ಚಾಮರಾಜನಗರ: ಪ್ರಾಥಮಿಕ, ಪ್ರೌಢ ಶಿಕ್ಷಣ, ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಚಾಮರಾಜನಗರದಲ್ಲಿ ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ನೂತನವಾಗಿ ನಿರ್ಮಾಣ ಮಾಡಲಾಗಿರುವ ಹೆಣ್ಣು ಮಕ್ಕಳ ವಸತಿ ನಿಲಯವನ್ನು ಉದ್ಘಾಟಿಸಿದರು.
ಸುರೇಶ್ ಕುಮಾರ್ ಅವರಿಗೆ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ, ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪಂಚಾಯಿತಿ ಸಿಇಒ ನಾರಾಯಣರಾವ್, ಕೊಳ್ಳೇಗಾಲ ಉಪ ವಿಭಾಗಾಧಿಕಾರಿ ನಿಖಿತ ಚಿನ್ನಸ್ವಾಮಿ, ಎಸ್ಪಿ ಆನಂದ್ ಕುಮಾರ್ ಸಾಥ್ ನೀಡಿದರು.
ಉದ್ಘಾಟನೆಯ ಬಳಿಕ ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ವಸತಿ ನಿಲಯಕ್ಕೆ ಅಗತ್ಯವಿರುವ ಪರಿಕರಗಳನ್ನು ಶೀಘ್ರವಾಗಿ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ನೂತನ ವಸತಿ ನಿಲಯದ ವಿದ್ಯಾರ್ಥಿನಿಯರನ್ನು ನೀವು ಯಾವ ಯಾವ ಊರುಗಳಿಂದ ಆಗಮಿಸಿ ವಸತಿ ನಿಲಯದಲ್ಲಿ ದಾಖಲಾಗಿರುವಿರಿ ಎಂದು ಸಚಿವರು ವಿಚಾರಿಸಿದರು.