ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಸುಳ್ವಾಡಿ ವಿಷ ಪ್ರಸಾದ ದುರಂತದಿಂದಾಗಿ ಕಳೆದ ಒಂದು ವರ್ಷದಿಂದಲೂ ದೇವಾಲಯದ ಬಾಗಿಲು ಬಂದ್ ಆಗಿದೆ. ದೇವಾಲಯ ಬಾಗಿಲು ತೆರೆಯುವಂತೆ ಗ್ರಾಮಸ್ಥರು, ಅಪಾರ ಸಂಖ್ಯೆಯ ಭಕ್ತರು ಸರ್ಕಾರ ಹಾಗೂ ಜಿಲ್ಲಾಡಳಿತ ಬಳಿ ಹಲವು ಬಾರಿ ಮನವಿ ಸಲ್ಲಿಸಿದ್ದರು. ಇದರಿಂದ ಎಚ್ಚೆತ್ತ ಸರ್ಕಾರ, ಜಿಲ್ಲಾಡಳಿತ ದೇವಾಲಯ ಬಾಗಿಲು ತೆರೆಯುವ ಕುರಿತು ಭರವಸೆ ನೀಡಿತ್ತು.
ಅದರಂತೆ ದೇವಾಲಯದ ಅರ್ಚಕರಾಗಲು ಆಗಮಿಕ ಶಾಸ್ತ್ರ ಬರಬೇಕು ಅನ್ನೋ ನಿಯಮ ಹೊರಡಿಸಿದೆ. ಆ ಹಿನ್ನೆಲೆಯಲ್ಲಿ ಹಲವು ಜನ ಆಗಮಿಕ ಪಂಡಿತರು ಕೂಡ ದೇವಾಲಯದ ಅರ್ಚಕರಾಗಲೂ ಬಯಸಿ ಅರ್ಜಿ ಸಲ್ಲಿಸಿದ್ದಾರೆ.
ಇಂದು ರಾಜ್ಯ ಆಗಮಿಕ ಪಂಡಿತ್ ವಿದ್ವಾನ್ ಜಿ.ಎ.ವಿಜಯಕುಮಾರ್ ನೇತೃತ್ವದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸುಳ್ವಾಡಿ ದೇವಾಸ್ಥಾನದ ಅರ್ಚಕರು, ಮುಖಂಡರು ಗ್ರಾಮಸ್ಥರಿಂದ ಅಭಿಪ್ರಾಯ ಸಂಗ್ರಹ ಮಾಡಿರೋದು ದೇವಾಲಯದ ಬಾಗಿಲು ತೆರೆಯುವ ಕನಸು ಚಿಗುರಿಸಿದೆ.
ಸುಳ್ವಾಡಿ ವಿಷ ಪ್ರಸಾದ ದುರಂತದಲ್ಲಿ 17 ಜನ ಸಾವನ್ನಪ್ಪಿದ್ದು, 120 ಜನ ಅಸ್ವಸ್ಥರಾಗಿದ್ದರು. ಆ ನಂತರ ಸರ್ಕಾರ ಕಿಚ್ ಗುತ್ ಮಾರಮ್ಮನ ಟ್ರಸ್ಟ್ ಅನ್ನು ಮುಜರಾಯಿ ಇಲಾಖೆಯ ವಶಕ್ಕೆ ನೀಡಿತ್ತು.