ಚಾಮರಾಜನಗರ: ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ರಂಜನ್ ಗೊಗೋಯ್ ಅವರು ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳಗಳಿಗೆ ಭಾನುವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.
ತಾಲೂಕಿನ ರಾಮಸಮುದ್ರದಲ್ಲಿನ ಹರಳುಕೋಟೆ ಆಂಜನೇಯ ದೇಗುಲಕ್ಕೆ ಪತ್ನಿಯೊಂದಿಗೆ ಭೇಟಿ ನೀಡಿದ ರಂಜನ್ ಗೊಗೋಯ್ ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ವತಿಯಿಂದ ಪೂರ್ಣಕುಂಭ ಸ್ವಾಗತ ಕೋರಲಾಯಿತು.
ರಂಜನ್ ಗೊಗೋಯ್ ಅವರು ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಿ ಕೆ.ಗುಡಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸೋಮವಾರ ಬೆಳಗ್ಗೆ ಬಿಳಿಗಿರಿರಂಗನ ಬೆಟ್ಟದಲ್ಲಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳಿಂದ ಆಶೀರ್ವಚನ ಪಡೆಯಲಿದ್ದಾರೆ. ನಂತರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭೇಟಿ ನೀಡುವರು ಎಂದು ಮೂಲಗಳು ತಿಳಿಸಿವೆ.