ಚಾಮರಾಜನಗರ: ಜಮೀನಿನಲ್ಲಿ ಮೋಟಾರ್ ಗೆ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಯಳಂದೂರು ತಾಲೂಕಿನ ಕೆಂಪನಪುರದಲ್ಲಿ ನಡೆದಿದೆ.
ಗೂಳಿಪುರ ಗ್ರಾಮದ 50 ವರ್ಷದ ಕೆಂಪಮ್ಮ ಮೃತಪಟ್ಟ ಮಹಿಳೆ. ಇವರು ಕಟ್ಟಿಗೆ ತರಲು ತೆರಳಿದ್ದಾಗ ಬೋರ್ವೆಲ್ ಮೋಟಾರ್ ಗೆ ಅಳವಡಿಸಿದ್ದ ತಂತಿ ಸ್ಪರ್ಶಿಸಿದೆ. ಪರಿಣಾಮ ಕೆಂಪಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೋಹನ್ ಎಂಬವರಿಗೆ ಸೇರಿದ ಬಾಳೆ ತೋಟದಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಸಂತೇಮರಹಳ್ಳಿ ಪಿಎಸ್ಐ ಬಸವರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಸಂತೇಮರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.