಡಿದ್ದರು. ಹೊತ್ತು ಮುಳುಗುತ್ತಿದ್ದರೂ ಅಂತ್ಯ ಸಂಸ್ಕಾರ ಆಗದೇ ಇರುವುದನ್ನು ನೆನೆದು ಲಿಂಗರಾಜ್‍ನ ಮಕ್ಕಳು ಮತ್ತು ಪತ್ನಿ ಕಣ್ಣೀರಿಡುತ್ತಿದ್ದ ದೃಶ್ಯ ನೋಡುಗರ ಮನಕಲಕುವಂತೆ ಮಾಡಿತ್ತು.

ಲಿಂಗರಾಜ್ ನಾಯಕ್‍ಗೆ ಇಬ್ಬರು ಪತ್ನಿಯರು ಹಾಗೂ ನಾಲ್ಕು ಮಕ್ಕಳಿದ್ದಾರೆ. ಮೊದಲನೇ ಹೆಂಡತಿ ಕಳೆದ 12 ವರ್ಷಗಳ ಹಿಂದೆಯೇ ಮೃತಪಟ್ಟಿದ್ದಳು. ಎರಡನೇ ಹೆಂಡತಿ ಪತಿಯ ಕಿರುಕುಳ ತಾಳಲಾರದೇ ತವರು ಮನೆ ಸೇರದ್ದಳು. ಮೊದಲನೇ ಹೆಂಡತಿ ಎರಡು ಮಕ್ಕಳನ್ನ ಮದುವೆ ಮಾಡಲಾಗಿತ್ತು. ಉಳಿದವರು ಬೇರೆ ಕಡೆ ವಾಸವಿದ್ದರು. ಹಾಗಾಗಿ ಲಿಂಗರಾಜ್ ನಾಯಕ್ ಮನೆಯಲ್ಲಿ ಒಬ್ಬನೇ ವಾಸವಾಗಿದ್ದ.

CNG Death A

ಮದ್ಯ ಕುಡಿತದ ದಾಸನಾಗಿದ್ದ ಲಿಂಗರಾಜ್ ವಿವಿಧ ಸಂಘಗಳಿಂದ ಸಾಲ ಮಾಡಿದ್ದ. ಸಾಲ ಕೊಡದೇ ಇದ್ದಾಗ ಗ್ರಾಮಸ್ಥರು ಅವನಿಗೆ 19,300 ರೂ. ಕೊಡುವವರೆಗೂ ಸಾಮಾಜಿಕ ಬಹಿಷ್ಕಾರ ಹಾಕಿದ್ದರು. ಜೊತೆಗೆ ಲಿಂಗರಾಜ್ ಮೂರು ಎಕರೆ ಜಾಗವನ್ನು ಇಬ್ಬರಿಗೆ ಮಾರ್ಟ್ ಗೇಜ್ ಮಾಡಿ ಹಣ ಪಡೆದಿದ್ದ. ಬಹಿಷ್ಕಾರಕ್ಕೆ ಕ್ಯಾರೇ ಎನ್ನದೆ ತನ್ನಷ್ಟಕ್ಕೆ ತಾನು ಎಂಬತಿದ್ದ. ಆದರೆ ಇದ್ದಕ್ಕಿದ್ದಂತೆ ಮಂಗಳವಾರ ರಾತ್ರಿ ನೇಣಿಗೆ ಶರಣಾಗಿದ್ದಾನೆ. ಬೆಳಗ್ಗೆ ಮಕ್ಕಳು ಬಂದರೂ ಕೂಡ ಅಂತ್ಯ ಸಂಸ್ಕಾರಕ್ಕೆ ಗ್ರಾಮದ ಯಜಮಾನರು ಅವಕಾಶ ಕಲ್ಪಿಸಿರಲಿಲ್ಲ. ಅಷ್ಟೇ ಅಲ್ಲದೆ ಯಾರೂ ಕೂಡ ಮೃತ ಲಿಂಗರಾಜ್ ಮನೆಗೆ ಹೋಗುವಂತಿಲ್ಲ ಎಂದು ಯಜಮಾನರು ಗ್ರಾಮಸ್ಥರಿಗೆ ತಾಕೀತು ಮಾಡಿದ್ದರು.

money 1 1

19,300 ರೂ. ನೀಡ ಬೇಕು. ಜೊತೆಗೆ ಜಮೀನ್ನು ಮಾರ್ಟ್ ಗೇಜ್ ಮಾಡಿ ಪಡೆದಿರುವ ಒಂದೂವರೆ ಲಕ್ಷ ರೂ. ಹಣವನ್ನ ಕೊಡ ಬೇಕು ಎಂದು ಯಜಮಾನರು ಮೃತನ ಮಗನಿಗೆ ಹೇಳಿದ್ದರು. ಸಾವಿರಾರು ರೂಪಾಯಿ ಹಣ ಇಲ್ಲದೇ ಇರುವಾಗ ಲಕ್ಷಾಂತರ ರೂಪಾಯಿ ತರುವುದಾದರು ಎಲ್ಲಿಂದ ಎಂದು ಮೃತನ ಮಕ್ಕಳು ಯಜಮಾನರ ಬಳಿ ಅಂಗಲಾಚಿದ್ದರು. ಆದರೆ ಅದ್ಯಾವುದಕ್ಕೂ ಒಪ್ಪದ ಯಜಮಾನರು ಹಣ ನೀಡುವವರೆಗೆ ಶವ ಎತ್ತದಂತೆ ಕಟ್ಟಪ್ಪಣೆ ಹೊರಡಿಸಿದ್ದರು.

ಈ ಮಧ್ಯೆ ಸ್ಥಳಕ್ಕೆ ಭೇಟಿ ನೀಡಿದ ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಮೂಕಪ್ರೇಕ್ಷಕರಾಗಿ ನಾಲ್ಕೈದು ಗಂಟೆಗಳ ಕಾಲ ಕುಳಿತ್ತಿದ್ದರು. ನಂತರ ಸಾಲಸೋಲ ಮಾಡಿ 19,300 ರೂ. ಕೊಡುತ್ತಿದ್ದಂತೆ ಶವ ಎತ್ತಲು ಅವಕಾಶ ಕಲ್ಪಿಸಲಾಯಿತು. ಆದರೂ ಅಂತ್ಯ ಸಂಸ್ಕಾರಕ್ಕೆ ಗ್ರಾಮಸ್ಥರು ಹೋಗದಂತೆ ನಿರ್ಬಂಧ ವಿಧಿಸಲಾಗಿತ್ತು.

CNG Death B

ಇಂತಹ ಆಧುನಿಕ ಯುಗದಲ್ಲೂ ಸಾಮಾಜಿಕ ಬಹಿಷ್ಕಾರ ಎಂಬ ಅನಿಷ್ಟ ಪದ್ಧತಿ ಜಾರಿಯಲ್ಲಿ ಇರುವುದು ಮಾತ್ರ ದುರಾದೃಷ್ಟ. ಬಹಿಸ್ಕಾರದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಶವ ಸಂಸ್ಕಾರಕ್ಕೆ ಅವಕಾಶ ಕಲ್ಪಿಸದೇ ಇರುವುದು ಮಾತ್ರ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಸ್ಥಳಕ್ಕೆ ಬಂದ ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಕೂಡ ಬಹಿಸ್ಕಾರ ಹಾಕಿದವರ ವಿರುದ್ಧ ಮಾತನಾಡದೇ ಇದ್ದದ್ದು ದುರ್ದೈವ ಎಂದು ಸ್ಥಳೀಯರು ದೂರಿದ್ದಾರೆ.

TAGGED:Amachavadi villagechamarajanagarFuneral ceremonyMass excommunicationmoneyPublic TVಅನಿಷ್ಟ ಪದ್ಧತಿಚಾಮರಾಜನಗರಪಬ್ಲಿಕ್ ಟಿವಿವ್ಯಕ್ತಿಸಾಮೂಹಿಕ ಬಹಿಷ್ಕಾರ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories

You Might Also Like

Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
8 minutes ago
Train
Bengaluru City

ಮೈಸೂರು-ಜಲ್ಪೈಗುಡಿ ಜಂಕ್ಷನ್ ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
11 minutes ago
China Xi Jinping Taiwan Opposition leader cheng Li wun
Latest

ಚೀನಾ-ತೈವಾನ್‌ ಐತಿಹಾಸಿಕ ಮಾತುಕತೆ – ಈ ಭೇಟಿಗೆ ಇಷ್ಟೊಂದು ಮಹತ್ವ ಯಾಕೆ?

Public TV
By Public TV
14 minutes ago
Rohit Sharma
Cricket

ಮುಂಬೈ ಇಂಡಿಯನ್ಸ್‌ನಲ್ಲಿ 15 ವರ್ಷ ಪೂರೈಸಿದ ರೋಹಿತ್ – ಇತಿಹಾಸ ನಿರ್ಮಿಸಿದ ಹಿಟ್‌ಮ್ಯಾನ್‌

Public TV
By Public TV
15 minutes ago
Israeli Attack On Lebanon
Latest

ಟ್ರಂಪ್‌ ಮಾತಿಗಿಲ್ಲ ಕಿಮ್ಮತ್ತು – ಲೆಬನಾನ್‌ನ 2 ಪಟ್ಟಣಗಳ ಮೇಲೆ ಮತ್ತೆ ಇಸ್ರೇಲ್‌ ದಾಳಿ

Public TV
By Public TV
32 minutes ago
Love
Latest

ಪ್ರೀತಿ ಕೈಬೀಸಿ ಕರೆಯುವಾಗ ಎಲ್ಲವನ್ನೂ ಬಿಟ್ಬಿಡ್ಬೇಕಂತೆ..!

Public TV
By Public TV
43 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?