ಚಾಮರಾಜನಗರ: ಆನೆಯೊಂದು ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ನಡೆದಿದೆ.
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿರುವ ಕೃಷ್ಣಯ್ಯನ ಕಟ್ಟೆ ಎಂಬಲ್ಲಿ ಆನೆ ಕೆಸರಿನಲ್ಲಿ ಸಿಲುಕಿಕೊಂಡಿತ್ತು. ಭೀಕರ ಬರಗಾಲದಿಂದ ಅಲ್ಪಸ್ವಲ್ಪ ನೀರಿದ್ದ ಕಾರಣ ಈ ಘಟನೆ ನಡೆದಿದೆ.
ಇಂದು ಬೆಳಗ್ಗೆ ಆನೆಗಳು ನೀರು ಕುಡಿಯಲು ಬಂದಾಗ ಒಂದು ಆನೆ ಕೆಸರಿನಲ್ಲಿ ಸಿಕ್ಕಿಕೊಂಡಿತ್ತು. ಗಸ್ತು ತಿರುಗುತ್ತಿದ್ದ ಅರಣ್ಯ ಸಿಬ್ಬಂದಿ ಆನೆ ಕೆಸರಿನಲ್ಲಿ ಸಿಲುಕಿರುವ ದೃಶ್ಯ ಕಂಡು ಜೆಸಿಬಿ ಯಂತ್ರ ತರಿಸಿ ಆನೆಯನ್ನು ಮೇಲೆತ್ತಿ ರಕ್ಷಿಸಿದ್ದಾರೆ.