ಅಲೆಗಳ ಹೊಡೆತಕ್ಕೆ ಸಿಲುಕಿ ಯುವಕ ಸಾವು

Public TV
0 Min Read
DEEPU

ಚಾಮರಾಜನಗರ: ಸ್ನೇಹಿತರ ಜೊತೆ ಪ್ರವಾಸಕ್ಕೆ ತೆರಳಿದ್ದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ದುರ್ದೈವಿ ಯುವಕನನ್ನು ದೀಪು(26) ಎಂದು ಗುರುತಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಹರವೆ ಗ್ರಾಮದ ಯುವಕ ದೀಪು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದರು. ಈತ ತನ್ನ ಸ್ನೇಹಿತರ ಶನಿವಾರ ಪಾಂಡಿಚೇರಿಗೆ ಪ್ರವಾಸಕ್ಕೆ ತೆರಳಿದಾಗ ಈ ಘಟನೆ ನಡೆದಿದೆ.

ಚಾಮರಾಜನರದ ದೀಪು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಶನಿವಾರ ವೀಕೆಂಡ್ ಇದ್ದ ಕಾರಣ ಸ್ನೇಹಿತ ಜೊತೆ ಕಾರಿನಲ್ಲಿ ಪ್ರವಾಸ ಹೋಗಿದ್ದಾರೆ. ಈ ವೇಳೆ ಪಾಂಡೀಚೇರಿಯ ಬೀಚ್‍ನಲ್ಲಿ ಸ್ನೇಹಿತರ ಜೊತೆ ಆಟವಾಡುವ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ದೀಪು ಸಾವನ್ನಪ್ಪಿದ್ದಾನೆ.

Share This Article
Leave a Comment

Leave a Reply

Your email address will not be published. Required fields are marked *