36 ಜನರಿಗೆ ಆಕ್ಸಿಜನ್ ಕೊಡದೇ ಕೊಲೆ ಮಾಡಿದ್ದಾರೆ – ಸುಧಾಕರ್ ವಿರುದ್ಧ ಡಿಕೆಶಿ ಗಂಭೀರ ಆರೋಪ

Public TV
2 Min Read
DK SHIVAKUMAR 1

ಚಾಮರಾಜನಗರ: ಕೋವಿಡ್ ಸಮಯದಲ್ಲಿ ಆಕ್ಸಿಜನ್ (Oxygen Tragedy) ಕೊಡದೇ 36 ಜನರನ್ನ ಕೊಲೆ ಮಾಡಿದ್ದಾರೆ. ಇದಕ್ಕೆ ಸಚಿವ ಕೆ. ಸುಧಾಕರ್ (K Sudhakar) ಅವರೇ ನೇರ ಕಾರಣ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಗಂಭೀರ ಆರೋಪ ಮಾಡಿದ್ದಾರೆ.

ಪ್ರಜಾಧ್ವನಿ ಯಾತ್ರೆ ಭಾಗವಾಗಿ ಚಾಮರಾಜನಗರಲ್ಲಿ (Chamarajanagar) ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ ಸಮಯದಲ್ಲಿ ಸಚಿವ ಸುಧಾಕರ್ ಆಕ್ಸಿಜನ್ ಕೊಡದೇ 36 ಜನರನ್ನ ಕೊಲೆ ಮಾಡಿದ್ದಾರೆ. ಅವರು ಮೃತಪಟ್ಟಿದ್ದಲ್ಲ ಅದು ಕೊಲೆ ಎಂದು ದೂರಿದ್ದಾರೆ. ಇದನ್ನೂ ಓದಿ: ದಿವಾಳಿ ಪಾಕಿಸ್ತಾನ ರೂಪಾಯಿ ಮೌಲ್ಯ ಪಾತಾಳಕ್ಕೆ- ಆಹಾರ ಪದಾರ್ಥಗಳ ಬೆಲೆ ಮತ್ತಷ್ಟೂ ದುಬಾರಿ.!

K SudhaKar

3 ಜನ ಮಾತ್ರ ಮೃತಪಟ್ಟಿದ್ದಾಗಿ, ಆ ಮಂತ್ರಿ ಹೇಳಿದ್ದ. ನಾವೆಲ್ಲ ಬಂದು ಮೃತರ ಕುಟುಂಬಸ್ಥರನ್ನ ಭೇಟಿಯಾದೆವು. ಸಿದ್ದರಾಮಯ್ಯ (Siddaramaiah) ಅವರು ಕೇಳಿದಾಗ ಅಧಿಕಾರಿಗಳು 36 ಜನ ಸತ್ತಿರುವುದನ್ನ ದೃಢಪಡಿಸಿದರು. ಆದ್ರೆ ಯಾವ ಮಂತ್ರಿಯೂ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲಿಲ್ಲ. ಆಗಲೇ ಈ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲ ಅಂತ ಗೊತ್ತಾಯಿತು. ನಾವು ಸಂತ್ರಸ್ತರ ಮನೆಗೆ ಹೋಗಿ 1 ಲಕ್ಷ ರೂಪಾಯಿ ಕೊಟ್ಟೆವು. ಈ ಬಾರಿ ನಮ್ಮ ಸರ್ಕಾರ ಬಂದರೆ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ಕೊಡ್ತೇವೆ ಎಂದು ಭರವಸೆ ನೀಡಿದ್ದಾರೆ.

Chamarajanagar Oxygen Tragedy

ಮಿಸ್ಟರ್ ಸುಧಾಕರ್ ನಿನಗೆ, ಯಡಿಯೂರಪ್ಪ (BS Yediyurappa) ಅವರಿಗೆ ಕಣ್ಣು, ಕಿವಿ, ಹೃದಯ ಇಲ್ಲ. ಈ ಚುನಾವಣೆ ಸತ್ಯ ಸುಳ್ಳಿನ ನಡುವೆ ನಡೆಯುತ್ತೆ. ಅಧಿಕಾರ ಹೋಗುತ್ತದೆ ಅಂತ ಈ ಜಿಲ್ಲೆಗೆ ಯಾರೂ ಬರಲಿಲ್ಲ, ಆದ್ರೆ ಸಿದ್ರಾಮಯ್ಯ ಬರಲಿಲ್ವೆ? ಅಧಿಕಾರ ಮಾಡಿಲ್ಲವೇ? ಅವರು ಚಾಮರಾಜೇಶ್ಚರ ದೇವಸ್ಥಾನಕ್ಕೆ ಭೇಟಿ ಕೊಟ್ಟಾಗ ಕಾಂಗ್ರೆಸ್ 150 ಸೀಟು ಗೆಲ್ಲುತ್ತೆ ಅಂತಾ ಭವಿಷ್ಯ ನುಡಿದಿದ್ದಾರೆ.

siddaramaiah dk shivakumar

ಮೇಕೆದಾಟು ಯೋಜನೆಗಾಗಿ ಬೊಮ್ಮಾಯಿ ಬಜೆಟ್ ನಲ್ಲಿ 1 ಸಾವಿರ ಕೋಟಿ ಮಿಸಲಿಟ್ಟರು. ಇಲ್ಲಿವರೆಗೆ 1 ರೂಪಾಯಿ ಸಹ ಬಿಡುಗಡೆ ಮಾಡಿಲ್ಲ. ಬಿಜೆಪಿಯವರು ಅಧಿಕಾರಕ್ಕೆ ಬಂದ್ರೆ ನಾವು ಹಿಂದೂ, ನಾವು ಮುಂದು ಅಂತಾರೆ, ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಎಲ್ಲ ವರ್ಗದವರು ಅಧಿಕಾರಕ್ಕೆ ಬಂದಂಗೆ ಎಂದು ಹೇಳಿದ್ದಾರೆ. ಇದನ್ನೂ ಓದಿ: BBC Modi V/s The Kashmir Filesː ಎಸ್‌ಎಫ್‌ಐ, ಎಬಿವಿಪಿ ವಿದ್ಯಾರ್ಥಿಗಳ ನಡುವೆ ತಾರಕಕ್ಕೇರಿದ ಸಂಘರ್ಷ

600 ಭರವಸೆ ಕೊಟ್ಟಿದ್ದ ಬಿಜೆಪಿ ಸರ್ಕಾರ 50 ಈಡೇರಿಸಿಲ್ಲ. ಕೋವಿಡ್ ವೇಳೆ ಶ್ರಮಿಕ ವರ್ಗದವರಿಗೆ 1 ಸಾವಿರ ಕೊಡಿ ಅಂತ ಕೇಳಿದ್ದರೂ ಯಾರಿಗೂ ಕೊಡಲಿಲ್ಲ. ಜೆಡಿಎಸ್ ಗೆ ಅಧಿಕಾರ ಕೊಟ್ಟಿದ್ದರೂ ಅವರು ಸರ್ಕಾರ ಉಳಿಸಿಕೊಳ್ಳಲಿಲ್ಲ. ಈಗ ಆ ಪಕ್ಷದ ಮುಖಂಡರು, ಶಾಸಕರು ಒಬ್ಬೊಬ್ಬರೆ ಕಾಂಗ್ರೆಸ್ ಸೇರ್ತಿದ್ದಾರೆ. ಕುಮಾರಣ್ಣ ಅಧಿಕಾರ ಇದ್ದಾಗ ಗುರುತರ ಕೆಲಸ ಮಾಡಬೇಕಿತ್ತು. ಆದ್ರೆ ಕಿಂಗ್ ಮೆಕರ್ ಆಗ್ಬೇಕು ಅಂತ ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಜನ ಕಾಂಗ್ರೆಸ್‌ಗೆ ಶಕ್ತಿ ಕೊಟ್ಟರೆ ನೀವೆ ಕಿಂಗ್ ಮೇಕರ್ ಆಗ್ತೀರಾ ಎಂದು ಜನರಿಗೆ ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *